Homeಮುಖಪುಟನಿತೀಶ್‌ಗಾಗಿ ಬಾಗಿಲು ಯಾವಾಗಲೂ ತೆರೆದಿರುತ್ತದೆ: ಲಾಲೂ ಪ್ರಸಾದ್ ಯಾದವ್

ನಿತೀಶ್‌ಗಾಗಿ ಬಾಗಿಲು ಯಾವಾಗಲೂ ತೆರೆದಿರುತ್ತದೆ: ಲಾಲೂ ಪ್ರಸಾದ್ ಯಾದವ್

- Advertisement -
- Advertisement -

ಮುಂಬರುವ ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಆರ್‌ಜೆಡಿ ಅಭ್ಯರ್ಥಿಗಳಾದ ಮನೋಜ್ ಝಾ ಮತ್ತು ಸಂಜಯ್ ಯಾದವ್ ಅವರ ಬೆಂಬಲ ಸೂಚಿಸಲು ವಿಧಾನಸಭೆಗೆ ತೆರಳಿದ್ದ ಲಾಲೂ ಪ್ರಸಾದ್ ಯಾದವ್ ಹಾಗೂ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮುಖಾಮುಖಿಯಾಗಿದ್ದು, ಉಭಯ ನಾಯಕರು ಸಂತೋಷವನ್ನು ವಿನಿಮಯ ಮಾಡಿಕೊಂಡಿದ್ದಾರೆ.

ಮಹಾಘಟಬಂಧನ್‌ ತ್ಯಜಿಸುವ ನಿತೀಶ್‌ ಕುಮಾರ್‌ ನಿರ್ಧಾರದ ನಂತರ ಇದು ಅವರ ನಡುವಿನ ಮೊದಲ ಮುಖಾಮುಖಿಯಾಗಿದೆ. ನಿತೀಶ್ ಕುಮಾರ್ ಅವರು ಮಹಾಮೈತ್ರಿಕೂಟಕ್ಕೆ ಮರಳುವ ಸಾಧ್ಯತೆ ಕುರಿತು ಪತ್ರಕರ್ತರು ಕೇಳಿದ ಪ್ರಶ್ನೆಗಳಿಗೆ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಪ್ರತಿಕ್ರಿಯಿಸಿದ್ದು, “ಅವರು ಮೊದಲು ಹಿಂತಿರುಗಿ ಬರಲಿ; ನಂತರ ನಾವು ಯೋಚಿಸುತ್ತೇವೆ (ಜಬ್ ಆಂಗೆ ಟ್ಯಾಬ್ ದೇಖಾ ಜಾಯೇಗಾ)” ಎಂದು ಉತ್ತರಿಸಿದರು.

ತಮ್ಮ ಹಳೆಯ ಮಿತ್ರನಿಗೆ ಇನ್ನೂ ಬಾಗಿಲು ತೆರೆದಿದೆಯೇ ಎಂಬ ಮರು ಪ್ರಶ್ನೆಗೆ, ‘ಹೌದು.. ಯಾವಾಗಲೂ ತೆರೆದಿರುತ್ತದೆ (ಖುಲಾ ಹೈ ರಹತಾ ಹೈ)’ ಎಂದು ಉತ್ತರಿಸಿದರು.

ಜೆಡಿಯು ಮುಖ್ಯ ವಕ್ತಾರ ಮತ್ತು ಎಂಎಲ್‌ಸಿ ನೀರಜ್ ಕುಮಾರ್ ಅವರು ಊಹಾಪೋಹಗಳಿಗೆ ತೆರೆ ಎಳೆದಿದ್ದು, ‘ಬಾಗಿಲುಗಳು ಇನ್ನೂ ತೆರೆದಿವೆ ಎಂದು ಲಾಲು ಜಿ ಹೇಳುತ್ತಾರೆ. ಅಲಿಘರ್‌ನ ಪ್ರಸಿದ್ಧ ಬೀಗವನ್ನು ಬಾಗಿಲುಗಳ ಮೇಲೆ ಇರಿಸಲಾಗಿದೆ ಎಂದು ಅವರು ತಿಳಿದಿರಬೇಕು. ನಮ್ಮ ನಾಯಕ ನಿತೀಶ್ ಕುಮಾರ್ ಅವರು ಆರ್‌ಜೆಡಿ ನಮ್ಮೊಂದಿಗೆ ಅಧಿಕಾರ ಹಂಚಿಕೊಂಡಾಗಲೆಲ್ಲಾ ಅದು ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಪುನಃ ಹಿಂತಿರುಗುವ ಪ್ರಶ್ನೆಯೇ ಇಲ್ಲ’ ಎಂದಿದ್ದಾರೆ.

ಲಾಲು ಪ್ರಸಾದ್ ಅವರ ಪುತ್ರ ಮತ್ತು ಬಿಹಾರದ ಮಾಜಿ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ಶುಕ್ರವಾರ ಸಸಾರಾಮ್‌ನಲ್ಲಿ ಭಾರತ್ ಜೋಡೋ ನ್ಯಾಯ್ ಯಾತ್ರೆಯನ್ನು ಉದ್ದೇಶಿಸಿ ಮಾತನಾಡುವಾಗ ನಿತೀಶ್ ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು.

‘ನಮ್ಮ ಸಿಎಂ ಹೇಗಿದ್ದಾರೆಂದು ನಿಮಗೆಲ್ಲ ಚೆನ್ನಾಗಿ ಗೊತ್ತಿದೆ, ಯಾರ ಮಾತನ್ನೂ ಕೇಳಲು ಇಷ್ಟಪಡುವುದಿಲ್ಲ. ಬೇಕಾದರೆ ನಾನು ಸಾಯುತ್ತೇನೆ, ಆದರೆ ಬಿಜೆಪಿ ಸೇರುವುದಿಲ್ಲ ಎಂದು ಹೇಳುತ್ತಿದ್ದರು.. ನಾವು ನಿತೀಶ್ ಜೀ ಜೊತೆಗೇ ಇರಲು ನಿರ್ಧರಿಸಿದ್ದೇವೆ. 2024ರಲ್ಲಿ ಬಿಜೆಪಿಯನ್ನು ಸೋಲಿಸಲು ನಾವು ಸಾಕಷ್ಟು ತ್ಯಾಗ ಮಾಡಬೇಕಾಗಿದೆ. ನಾವು ಬೇಸತ್ತ ಮುಖ್ಯಮಂತ್ರಿಯನ್ನು ನೇಮಿಸಿದ್ದೇವೆ’ ಎಂದು ತೇಜಸ್ವಿ ಯಾದವ್ ಹೇಳಿದರು.

ಲಾಲು ಪ್ರಸಾದ್ ಮತ್ತು ನಿತೀಶ್ ಕುಮಾರ್ ಅವರ ಹಾದಿಯು ದಶಕಗಳಿಂದ ಬಿಹಾರದ ರಾಜಕೀಯದೊಂದಿಗೆ ಹೆಣೆದುಕೊಂಡಿದೆ. ಇಬ್ಬರೂ ಸಹ ಕಳೆದ 33 ವರ್ಷಗಳಿಗೂ ಹೆಚ್ಚು ಕಾಲ ರಾಜ್ಯದಲ್ಲಿ ಅಧಿಕಾರ ನಡೆಸಿದ್ದಾರೆ. ಜೆಪಿ ಚಳವಳಿಯ ಸಮಯದಲ್ಲಿ ಮಿತ್ರಪಕ್ಷಗಳಾಗಿ ಪ್ರಾರಂಭವಾದ ಅವರು ನಂತರ ಪ್ರತಿಸ್ಪರ್ಧಿಗಳಾದರು, ನಂತರ ಮಿತ್ರರು, ನಂತರ ಪ್ರತಿಸ್ಪರ್ಧಿಗಳು, ನಂತರ ಮಿತ್ರರು ಮತ್ತು ನಂತರ ಮತ್ತೆ ಪ್ರತಿಸ್ಪರ್ಧಿಗಳಾಗಿದ್ದಾರೆ.

ಇದನ್ನೂ ಓದಿ; ರೈತರ ದೆಹಲಿ ಚಲೋ ಮೆರವಣಿಗೆ: ಎಂಎಸ್‌ಪಿ ಜಾರಿಗೆ ಒಪ್ಪದ ಕೇಂದ್ರ; ಮೂರನೇ ಸುತ್ತಿನ ಸಭೆಯೂ ವಿಫಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...