Homeಕರ್ನಾಟಕಬಿಜೆಪಿ-ಜೆಡಿಎಸ್ ಶಾಸಕರಿಂದ ಸಂವಿಧಾನಕ್ಕೆ ಅಪಮಾನ: ಡಿಸಿಎಂ ಡಿ.ಕೆ. ಶಿವಕುಮಾರ್

ಬಿಜೆಪಿ-ಜೆಡಿಎಸ್ ಶಾಸಕರಿಂದ ಸಂವಿಧಾನಕ್ಕೆ ಅಪಮಾನ: ಡಿಸಿಎಂ ಡಿ.ಕೆ. ಶಿವಕುಮಾರ್

- Advertisement -
- Advertisement -

ಬಜೆಟ್ ಮಂಡನೆಯನ್ನು ದಿಕ್ಕರಿಸುವ ಮೂಲಕ ಬಿಜೆಪಿಯ 65 ಹಾಗೂ ಜೆಡಿಎಸ್‌ನ 19 ಶಾಸಕರು ಜನರಿಗೆ, ಪ್ರಜಾಪ್ರಭುತ್ವ ವ್ಯವಸ್ಥೆ ಹಾಗೂ ಸಂವಿಧಾನಕ್ಕೆ ಅಪಮಾನ ಮಾಡಿದ್ದಾರೆ ಎಂದು ಕಮಲ-ದಳ ನಾಯಕರ ವಿರುದ್ಧ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದರು.

ಬಜೆಟ್ ಮಂಡನೆ ನಂತರ ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ‘ನಮ್ಮದು ಜನರಿಗೆ ಬದುಕು ಕಟ್ಟಿಕೊಡುವ ಬಜೆಟ್. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬಜೆಟ್ ಅನ್ನು ಬಾಯ್ಕಾಟ್ ಮಾಡುವ ಮೂಲಕ ವಿರೋಧ ಪಕ್ಷಗಳ ನಾಯಕರು ರಾಜ್ಯದ ಜನರಿಗೆ ಅಪಮಾನ ಮಾಡಿದ್ದಾರೆ’ ಎಂದು ಕಿಡಿಕಾರಿದರು.

‘ನಮ್ಮ ಬಜೆಟ್ ನ ಅಂಕಿ-ಅಂಶಗಳನ್ನು ನೋಡಿ ವಿರೋಧ ಪಕ್ಷಗಳ ನಾಯಕರಿಗೆ ಸಂಕಟದಿಂದ ಕೂರಲು ಆಗಲಿಲ್ಲ. ಎಲ್ಲ ಗ್ಯಾರಂಟಿಗಳಿಗೆ ಹಣ ಕೊಟ್ಟು ಇಷ್ಟು ಅಭಿವೃದ್ಧಿ ಕೆಲಸ ಮಾಡುತ್ತಿದ್ದಾರಲ್ಲ ಎಂದು ಅಸೂಯೆಯಿಂದ ಬಜೆಟ್ ಧಿಕ್ಕರಿಸಿ ಎದ್ದು ಹೋದರು. ರಾಜ್ಯದ ಇತಿಹಾಸದಲ್ಲಿ ಯಾವುದೇ ವಿರೋಧ ಪಕ್ಷದವರು ಈ ರೀತಿ ಬಜೆಟ್ ಗೆ ಅಪಮಾನ ಮಾಡಿ ಹೋಗಿರಲಿಲ್ಲ. ಅವರು ಬಜೆಟ್ ಮಂಡನೆ ನಂತರ ತಮ್ಮ ಅಭಿಪ್ರಾಯ ತಿಳಿಸುತ್ತಿದ್ದರು. ಆದರೆ ಇಂದು ಜನರ ಕಷ್ಟಕ್ಕೆ ಸ್ಪಂದಿಸುವ ಬಜೆಟ್ ಅನ್ನು ಧಿಕ್ಕರಿಸುವ ಮೂಲಕ ಬಿಜೆಪಿಯ 65 ಹಾಗೂ ಜೆಡಿಎಸ್‌ನ 19 ಶಾಸಕರು ಜನರಿಗೆ, ಪ್ರಜಾಪ್ರಭುತ್ವ ವ್ಯವಸ್ಥೆ ಹಾಗೂ ಸಂವಿಧಾನಕ್ಕೆ ಅಪಮಾನ ಮಾಡಿದ್ದಾರೆ’ ಎಂದು ವಾಗ್ದಾಳಿ ನಡೆಸಿದರು.

‘ನಮ್ಮದು ಜನರಿಗೆ ಬದುಕು ಕಟ್ಟಿಕೊಡುವ, ಎಲ್ಲ ಕ್ಷೇತ್ರದಲ್ಲಿ ಜನರ ಬದುಕಿನಲ್ಲಿ ಬದಲಾವಣೆ ತರುವ ಬಜೆಟ್. ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಬೆಂಗಳೂರಿನ ಬಗ್ಗೆ ದೊಡ್ಡ ಪ್ರಮಾಣದ ದೂರದೃಷ್ಟಿ ಇಟ್ಟುಕೊಂಡು ಬಜೆಟ್ ಮಂಡನೆ ಮಾಡಲಾಗಿದೆ. ನೀರಾವರಿ ಇಲಾಖೆಯಲ್ಲಿ ಹೊಸ ಚಿಂತನೆ ಹಮ್ಮಿಕೊಳ್ಳಲಾಗಿದೆ. ಕೆಆರ್ ಎಸ್ ಉದ್ಯಾನ ಅಭಿವೃದ್ಧಿ, ನವಲಿ ಸಮತೋಲಿತ ಜಲಾಶಯ ನಿರ್ಮಾಣ, ಕೃಷ್ಣ ಮೇಲ್ದಂಡೆ, ಕಳಸಾ ಬಂಡೂರಿ ಯೋಜನೆಗೆ ಮುಂದಾಗಿದ್ದೇವೆ. ಕೇಂದ್ರ ಸರ್ಕಾರ ಕಳಸಾ ಬಂಡೂರಿ ಯೋಜನೆಗೆ ಒಪ್ಪಿಗೆ ನೀಡದಿದ್ದರೂ ನಾವು ಟೆಂಡರ್ ಕರೆದಿದ್ದೇವೆ. ಕೇಂದ್ರ ಸರ್ಕಾರ ಅನುಮತಿ ಕೊಟ್ಟ ತಕ್ಷಣ ಕೆಲಸ ಆರಂಭಿಸಲು ನಾವು ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಮೇಕೆದಾಟು ಯೋಜನೆಗೂ ಸಕಲ ಸಿದ್ಧತೆ ಮಾಡಿಕೊಂಡಿದ್ದೇವೆ’ ಎಂದು ವಿವರಿಸಿದರು.

‘ಬೆಂಗಳೂರಿನ ಹೊರವಲಯದ 110 ಹಳ್ಳಿಗಳಿಗೆ ಕುಡಿಯುವ ನೀರಿನ ಯೋಜನೆ, ಬೆಂಗಳೂರಿನ ಮೇಲಿನ ಒತ್ತಡ ಕಡಿಮೆ ಮಾಡಲು ಮಾಗಡಿ, ಹೊಸಕೋಟೆ, ನೆಲಮಂಗಲ, ಬಿಡದಿ ಸೇರಿದಂತೆ ಐದು ಹೊಸ ಟೌನ್ ಶಿಪ್ ಘೋಷಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಪ್ರವಾಸೋದ್ಯಮಕ್ಕೆ ಆದ್ಯತೆ ನೀಡಲು ಸ್ಕೈ ಡೆಕ್ ನಿರ್ಮಾಣ ಮಾಡಲು ಪ್ರಸ್ತಾವನೆ ಮಾಡಿದ್ದೇವೆ. ಕಂದಾಯ ಇಲಾಖೆಯಲ್ಲಿ ಜನರಿಗೆ ಆಗುತ್ತಿರುವ ತೊಂದರೆ ಸರಿ ಮಾಡಲು ಬದಲಾವಣೆ ತರುತ್ತಿದ್ದೇವೆ. ಪಹಣಿ, ಪೋಡಿ, ಖಾತೆ ಸಮಸ್ಯೆ ಬಗೆಹರಿಸಲಾಗುತ್ತಿದೆ. ಬೆಂಗಳೂರಿನಲ್ಲಿ ಆಸ್ತಿ ದಾಖಲೆಗಳನ್ನು ಮನೆಬಾಗಿಲಿಗೆ ತಲುಪಿಸಲು ಮುಂದಾಗಿದ್ದೇವೆ’ ಎಂದರು.

ಸಿಎಂ ಸಿದ್ದರಾಮಯ್ಯ ಅವರಿಗೆ ಅಭಿನಂದನೆ:

ಮುಖ್ಯಮಂತ್ರಿ ಸಿದ್ದರಾಮಯ್ಯನವರು 15ನೇ ಬಾರಿ ಬಜೆಟ್ ಮಂಡನೆ ಮಾಡಿದ್ದಾರೆ. ದೇಶದಲ್ಲೇ ಇದು ಮಾದರಿಯಾಗಿದೆ. ₹3.71 ಲಕ್ಷ ಕೋಟಿ ಮೊತ್ತದ ಬಜೆಟ್ ಘೋಷಣೆ ಮಾಡಿದ್ದಾರೆ. ಇದಕ್ಕಾಗಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಶ್ಲಾಘಿಸಿದರು.

ಆರ್ಥಿಕ ಶಿಸ್ತು ಪಾಲನೆಯಾಗಿದೆ:

‘ನಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ರಾಜ್ಯದಲ್ಲಿ ಆರ್ಥಿಕ ಶಿಸ್ತು ಪಾಲನೆ ಮಾಡಿಕೊಂಡಿದ್ದೇವೆ. ನಾವು ಯಾರ ಮೇಲೂ ಹೆಚ್ಚಿನ ತೆರಿಗೆ ಹಾಕಿಲ್ಲ. ನಮಗೆ ಅಗತ್ಯವಿರುವ ಸಂಪನ್ಮೂಲಗಳನ್ನು ಕ್ರೂಢೀಕರಣ ಮಾಡಿಕೊಳ್ಳುತ್ತೇವೆ’ ಎಂದು ತಿಳಿಸಿದರು.

ನೀರಾವರಿ ಇಲಾಖೆಗೆ ಹಾಗೂ ಶಿವಕುಮಾರ್ ಅವರಿಗೆ ಅನ್ಯಾಯ ಮಾಡಲಾಗಿದೆ ಎಂಬ ಯಡಿಯೂರಪ್ಪ ಅವರ ಟೀಕೆ ಬಗ್ಗೆ ಕೇಳಿದಾಗ, ‘ಯಡಿಯೂರಪ್ಪನವರಿಂದ ನಿರೀಕ್ಷೆ ಮಾಡಲು ಸಾಧ್ಯವೇ? ಯಡಿಯೂರಪ್ಪನವರು ಪ್ರತಿನಿಧಿಸುತ್ತಿದ್ದ ಕ್ಷೇತ್ರದ ಕೆಲಸಗಳಿಗೂ ನಾವು ಅನುಮೋದನೆ ನೀಡಿದ್ದೇವೆ. ನಿಮ್ಮ ಇಲಾಖೆಗಳಿಗೆ ಅನುದಾನದಲ್ಲಿ ಅನ್ಯಾಯವಾಗಿಲ್ಲವೇ ಎಂದು ಕೇಳಿದಾಗ, ‘ನೀರಾವರಿ ಬೇರೆ, ಇತರ ಇಲಾಖೆ ಬೇರೆ ಎಂದು ನಾನು ಹೇಳುವುದಿಲ್ಲ. ನಾನು ಸಮಗ್ರ ಕರ್ನಾಟಕದವನು. ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ, ಕರಾವಳಿ ಕರ್ನಾಟಕಕ್ಕೂ ಸೇರಿ ಮಾತನಾಡುತ್ತಿದ್ದೇನೆ’ ಎಂದರು.

ಕಳೆದ ಬಜೆಟ್ ನಲ್ಲಿ ಮೇಕೆದಾಟು, ಕಳಸಾ ಬಂಡೂರಿ ಯೋಜನೆಗೆ ಹಣ ನಿಗದಿ ಮಾಡಲಾಗಿತ್ತು ಎಂದು ಕೇಳಿದಾಗ, ‘ಈ ಯೋಜನೆಗಳಿಗೆ ನಾವು ಹಣ ಇಟ್ಟಿರಲಿಲ್ಲ. ಅವರು ಹಣ ಘೋಷಣೆ ಮಾಡಿ ನಂತರ ಹಿಂಪಡೆದಿದ್ದರು’ ಎಂದು ತಿಳಿಸಿದರು.

ಬಿಜೆಪಿ ಶಾಸಕರಿಗೂ ಬಜೆಟ್ ತೃಪ್ತಿಯಿದೆ:

ಬಜೆಟ್ ಅನ್ನು ಬಿಜೆಪಿ ಶಾಸಕ ಸೋಮಶೇಖರ್ ಅವರು ಸ್ವಾಗತಿಸಿರುವ ಬಗ್ಗೆ ಕೇಳಿದಾಗ, ‘ನೀವು ಕೇವಲ ಅವರನ್ನು ಮಾತ್ರ ಕೇಳಿದ್ದೀರಿ. ಬೇರೆಯವರನ್ನೂ ಕೇಳಿ ಅವರಿಗೂ ಈ ಬಜೆಟ್ ನಿಂದ ಸಂತೋಷವಾಗಿದೆ. ಆದರೆ ಅದನ್ನು ಹೇಳಿಕೊಳ್ಳಲು ಆಗುತ್ತಿಲ್ಲ. ಬೆಂಗಳೂರು ನಗರಕ್ಕೆ ಏನೇನು ಬೇಕು ಎಂದು ಸೋಮಶೇಖರ್ ಅವರಿಗೆ ಗೊತ್ತಿದೆ. ಬೆಂಗಳೂರಿನ 110 ಹಳ್ಳಿಗಳಿಗೆ ಕುಡಿಯುವ ನೀರು ನೀಡಬೇಕು ಎಂದು ಪತ್ರ ನೀಡಿದ್ದೇ ಅವರು. ಹೀಗಾಗಿ ಅವರು ಇದನ್ನು ಸ್ವಾಗತಿಸಿದ್ದಾರೆ. ಬಿಜೆಪಿ ಶಾಸಕರು ಕೂಡ ಇನ್ನಷ್ಟು ಬೇಡಿಕೆ ನಮಗೆ ಕೊಟ್ಟಿದ್ದಾರೆ. ಪಾಲಿಕೆ ಬಜೆಟ್ ಮಂಡನೆ ವೇಳೆಯಲ್ಲಿ ಅವರ ಅಭಿಪ್ರಾಯಗಳನ್ನು ಪರಿಗಣಿಸುತ್ತೇವೆ’ ಎಂದರು.

ಬ್ರ್ಯಾಂಡ್ ಬೆಂಗಳೂರಿಗೆ ಬಜೆಟ್ ನಲ್ಲಿ ಕೊಡುಗೆ ಏನು ಎಂದು ಕೇಳಿದಾಗ, ‘ಟನಲ್ ರಸ್ತೆ, ಬಿಸಿನೆಸ್ ಕಾರಿಡಾರ್, ಸ್ಯಾಟಲೈಟ್ ಟೌನ್ ಶಿಪ್, ಮೆಟ್ರೋ ಯೋಜನೆ, ಉಪನಗರ ರೈಲು, ಸ್ಕೈ ಡೆಕ್ ಯೋಜನೆಗಳನ್ನು ನೀಡಲಾಗಿದೆ. ಇದಕ್ಕಿಂತ ಇನ್ನೇನು ಬೇಕು’ ಎಂದು ಕೇಳಿದರು.

ಕುಮಾರಸ್ವಾಮಿ ಅವರು ಸದನಕ್ಕೆ ಬಂದು ಟೀಕಿಸಲಿ:

ರಸ್ತೆ ರಿಪೇರಿ ಮಾಡಲು ಹಣವಿಲ್ಲ ಟನಲ್ ರಸ್ತೆಗೆ ಹಣವಿಟ್ಟಿದ್ದಾರೆ ಎಂಬ ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಕೇಳಿದಾಗ, ‘ಪಾಪ ಕುಮಾರಸ್ವಾಮಿ ಅವರಿಗೆ ಅಧಿವೇಶನಕ್ಕೆ ಬರಲು ಆಗಿಲ್ಲ. ಅವರು ಬಂದು ಬಜೆಟ್ ನೋಡಿದ್ದರೆ ತಿಳಿಯುತ್ತಿತ್ತು. ಅವರು ಎಲ್ಲೋ ಕೂತು ಪಿಎಗಳು, ಮಾಧ್ಯಮಗಳು ಹೇಳಿದ್ದನ್ನು ಕೇಳಿಕೊಂಡು ಮಾತನಾಡಿದರೆ ಹೇಗೆ? ಸದನಕ್ಕೆ ಬಂದು ನಮ್ಮ ತಪ್ಪು ಏನು ಎಂದು ಚರ್ಚೆ ಮಾಡಿದ್ದರೆ ನಾವು ಯೋಚನೆ ಮಾಡಬಹುದು. ಅವರ ಮಾರ್ಗದರ್ಶನ ನಮಗೆ ಅವಶ್ಯಕತೆ ಇದೆ’ ಎಂದು ತಿಳಿಸಿದರು.

ಇದನ್ನೂ ಓದಿ; ಕರ್ನಾಟಕ ಬಜೆಟ್-2024: ಅಹಿಂದ, ಮಹಿಳಾ ಕಲ್ಯಾಣಕ್ಕೆ ಸಿಕ್ಕ ಅನುದಾನ ಎಷ್ಟು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...