Homeಮುಖಪುಟನಿತೀಶ್‌ಗಾಗಿ ಬಾಗಿಲು ಯಾವಾಗಲೂ ತೆರೆದಿರುತ್ತದೆ: ಲಾಲೂ ಪ್ರಸಾದ್ ಯಾದವ್

ನಿತೀಶ್‌ಗಾಗಿ ಬಾಗಿಲು ಯಾವಾಗಲೂ ತೆರೆದಿರುತ್ತದೆ: ಲಾಲೂ ಪ್ರಸಾದ್ ಯಾದವ್

- Advertisement -
- Advertisement -

ಮುಂಬರುವ ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಆರ್‌ಜೆಡಿ ಅಭ್ಯರ್ಥಿಗಳಾದ ಮನೋಜ್ ಝಾ ಮತ್ತು ಸಂಜಯ್ ಯಾದವ್ ಅವರ ಬೆಂಬಲ ಸೂಚಿಸಲು ವಿಧಾನಸಭೆಗೆ ತೆರಳಿದ್ದ ಲಾಲೂ ಪ್ರಸಾದ್ ಯಾದವ್ ಹಾಗೂ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮುಖಾಮುಖಿಯಾಗಿದ್ದು, ಉಭಯ ನಾಯಕರು ಸಂತೋಷವನ್ನು ವಿನಿಮಯ ಮಾಡಿಕೊಂಡಿದ್ದಾರೆ.

ಮಹಾಘಟಬಂಧನ್‌ ತ್ಯಜಿಸುವ ನಿತೀಶ್‌ ಕುಮಾರ್‌ ನಿರ್ಧಾರದ ನಂತರ ಇದು ಅವರ ನಡುವಿನ ಮೊದಲ ಮುಖಾಮುಖಿಯಾಗಿದೆ. ನಿತೀಶ್ ಕುಮಾರ್ ಅವರು ಮಹಾಮೈತ್ರಿಕೂಟಕ್ಕೆ ಮರಳುವ ಸಾಧ್ಯತೆ ಕುರಿತು ಪತ್ರಕರ್ತರು ಕೇಳಿದ ಪ್ರಶ್ನೆಗಳಿಗೆ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಪ್ರತಿಕ್ರಿಯಿಸಿದ್ದು, “ಅವರು ಮೊದಲು ಹಿಂತಿರುಗಿ ಬರಲಿ; ನಂತರ ನಾವು ಯೋಚಿಸುತ್ತೇವೆ (ಜಬ್ ಆಂಗೆ ಟ್ಯಾಬ್ ದೇಖಾ ಜಾಯೇಗಾ)” ಎಂದು ಉತ್ತರಿಸಿದರು.

ತಮ್ಮ ಹಳೆಯ ಮಿತ್ರನಿಗೆ ಇನ್ನೂ ಬಾಗಿಲು ತೆರೆದಿದೆಯೇ ಎಂಬ ಮರು ಪ್ರಶ್ನೆಗೆ, ‘ಹೌದು.. ಯಾವಾಗಲೂ ತೆರೆದಿರುತ್ತದೆ (ಖುಲಾ ಹೈ ರಹತಾ ಹೈ)’ ಎಂದು ಉತ್ತರಿಸಿದರು.

ಜೆಡಿಯು ಮುಖ್ಯ ವಕ್ತಾರ ಮತ್ತು ಎಂಎಲ್‌ಸಿ ನೀರಜ್ ಕುಮಾರ್ ಅವರು ಊಹಾಪೋಹಗಳಿಗೆ ತೆರೆ ಎಳೆದಿದ್ದು, ‘ಬಾಗಿಲುಗಳು ಇನ್ನೂ ತೆರೆದಿವೆ ಎಂದು ಲಾಲು ಜಿ ಹೇಳುತ್ತಾರೆ. ಅಲಿಘರ್‌ನ ಪ್ರಸಿದ್ಧ ಬೀಗವನ್ನು ಬಾಗಿಲುಗಳ ಮೇಲೆ ಇರಿಸಲಾಗಿದೆ ಎಂದು ಅವರು ತಿಳಿದಿರಬೇಕು. ನಮ್ಮ ನಾಯಕ ನಿತೀಶ್ ಕುಮಾರ್ ಅವರು ಆರ್‌ಜೆಡಿ ನಮ್ಮೊಂದಿಗೆ ಅಧಿಕಾರ ಹಂಚಿಕೊಂಡಾಗಲೆಲ್ಲಾ ಅದು ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಪುನಃ ಹಿಂತಿರುಗುವ ಪ್ರಶ್ನೆಯೇ ಇಲ್ಲ’ ಎಂದಿದ್ದಾರೆ.

ಲಾಲು ಪ್ರಸಾದ್ ಅವರ ಪುತ್ರ ಮತ್ತು ಬಿಹಾರದ ಮಾಜಿ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ಶುಕ್ರವಾರ ಸಸಾರಾಮ್‌ನಲ್ಲಿ ಭಾರತ್ ಜೋಡೋ ನ್ಯಾಯ್ ಯಾತ್ರೆಯನ್ನು ಉದ್ದೇಶಿಸಿ ಮಾತನಾಡುವಾಗ ನಿತೀಶ್ ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು.

‘ನಮ್ಮ ಸಿಎಂ ಹೇಗಿದ್ದಾರೆಂದು ನಿಮಗೆಲ್ಲ ಚೆನ್ನಾಗಿ ಗೊತ್ತಿದೆ, ಯಾರ ಮಾತನ್ನೂ ಕೇಳಲು ಇಷ್ಟಪಡುವುದಿಲ್ಲ. ಬೇಕಾದರೆ ನಾನು ಸಾಯುತ್ತೇನೆ, ಆದರೆ ಬಿಜೆಪಿ ಸೇರುವುದಿಲ್ಲ ಎಂದು ಹೇಳುತ್ತಿದ್ದರು.. ನಾವು ನಿತೀಶ್ ಜೀ ಜೊತೆಗೇ ಇರಲು ನಿರ್ಧರಿಸಿದ್ದೇವೆ. 2024ರಲ್ಲಿ ಬಿಜೆಪಿಯನ್ನು ಸೋಲಿಸಲು ನಾವು ಸಾಕಷ್ಟು ತ್ಯಾಗ ಮಾಡಬೇಕಾಗಿದೆ. ನಾವು ಬೇಸತ್ತ ಮುಖ್ಯಮಂತ್ರಿಯನ್ನು ನೇಮಿಸಿದ್ದೇವೆ’ ಎಂದು ತೇಜಸ್ವಿ ಯಾದವ್ ಹೇಳಿದರು.

ಲಾಲು ಪ್ರಸಾದ್ ಮತ್ತು ನಿತೀಶ್ ಕುಮಾರ್ ಅವರ ಹಾದಿಯು ದಶಕಗಳಿಂದ ಬಿಹಾರದ ರಾಜಕೀಯದೊಂದಿಗೆ ಹೆಣೆದುಕೊಂಡಿದೆ. ಇಬ್ಬರೂ ಸಹ ಕಳೆದ 33 ವರ್ಷಗಳಿಗೂ ಹೆಚ್ಚು ಕಾಲ ರಾಜ್ಯದಲ್ಲಿ ಅಧಿಕಾರ ನಡೆಸಿದ್ದಾರೆ. ಜೆಪಿ ಚಳವಳಿಯ ಸಮಯದಲ್ಲಿ ಮಿತ್ರಪಕ್ಷಗಳಾಗಿ ಪ್ರಾರಂಭವಾದ ಅವರು ನಂತರ ಪ್ರತಿಸ್ಪರ್ಧಿಗಳಾದರು, ನಂತರ ಮಿತ್ರರು, ನಂತರ ಪ್ರತಿಸ್ಪರ್ಧಿಗಳು, ನಂತರ ಮಿತ್ರರು ಮತ್ತು ನಂತರ ಮತ್ತೆ ಪ್ರತಿಸ್ಪರ್ಧಿಗಳಾಗಿದ್ದಾರೆ.

ಇದನ್ನೂ ಓದಿ; ರೈತರ ದೆಹಲಿ ಚಲೋ ಮೆರವಣಿಗೆ: ಎಂಎಸ್‌ಪಿ ಜಾರಿಗೆ ಒಪ್ಪದ ಕೇಂದ್ರ; ಮೂರನೇ ಸುತ್ತಿನ ಸಭೆಯೂ ವಿಫಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...