Homeಮುಖಪುಟಚುನಾವಣಾ ಬಾಂಡ್‌ಗಳ ಮೂಲಕ ರಾಜಕೀಯ ಪಕ್ಷಗಳು ಪಡೆದ ಹಣ ಎಷ್ಟು? ಮಾಹಿತಿ ಬಿಚ್ಚಿಟ್ಟ ಸುಪ್ರೀಂ ತೀರ್ಪು

ಚುನಾವಣಾ ಬಾಂಡ್‌ಗಳ ಮೂಲಕ ರಾಜಕೀಯ ಪಕ್ಷಗಳು ಪಡೆದ ಹಣ ಎಷ್ಟು? ಮಾಹಿತಿ ಬಿಚ್ಚಿಟ್ಟ ಸುಪ್ರೀಂ ತೀರ್ಪು

- Advertisement -
- Advertisement -

ನಿನ್ನೆ(ಫೆ.15) ಸುಪ್ರೀಂ ಕೋರ್ಟ್‌ ರದ್ದುಗೊಳಿಸಿರುವ ಚುನಾವಣಾ ಬಾಂಡ್ ಯೋಜನೆಯ ಮೂಲಕ ಆಡಳಿತಾರೂಢ ಭಾರತೀಯ ಜನತಾ ಪಕ್ಷ(ಬಿಜೆಪಿ) 6,566 ಕೋಟಿ ರೂ.ಗಳನ್ನು ಗಳಿಸಿತ್ತು ಎಂದು ತಿಳಿದು ಬಂದಿದೆ. ಮತದಾರರ ಮಾಹಿತಿ ಹಕ್ಕಿನ ಉಲ್ಲಂಘನೆಯನ್ನು ಉಲ್ಲೇಖಿಸಿ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ಬರೆದ ಪ್ರತ್ಯೇಕ ತೀರ್ಪಿನಲ್ಲಿ ರಾಜಕೀಯ ಪಕ್ಷಗಳು ಸಂಗ್ರಹಿಸಿರುವ ಹಣದ ವಿವರಗಳು ಬೆಳಕಿಗೆ ಬಂದಿವೆ.

ಬಿಜೆಪಿಯ ಚುನಾವಣಾ ಬಾಂಡ್ ಗಳಿಕೆಯು ಪ್ರಮುಖ ವಿರೋಧ ಪಕ್ಷವಾದ ಕಾಂಗ್ರೆಸ್ ಬಾಂಡ್‌ಗಳ ಮೂಲಕ ಗಳಿಸಿದ್ದಕ್ಕಿಂತ ಸುಮಾರು ಆರು ಪಟ್ಟು ಹೆಚ್ಚಿದೆ. ಕಾಂಗ್ರೆಸ್‌ ಕೇವಲ 1,123 ಕೋಟಿ ರೂ. ಗಳಿಸಿತ್ತು ಎಂದು ವರದಿಗಳು ತಿಳಿಸಿವೆ. ಚುನಾವಣಾ ಬಾಂಡ್ ಯೋಜನೆಯನ್ನು ಪ್ರಶ್ನಿಸಿ ದಾವೆ ಹೂಡಿದ್ದ ಸಿಪಿಎಂ ಪಕ್ಷ ಮಾತ್ರ ಬಾಂಡ್‌ಗಳ ಮೂಲಕ ಒಂದು ರೂಪಾಯಿಯನ್ನು ಕೂಡ ಸ್ವೀಕರಿಸಿಲ್ಲ ಎಂಬ ಮಾಹಿತಿ ದೊರೆತಿದೆ.

ಸಂಸತ್ತಿನಲ್ಲಿ ನೀಡಲಾದ ಅಂಕಿ ಅಂಶಗಳ ಪ್ರಕಾರ, ಇದುವರೆಗೆ 16,518 ಕೋಟಿ ರೂಪಾಯಿ ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಬಿಡುಗಡೆ ಮಾಡಲಾಗಿದೆ. ಆದರೆ, ಪ್ರತಿ ಪಕ್ಷಗಳು ಎಷ್ಟು ಪಡೆದಿವೆ ಎಂಬ ವಿವರಗಳನ್ನು ಸಂಸತ್ತಿನಲ್ಲಿ ಬಹಿರಂಗಪಡಿಸಿರಲಿಲ್ಲ. ಆಗ ಮಾಹಿತಿ ಈಗ ಸುಪ್ರೀಂ ಕೋರ್ಟ್‌ನ ತೀರ್ಪಿನ ಮೂಲಕ ಹೊರಬಿದ್ದಿದೆ.

ಇದುವರೆಗೆ ಚುನಾವಣಾ ಬಾಂಡ್‌ಗಳ ಮೂಲಕ ದೇಣಿಗೆ ನೀಡಿದವರ ಮಾಹಿತಿ ಸಿಗುತ್ತಿರಲಿಲ್ಲ. ಸುಪ್ರೀಂ ಕೋರ್ಟ್‌ ಆದೇಶದ ಪ್ರಕಾರ ಮಾರ್ಚ್ ಒಳಗೆ ಆ ಮಾಹಿತಿಯನ್ನು ಸ್ಟೇಟ್‌ ಬ್ಯಾಂಕ್ ಇಂಡಿಯಾ ಚುನಾವಣಾ ಆಯೋಗಕ್ಕೆ ನೀಡಬೇಕಾಗಿದೆ. ಚುನಾವಣಾ ಆಯೋಗ ಮಾರ್ಚ್ 13ರ ಒಳಗೆ ಆ ಮಾಹಿತಿಯನ್ನು ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿಬೇಕು. ಪ್ರಸ್ತುತ ಲಭ್ಯವಿರುವ ಮಾಹಿತಿ ಪ್ರಕಾರ, 2017 ರಿಂದ 2023 ರ ಅವಧಿಯಲ್ಲಿ ಬಿಜೆಪಿಗೆ ಬಂದಿರುವ ದೇಣಿಗೆ 6,566 ಕೋಟಿ ತಲುಪಿದೆ ರೂಪಾಯಿ. ಚುನಾವಣಾ ಬಾಂಡ್‌ಗಳಿಂದ ಕೇಂದ್ರ ಅಥವಾ ರಾಜ್ಯಗಳಲ್ಲಿ ಅಧಿಕಾರದಲ್ಲಿರುವ ಪಕ್ಷಗಳು ಹೆಚ್ಚು ಲಾಭ ಪಡೆದಿವೆ ಎಂದು ತಿಳಿದುಬಂದಿದೆ.

ಚುನಾವಣಾ ಬಾಂಡ್‌ಗಳ ಮೂಲಕ ಇತರ ಪಕ್ಷಗಳ ಗಳಿಕೆ:
ತೃಣಮೂಲ ಕಾಂಗ್ರೆಸ್ : 1,092 ಕೋಟಿ ರೂ
ಬಿಜು ಜನತಾ ದಳ : 774 ಕೋಟಿ ರೂ
ಡಿಎಂಕೆ : 616 ಕೋಟಿ ರೂ
ಭಾರತ್ ರಾಷ್ಟ್ರ ಸಮಿತಿ (ಹಳೆಯ ಟಿಆರ್‌ಎಸ್) : 386 ಕೋಟಿ ರೂ
ವೈಎಸ್ಆರ್ ಕಾಂಗ್ರೆಸ್ : 382 ಕೋಟಿ ರೂ
ಟಿಡಿಪಿ : 146 ಕೋಟಿ ರೂ
ಶಿವಸೇನೆ : 101.38 ಕೋಟಿ ರೂ
ಆಮ್ ಆದ್ಮಿ ಪಕ್ಷ: 94.28 ಕೋಟಿ ರೂ

ಮಾರ್ಚ್ ನಂತರ ಪ್ರಸಕ್ತ ಹಣಕಾಸು ವರ್ಷದ ಅಂಕಿ ಅಂಶಗಳನ್ನು ಆಡಿಟ್ ಮಾಡಿದಾಗ ಈ ಅಂಕಿ ಅಂಶಗಳು ಮತ್ತೆ ಏರಿಕೆಯಾಗಲಿವೆ. ಶೇ. 92.45 ರಷ್ಟು ಚುನಾವಣಾ ಬಾಂಡ್‌ಗಳ ಮೌಲ್ಯವು 1 ಕೋಟಿ ರೂ. 1 ಸಾವಿರ ಮೌಲ್ಯದ ಕೇವಲ 99 ಬಾಂಡ್‌ಗಳನ್ನು ಮಾತ್ರ ನೀಡಲಾಗಿತ್ತು ಎಂದು ವರದಿಗಳಿಂದ ತಿಳಿದು ಬಂದಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ ವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ಬಿ ಆರ್ ಗವಾಯಿ, ಜೆ ಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರ ಸಾಂವಿಧಾನಿಕ ಪೀಠದ ಮುಂದೆ ಮಂಡಿಸಲಾಗಿದ್ದ ಪ್ರಮುಖ ವಾದಗಳಲ್ಲಿ ದೇಣಿಗೆಯ ಹೆಚ್ಚಿನ ಭಾಗವು ಕೇಂದ್ರದಲ್ಲಿ ಆಡಳಿತ ಪಕ್ಷಕ್ಕೆ ಹೋಗುತ್ತಿದೆ ಎಂಬುದಾಗಿತ್ತು. ಈ ಆತಂಕವು ಸರಿಯಾಗಿದೆ ಎಂದು ಮೇಲಿನ ದತ್ತಾಂಶ ಬಹಿರಂಗಪಡಿಸಿದೆ.

2014-15ರಿಂದ 2016-17ರ ಅವಧಿಯಲ್ಲಿ ರಾಷ್ಟ್ರೀಯ ಪಕ್ಷಗಳಿಗೆ ಅಪರಿಚಿತ ಮೂಲಗಳಿಂದ ಬಂದಿದ್ದ ದೇಣಿಗೆಯ ಪಾಲು ಶೇ.66ರಿಂದ 2018-19ರಿಂದ 2021-22ರ ಅವಧಿಯಲ್ಲಿ ಶೇ.72ಕ್ಕೆ ಏರಿಕೆಯಾಗಿದೆ.

2014-15ರಿಂದ 2016-17ರ ಅವಧಿಯಲ್ಲಿ ರಾಷ್ಟ್ರೀಯ ರಾಜಕೀಯ ಪಕ್ಷಗಳ ಒಟ್ಟು ಆದಾಯ ₹3,864 ಕೋಟಿಗಳಿಂದ 2018-19ರಿಂದ 2021-22ರ ಅವಧಿಯಲ್ಲಿ ₹11,829 ಕೋಟಿಗೆ ಏರಿದೆ.

ಒಟ್ಟಾರೆಯಾಗಿ, 2018-19 ರಿಂದ 2021-22 ರ ನಡುವೆ ಚುನಾವಣಾ ಬಾಂಡ್ ಯೋಜನೆಯಿಂದ ಬಂದ ಆದಾಯವು ರಾಷ್ಟ್ರೀಯ ರಾಜಕೀಯ ಪಕ್ಷಗಳ ಒಟ್ಟು ಆದಾಯದ ಶೇಕಡಾ 58 ರಷ್ಟಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ:  ಚುನಾವಣಾ ಬಾಂಡ್ ಯೋಜನೆ ರದ್ದು: ಹೋರಾಟಗಾರರು, ಕಾನೂನು ತಜ್ಞರು ಏನಂದ್ರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...