Homeಕರ್ನಾಟಕಕಾಶ್ಮೀರದಲ್ಲಿ ಮೂಲಭೂತ ಹಕ್ಕುಗಳ ಉಲ್ಲಂಘನೆ: ತಲೆಕೆಡಿಸಿಕೊಳ್ಳದ ಸುಪ್ರೀಂ ಕೋರ್ಟ್‌

ಕಾಶ್ಮೀರದಲ್ಲಿ ಮೂಲಭೂತ ಹಕ್ಕುಗಳ ಉಲ್ಲಂಘನೆ: ತಲೆಕೆಡಿಸಿಕೊಳ್ಳದ ಸುಪ್ರೀಂ ಕೋರ್ಟ್‌

- Advertisement -
- Advertisement -

ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಸಂವಿಧಾನದ ಕಲಂ 370ನ್ನು ರದ್ದುಪಡಿಸಿದ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ ಅಕ್ಷರಶಃ ಉಸಿರುಗಟ್ಟಿಸುವ ವಾತಾವರಣ ಮನೆ ಮಾಡಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಕಣಿವೆ ರಾಜ್ಯದಲ್ಲಿ ಮೊಬೈಲ್, ಸ್ಥಿರ ದೂರವಾಣಿ, ಬಸ್ ಸೇವೆ ಇಲ್ಲದಂತೆ ಮಾಡಿ ಅಲ್ಲಿನ ಜನರ ಮೂಲಭೂತ ಹಕ್ಕುಗಳನ್ನೇ ಕಸಿಯಲಾಗಿದೆ. ಮೂಲಭೂತ ಹಕ್ಕುಗಳು ಉಲ್ಲಂಘನೆಯಾಗಿರುವ ಬಗ್ಗೆ ಇದುವರೆಗೂ ಯಾವೊಂದು ಮಾಧ್ಯಮಗಳು ಕೇಂದ್ರದ ಗಮನ ಸೆಳೆದಿಲ್ಲ. ಕೇಸರಿ ನಾಡಿನ ಜನರ ಮೂಗಿನೊಳಗೆ ಕಮಲದೊಳಗಿನ ಹುಳುಗಳು ಸೇರಿಹೋಗಿ ಉಸಿರು ಬಿಡುವುದು ಕಷ್ಟವಾಗಿದೆ.

ಈ ದೇಶದ ಸಂವಿಧಾನ ಪ್ರತಿಯೊಬ್ಬ ಪ್ರಜೆಗೂ ಮೂಲಭೂತ ಹಕ್ಕುಗಳನ್ನು ನೀಡಿದೆ. ಈ ಹಕ್ಕುಗಳಿಗೆ ಚ್ಯುತಿಯಾದಾಗ ಸುಪ್ರೀಂ ಕೋರ್ಟ್ ಜನರ ನೆರವಿಗೆ ಬರಬೇಕು. ಆದರೆ ಇಂತಹ ಯಾವುದೇ ಕೆಲಸ ಸುಪ್ರೀಂಕೋರ್ಟ್‍ನಿಂದ ಆದಂತೆ ಕಂಡುಬಂದಿಲ್ಲ. ಸ್ವಾತಂತ್ರ್ಯದ ಹಕ್ಕು, ಸಭೆ ಸೇರುವ ಹಕ್ಕು, ಪ್ರತಿಭಟನೆ ನಡೆಸುವ ಹಕ್ಕು, ಮಾತನಾಡುವ ಮತ್ತು ಬರೆಯುವ ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕು, ಕೆಲಸದ ಹಕ್ಕು ಹೀಗೆ ಎಲ್ಲ ಮೂಲಭೂತ ಹಕ್ಕುಗಳು ಸಂಪೂರ್ಣ ಮೊಟುಕಾಗಿವೆ. ಇಂತಹ ಸಂದರ್ಭದಲ್ಲಿ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಜ ಪ್ರಕರಣಗಳಲ್ಲಿ ಸುಪ್ರೀಂಕೋರ್ಟ್ ಜನರ ಈ ಹಕ್ಕುಗಳನ್ನು ರಕ್ಷಣೆ ಮಾಡಿದೆ. ಅದರಂತೆ ಈಗಲೂ ಮಾಡಬೇಕಿದೆ.

ಭಾರತದ ಒಕ್ಕೂಟ ಸರ್ಕಾರ ಸಂವಿಧಾನದ 370ನೇ ವಿಧಿಯನ್ನು ಅಮಾನ್ಯಗೊಳಿಸಿರುವ ಸಂಬಂಧ ಸುಪ್ರೀಂಕೋರ್ಟ್‍ನಲ್ಲಿ ಸುಮಾರು 17ಕ್ಕೂ ಹೆಚ್ಚು ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಗಳು ದಾಖಲಾಗಿವೆ. ಎಲ್ಲರೂ ಕೇವಲ ಸಂವಿಧಾನದ 370 ಮತ್ತು ಅದರಿಂದ ಪ್ರದತ್ತವಾದ 35 ಎ ಕಲಂ ರದ್ದುಗೊಳಿಸಿರುವುದನ್ನು ಮಾತ್ರ ಪ್ರಶ್ನಿಸಲಾಗಿದೆ. ಆದರೆ ಒಂದು ರಾಜ್ಯದ ಮೇಲೆ ಮಿಲಿಟರಿ ಪ್ರಯೋಗಿಸಿ ನಿರ್ಬಂಧ ವಿಧಿಸಿ ಉಸಿರುಗಟ್ಟಿಸುವಂತೆ ಮಾಡಿರುವುದು ಮೂಲಭೂತ ಹಕ್ಕುಗಳ ಉಲ್ಲಂಘನೆಯೇ ಸರಿ. ಜಮ್ಮು-ಕಾಶ್ಮೀರದಲ್ಲಿ ಮೂಲಭೂತ ಹಕ್ಕುಗಳಿಗೆ ಧಕ್ಕೆಯಾಗಿದ್ದರೂ ಅದನ್ನು ಸುಪ್ರೀಂಕೋರ್ಟ್ ಗಂಭೀರವಾಗಿ ಪರಿಗಣಿಸಿದಂತೆ ಕಾಣುತ್ತಿಲ್ಲ. ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಗಳ ವಿಚಾರಣೆ ನಡೆಸುವಂತೆ ಮನವಿ ಮಾಡಿದ್ದರೂ ಶೀಘ್ರ ವಿಚಾರಣೆಯ ಜರೂರತ್ತು ಇಲ್ಲವೆಂದು ವಿಚಾರಣೆಯನ್ನು ಮುಂದೂಡಲಾಗಿದೆ.

ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ದೊರೆತಿದ್ದಾಗಲೂ ಅದು ಭಾರತದ ಭಾಗವಾಗಿತ್ತು ಎಂಬುದನ್ನು ಮರೆಮಾಚಲಾಗುತ್ತಿದೆ. 370 ವಿಧಿಯನ್ನು ರದ್ದುಪಡಿಸಿದ್ದರಿಂದಲೇ ಅದು ಭಾರತದ ಭಾಗವಾಗಿದೆ ಎಂಬ ಭ್ರಮೆಗಳನ್ನು ಬಿತ್ತಲಾಗಿದ್ದು ಮೋದಿಶಾ ಜೋಡಿ ಮಹತ್ವದ ಸಾಧನೆಯನ್ನು ಮಾಡಿದ್ದೇವೆಂಬಂತೆ ಬೀಗುತ್ತಿದ್ದಾರೆ. ಆದರೆ ತಾವು ಇನ್ನೊಬ್ಬರ ಹಕ್ಕುಗಳನ್ನು ಕಸಿಯುತ್ತಿದ್ದೇವೆ ಎಂಬ ಕನಿಷ್ಠ ಜ್ಞಾನವೂ ಇಲ್ಲದಂತೆ ವರ್ತಿಸುತ್ತಿರುವುದು ಸೋಜಿಗವೇ ಸರಿ. ಅಲ್ಲಿ ಕೇವಲ ಮೂಲಭೂತ ಹಕ್ಕುಗಳ ಉಲ್ಲಂಘನೆ ಮಾತ್ರವಾಗಿಲ್ಲ. ಬದಲಿಗೆ ಬೇಸಿಕ್ ರೈಟ್ಸ್ ಮತ್ತು ಮಾನವ ಹಕ್ಕುಗಳ ಉಲ್ಲಂಘನೆಯೂ ಆಗಿದೆ. ಮಹಿಳೆಯರ ಮತ್ತು ಮಕ್ಕಳ ಹಕ್ಕುಗಳನ್ನು ಕಸಿಯಲಾಗಿದೆ.

ಕಳೆದ ಎರಡು ತಿಂಗಳಿಂದಲೂ ಅಲ್ಲಿನ ಜನರು ಕೆಲಸಕ್ಕೆ ಹೋಗದಂತಹ ವಾತಾವರಣ ಸೃಷ್ಟಿಯಾಗಿದೆ. ಕೂಲಿಕಾರ್ಮಿಕರು, ರೈತರು, ಸಣ್ಣಪುಟ್ಟ ವ್ಯಾಪಾರಿಗಳು ಎಲ್ಲ ಕೆಲಸಗಳನ್ನು ಬದಿಗೊತ್ತಿ ಮನೆಯಲ್ಲೇ ಕುಳಿತು ದಿನದೂಡುವಂತಹ ಪರಿಸ್ಥಿತಿ ಇದೆ. ಅಂತಾರಾಷ್ಟ್ರೀಯ ಮಟ್ಟದ ವೇದಿಕೆಗಳಲ್ಲಿ ಜಮ್ಮು ಮತ್ತು ಕಾಶ್ಮೀರ ವಿಷಯ ಸದ್ದು ಮಾಡುತ್ತಿದೆ. ಆದರೂ ಮೋದಿ ಸರ್ಕಾರ ಜನರು ಹಕ್ಕುಗಳಿಂದ ವಂಚಿತರಾದರೂ ಚಿಂತೆ ಇಲ್ಲ, ವಿಜೃಂಭಣೆಯಿಂದ ಅಧಿಕಾರ ಅನುಭವಿಸಬೇಕು ಎಂಬ ಅಮಲಿನಲ್ಲಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಕೇವಲ ಎರಡು ತಿಂಗಳ ಅವಧಿಯಲ್ಲಿ ಸಾವಿರಾರು ಕೋಟಿ ರೂಪಾಯಿ ನಷ್ಟವಾಗಿದೆ. ಹೀಗಾಗಿ ಆ ರಾಜ್ಯ ಮತ್ತೆ ಚೇತರಿಸಿಕೊಳ್ಳಬೇಕೆಂದು ಹಲವು ವರ್ಷಗಳೇ ಕಳೆಯಬೇಕು. ಸೇಬು, ಕೇಸರಿ ವ್ಯಾಪಾರಿಗಳು ಸಾಕಷ್ಟು ನಷ್ಟಕ್ಕೆ ಗುರಿಯಾಗಿದ್ದಾರೆ. ಆದರೆ ಜೆಕೆಯಲ್ಲಿ ಏನೂ ಆಗಿಲ್ಲವೆಂದೇ ಕೇಂದ್ರ ಸರ್ಕಾರ ಭಂಡ ವಾದ ಮಾಡುತ್ತಿದೆ. ನಾಗರಿಕ ಸಂಘಟನೆಗಳು, ಪ್ರಗತಿಪರರು, ಸಾಹಿತಿಗಳು, ಕಲಾವಿದರು ದೊಡ್ಡ ಮಟ್ಟದಲ್ಲಿ ದನಿ ಎತ್ತಿ ಮೂಲಭೂತ ಹಕ್ಕುಗಳು, ಮಾನವ ಹಕ್ಕುಗಳು, ಮಹಿಳೆಯರು ಮತ್ತು ಮಕ್ಕಳ ಹಕ್ಕುಗಳು ಉಲ್ಲಂಘನೆಯಾಗುತ್ತಿರುವ ಕುರಿತು ಹೋರಾಟಕ್ಕೆ ಸಜ್ಜಾಗಬೇಕಾಗಿದೆ. ಇಂತಹ ಕ್ರಮಗಳಿಂದ ರಾಜ್ಯಗಳ ಅಧಿಕಾರವನ್ನು ಮೊಟುಕುಗೊಳಿಸುವ ಹುನ್ನಾರ ಕೇಂದ್ರ ಸರ್ಕಾರದ ಕ್ರಮದಲ್ಲಿ ಅಡಗಿದೆ ಎಂಬುದನ್ನು ಅರಿತುಕೊಳ್ಳಬೇಕಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...