Homeಮುಖಪುಟಸಂದೇಶಖಾಲಿ ಪ್ರಕರಣ: ಬಿಜೆಪಿ ಗುರಿಯಾಗಿಸಿಕೊಂಡಿರುವ ಟಿಎಂಸಿ ನಾಯಕ ಶೇಖ್ ಷಹಜಹಾನ್ ಯಾರು?

ಸಂದೇಶಖಾಲಿ ಪ್ರಕರಣ: ಬಿಜೆಪಿ ಗುರಿಯಾಗಿಸಿಕೊಂಡಿರುವ ಟಿಎಂಸಿ ನಾಯಕ ಶೇಖ್ ಷಹಜಹಾನ್ ಯಾರು?

- Advertisement -
- Advertisement -

ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ವಿಧಾನಸಭಾ ಕ್ಷೇತ್ರವಾದ ಸಂದೇಶಖಾಲಿಯಲ್ಲಿ ಸ್ಥಳೀಯ ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕರಿಂದ ಕಿರುಕುಳ ಮತ್ತು ಶೋಷಣೆಯ ಆರೋಪದ ಮೇಲೆ ಉದ್ವಿಗ್ನತೆ ಮುಂದುವರಿದಿದೆ. ನಿಷೇಧಾಜ್ಞೆ ನಡುವೆಯೂ ಹಲವು ಬಿಜೆಪಿ ನಾಯಕರು ಇಲ್ಲಿಗೆ ಭೇಟಿ ನೀಡುತ್ತಿದ್ದಾರೆ.

ಸಾರ್ವಜನಿಕ ವಿತರಣಾ ವ್ಯವಸ್ಥೆಯ ಹಗರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ಟಿಎಂಸಿ ನಾಯಕ ಶೇಖ್ ಷಹಜಹಾನ್ ಅವರ ಮನೆ ಮೇಲೆ ದಾಳಿ ಮಾಡಲು ಆಗಮಿಸಿದ ಜಾರಿ ನಿರ್ದೇಶನಾಲಯ (ಇಡಿ) ತಂಡದ ಮೇಲೆ ಜನವರಿ 7ರಂದು ಸ್ಥಳೀಯ ದಾಳಿ ನಡೆಸಿದ್ದರು.

ಶೇಖ್ ಷಹಜಹಾನ್ ಬಂಧನವನ್ನು ತಪ್ಪಿಸಿದ್ದರೂ ಸಹ, ಫೆಬ್ರವರಿ 7 ರಿಂದ, ಸ್ಥಳೀಯ ಮಹಿಳೆಯರ ನೇತೃತ್ವದಲ್ಲಿ ಗ್ರಾಮಸ್ಥರು ಸ್ಥಳೀಯ ಟಿಎಂಸಿ ನಾಯಕರ ಕಿರುಕುಳ ಮತ್ತು ಶೋಷಣೆಯ ವಿರುದ್ಧ ಹಿಂಸಾತ್ಮಕ ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ.

ಷಹಜಹಾನ್ ಮೇಲೆ ಹಣ ವರ್ಗಾವಣೆಯಿಂದ ಹಿಡಿದು ಕಿರುಕುಳದವರೆಗೆ ಹಲವಾರು ಅಪರಾಧಗಳ ಆರೋಪವಿದ್ದು, ಪ್ರಸ್ತುತ ಆತ ತಲೆಮರೆಸಿಕೊಂಡಿದ್ದಾನೆ. ಪಕ್ಷದಿಂದ ಆತನನ್ನು ಉಚ್ಛಾಟಿಸಲಾಗಿದೆ.

ಆಡಳಿತಾರೂಢ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಉದ್ವಿಗ್ನತೆಗೆ ಕಾರಣವೆಂದು ಆರೋಪಿಸಿದರೆ, ಬಿಜೆಪಿ ಮತ್ತು ಕಾಂಗ್ರೆಸ್ ಟಿಎಂಸಿ ಮುಖ್ಯಸ್ಥರು ಲೈಂಗಿಕ ಶೋಷಣೆಯ ಆರೋಪಿಗಳನ್ನು ರಕ್ಷಿಸುತ್ತಿದ್ದಾರೆ ಎಂದು ಪ್ರತ್ಯಾರೋಪ ಮಾಡಿದ್ದಾರೆ.

ಶೇಖ್ ಷಹಜಹಾನ್ ಮತ್ತು ಅವರ ತಂಡ ‘ಭಯೋತ್ಪಾದನೆಯ ಆಳ್ವಿಕೆ’ ಸ್ಥಾಪಿಸಿದರು, ಅಲ್ಲಿ ಎಸ್‌ಸಿ ಮತ್ತು ಎಸ್‌ಟಿ ಸಮುದಾಯಗಳ ಮಹಿಳೆಯರ ಘನತೆ ಮತ್ತು ಮರ್ಯಾದೆ ಪದೇ ಪದೇ ಉಲ್ಲಂಘನೆಯಾಗಿದೆ” ಎಂದು ಪಶ್ಚಿಮ ಬಂಗಾಳದ ವಿರೋಧ ಪಕ್ಷದ ನಾಯಕ, ಬಿಜೆಪಿ ನಂದಿಗ್ರಾಮ್ ಶಾಸಕ ಸುವೆಂದು ಅಧೀಕಾರಿ ಫೆಬ್ರವರಿ 11 ರಂದು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ಮಮತಾ ಬ್ಯಾನರ್ಜಿ ಅವರನ್ನು ಟೀಕಿಸಿ, ಸಂದೇಖ್‌ಖಾಲಿಯಲ್ಲಿ ಯುವ ಹಿಂದೂ ವಿವಾಹಿತ ಮಹಿಳೆಯರನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಶುಕ್ರವಾರ, ಬಿಜೆಪಿ ಮತ್ತು ಕಾಂಗ್ರೆಸ್‌ನ ಹಿರಿಯ ನಾಯಕರನ್ನು ಶುಕ್ರವಾರ ಸಂದೇಶಖಾಲಿಗೆ ಭೇಟಿ ಮಾಡದಂತೆ ಪೊಲೀಸರು ತಡೆದರು, ಇದು ರಾಜ್ಯದಲ್ಲಿ ರಾಜಕೀಯ ಉದ್ವಿಗ್ನತೆಯನ್ನು ಹೆಚ್ಚಿಸಿದೆ.

ಶೇಖ್ ಷಹಜಹಾನ್ ಯಾರು?

ಟಿಎಂಸಿ ನಾಯಕರಾಗಿರುವ 42 ವರ್ಷದ ಷಹಜಹಾನ್ ಶೇಖ್ ಅವರು, ಸ್ಥಳೀಯವಾಗಿ ‘ಭಾಯ್’ ಎಂದು ಜನಪ್ರಿಯರಾಗಿದ್ದಾರೆ. ಅವರು ಬಾಂಗ್ಲಾದೇಶದ ಗಡಿಯ ಸಮೀಪವಿರುವ ಉತ್ತರ 24 ಪರಗಣಗಳಲ್ಲಿ ಸಂದೇಶಖಾಲಿ ಬ್ಲಾಕ್‌ನ ಮೀನುಗಾರಿಕೆಯಲ್ಲಿ ಕೆಲಸಗಾರರಾಗಿ ವೃತ್ತಿ ಪ್ರಾರಂಭಿಸಿದರು.

ಶೇಖ್ ಅವರು ಸಂದೇಶಖಾಲಿಯಲ್ಲಿ ಮೀನುಗಾರಿಕೆ ಮತ್ತು ಇಟ್ಟಿಗೆ ಗೂಡುಗಳಲ್ಲಿ ಕೆಲಸಗಾರರಾಗಿ ಕೆಲಸ ಪ್ರಾರಂಭಿಸಿದ್ದು, ನಾಲ್ಕು  ಜನಒಡಹುಟ್ಟಿದವರಲ್ಲಿ ಇವರು ಹಿರಿಯರು. ಶೇಖ್ 2004ರಲ್ಲಿ ಇಟ್ಟಿಗೆ ಭಟ್ಟಿಯಲ್ಲಿ ಒಕ್ಕೂಟದ ನಾಯಕರಾಗಿ ರಾಜಕೀಯ ಪ್ರವೇಶಿಸಿದ್ದರು. ನಂತರ ಅವರು ಸ್ಥಳೀಯ ಸಿಪಿಐ(ಎಂ) ಘಟಕಕ್ಕೆ ಸೇರಿದರು, ಪಶ್ಚಿಮ ಬಂಗಾಳದಲ್ಲಿ ಬದಲಾಗುತ್ತಿರುವ ರಾಜಕೀಯ ಸನ್ನಿವೇಶಗಳ ಹೊರತಾಗಿಯೂ ತಮ್ಮ ರಾಜಕೀಯ ಅಸ್ತಿತ್ವವನ್ನು ಉಳಿಸಿಕೊಂಡರು.

ಉರಿಯುವ ಭಾಷಣಗಳು ಮತ್ತು ಸಂಘಟನಾ ಕೌಶಲ್ಯಗಳಿಗೆ ಹೆಸರುವಾಸಿಯಾದ ಶೇಖ್ 2012 ರಲ್ಲಿ ತೃಣಮೂಲ ಕಾಂಗ್ರೆಸ್ ನಾಯಕತ್ವದ ಗಮನ ಸೆಳೆದರು. 42 ವರ್ಷದ ಅವರು ಆಗಿನ ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮುಕುಲ್ ರಾಯ್ ಮತ್ತು ಉತ್ತರ 24 ಪರಗಣಗಳ ಟಿಎಂಸಿ ಜಿಲ್ಲಾಧ್ಯಕ್ಷ ಜ್ಯೋತಿಪ್ರಿಯೊ ಮುಲ್ಲಿಕ್ ಅವರ ನೇತೃತ್ವದಲ್ಲಿ ಕೆಲಸ ಮಾಡಿದರು. ಅವರು ಶೀಘ್ರವಾಗಿ ಅಧಿಕಾರಕ್ಕೆ ಏರಿದರು, ಮಲ್ಲಿಕ್ ಅವರ ನಿಕಟ ಸಹವರ್ತಿಯಾದರು.

2018 ರಲ್ಲಿ, ಶೇಖ್ ಸರ್ಬೇರಿಯಾ ಅಗರಹಟಿ ಗ್ರಾಮ ಪಂಚಾಯತ್‌ನ ಉಪ ಮುಖ್ಯಸ್ಥರಾಗಿ ಪ್ರಾಮುಖ್ಯತೆಯನ್ನು ಪಡೆದರು. ಅವರ ಕಿರಿಯ ಸಹೋದರರೂ ಸಕ್ರಿಯ ಟಿಎಂಸಿ ಕಾರ್ಯಕರ್ತರಾಗಿದ್ದು, ಅವರು ಭೂ ವ್ಯವಹಾರ ಸೇರಿದಂತೆ ಅವರ ವ್ಯವಹಾರವನ್ನು ಸಹ ನಿರ್ವಹಿಸುತ್ತಾರೆ. ಶೇಖ್ ಅವರು ಈ ಪ್ರದೇಶದಲ್ಲಿ ಸಂಘರ್ಷ ಪರಿಹಾರ, ಕೌಟುಂಬಿಕ ವಿವಾದಗಳು ಮತ್ತು ಭೂಮಿ ಭಿನ್ನಾಭಿಪ್ರಾಯಗಳನ್ನು ಮಧ್ಯಸ್ಥಿಕೆ ವಹಿಸುವ ವ್ಯಕ್ತಿಯಾಗಿದ್ದಾರೆ.

ಸ್ಥಳೀಯ ಟಿಎಂಸಿ ನಾಯಕರ ಪ್ರಕಾರ, ಶೇಖ್ ಅವರು ಈ ಪ್ರದೇಶದಲ್ಲಿ ಗೌರವ ಮತ್ತು ಭಯವನ್ನು ಹೊಂದಿದ್ದಾರೆ. ‘ಕೆಲವು ವಿರೋಧಿಗಳಿಗೆ ಅವರು ಭಯೋತ್ಪಾದಕರಾದರೆ. ಇನ್ನೂ ಕೆಲವರಿಗೆ ಆತನ ರಾಬಿನ್ ಹುಡ್ ರೀತಿ’ ಎಂದು ಹೇಳಿದ್ದಾರೆ.

ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿದ್ದರೂ, ಮಕ್ಕಳ ಕಳ್ಳಸಾಗಣೆ ತಡೆಯುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ. 2019 ರಲ್ಲಿ ಸರ್ಬೇರಿಯಾ ಅಗರಹಟಿ ಗ್ರಾಮ ಪಂಚಾಯಿತಿಯನ್ನು ‘ಮಕ್ಕಳ ಸ್ನೇಹಿ ಗ್ರಾಮ ಪಂಚಾಯತ್’ ಮಾಡುವಲ್ಲಿ ಅವರು ಮಾಡಿದ ಪ್ರಯತ್ನಗಳಿಗೆ ಮನ್ನಣೆ ಗಳಿಸಿದ್ದಾರೆ ಎಂದು ಸುದ್ದಿಯಾಗಿದೆ.

ಜೂನ್ 2019ರಲ್ಲಿ ಸಂದೇಶಖಾಲಿ ನಂತರದ ಲೋಕಸಭೆ ಚುನಾವಣೆಗಳಲ್ಲಿ ಬಿಜೆಪಿ ಮತ್ತು ಟಿಎಂಸಿ ಕಾರ್ಯಕರ್ತರ ನಡುವಿನ ಹಿಂಸಾತ್ಮಕ ಘರ್ಷಣೆಯ ನಂತರ, ಎರಡೂ ಕಡೆಗಳಲ್ಲಿ ಸಾವು ಸಂಭವಿಸಿದ ನಂತರ, ಘಟನೆಗೆ ಸಂಬಂಧಿಸಿದಂತೆ ದಾಖಲಾದ ಕೊಲೆ ಎಫ್‌ಐಆರ್‌ನಲ್ಲಿ ಶೇಖ್ ಅವರು ಹೆಸರಿದೆ.

ಇದನ್ನೂ ಓದಿ; ದೆಹಲಿ ಅಬಕಾರಿ ನೀತಿ ಹಗರಣ: ವಿಶ್ವಾಸ ಮತಕ್ಕೂ ಮುನ್ನ ನ್ಯಾಯಾಲಯದ ಮುಂದೆ ಹಾಜರಾದ ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...