Homeಮುಖಪುಟಕಾಂಗ್ರೆಸ್‌ ರಾಜೀನಾಮೆ ಸರಣಿಗೆ ಮತ್ತೆರಡು ಹೆಸರು ಸೇರ್ಪಡೆ; ಬಿಜೆಪಿ ಸೇರಲಿರುವ ಕಮಲ್ ನಾಥ್, ಅವರ ಪುತ್ರ...

ಕಾಂಗ್ರೆಸ್‌ ರಾಜೀನಾಮೆ ಸರಣಿಗೆ ಮತ್ತೆರಡು ಹೆಸರು ಸೇರ್ಪಡೆ; ಬಿಜೆಪಿ ಸೇರಲಿರುವ ಕಮಲ್ ನಾಥ್, ಅವರ ಪುತ್ರ ನಕುಲ್?

- Advertisement -
- Advertisement -

ಕಾಂಗ್ರೆಸ್‌ ರಾಜೀನಾಮೆ ಸರಣಿಗೆ ಮತ್ತೊಂದು ಹೆಸರು ಸೇರ್ಪಡೆಯಾಗುವ ಎಲ್ಲ ಲಕ್ಷಣಗಳು ಕಾಣುತ್ತಿದ್ದು, 2024 ರ ಲೋಕಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ ಪಕ್ಷಕ್ಕೆ ಬೀಳುತ್ತಿರುವ ದೊಡ್ಡ ಹೊಡೆತಗಳಲ್ಲಿ ಇದೂ ಒಂದಾಗಿದೆ. ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಮತ್ತು ಅವರ ಪುತ್ರ ನಕುಲ್ ಬಿಜೆಪಿ ಸೇರಬಹುದು ಎಂದು ಮೂಲಗಳು ತಿಳಿಸಿವೆ. ಆದರೆ, ಕಮಲ್ ನಾಥ್ ಅಥವಾ ನಕುಲ್ ನಾಥ್ ಅವರಿಂದ ಅಧಿಕೃತ ದೃಢೀಕರಣವಿಲ್ಲ.

ಈ ಬೆಳವಣಿಗೆಯ ಬಗ್ಗೆ ಊಹಾಪೋಹಗಳನ್ನು ಹೆಚ್ಚಿಸಿದ ಬಿಜೆಪಿ ವಕ್ತಾರ ಮತ್ತು ಕಮಲ್ ನಾಥ್ ಅವರ ಮಾಜಿ ಮಾಧ್ಯಮ ಸಲಹೆಗಾರ ನರೇಂದ್ರ ಸಲೂಜಾ ಅವರು, ಭೋಪಾಲ್‌ನಲ್ಲಿರುವ ಮಾಜಿ ಮುಖ್ಯಮಂತ್ರಿ ಮತ್ತು ಅವರ ಪುತ್ರನ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ. ಅದಕ್ಕೆ “ಜೈ ಶ್ರೀ ರಾಮ್” ಎಂದು ಶೀರ್ಷಿಕೆ ನೀಡಿದ್ದಾರೆ.

ಈ ಬೆಳವಣಿಗೆಗಗಳ ನಡುವೆ, ಛಿಂದ್ವಾರಾದ ಕಾಂಗ್ರೆಸ್ ಸಂಸದ ನಕುಲ್ ನಾಥ್ ಅವರು ಎಕ್ಸ್‌ನಲ್ಲಿನ ತಮ್ಮ ಪ್ರೊಫೈಲ್ ಬಯೋದಿಂದ ‘ಕಾಂಗ್ರೆಸ್’ ಅನ್ನು ತೆಗೆದುಹಾಕಿದ್ದಾರೆ. ತಂದೆ-ಮಗ ಇಬ್ಬರೂ ಇಂದು ದೆಹಲಿಗೆ ಆಗಮಿಸಲಿದ್ದಾರೆ.

ಊಹಾಪೋಹಗಳಿಗೆ ಸಂಬಂಧಿಸಿದಂತೆ, ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಅವರು ಶುಕ್ರವಾರ ರಾತ್ರಿ ಕಮಲ್ ನಾಥ್ ಅವರೊಂದಿಗೆ ಮಾತನಾಡಿದ್ದಾರೆ. ‘ನೆಹರು-ಗಾಂಧಿ ಕುಟುಂಬದೊಂದಿಗೆ ತಮ್ಮ ರಾಜಕೀಯ ಜೀವನವನ್ನು ಪ್ರಾರಂಭಿಸಿದ ವ್ಯಕ್ತಿಯಿಂದ ನಾವು ಇದನ್ನು ಹೇಗೆ ನಿರೀಕ್ಷಿಸಬಹುದು’ ಎಂದು ಹೇಳಿದ್ದಾರೆ. ನಾವು ಅಂತಹದನ್ನು ನಿರೀಕ್ಷಿಸಬಾರದು ಎಂದು ಅವರು ಹೇಳಿದರು.

ಮಧ್ಯಪ್ರದೇಶದ ಸೋನ್‌ಕಾಚ್‌ನ ಕಾಂಗ್ರೆಸ್ ಶಾಸಕ ಸಜ್ಜನ್ ಸಿಂಗ್ ವರ್ಮಾ ಅವರು ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ಪ್ರೊಫೈಲ್‌ಗಳಿಂದ ಪಕ್ಷದ ಲೋಗೋವನ್ನು ತೆಗೆದುಹಾಕಿದ್ದಾರೆ ಎಂದು ವರದಿಯಾಗಿದೆ. ವರ್ಮಾ ಅವರನ್ನು ಕಮಲ್ ನಾಥ್ ಅವರ ಕಟ್ಟಾ ಬೆಂಬಲಿಗರಲ್ಲಿ ಒಬ್ಬರು ಎಂದು ಪರಿಗಣಿಸಲಾಗಿದೆ.

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್ ಅವರು ಬಿಜೆಪಿಗೆ ಸೇರಿದ ಕೆಲವೇ ದಿನಗಳಲ್ಲಿ ಇತ್ತೀಚಿನ ಊಹಾಪೋಹಗಳು ಬಂದಿತ್ತು. ಅವರು ‘ಗ್ರ್ಯಾಂಡ್ ಓಲ್ಡ್ ಪಾರ್ಟಿ’ಯಿಂದ ಇತ್ತೀಚಿಗೆ ಹೊರಬಂದ ಪ್ರಮುಖ ಕಾಂಗ್ರೆಸ್ ನಾಯಕರಾಗಿದ್ದಾರೆ.

ನಾಲ್ಕು ದಶಕಗಳ ಕಾಲ ಕಾಂಗ್ರೆಸ್‌ನೊಂದಿಗೆ ಸಂಬಂಧ ಹೊಂದಿದ್ದ ಚವಾಣ್ ಅವರು ಎಲ್ಲ ಪಕ್ಷದ ಹುದ್ದೆಗಳಿಗೆ ಮತ್ತು ಭೋಕರ್ ಕ್ಷೇತ್ರದ ಶಾಸಕ ಸ್ಥಾನಕ್ಕೆ ಫೆಬ್ರವರಿ 12 ರಂದು ರಾಜೀನಾಮೆ ನೀಡಿದರು. ಮರುದಿನ, 65 ವರ್ಷದ ನಾಯಕ ಬಿಜೆಪಿ ಸೇರಿದರು. ಫೆಬ್ರವರಿ 15 ರಂದು ಅವರು ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿದರು.

ಮಹಾರಾಷ್ಟ್ರದ ಹಿರಿಯ ಕಾಂಗ್ರೆಸ್ ನಾಯಕರಾದ ಬಾಬಾ ಸಿದ್ದಿಕ್ ಮತ್ತು ಮಿಲಿಂದ್ ದಿಯೋರಾ ಕೂಡ ಪಕ್ಷವನ್ನು ತೊರೆದ ನಂತರ ಚವಾಣ್ ಅವರು ಕಾಂಗ್ರೆಸ್ ತೊರೆದಿದ್ದಾರೆ. ಸಿದ್ದಿಕ್ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಅಜಿತ್ ಪವಾರ್ ಬಣವನ್ನು ಸೇರಿದರೆ, ದಿಯೋರಾ ಏಕನಾಥ್ ಶಿಂಧೆ ನೇತೃತ್ವದಲ್ಲಿ ಶಿವಸೇನಾ ಬಣವನ್ನು ಸೇರಿದರು.

ಇದನ್ನೂ ಓದಿ; ‘ಅಧಿಕಾರ ಶಾಶ್ವತವಲ್ಲ; ನಮ್ಮ ಸಿದ್ಧಾಂತ ಶಾಶ್ವತ..’; ಅಜಿತ್ ವಿರುದ್ಧ ಶರದ್ ಪವಾರ್‌ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...