Homeಕರ್ನಾಟಕಕರ್ನಾಟಕ ಬಜೆಟ್-2024: ಅಹಿಂದ, ಮಹಿಳಾ ಕಲ್ಯಾಣಕ್ಕೆ ಸಿಕ್ಕ ಅನುದಾನ ಎಷ್ಟು?

ಕರ್ನಾಟಕ ಬಜೆಟ್-2024: ಅಹಿಂದ, ಮಹಿಳಾ ಕಲ್ಯಾಣಕ್ಕೆ ಸಿಕ್ಕ ಅನುದಾನ ಎಷ್ಟು?

- Advertisement -
- Advertisement -

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ 15ನೇ ಬಜೆಟ್‌ನಲ್ಲಿ  ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮತ್ತು ಅಹಿಂದ ವರ್ಗಕ್ಕೆ ಸಾಕಷ್ಟು ಅನುದಾನ ಮೀಸಲಿಟ್ಟಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ₹28,608, ಸಮಾಜ ಕಲ್ಯಾಣ ಇಲಾಖೆ 39 ಸಾವಿರ ಕೋಟಿ ಹಾಗೂ ವಕ್ಫ್‌ ಆಸ್ತಿ ಅಭಿವೃದ್ಧಿಗೆ ₹100 ಕೋಟಿ ನಿಗದಿಪಡಿಸಿದ್ದಾರೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಸಿಕ್ಕಿದ್ದೆಷ್ಟು?

2024-25ನೇ ಸಾಲಿನ ಗೃಹಲಕ್ಷ್ಮಿ ಯೋಜನೆಗಾಗಿ ₹28,608 ಕೋಟಿ ನಿಗದಿ ಮಾಡಲಾಗಿದೆ. ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಮೇಲ್ವಿಚಾರಕಿಯರಿಗೆ ₹90 ಕೋಟಿ ವೆಚ್ಚದಲ್ಲಿ 75,938 ಸ್ಮಾರ್ಟ್‌ ಫೋನ್‌ ಒದಗಿಸಲು ನಿರ್ಧರಿಸಿದ್ದು, ರಾಜ್ಯದಲ್ಲಿ ₹200 ಕೋಟಿ ವೆಚ್ಚದಲ್ಲಿ 1000 ಹೊಸ ಅ೦ಗನವಾಡಿ ನಿರ್ಮಾಣ ಮಾಡುವುದಾಗಿ ಘೋಷಣೆ ಮಾಡಲಾಗಿದೆ.

‘Cerebral Palsy, Muscular Dystrophy, Parkinsons ಮತ್ತು Multiple Sclerosis’ ಕಾಯಿಲೆಗಳಿಂದ ಬಳಲುತ್ತಿರುವ ವ್ಯಕ್ತಿಗಳ ಆರೈಕೆದಾರರಿಗೆ ಪ್ರತಿ ತಿಂಗಳಿ ₹1000 ಪ್ರೋತ್ಸಾಹಧನ. ನಿರಾಶ್ರಿತ ಬೌದ್ಧಿಕ ವಿಕಲಚೇತನರ ಆರೈಕೆ ಮತ್ತು ಸ೦ರಕ್ಷಣೆಗಾಗಿ ಎರಡು ಕೋಟಿ ರೂಪಾಯಿ ವೆಚ್ಚದಲ್ಲಿ 4 ಅನುಪಾಲನಾ ಗೃಹಗಳ ಪ್ರಾರಂಭ. ಮಾಜಿ ದೇವದಾಸಿಯರ ಕಲ್ಯಾಣಕ್ಕಾಗಿ ಪ್ರಸ್ತುತ ನೀಡುತ್ತಿರುವ ಮಾಸಾಶನವನ್ನು ₹2000ಕ್ಕೆ ಹೆಚ್ಚಳ ಮಾಡಲು ನಿರ್ಧರಿಸಲಾಗಿದೆ. ಲಿ೦ಗತ್ವ ಅಲ್ಪಸಂಖ್ಯಾತರಿಗೆ ಮೈತ್ರಿ ಯೋಜನೆಯಡಿ ನೀಡುವ ಮಾಸಾಶನವನ್ನು
₹1,200 ಕ್ಕೆ ಹೆಚ್ಚಿಸಲಾಗಿದೆ.

ಸಮಾಜ ಕಲ್ಯಾಣ ಇಲಾಖೆ:

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳು ಹಾಗೂ ಅಲ್ಪಸಂಖ್ಯಾತರ ವಸತಿ ಶಾಲೆಗಳು, ವಿದ್ಯಾರ್ಥಿ ನಿಲಯಗಳ ನಿರ್ಮಾಣಕ್ಕಾಗಿ ಒಟ್ಟು ₹2,710 ಕೋಟಿ ಅನುದಾನ ಮೀಸಲಿಡಲಾಗಿದೆ. ಸಮಾಜ ಕಲ್ಯಾಣ, ಪರಿಶಿಷ್ಟ ಪಂಗಡಗಳ, ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳು ಹಾಗೂ ವಿದ್ಯಾರ್ಥಿನಿಲಯಗಳ ವಿದ್ಯಾರ್ಥಿಗಳ ಮಾಸಿಕ ಭೋಜನ ವೆಚ್ಚ ತಲಾ ₹100ಕ್ಕೆ ಹೆಚ್ಚಳ. ಕ್ರೈಸ್‌ ಅಡಿಯಲ್ಲಿ ₹638 ಕೋಟಿಗಳ ಅಂದಾಜು ವೆಚ್ಚದಲ್ಲಿ ಒಟ್ಟು 29 ವಸತಿ ಶಾಲಾ ಸಂಕೀರ್ಣಗಳ ನಿರ್ಮಾಣ; 20 ಹೋಬಳಿಗಳಲ್ಲಿ ಹೊಸ ವಸತಿ ಶಾಲೆಗಳ ಪ್ರಾರಂಭಕ್ಕೆ ತೀರ್ಮಾನ ಮಾಡಲಾಗಿದೆ.

ವಿದ್ಯಾರ್ಥಿ ನಿಲಯಗಳಿಗೆ ಸ್ವಂತ ಕಟ್ಟಡಗಳ ನಿರ್ಮಾಣ; 31 ಹೊಸ ಮೆಟ್ರಕ್‌ ನಂತರದ ವಸತಿ ನಿಲಯ ಮಂಜೂರು ಮಾಡಲು ಕ್ರಮ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯದ ಜನರಿಗೆ ವಿರಳ
ಮತ್ತು ದುಬಾರಿ ವೆಚ್ಚದ ಚಿಕಿತ್ಸಾ ಸೇವೆಗಳನ್ನು ಒದಗಿಸಲು ₹35 ಕೋಟಿಗಳ Corpus Fund ಸ್ಥಾಪನೆ. ಪದ್ಮಶ್ರೀ ಡಾ. ಸಿದ್ದಲಿಂಗಯ್ಯ ಅವರ ಸ್ಮರಣಾರ್ಥ, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಗ್ರಂಥಾಲಯ ಸ್ಥಾಪನೆ ಮಾಡಲು ನಿರ್ಧರಿಸಲಾಗಿದೆ.

ಪರಿಶಿಷ್ಟ ಪಂಗಡಗಳ ಕಲ್ಯಾಣ:

ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಆಶ್ರಮ ಶಾಲೆಗಳಿಗೆ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ ಎಂದು ಮರುನಾಮಕರಣ ಮಾಡಿ, 5 ಹಾಗೂ 7 ನೇ ತರಗತಿವರೆಗೆ ಇರುವ ಈ ಶಾಲೆಗಳಲ್ಲಿ ಕ್ರಮವಾಗಿ ಆರನೇ ಹಾಗೂ ಎ೦ಟನೇ ತರಗತಿ ಪ್ರಾರಂಭಿಸಲು ಕ್ರಮ ಹಾಗೂ ಪ್ರತಿ ತರಗತಿಯ ವಿದ್ಯಾರ್ಥಿಗಳ ಸಂಖ್ಯಾಬಲ 25 ರಿಂದ 40ಕ್ಕೆ ಹೆಚ್ಚಿಸಲು ಕ್ರಮ. ಏಳು ಜಿಲ್ಲಾ ಕೇಂದ್ರಗಳಲ್ಲಿ 100 ಸಂಖ್ಯಾಬಲದ ಬಾಲಕ-ಬಾಲಕಿಯರ 14 ವಿದ್ಯಾರ್ಥಿನಿಲಯಗಳ ಪ್ರಾರಂಭಕ್ಕೆ ಅನುಮತಿ.

ಐಐಎಸ್‌ಸಿ, ಐಐಟಿ ಮತ್ತು ಎನ್‌ಐಟಿ ಸಂಸ್ಥೆಗಳ ಮೂಲಕ ವೃತ್ತಿಪರ ತರಬೇತಿ ಕೋರ್ಸ್‌ಗೆ ದಾಖಲಾಗುವ 200 ಇಂಜಿನಿಯರಿಂಗ್‌ ಪದವೀಧರರಿಗೆ ₹15,000 ಶಿಷ್ಯವೇತನ ನೀಡಲು ಕ್ರಮ. ₹5,000 ಯುವಕ-ಯುವತಿಯರಿಗೆ ಡ್ರೋನ್‌ ಆಧಾರಿತ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿ. ಪೋಸ್ಟ್‌ ಡಾಕ್ಟರಲ್‌ ಫೆಲೋಶಿಪ್‌ ಮಾಡುತ್ತಿರುವ 100 ಪರಿಶಿಷ್ಟ ಪಂಗಡದ ಸಂಶೋಧನಾ ವಿದ್ಯಾರ್ಥಿಗಳಿಗೆ, ಯಾವುದೇ ಫೆಲೋಶಿಪ್‌ ಪಡೆಯದಿದ್ದಲ್ಲಿ ಮಾಸಿಕ ₹25,000 ಶಿಷ್ಯವೇತನ ಸೌಲಭ್ಯ.

77 ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳ ಸಮಗ್ರ ಅಭಿವೃದ್ಧಿಗಾಗಿ ಏಕಲವ್ಯ ಮಾದರಿಯ ಪ್ರತಿ ವಸತಿ ಶಾಲೆಯಲ್ಲಿ 20 ಸೀಟು ಮೀಸಲು ಹಾಗೂ ಪಡಿತರ ಚೀಟಿ ಮುಂತಾದ ಸರ್ಕಾರಿ ದಾಖಲೆಗಳನ್ನು ಒದಗಿಸಲು  ಶೇಷ ಕೋಶ ಸ್ಥಾಪನೆಗೆ ನಿರ್ಧಾರ.

ಹಿಂದುಳಿದ ವರ್ಗಗಳ ಕಲ್ಯಾಣ:

ಹಿಂದುಳಿದ ವರ್ಗಗಳ 150 ಮೆಟ್ರಿಕ್‌ ನಂತರದ ಹೊಸ ವಸತಿನಿಲಯಗಳ ಪ್ರಾರಂಭ; 174 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ ₹200 ಕೋಟಿ ವೆಚ್ಚದಲ್ಲಿ ಮೂಲಸೌಕರ್ಯ ಕಲ್ಪಿಸಲು ಕ್ರಮ. 20 ವಿದ್ಯಾರ್ಥಿ ನಿಲಯಗಳಿಗೆ ನಾಲ್ಕು ಕೋಟಿ ರೂ. ಗಳ ಘಟಕ ವೆಚ್ಚದಲ್ಲಿ ಕಟ್ಟಡ ನಿರ್ಮಾಣ. ರಾಜ್ಯದ ಹಿಂದುಳಿದ ವರ್ಗಗಳ ಎದ್ಯಾರ್ಥಿಗಳಿಗೆ ಕ್ಲಾಟ್, ಮ್ಯಾಟ್ (CLAT, MAT) ಮತ್ತು ಚಾರ್ಟೆಡ್ ಅಕೌಂಟೆಂಟ್ ಫೌಂಡೇಷನ್‌ ಪರೀಕ್ಷಾ ಪೂರ್ವ ತರಬೇತಿ. 500 ಜನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ತರಬೇತಿ ಸಂಸ್ಥೆಗಳಿಂದ ಎರಡು ವರ್ಷಗಳ ಜೆಇಇ-ನೀಟ್ಉ ಚಿತ ತರಬೇತಿ ನೀಡಲು ಕ್ರಮ. ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳ ಸ್ಥಿತಿಗತಿ ಅಧ್ಯಯನ ನಡೆಸಿ ಅಭಿವೃದ್ಧಿಗಾಗಿ ‘ಕರ್ನಾಟಕ ಅಲೆಮಾರಿ ಆಯೋಗ’ ರಚನೆ.

ಅಲ್ಪಸಂಖ್ಯಾತರ ಕಲ್ಯಾಣ:

50 ಸಂಖ್ಯಾಬಲವುಳ್ಳ 50 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು, 100 ಸಂಖ್ಯಾಬಲವುಳ್ಳ 100 ಮೆಟ್ರಿಕ್‌ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳು, 100 ಹೊಸ ಮೌಲಾನಾ ಆಜಾದ್‌ ಶಾಲೆಗಳ ಪ್ರಾರಂಭ ಹಾಗೂ 25 ಶಾಲೆಗಳಲ್ಲಿ ಪದವಿ ಪೂರ್ವ ಶಿಕ್ಷಣ ಪ್ರಾರಂಭಕ್ಕೆ ನಿರ್ಧಾರ.

ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕಾ ಘಟಕಗಳ ಉನ್ನತೀಕರಣಕ್ಕೆ ಕೆಎಸ್‌ಎಫ್‌ಸಿ ಮೂಲಕ ಪಡೆಯುವ ₹10 ಕೋಟಿ ವರೆಗಿನ ಸಾಲಕ್ಕೆ ಶೇ.6 ರಷ್ಟು ಬಡ್ಡಿ ಸಹಾಯಧನ ಸೌಲಭ್ಯ. ಅಲ್ಪಸಂಖ್ಯಾತ ಸಮುದಾಯದ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಸ್ವಯಂ ಉದ್ಯೋಗ ಚಟುವಟಿಕೆಗಳಿಗೆ ಉತ್ತೇಜನ ನೀಡಲು ₹10 ಕೋಟಿ ರೂ. ಅನುದಾನದ ಜತೆಗೆ, ರಾಜ್ಯದಲ್ಲಿನ ವಕ್ಫ್‌ ಆಸ್ತಿಗಳ ಸಂರಕ್ಷಣೆ ಹಾಗೂ ಅಭಿವೃದ್ಧಿಗಾಗಿ
₹100 ಕೋಟಿ ಅನುದಾನ ಘೋಷಣೆ ಮಾಡಲಾಗಿದೆ.

ರಾಜ್ಯದಲ್ಲಿನ ಪ್ರಮುಖ ಧಾರ್ಮಿಕ ಸ್ಥಳಗಳಲ್ಲಿ ಮೂಲಭೂತ ಸೌಕರ್ಯ ಒದಗಿಸಲು ₹20 ಕೋಟಿ ಅನುದಾನ. ಮಂಗಳೂರಿನ ಹಜ್‌ ಭವನದ ನಿರ್ಮಾಣಕ್ಕೆ ₹10 ಕೋಟಿ ಅನುದಾನ. 9 ಜೈನರ ಪ್ರಮುಖ ಧಾರ್ಮಿಕ ಸ್ಥಳಗಳ ಅಭಿವೃದ್ಧಿಗಾಗಿ ₹50 ಕೋಟಿ, ಕ್ರಿಶ್ಚಿಯನ್‌ ಸಮುದಾಯದ ಅಭಿವೃದ್ಧಿಗಾಗಿ ₹200 ಕೋಟಿ ಅನುದಾನ ನಿಗದಿಪಡಿಸಲಾಗಿದೆ.

ಸಿಖ್‌ ಲಿಗಾರ್‌ ಸಮುದಾಯದ ಜನರ ಆರ್ಥಿಕ ಸಬಲೀಕರಣಕ್ಕಾಗಿ ಎರಡು ಕೋಟಿ ರೂಪಾಯಿ ಹಾಗೂ ಬೀದರ್‌ ಗುರುದ್ವಾರ ಅಭಿವೃದ್ಧಿಗೆ 1 ಕೋಟಿ ರೂಪಾಯಿ ಅನುದಾನ ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ; ಕರ್ನಾಟಕ ಬಜೆಟ್-2024: ವೃದ್ಧಾಪ್ಯ ವೇತನ ಹೆಚ್ಚಳ, ಹಲವು ಹೊಸ ಕಾರ್ಯಕ್ರಮಗಳ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...