Homeಮುಖಪುಟಕೇಂದ್ರ ಸರ್ಕಾರದ ಧೋರಣೆಯಿಂದ ಬೇಸತ್ತು ದೇಶ ತೊರೆದ ಫ್ರೆಂಚ್ ಪತ್ರಕರ್ತೆ

ಕೇಂದ್ರ ಸರ್ಕಾರದ ಧೋರಣೆಯಿಂದ ಬೇಸತ್ತು ದೇಶ ತೊರೆದ ಫ್ರೆಂಚ್ ಪತ್ರಕರ್ತೆ

- Advertisement -
- Advertisement -

ಎರಡು ದಶಕಗಳಿಗೂ ಹೆಚ್ಚು ಕಾಲ ಪತ್ರಕರ್ತೆಯಾಗಿ ಭಾರತದಲ್ಲಿದ್ದ ಫ್ರಾನ್ಸ್‌ನ ವನೆಸ್ಸಾ ಡೊನಾಕ್ ಅವರು ಶುಕ್ರವಾರ ಸ್ವದೇಶಕ್ಕೆ ಮರಳಿದ್ದಾರೆ. ಕೇಂದ್ರದ ಮೋದಿ ಸರ್ಕಾರದ ಧೋರಣೆಯಿಂದ ಬೇಸತ್ತು ತವರಿಗೆ ಮರಳುತ್ತಿರುವುದಾಗಿ ಅವರು ತಿಳಿಸಿದ್ದಾರೆ.

‘ದುರುದ್ದೇಶಪೂರಿತ’ ವರದಿ ಮಾಡಿದ್ದಾರೆ ಎಂದು ಆರೋಪಿಸಿ, ನಿಮ್ಮ ಸಾಗರೋತ್ತರ ಭಾರತೀಯ ನಾಗರಿಕ (ಒಸಿಐ) ಕಾರ್ಡ್ ಏಕೆ ರದ್ದು ಮಾಡಬಾರದು? ಎಂದು ವನೆಸ್ಸಾ ಅವರಿಗೆ ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿ (ಎಫ್‌ಆರ್‌ಆರ್‌ಒ) ಕಳೆದ ತಿಂಗಳು ನೋಟಿಸ್ ನೀಡಿತ್ತು. ಇದರಿಂದ ಬೇಸರಗೊಂಡ ವನೆಸ್ಸಾ ಭಾರತ ತೊರೆದಿದ್ದಾರೆ ಎನ್ನಲಾಗಿದೆ.

“ನಾನು 25 ವರ್ಷಗಳ ಹಿಂದೆ ವಿದ್ಯಾರ್ಥಿಯಾಗಿ ಬಂದು 23 ವರ್ಷಗಳ ಕಾಲ ಪತ್ರಕರ್ತೆಯಾಗಿ ಕೆಲಸ ಮಾಡಿದ ದೇಶವನ್ನು ತೊರೆಯುತ್ತಿದ್ದೇನೆ. ನನ್ನ ವಿರುದ್ದ ಆರೋಪಗಳು ಕೇಳಿ ಬಂದಿರುವ ಕಾರಣ ಇಲ್ಲಿ ಜೀವನ ಮುಂದುವರಿಸಲು ಸಾಧ್ಯವಾಗುತ್ತಿಲ್ಲ” ಎಂದು ಶುಕ್ರವಾರ ಭಾರತ ತೊರೆಯುವಾಗ ವನೆಸ್ಸಾ ಬೇಸರ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರ ತನ್ನನ್ನು ಬಲವಂತವಾಗಿ ದೇಶದಿಂದ ಹೊರದಬ್ಬಿದೆ ಎಂಬರ್ಥದಲ್ಲೇ ಅವರು ಹೇಳಿಕೆ ಕೊಟ್ಟಿದ್ದಾರೆ.

“ಒಂದು ವರ್ಷದ ಹಿಂದೆ ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯವು ಪತ್ರಕರ್ತೆಯಾಗಿ ಕೆಲಸ ಮಾಡುವ ನನ್ನ ಹಕ್ಕನ್ನು ನಿರಾಕರಿಸಿತ್ತು. ಅದಕ್ಕೆ ಯಾವುದೇ ಕಾರಣ ಅಥವಾ ಸಮರ್ಥನೆಗಳನ್ನು ನೀಡಿರಲಿಲ್ಲ. ಯಾವುದೇ ವಿಚಾರಣೆಯನ್ನೂ ನಡೆಸಿಲ್ಲ” ಎಂದು ವನೆಸ್ಸಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ನನ್ನ ಪತ್ರಿಕಾ ವೃತ್ತಿಯ ಹಕ್ಕನ್ನು ನಿರಾಕರಿಸಿದ್ದನ್ನು ಮರು ಪರಿಶೀಲಿಸುವಂತೆ ಗೃಹ ಸಚಿವಾಲಯಕ್ಕೆ ಹಲವು ಬಾರಿ ಮನವಿ ಮಾಡಿದ್ದೇನೆ. ಆದರೆ, ಆ ಕಡೆಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ನಾನು ದೇಶದ ಹಿತಾಸಕ್ತಿಗೆ ವಿರುದ್ದವಾಗಿ ಕೆಲಸ ಮಾಡಿದ್ದೇನೆ ಎಂದು ಆರೋಪಿಸಿದ್ದಾರೆ. ನಾನು ಸಮರ್ಥ ವೇದಿಕೆಗಳ ಮುಂದೆ ಈ ಆರೋಪಗಳ ವಿರುದ್ಧ ಹೋರಾಡುತ್ತೇನೆ. ಕಾನೂನು ಪ್ರಕ್ರಿಯೆಯಲ್ಲಿ ನನಗೆ ಸಂಪೂರ್ಣ ನಂಬಿಕೆ ಇದೆ. ಒಂದಲ್ಲ ಒಂದು ದಿನ ಭಾರತಕ್ಕೆ ಮರಳುವ ಭರವಸೆಯಿದೆ. ಆದರೆ, ಅಲ್ಲಿಯವರೆಗೆ ಕಾಯಲು ಸಾಧ್ಯವಿಲ್ಲ. ನನ್ನ ಪತ್ರಿಕಾ ವೃತ್ತಿಯನ್ನು ಬದಲಾಯಿಸುವಂತೆ ಅಧಿಕಾರಿಗಳು ಒತ್ತಡ ಹೇರಿದ್ದರು. ಆದರೆ, ಅದು ನನಗೆ ಸಾಧ್ಯವಿಲ್ಲ. ನಾನು ಪತ್ರಕರ್ತೆ, ನನ್ನ ಮನಸ್ಸಿಗೆ ಪ್ರಿಯವಾದ ವೃತ್ತಿಯನ್ನು ಯಾವುದೇ ಆರೋಪಗಳು ಸಾಭೀತಾಗದೆ ತ್ಯಜಿಸಲು ನಾನು ಒಪ್ಪುವುದಿಲ್ಲ” ಎಂದು ವನೆಸ್ಸಾ ಹೇಳಿದ್ದಾರೆ.

ಕಳೆದ ತಿಂಗಳು ಗಣರಾಜ್ಯೋತ್ಸವದ ಆಚರಣೆಗಾಗಿ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಅವರು ಭಾರತಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಫ್ರಾನ್ಸ್ ಭಾರತದೊಂದಿಗೆ ವನೆಸ್ಸಾ ಅವರ ಸಮಸ್ಯೆಯ ಬಗ್ಗೆ ಪ್ರಸ್ತಾಪಿಸಿತ್ತು. ಈ ವೇಳೆ ಭಾರತ, ಈ ಸಮಸ್ಯೆಯು ‘ದೇಶದ ನಿಯಮಗಳು ಮತ್ತು ನಿಬಂಧನೆಗಳ ಅನುಸರಣೆ’ಗೆ ಸಂಬಂಧಿಸಿದೆ. ಅಲ್ಲದೆ, ವನೆಸ್ಸಾ ಅವರ ಪತ್ರಿಕಾ ವೃತ್ತಿಗೆ ಸಂಬಂಧಿಸಿಲ್ಲ ಎಂದು ಫ್ರಾನ್ಸ್‌ಗೆ ತಿಳಿಸಿತ್ತು ಎಂದು ವರದಿಗಳು ಹೇಳಿವೆ.

ವನೆಸ್ಸಾ ಅವರು ಫ್ರಾನ್ಸ್, ಸ್ವಿಟ್ಜರ್‌ಲೆಂಡ್ ಮತ್ತು ಬೆಲ್ಜಿಯಂನ ಪತ್ರಿಕೆಗಳಿಗೆ ದಕ್ಷಿಣ ಏಷ್ಯಾದ ವರದಿಗಾರ್ತಿಯಾಗಿ ಕೆಲಸ ಮಾಡುತ್ತಿದ್ದರು. ಭಾರತೀಯ ಪತ್ರಕರ್ತನನ್ನು ವಿವಾಹವಾಗಿರುವ ವನೆಸ್ಸಾ ಅವರು, 23 ವರ್ಷಗಳ ಪತ್ರಿಕಾ ವೃತ್ತಿಯಲ್ಲಿ ‘ಮಾವೋವಾದಿ ದಂಗೆ’ ಸೇರಿದಂತೆ ಹಲವು ಬರಹಗಳನ್ನು ಬರೆದಿದ್ದಾರೆ.

ಇದನ್ನೂ ಓದಿ: ದೆಹಲಿ: ಬಹುಮತವಿದ್ದರೂ ವಿಶ್ವಾಸಮತ ನಿಲುವಳಿ ಮಂಡಿಸಿದ ಅರವಿಂದ್ ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...