Homeಕರ್ನಾಟಕಚುನಾವಣಾ ಬಾಂಡ್ ರದ್ದು| ಬಿಜೆಪಿಯ ಕುತಂತ್ರಕ್ಕೆ ಸುಪ್ರೀಂ ಕೋರ್ಟ್‌ನಿಂದ ಕಪಾಳಮೋಕ್ಷ: ಸಿಎಂ ಸಿದ್ದರಾಮಯ್ಯ

ಚುನಾವಣಾ ಬಾಂಡ್ ರದ್ದು| ಬಿಜೆಪಿಯ ಕುತಂತ್ರಕ್ಕೆ ಸುಪ್ರೀಂ ಕೋರ್ಟ್‌ನಿಂದ ಕಪಾಳಮೋಕ್ಷ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಚುನಾವಣಾ ಬಾಂಡ್‌ಗಳು ಅಸಾಂವಿಧಾನಿಕ ಎಂದು ಐವರು ನ್ಯಾಯಮೂರ್ತಿಗಳ ಸುಪ್ರೀಂ ಕೋರ್ಟ್‌ ಪೀಠ ನೀಡಿರುವ ತೀರ್ಪು ಪ್ರಜಾತಂತ್ರದಲ್ಲಿ ಪಾರದರ್ಶಕತೆಯನ್ನು ಮರುಸ್ಥಾಪಿಸುವ ನಿಟ್ಟಿನಿಂದ ಐತಿಹಾಸಿಕವಾಗಿದೆ. ಬಿಜೆಪಿಯ ಕುತಂತ್ರಕ್ಕೆ ನ್ಯಾಯಾಲಯ ಕಪಾಳಮೋಕ್ಷ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಕ್ರೋನಿ ಬಂಡವಾಳಿಗರಿಂದ ಚುನಾವಣೆಗಾಗಿ ದೇಣಿಗೆ ಸಂಗ್ರಹಿಸುವ ದುರುದ್ದೇಶದಿಂದಲೇ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಜಾರಿಗೆ ತಂದಿದ್ದ ಈ ಚುನಾವಣಾ ಬಾಂಡ್‌ಗಳು ಅಸಾಂವಿಧಾನಿಕವಾದುದು ಮಾತ್ರವಲ್ಲ, ಇದರಿಂದ ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಮಾಹಿತಿ ಹಕ್ಕಿನ ಉಲ್ಲಂಘನೆಯಾಗಿದೆ ಎಂದು ಸುಪ್ರೀಂಕೋರ್ಟ್ ನೀಡಿರುವ ತೀರ್ಪು ಅತ್ಯಂತ ಸ್ವಾಗತಾರ್ಹವಾದುದು” ಎಂದಿದ್ದಾರೆ.

ಚುನಾವಣಾ ವ್ಯವಸ್ಥೆಯ ಸುಧಾರಣೆಯಲ್ಲಿ ಇದೊಂದು ದಿಟ್ಟ ಕ್ರಮವಾಗಿದೆ. ಕೇಂದ್ರದ ಬಿಜೆಪಿ ಸರ್ಕಾರ 2019ರ ಲೋಕಸಭಾ ಚುನಾವಣೆಯ ಪೂರ್ವದಲ್ಲಿ ಜಾರಿಗೆ ತಂದಿದ್ದ ಈ ಚುನಾವಣಾ ಬಾಂಡ್‌ಗಳು ಲಂಚದ ಮತ್ತೊಂದು ರೂಪವಾಗಿತ್ತು. ವಿತ್ತೀಯ ಕಾಯಿದೆಯ ಸ್ವರೂಪದಲ್ಲಿ ಚುನಾವಣಾ ಬಾಂಡ್‌ಗಳನ್ನು ತರಲಾಗಿತ್ತು ಹಾಗೂ ಇದಕ್ಕಾಗಿ ಸುಮಾರು ಐದು ಕಾಯಿದೆಗಳನ್ನು ತಿದ್ದುಪಡಿ ಮಾಡಲಾಗಿತ್ತು. ಇದೀಗ ಇದೆಲ್ಲವೂ ರದ್ದುಗೊಂಡಿವೆ. ಚುನಾವಣಾ ಬಾಂಡ್‌ಗಳನ್ನು ಜಾರಿಗೆ ತಂದಿದ್ದರ ಹಿಂದೆ ದುರುದ್ದೇಶವಿರುವುದನ್ನು ಕಾಂಗ್ರೆಸ್‌ ಪಕ್ಷ ಆರಂಭದಿಂದಲೂ ಸ್ಪಷ್ಟವಾಗಿ ಹೇಳಿತ್ತು. ಇದೀಗ ಸುಪ್ರೀಂಕೋರ್ಟ್ ಈ ವಿರೋಧಕ್ಕೆ ಮಾನ್ಯತೆ ನೀಡಿದೆ ಎಂದು ಸಿಎಂ ಹೇಳಿದ್ದಾರೆ.

ಇದು ಬಂಡವಾಳಶಾಹಿ ಶಕ್ತಿಗಳು ಹಾಗೂ ಆಡಳಿತಾರೂಢ ಸರ್ಕಾರದ ನಡುವಿನ ಕೊಡುಕೊಳ್ಳುವಿಕೆಗೆ ಕಾರಣವಾಗುತ್ತದೆ. ಚುನಾವಣಾ ಬಾಂಡ್‌ ಯೋಜನೆಯಡಿ ರಾಜಕೀಯ ಪಕ್ಷಗಳಿಗೆ ಅನಾಮಧೇಯವಾಗಿ ಯಾವುದೇ ಮಿತಿ ಇಲ್ಲದೆ ದೇಣಿಗೆ ನೀಡಬಹುದಾಗಿದ್ದರಿಂದ ಬಂಡವಾಳಶಾಹಿ ಶಕ್ತಿಗಳು ಹಾಗೂ ಆಡಳಿತಾರೂಢ ಸರ್ಕಾರದ ನಡುವೆ ಕೊಡುಕೊಳ್ಳುವಿಕೆಯ ಸಂಬಂಧವೇರ್ಪಡುತ್ತದೆ ಎನ್ನುವ ಆತಂಕವನ್ನು ನಮ್ಮ ಪಕ್ಷ ಹಾಗೂ ಪ್ರಜ್ಞಾವಂತ ನಾಗರಿಕರು, ವಿವಿಧ ಸಂಘಟನೆಗಳು ಎತ್ತಿದ್ದವು ಎಂದು ತಿಳಿಸಿದ್ದಾರೆ.

ಸುಪ್ರೀಂ ಕೋರ್ಟ್‌ ಸಹ ತನ್ನ ಇಂದಿನ ತೀರ್ಪಿನಲ್ಲಿ ಇಂತಹ ಸಾಧ್ಯತೆಯನ್ನು ಅಲ್ಲಗಳೆಯಲಾಗದು ಎಂದಿದೆ. ಇದು ಕೊಡುಕೊಳ್ಳುವಿಕೆಗೆ ಕಾರಣವಾಗಬಹುದಾದ ಹಿತಾಸಕ್ತಿಗಳನ್ನು ಕಾಯುವ ಸಾಧ್ಯತೆಯ ಆತಂಕದತ್ತ ಬೆರಳು ಮಾಡಿದೆ. ಇದೇ ವೇಳೆ, ಯೋಜನೆಯು ಮಾಹಿತಿ ಹಕ್ಕು ಹಾಗೂ ಮತದಾರರ ಹಕ್ಕಿನ ಉಲ್ಲಂಘನೆ ಎನ್ನುವುದನ್ನು ಸ್ಪಷ್ಟಗೊಳಿಸಿದೆ. ಸುಪ್ರೀಂ ಕೋರ್ಟ್‌ ತೀರ್ಪು ಕೇಂದ್ರ ಸರ್ಕಾರದ ಕರಾಳ ಸಂಚಿಗೆ ಹಿಡಿದ ಕನ್ನಡಿಯಾಗಿದ್ದು ಕೇಂದ್ರದ ಗುಪ್ತ ಕಾರ್ಯಸೂಚಿಯ ಮೇಲೆ ಮಾಡಿರುವ ಗದಾಪ್ರಹಾರವಾಗಿದೆ ಎಂದಿದ್ದಾರೆ.

ಈಗಾಗಲೇ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದವರ ಸಂಪೂರ್ಣ ವಿವರವನ್ನು ಹದಿನೈದು ದಿನಗಳೊಳಗೆ ಭಾರತೀಯ ಸ್ಟೇಟ್ ಬ್ಯಾಂಕ್ ಬಹಿರಂಗಪಡಿಸಬೇಕೆಂದು ಕೋರ್ಟ್‌ ಹೇಳಿದೆ. ಇದರಿಂದ ಬಿಜೆಪಿಯ ಕಪಾಟಿನ ಒಳಗಿರುವ ಹಲವಾರು ಅಸ್ಥಿಪಂಜರಗಳು ಹೊರಬೀಳಲಿವೆ. ಸುಪ್ರೀಂಕೋರ್ಟ್ ಸರಿಯಾಗಿ ಗುರುತಿಸಿರುವಂತೆ ಇದು ಕ್ರೋನಿ ಬಂಡವಾಳಿಗರು ಮತ್ತು ಬಿಜೆಪಿಯಂತ ರಾಜಕೀಯ ಪಕ್ಷಗಳ ನಡುವಿನ ಒಂದು ಅಪವಿತ್ರ ಮೈತ್ರಿ ಆಗಿತ್ತು. ತಾನು ಅಧಿಕಾರಕ್ಕೆ ಬಂದ ನಂತರ ನೆರವಾಗುವ ಭರವಸೆ ನೀಡಿಯೇ ಉದ್ಯಮಿಗಳಿಂದ ಚುನಾವಣಾ ಬಾಂಡ್‌ಗಳ ಮೂಲಕ ಹಣ ಸಂಗ್ರಹಿಸಲಾಗುತ್ತಿತ್ತು. ಚುನಾವಣಾ ಬಾಂಡ್ ಮೂಲಕ ಬಂದ ದೇಣಿಗೆಯ ಶೇಕಡಾ 90ರಷ್ಟು ಭಾಗ ಭಾರತೀಯ ಜನತಾ ಪಕ್ಷಕ್ಕೆ ಸಂದಾಯವಾಗುತ್ತಿದ್ದ ಕಾರಣ, ಇದು ಯಾರ ನೆರವಿಗಾಗಿ ತಂದ ಯೋಜನೆ ಎನ್ನುವುದು ಸ್ಪಷ್ಟವಾಗಿತ್ತು. ಸಾಂವಿಧಾನಿಕ ಸಂಸ್ಥೆಗಳು ತಮ್ಮ ಸ್ವಾಯತ್ತತೆಯನ್ನು ಕಳೆದುಕೊಳ್ಳುತ್ತಿದೆ ಎಂಬ ಆತಂಕದ ನಡುವೆಯೇ ಸುಪ್ರೀಂ ಕೋರ್ಟ್ ಇಂತಹದ್ದೊಂದು ತೀರ್ಪು ನೀಡಿರುವುದು ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೇಲೆ ಭರವಸೆ ಮೂಡಿಸಿದೆ ಎಂದು ಸಿಎಂ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕಪ್ಪು ಹಣ ನಿಯಂತ್ರಿಸಲು ಚುನಾವಣಾ ಬಾಂಡ್‌ ಯೋಜನೆಯಿಂದ ಸಾಧ್ಯ ಎನ್ನುವ ಕೇಂದ್ರ ಸರ್ಕಾರದ ವಾದವನ್ನು ಸುಪ್ರೀಂ ಕೋರ್ಟ್ ಸಾರಾಸಗಟಾಗಿ‌ ತಿರಸ್ಕರಿಸಿದ್ದು, ಕಪ್ಪು ಹಣ ನಿಯಂತ್ರಣಕ್ಕೆ ಅದಕ್ಕಿಂತ ಉತ್ತಮ ವಿಧಾನಗಳಿವೆ ಎಂದು ಹೇಳಿರುವುದು ಕೇಂದ್ರದ ಪೊಳ್ಳು ವಾದಗಳಿಗೆ ಮಾಡಿರುವ ತಕ್ಕ ಶಾಸ್ತಿಯಾಗಿದೆ. ಅಲ್ಲದೆ, ಇದು ಆರ್ಥಿಕ ಅಸಮಾನತೆಯಿಂದ ಅಸಮ ರಾಜಕೀಯ ಮೇಲಾಟಗಳಿಗೆ ಕಾರಣವಾಗುತ್ತದೆ ಎಂದು ನ್ಯಾಯಾಲಯವು ಹೇಳಿರುವುದು ಮೋದಿ ನೇತೃತ್ವದ ಬಿಜೆಪಿ ಸರ್ಕಾರವು ಎಂತಹ ಚುನಾವಣಾ ರಾಜಕಾರಣದ ವ್ಯವಸ್ಥೆಯನ್ನು ಸೃಷ್ಟಿಸಲು ಮುಂದಾಗಿತ್ತು ಎನ್ನುವುದನ್ನು ಸ್ಪಷ್ಟಪಡಿಸಿದೆ. ವಿಪಕ್ಷಗಳನ್ನು ಒಂದಿಲ್ಲೊಂದು ರೀತಿಯಲ್ಲಿ ದಮನಿಸಿ, ತನಗೆ ಅನುಕೂಲವಾಗುವ ರೀತಿಯಲ್ಲಿ ವ್ಯವಸ್ಥೆಯನ್ನು ರೂಪಿಸಿಕೊಳ್ಳುವ ಬಿಜೆಪಿಯ ಕುತಂತ್ರಕ್ಕೆ ಸುಪ್ರೀಂ ಕೋರ್ಟ್‌ ಕಪಾಳಮೋಕ್ಷ ಮಾಡಿದೆ ಎಂದು ಸಿಎಂ ಹೇಳಿದ್ದಾರೆ.

ಇದನ್ನೂ ಓದಿ: ಪೌರ ಕಾರ್ಮಿಕರ ₹90 ಕೋಟಿ ಪಿಎಫ್‌ ಬಾಕಿ ಪಾವತಿಸುವಂತೆ ಬಿಬಿಎಂಪಿಗೆ ಹೈಕೋರ್ಟ್‌ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳ ಮೀಸಲಾತಿ ಮಸೂದೆ ವಾಪಸ್ ಕಳಿಸಿದ ರಾಜ್ಯಪಾಲರು : ಹೋರಾಟಗಾರರು ಏನಂದ್ರು?

ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಅಂಗೀಕಾರಗೊಂಡ ಕರ್ನಾಟಕ ಪರಿಶಿಷ್ಟ ಜಾತಿಗಳ (ಉಪವರ್ಗೀಕರಣ) ಮಸೂದೆಗೆ ಅಂಕಿತ ಹಾಕದೆ ರಾಜ್ಯಪಾಲರು ವಾಪಸ್ ಕಳುಹಿಸಿದ್ದಾರೆ ಎಂದು ವರದಿಯಾಗಿದೆ. ಕೆಲವು ಸ್ಪಷ್ಟನೆಗಳನ್ನು ಕೇಳಿರುವ ರಾಜ್ಯಪಾಲರು, ಮಸೂದೆಯನ್ನು ವಾಪಸ್ ಕಳುಹಿಸಿದ್ದಾರೆ ಎಂದು ತಿಳಿದು...

‘ಕೂಡಲೇ ಇರಾನ್‌ನಿಂದ ಹೊರಡಿ, ಸಹಾಯ ನಿರೀಕ್ಷಿಸಬೇಡಿ’: ತನ್ನ ಪ್ರಜೆಗಳಿಗೆ ಕರೆ ನೀಡಿದ ಅಮೆರಿಕ

ವಾಷಿಂಗ್ಟನ್: ಆಡಳಿತ ವಿರೋಧಿ ಪ್ರತಿಭಟನೆಯನ್ನು ಹತ್ತಿಕ್ಕಿ, ಪ್ರತಿಭಟನಕಾರರ ಸಾವಿಗೆ ಕಾರಣವಾಗುತ್ತಿರುವ ಇರಾನ್‌ ವಿರುದ್ಧ ದಾಳಿ ಮಾಡುವ ಬೆದರಿಕೆ ಹಾಕಿದ ಬೆನ್ನಲ್ಲೇ ತಮ್ಮ ದೇಶದ ನಾಗರಿಕರಿಗೆ ಇರಾನ್ ತೊರೆಯುವಂತೆ ಅಮೆರಿಕ ಸೂಚನೆ ನೀಡಿದೆ. ದೇಶಾದ್ಯಂತ ಪ್ರತಿಭಟನೆಗಳು,...

ಭಾರತ ಭೂದಾಳಿ ನಡೆಸಲು ಸಿದ್ಧವಾಗಿತ್ತು: ಆಪರೇಷನ್ ಸಿಂಧೂರ್ ಮುಂದುವರೆದಿದೆ ಎಂದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ 

ಮಂಗಳವಾರ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರು ಆಪರೇಷನ್ ಸಿಂಧೂರ್ ಮುಂದುವರೆದಿದೆ ಎಂದು ಹೇಳಿದ್ದು, ಯಾವುದೇ ದುಸ್ಸಾಹಸವನ್ನು ಪರಿಣಾಮಕಾರಿಯಾಗಿ ನಿಭಾಯಿಸಲಾಗುವುದು ಎಂದು ಹೇಳಿದ್ದಾರೆ.  ಜಮ್ಮು ಮತ್ತು ಕಾಶ್ಮೀರದ ನಿಯಂತ್ರಣ ರೇಖೆ (ಎಲ್‌ಒಸಿ) ಮತ್ತು...

ಕೊಪ್ಪಳ | ಸಂಪೂರ್ಣ ಮದ್ಯ ನಿಷೇಧಿಸಿ ತೀರ್ಮಾನ ತೆಗೆದುಕೊಂಡ ಗ್ರಾಮಸ್ಥರು : ಮದ್ಯದಂಗಡಿಗಳಿಗೆ ಶನಿವಾರದವರೆಗೆ ಗಡುವು

ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನ ಈಳಿಗನೂರು ಗ್ರಾಮದಲ್ಲಿ ಸಂಪೂರ್ಣ ಮದ್ಯ ನಿಷೇಧಿಸಿ ಜನರು ಸರ್ವಾನುಮತದ ತೀರ್ಮಾನ ತೆಗೆದುಕೊಂಡಿದ್ದು, ಮದ್ಯದ ಅಂಗಡಿಗಳಿಗೆ ಮಾರಾಟ ಸ್ಥಗಿತಗೊಳಿಸಲು ಶನಿವಾರದವರೆಗೆ ಗಡುವು ವಿಧಿಸಿದ್ದಾರೆ. ಗ್ರಾಮದಲ್ಲಿ ಶಾಂತಿ, ನೆಮ್ಮದಿ, ಸಾಮಾಜಿಕ...

ವಿಬಿ-ಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ಹೋರಾಟ : ಸಿಎಂ ಸಿದ್ದರಾಮಯ್ಯ

ನರೇಗಾ ಕಾಯ್ದೆ ಪುನ:ಸ್ಥಾಪನೆ ಆಗಿ ವಿಬಿ-ಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ನಮ್ಮ ಹೋರಾಟವನ್ನು ಮುಂದುವರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಕೆಪಿಸಿಸಿ ವತಿಯಿಂದ ಮಂಗಳವಾರ (ಜ.13) ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ...

ಪಶ್ಚಿಮ ಬಂಗಾಳ: ಸೋಮವಾರ ಪ್ರತ್ಯೇಕ ಸ್ಥಳಗಳಲ್ಲಿ ಎರಡು ಸಾವು: ಎಸ್‌ಐಆರ್ ಆತಂಕವೇ ಸಾವಿಗೆ ಕಾರಣ ಎಂದ ಕುಟುಂಬಗಳು 

ಪಶ್ಚಿಮ ಬಂಗಾಳದಲ್ಲಿ ಸೋಮವಾರ ಇಬ್ಬರು ಸಾವನ್ನಪ್ಪಿದ್ದು, ಉತ್ತರ ದಿನಾಜ್‌ಪುರದಲ್ಲಿ ಒಬ್ಬರು ಮತ್ತು ಉತ್ತರ 24 ಪರಗಣದಲ್ಲಿ ಮತ್ತೊಬ್ಬರು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಗೆ ಸಂಬಂಧಿಸಿದ ಆತಂಕವೇ ಅವರ ಸಾವಿಗೆ...

ಮರ್ಯಾದೆಗೇಡು ಹತ್ಯೆ : ಪ್ರೀತಿಸಿದ ಯುವಕನೊಂದಿಗೆ ತೆರಳಿದ್ದ ಬಾಲಕಿಯನ್ನು ಕೊಂದು ಮೃತದೇಹ ಸುಟ್ಟು ಹಾಕಿದ ಕುಟುಂಬಸ್ಥರು

ಪ್ರೀತಿಸಿದ ಯುವಕನೊಂದಿಗೆ ತೆರಳಿದ 16 ವರ್ಷದ ಬಾಲಕಿಯನ್ನು ಆಕೆಯ ಮನೆಯವರೇ ಕೊಂದು, ಮೃತದೇಹವನ್ನು ಸುಟ್ಟು ಹಾಕಿದ ಭೀಕರ ಘಟನೆ ಉತ್ತರ ಪ್ರದೇಶದ ಕಾಸ್ಗಂಜ್ ಜಿಲ್ಲೆಯಲ್ಲಿ ನಡೆದಿದೆ. ಬಾಲಕಿಯ ಕುಟುಂಬಸ್ಥರು ಪ್ರಸ್ತುತ ಪರಾರಿಯಾಗಿದ್ದಾರೆ. ಅವರ ಮನೆಗೆ...

ಚುನಾವಣಾ ಪ್ರಚಾರದ ವೇಳೆ ಬ್ಯಾಗ್ ಮೇಲೆ ಪ್ಯಾಲೆಸ್ಟೀನಿಯನ್ ಧ್ವಜ: ಆರ್‌ಡಬ್ಲ್ಯೂಪಿಐ ಅಭ್ಯರ್ಥಿಗೆ ನೋಟಿಸ್ ಜಾರಿ ಮಾಡಿದ ಮುಂಬೈ ಪೊಲೀಸರು

ಮುಂಬೈ: ಮುನ್ಸಿಪಲ್ ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಿದ್ದ ರೆವಲ್ಯೂಷನರಿ ವರ್ಕರ್ಸ್ ಪಾರ್ಟಿ ಆಫ್ ಇಂಡಿಯಾದ ಅಭ್ಯರ್ಥಿಯೊಬ್ಬರು ತಮ್ಮ ಪ್ರಚಾರ ಕಾರ್ಯಕರ್ತರ ಬಳಿ ಹೊತ್ತೊಯ್ದಿದ್ದ ಬ್ಯಾಗ್ ಮೇಲೆ ಪ್ಯಾಲೆಸ್ಟೀನಿಯನ್ ಧ್ವಜ ಕಾಣಿಸಿಕೊಂಡಿದ್ದು, ಇದು ಮಾನವ ಹಕ್ಕುಗಳ...

ಇರಾನ್‌ನೊಂದಿಗೆ ವ್ಯವಹಾರ ನಡೆಸುವ ರಾಷ್ಟ್ರಗಳ ಮೇಲೆ ಶೇ. 25 ಸುಂಕ ವಿಧಿಸಿದ ಟ್ರಂಪ್

ಇರಾನ್ ಜೊತೆ ವ್ಯಾಪಾರ ನಡೆಸುವ ಯಾವುದೇ ದೇಶದ ಮೇಲೆ ಶೇಕಡ 25ರಷ್ಟು ಸುಂಕ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೋಮವಾರ (ಜ.12) ಘೋಷಿಸಿದ್ದಾರೆ. "ತಕ್ಷಣದಿಂದಲೇ ಜಾರಿಗೆ ಬರುವಂತೆ, ಇರಾನ್ ಇಸ್ಲಾಮಿಕ್ ಗಣರಾಜ್ಯದೊಂದಿಗೆ ವ್ಯವಹಾರ...

ಮಂಗಳೂರು | ಬಾಂಗ್ಲಾದೇಶಿಯೆಂದು ಆರೋಪಿಸಿ ವಲಸೆ ಕಾರ್ಮಿಕನ ಮೇಲೆ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಬಾಂಗ್ಲಾದೇಶಿ ಎಂದು ಆರೋಪಿಸಿ ಜಾರ್ಖಂಡ್ ಮೂಲದ ವಲಸೆ ಕಾರ್ಮಿಕನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿ, ಕೊಲೆ ಯತ್ನ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಮಂಗಳೂರಿನ ಕಾವೂರು ಪೊಲೀಸರು ಸೋಮವಾರ (ಜ.12)...