Homeಮುಖಪುಟಆಂಧ್ರ ಫೈಬರ್ ನೆಟ್ ಹಗರಣ| ಚಂದ್ರಬಾಬು ನಾಯ್ಡು ಪ್ರಮುಖ ಆರೋಪಿ: ಸಿಐಡಿ

ಆಂಧ್ರ ಫೈಬರ್ ನೆಟ್ ಹಗರಣ| ಚಂದ್ರಬಾಬು ನಾಯ್ಡು ಪ್ರಮುಖ ಆರೋಪಿ: ಸಿಐಡಿ

- Advertisement -
- Advertisement -

‘ಫೈಬರ್ ನೆಟ್ ಯೋಜನೆ ಹಂತ-1’ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರ ಪ್ರದೇಶದ ಅಪರಾಧ ತನಿಖಾ ಇಲಾಖೆ (ಸಿಐಡಿ) ಅಮರಾವತಿಯ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ನ್ಯಾಯಾಲಯಕ್ಕೆ ಶುಕ್ರವಾರ (ಫೆ.16) ಚಾರ್ಜ್ ಶೀಟ್‌ ಸಲ್ಲಿಸಿದೆ. ಮಾಜಿ ಸಿಎಂ ಮತ್ತು ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರನ್ನು ಪ್ರಕರಣದ ಪ್ರಮುಖ ಆರೋಪಿ (ಎ 1) ಎಂದು ಉಲ್ಲೇಖಿಸಿದೆ.

ಹೈದರಾಬಾದ್‌ನ ನೆಟ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ವಿ ಹರಿ ಕೃಷ್ಣ ಪ್ರಸಾದ್ ಮತ್ತು ಐಆರ್‌ಟಿಎಸ್ ಅಧಿಕಾರಿ ಕೆ ಸಾಂಬಶಿವ ರಾವ್ ಅವರನ್ನು ಪ್ರಕರಣದ ಇತರ ಆರೋಪಿಗಳೆಂದು ಹೆಸರಿಸಿರುವುದಾಗಿ ಸಿಐಡಿ ಹೇಳಿಕೆಯಲ್ಲಿ ತಿಳಿಸಿದೆ.

ಚಂದ್ರಬಾಬು ನಾಯ್ಡು 2014-2019ರ ನಡುವೆ ಅಂಧ್ರ ಪ್ರದೇಶದ ಮುಖ್ಯಮಂತ್ರಿಯಾಗಿದ್ದಾಗ ನಡೆದಿರುವ ಫೈಬರ್ ನೆಟ್‌ ಟೆಂಡರ್ ಮ್ಯಾನಿಪ್ಯುಲೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ವಿರುದ್ದ ಪ್ರಕರಣ ದಾಖಲಾಗಿತ್ತು. ಸಿಎಂ ಹುದ್ದೆಯ ಜೊತೆಗೆ ಇಂಧನ, ಮೂಲಸೌಕರ್ಯ ಮತ್ತು ಹೂಡಿಕೆ ಖಾತೆಯನ್ನು ನಿಭಾಯಿಸುತ್ತಿದ್ದ ನಾಯ್ಡು ಅವರು, ತಮ್ಮ ಹಿತಾಸಕ್ತಿಗೆ ಅನುಗುಣವಾಗಿ ಫೈಬರ್ ನೆಟ್ ಯೋಜನೆಯನ್ನು ಕಾರ್ಯಗತಗೊಳಿಸುವಂತೆ ವೈಯಕ್ತಿಕವಾಗಿ ಶಿಫಾರಸು ಮಾಡಿದ್ದರು ಎಂದು ಆರೋಪಿಸಲಾಗಿದೆ.

ಬರೋಬ್ಬರಿ 330 ಕೋಟಿ ರೂ.ಗಳ ಅಂಧ್ರ ಪ್ರದೇಶ ಫೈಬರ್‌ನೆಟ್ ಯೋಜನೆ ಹಂತ – 1ರ ಕೆಲಸದ ಆದೇಶವನ್ನು ತನಗೆ ಒಲವು ಹೊಂದಿರುವ ಕಂಪನಿಗೆ ಹಂಚಲು ಟೆಂಡರ್ ಪ್ರಕ್ರಿಯೆಯಲ್ಲಿ ಮ್ಯಾನಿಪ್ಯುಲೇಷನ್ ಮಾಡಲಾಗಿದೆ ಎಂದು ಸಿಐಡಿ ಹೇಳಿದೆ. ಸಿಐಡಿ ಪ್ರಕಾರ, ಟೆಂಡರ್ ಹಂಚಿಕೆಯಿಂದ ಹಿಡಿದು ಯೋಜನೆ ಪೂರ್ಣಗೊಳ್ಳುವವರೆಗೆ ಹಲವಾರು ಅಕ್ರಮಗಳು ನಡೆದಿವೆ. ಇದರಿಂದಾಗಿ ಸರ್ಕಾರದ ಬೊಕ್ಕಸಕ್ಕೆ ಭಾರೀ ನಷ್ಟ ಉಂಟಾಗಿದೆ.

ಸಿಐಡಿ ಚಾರ್ಜ್‌ಶೀಟ್‌ನಲ್ಲಿ, ಫೈಬರ್ ನೆಟ್ ಯೋಜನೆಗೆ ಸಂಬಂಧಿಸಿದ ವಸ್ತುಗಳ ಬೆಲೆ ಅಥವಾ ಅನುಸರಿಸಬೇಕಾದ ಮಾನದಂಡಗಳಿಗೆ ಯಾವುದೇ ಮಾರುಕಟ್ಟೆ ಸಮೀಕ್ಷೆ ಮಾಡಿಲ್ಲ. ಸರ್ಕಾರಕ್ಕೆ ಲಾಭವಾಗುವ ಅಂಶಗಳನ್ನು ಪರಿಗಣಿಸದೆ ಯೋಜನೆಗೆ ನಾಯ್ಡು ಅನುಮೋದನೆ ಕೊಟ್ಟಿದ್ದಾರೆ ಎಂದು ಹೇಳಿದೆ.

ಇದಲ್ಲದೆ, ಪ್ರಕರಣದ ಆರೋಪಿ ಹರಿಕೃಷ್ಣ ಪ್ರಸಾದ್ ಅವರನ್ನು ವಿವಿಧ ಟೆಂಡರ್ ಮೌಲ್ಯಮಾಪನ ಸಮಿತಿಗಳಲ್ಲಿ ಸೇರಿಸಲು, ಟೆರಾಸಾಫ್ಟ್‌ವೇರ್ ಪ್ರೈವೇಟ್ ಲಿಮಿಟೆಡ್‌ನ ಕಪ್ಪು ಪಟ್ಟಿಯನ್ನು ಹಿಂಪಡೆಯಲು ಮತ್ತು ಅಂತಿಮವಾಗಿ ಅದೇ ಕಂಪನಿಗೆ ಟೆಂಡರ್ ನೀಡುವಂತೆ ಮಾಜಿ ಸಿಎಂ ಹಿರಿಯ ಸರ್ಕಾರಿ ಅಧಿಕಾರಿಗಳಿಗೆ ಒತ್ತಡ ಹೇರಿದ್ದಾರೆ ಎಂದು ಸಿಐಡಿ ತಿಳಿಸಿದೆ.

ಆರೋಪಿಗಳು ತಮ್ಮ ಆಪ್ತರಿಗೆ ಸೇರಿದ ಕಂಪನಿಗಳ ವೆಬ್‌ಸೈಟ್‌ಗಳ ಮೂಲಕ ನಕಲಿ ಇನ್‌ವಾಯ್ಸ್‌ಗಳನ್ನು ಬಳಸಿಕೊಂಡು ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾರೆ. ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 166, 167, 418, 465, 468, 471, 409 ಮತ್ತು 506 ರೀಡ್ ವಿಥ್ 120-ಬಿ ಮತ್ತು ಇತರ ಸೆಕ್ಷನ್‌ಗಳಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಸಿಐಡಿ ಮಾಹಿತಿ ನೀಡಿದೆ.

ಇದನ್ನೂ ಓದಿ : ಭಾಷೆಯ ಮೇಲೆ ಹಿಡಿತವಿರಲಿ: ಈಶ್ವರಪ್ಪ, ಅನಂತ್ ಕುಮಾರ್ ಹೆಗ್ಡೆ‌ಗೆ ಹೈಕೋರ್ಟ್‌ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...