Homeಮುಖಪುಟರಷ್ಯಾದ ವಿಪಕ್ಷ ನಾಯಕ ಅಲೆಕ್ಸಿ ನವಾಲ್ನಿ ಜೈಲಿನಲ್ಲಿ ಸಾವು

ರಷ್ಯಾದ ವಿಪಕ್ಷ ನಾಯಕ ಅಲೆಕ್ಸಿ ನವಾಲ್ನಿ ಜೈಲಿನಲ್ಲಿ ಸಾವು

- Advertisement -
- Advertisement -

ಸರ್ವಾಧಿಕಾರಿ ಧೋರಣೆಯ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ರಾಜಕೀಯ ಪ್ರತಿಸ್ಪರ್ಧಿ, ಕಳೆದ ಕೆಲ ದಶಕಗಳಲ್ಲಿ ರಷ್ಯಾ ಕಂಡಂತಹ ಅತ್ಯಂತ ಮಹತ್ವದ ವಿರೋಧ ಪಕ್ಷದ ನಾಯಕ ಅಲೆಕ್ಸಿ ನವಾಲ್ನಿ ಆರ್ಕ್ಟಿಕ್ ಸರ್ಕಲ್ ಜೈಲಿನಲ್ಲಿ ಶುಕ್ರವಾರ ನಿಧನರಾಗಿದ್ದಾರೆ ಎಂದು ಬಿಬಿಸಿ ನ್ಯೂಸ್ ವರದಿ ಮಾಡಿದೆ.

ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಕಡು ವಿರೋಧಿಯಾಗಿದ್ದ ನವಾಲ್ನಿ ಅವರಿಗೆ ಉಗ್ರವಾದದ ಆರೋಪದ ಮೇಲೆ 19 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು. ಇದು ರಾಜಕೀಯವಾಗಿ ಪ್ರೇರಿತ ಎಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ನವಾಲ್ನಿ ಅವರನ್ನು ರಷ್ಯಾದ ಅತ್ಯಂತ ಕಠಿಣ ಮಾಸ್ಕೋದ ಈಶಾನ್ಯಕ್ಕೆ ಸುಮಾರು 1,900 ಕಿ.ಮೀ ದೂರದ ಖಾರ್ಪ್ ನಗರದಲ್ಲಿರುವ ಐಕೆ-3 ಜೈಲಿನಲ್ಲಿ ಬಂಧಿಸಿಡಲಾಗಿತ್ತು.

ಜೈಲಿನ ಒಳಗೆ ದಿನ ನಿತ್ಯದಂತೆ ಶುಕ್ರವಾರ ಬೆಳಿಗ್ಗೆ ವಾಯುವಿಹಾರ ನಡೆಸಿದ ಬಳಿಕ ನವಾಲ್ನಿ ಕುಸಿದುಬಿದ್ದು ಪ್ರಜ್ಞೆ ಕಳೆದುಕೊಂಡರು. ತೀವ್ರ ಅಸ್ವಸ್ಥರಾಗಿದ್ದ ಅವರು ಚೇತರಿಸಿಕೊಳ್ಳಲಿಲ್ಲ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.`ಜೈಲಿನ ವೈದ್ಯಕೀಯ ಸಿಬಂದಿ ತಕ್ಷಣವೇ ಸ್ಥಳಕ್ಕೆ ಆಗಮಿಸಿ ಆಂಬ್ಯುಲೆನ್ಸ್ ಕರೆಸಿಕೊಂಡರು. ಪ್ರಾಥಮಿಕ ಚಿಕಿತ್ಸೆ ಒದಗಿಸಿದರೂ ಫಲ ನೀಡಲಿಲ್ಲ. ಕೈದಿ ಮೃತಪಟ್ಟಿರುವುದಾಗಿ ಆಂಬ್ಯುಲೆನ್ಸ್ ನ ವೈದ್ಯರು ಘೋಷಿಸಿದರು. ಸಾವಿನ ಕಾರಣವನ್ನು ಪರಿಶೀಲಿಸಲಾಗುತ್ತಿದೆ’ ಎಂದು ಜೈಲು ಅಧಿಕಾರಿಗಳು ಹೇಳಿದ್ದಾರೆ.

ಪುಟಿನ್ ಆಡಳಿತದಿಂದ ಕೊಲೆ ಶಂಕೆ 

ನವಾಲ್ನಿ ಸಾವಿನ ಕುರಿತು ಪ್ರತಿಕ್ರಿಯಿಸಿರುವ ಅವರ ಪತ್ನಿ ಯುಲಿಯಾ, ಪುಟಿನ್ ಆಡಳಿತವನ್ನು ಶಿಕ್ಷಿಸಲು ಸಹಾಯ ಮಾಡುವಂತೆ ಅಂತಾರಾಷ್ಟ್ರೀಯ ಸಮುದಾಯಕ್ಕೆ ಮನವಿ ಮಾಡಿದ್ದಾರೆ. ನವಾಲ್ನಿ ಅವರ ಆಪ್ತ ಮಿತ್ರರಲ್ಲಿ ಒಬ್ಬರಾದ ಭ್ರಷ್ಟಾಚಾರ ವಿರೋಧಿ ಫೌಂಡೇಶನ್ ಮುಖ್ಯಸ್ಥ ಇವಾನ್ ಝ್ಡಾನೋವ್ ಅವರು, ನವಾಲ್ನಿಯ ಕೊಲೆ ಶಂಕೆ ವ್ಯಕ್ತಪಡಿಸಿದ್ದಾರೆ.

ನವಾಲ್ನಿ ಸಾವಿನ ಹಿನ್ನೆಲೆ ಅವರ ಬೆಂಬಲಿಗರು ಬೀದಿಗಿಳಿದು ಆಕ್ರೋಶ ವ್ಯಕ್ತಪಡಿಸುವ ಸಾಧ್ಯತೆಯಿದೆ. ಹಾಗಾಗಿ, ಪುಟಿನ್ ಆಡಳಿತ ಎಚ್ಚರಿಕೆ ವಹಿಸಿದ್ದು, ಜನ ಸೇರಿಸಿ ದೊಡ್ಡ ಮಟ್ಟ ಪ್ರತಿಭಟನೆ ನಡೆಸದಂತೆ ಸೂಚಿಸಿದೆ. ಮಧ್ಯ ಮಾಸ್ಕೋ, ಸೇಂಟ್ ಪೀಟರ್ಸ್‌ಬರ್ಗ್, ಮರ್ಮನ್ಸ್ಕ್ ಮತ್ತು ನಿಜ್ನಿ-ನವ್ಗೊರೊಡ್ ಸೇರಿದಂತೆ ಇತರ ನಗರಗಳಲ್ಲಿ ಹಲವಾರು ಜನರನ್ನು ಮುನ್ನೆಚ್ಚರಿಕಾ ಕ್ರಮವಾಗಿ ಬಂಧಿಸಲಾಗಿದೆ.

ಸಾವನ್ನಪ್ಪುವ ಒಂದು ದಿನದ ಹಿಂದೆ 47 ವರ್ಷದ ನವಾಲ್ನಿ ನಗು ನಗುತ್ತಾ ಆರೋಗ್ಯವಾಗಿದ್ದರು. ವಿಡಿಯೋ ಕಾನ್ಪರೆನ್ಸ್ ಮೂಲಕ ಅವರು ನ್ಯಾಯಾಲಯದ ವಿಚಾರಣೆಗೆ ಹಾಜರಾಗಿದ್ದರು. ಹಾಗಾಗಿ, ಅವರ ಹಠಾತ್ ಸಾವಿನ ಬಗ್ಗೆ ಸಂಶಯ ಮೂಡಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ರಷ್ಯಾದ ಅತ್ಯಂತ ಜನಪ್ರಿಯ ವಿರೋಧ ಪಕ್ಷದ ಮುಖಂಡರಾಗಿದ್ದ ನವಾಲ್ನಿ, ದಶಕಗಳಿಗೂ ಹಿಂದೆ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹಾಗೂ ಅವರ ನಿಕಟವರ್ತಿಗಳಾಗಿದ್ದ ಮುಖಂಡರನ್ನು ಕಟುವಾಗಿ ಟೀಕಿಸುವ ಮೂಲಕ ಮತ್ತು ರಷ್ಯಾ ಆಡಳಿತದಲ್ಲಿ ವ್ಯಾಪಿಸಿದ್ದ ವ್ಯಾಪಕ ಭ್ರಷ್ಟಾಚಾರದ ಬಗ್ಗೆ ಧ್ವನಿ ಎತ್ತುವ ಮೂಲಕ ಪ್ರಾಮುಖ್ಯತೆ ಪಡೆದಿದ್ದರು.

ನವಾಲ್ನಿ ಸಾವಿನ ಬಗ್ಗೆ ಪುಟಿನ್‍ಗೆ ಮಾಹಿತಿ ನೀಡಲಾಗಿದೆ ಎಂದು ರಷ್ಯಾ ಅಧ್ಯಕ್ಷರ ವಕ್ತಾರ ಡಿಮಿಟ್ರಿ ಪೆಸ್ಕೋವ್ ಹೇಳಿದ್ದಾರೆ. 2020ರ ಆಗಸ್ಟ್ ನಲ್ಲಿ ಸೈಬೀರಿಯಾದಲ್ಲಿ ನವಾಲ್ನಿಗೆ ವಿಷಪ್ರಾಶನ ಮಾಡಿರುವುದಾಗಿ ವರದಿಯಾಗಿತ್ತು. 2021ರಲ್ಲಿ ಜರ್ಮನಿಯಿಂದ ರಷ್ಯಾಕ್ಕೆ ಮರಳಿದ್ದ ನವಾಲ್ನಿಯನ್ನು 2021ರ ಜನವರಿಯಿಂದ ಬಂಧನದಲ್ಲಿ ಇಡಲಾಗಿತ್ತು.

ಯುಎಸ್ ತೀವ್ರ ಖಂಡನೆ:

ರಷ್ಯಾದ ವಿಪಕ್ಷ ನಾಯಕನ ಸಾವಿನ ಕುರಿತು ಯುಎಸ್ ತೀವ್ರ ಖಂಡನೆ ವ್ಯಕ್ತಪಡಿಸಿದೆ. ಇದು ರಷ್ಯಾ ಅಧ್ಯಕ್ಷ ಪುಟಿನ್ ಅವರ ಕ್ರೂರತೆಗೆ ಮತ್ತಷ್ಟು ಪುರಾವೆಯಾಗಿದೆ ಎಂದು ಯುಎಸ್ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಹೇಳಿದ್ದಾರೆ. ನವಾಲ್ನಿ ಸಾವಿನ ಸುದ್ಧಿಯಿಂದ ತೀವ್ರ ವಿಚಲಿತಗೊಂಡಿದ್ದು, ಅತೀವ ದುಃಖವಾಗಿದೆ. ತನ್ನದೇ ದೇಶದ ಜನರ ಭಿನ್ನಾಭಿಪ್ರಾಯವನ್ನು ಎದುರಿಸಲು ಪುಟಿನ್ ಹೆದರುತ್ತಾರೆ. ಪುಟಿನ್ ನಿರಂಕುಶ ಅಧಿಕಾರದ ವಿರುದ್ಧ ಧ್ವನಿ ಎತ್ತುವವರಿಗೆ ರಕ್ಷಣೆ ಮತ್ತು ಭದ್ರತೆ ಖಾತರಿಪಡಿಸಲು ನಾವೆಲ್ಲಾ ಒಂದಾಗಬೇಕಿದೆ ಎಂದು ಯುರೋಪಿಯನ್ ಕಮಿಷನ್ ಅಧ್ಯಕ್ಷೆ ಉರ್ಸುಲಾ ವಾನ್‍ಡೆರ್ ಲೆಯೆನ್ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ : ಕೇಂದ್ರ ಸರ್ಕಾರದ ಧೋರಣೆಯಿಂದ ಬೇಸತ್ತು ದೇಶ ತೊರೆದ ಫ್ರೆಂಚ್ ಪತ್ರಕರ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...