Homeಮುಖಪುಟಬಿಜೆಪಿ ಸೇರ್ಪಡೆ ವದಂತಿ: 'ಕಮಲ್ ನಾಥ್ ಅವರು ಇಂದಿರಾ ಗಾಂಧಿಗೆ ಮೂರನೇ ಮಗ' ಎಂದ ಕಾಂಗ್ರೆಸ್

ಬಿಜೆಪಿ ಸೇರ್ಪಡೆ ವದಂತಿ: ‘ಕಮಲ್ ನಾಥ್ ಅವರು ಇಂದಿರಾ ಗಾಂಧಿಗೆ ಮೂರನೇ ಮಗ’ ಎಂದ ಕಾಂಗ್ರೆಸ್

- Advertisement -
- Advertisement -

ಕಮಲ್ ನಾಥ್ ಬಿಜೆಪಿ ಸೇರಲು ಯೋಜಿಸುತ್ತಿದ್ದಾರೆ ಎಂಬ ವದಂತಿಗಳಿಗೆ ಮಧ್ಯಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಜಿತು ಪಟ್ವಾರಿ ಶನಿವಾರ ಪ್ರತಿಕ್ರಿಯಿಸಿದ್ದು, ‘ಅವರು ಇಂದಿರಾ ಗಾಂಧಿಯವರ ಮೂರನೇ ಮಗ, ಪಕ್ಷವನ್ನು ತೊರೆಯುವುದಿಲ್ಲ’ ಎಂದು ಹೇಳಿದ್ದಾರೆ.

‘ಮೊದಲ ಬಾರಿಗೆ ಕಮಲ್ ನಾಥ್ ಅವರು ಚುನಾವಣೆಯಲ್ಲಿ ಸ್ಪರ್ಧಿಸಿದಾಗ, ಇಂದಿರಾ ಗಾಂಧಿಯವರು ಕಮಲ್ ನಾಥ್ ನನ್ನ ಮೂರನೇ ಮಗ ಎಂದು ಹೇಳಿದರು. ಕಮಲ್ ನಾಥ್ ಅವರ 45 ವರ್ಷಗಳ ರಾಜಕೀಯ ಪ್ರಯಾಣದಲ್ಲಿ, ಅವರ ಒಳ್ಳೆಯ ಮತ್ತು ಕೆಟ್ಟ ಸಮಯಗಳಲ್ಲಿ, ಪಕ್ಷದ ಜೊತೆಗೆ ಕೆಲಸ ಮಾಡಿದ್ದಾರೆ. ಕಳೆದ 7 ವರ್ಷಗಳಿಂದ ಮಧ್ಯಪ್ರದೇಶ ಕಾಂಗ್ರೆಸ್ ಮುಖ್ಯಸ್ಥರಾಗಿ ಪಕ್ಷವನ್ನು ಮುನ್ನಡೆಸಿದ್ದಾರೆ’ ಎಂದು ಅವರು ಹೇಳಿದರು.

ಕಮಲ್ ನಾಥ್ ಅವರು ನಾಲ್ಕು ದಶಕಗಳಿಂದ ಹಳೆಯ ಪಕ್ಷಕ್ಕೆ ಸೇವೆ ಸಲ್ಲಿಸುತ್ತಿದ್ದಾರೆ ಮತ್ತು ಮಧ್ಯಪ್ರದೇಶದಲ್ಲಿ ಜ್ಯೋತಿರಾದಿತ್ಯ ಸಿಂಧಿಯಾ ಕಾಂಗ್ರೆಸ್ ಸರ್ಕಾರವನ್ನು ಉರುಳಿಸಿದಾಗ ಪಕ್ಷದ ಕಾರ್ಯಕರ್ತರು ಸಹ ಕಮಲ್ ನಾಥ್ ಅವರೊಂದಿಗೆ ನಿಂತರು ಎಂದು ಅವರು ಹೇಳಿದರು.

‘ಸಿಂಧಿಯಾ ಅವರು ಸಂಸದರಾಗಿ ಕಾಂಗ್ರೆಸ್ ಸರ್ಕಾರವನ್ನು ಉರುಳಿಸಿದಾಗ, ಎಲ್ಲ ಕಾಂಗ್ರೆಸ್ ಕಾರ್ಯಕರ್ತರು ಕಮಲ್ ನಾಥ್ ಅವರ ನಾಯಕತ್ವ ಮತ್ತು ಸಿದ್ಧಾಂತದೊಂದಿಗೆ ನಿಂತಿದ್ದರು… ಊಹಾಪೋಹದ ಸುದ್ದಿ ಆಧಾರರಹಿತ; ಇಂದಿರಾ ಗಾಂಧಿಯವರ ಮೂರನೇ ಮಗ ಕಾಂಗ್ರೆಸ್ ತೊರೆಯುವುದನ್ನು ನೀವು ಊಹಿಸಬಹುದೇ? ಕನಸಿನಲ್ಲಿಯೂ ಅಂತಹ ವಿಷಯದ ಬಗ್ಗೆ ಯೋಚಿಸಲು ಸಾಧ್ಯವಿಲ್ಲ’ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪಕ್ಷಗಳನ್ನು ಬದಲಾಯಿಸುವ ಊಹಾಪೋಹಗಳ ನಡುವೆ, ಕಮಲ್ ನಾಥ್ ಅವರು ಇಂದು ರಾಷ್ಟ್ರ ರಾಜಧಾನಿಗೆ ಆಗಮಿಸಿದರು. ಸುದ್ದಿಗಾರರೊಂದಿಗಿನ ಸಂಕ್ಷಿಪ್ತ ಸಂವಾದದಲ್ಲಿ ಮಾತನಾಡಿ, ‘ಇದು ನಿರಾಕರಿಸುವ ವಿಚಾರವಲ್ಲ. ಆದರೆ, ನೀವು ಇದನ್ನು ಹೇಳುತ್ತಿದ್ದೀರಿ ಎಂದಮೇಲೆ ನೀವೆಲ್ಲಾ ಉತ್ಸುಕರಾಗಿದ್ದೀರಿ, ನಾನು ಈ ಕಡೆ ಅಥವಾ ಆ ಕಡೆ ಹೋಗುವ ಬಗ್ಗೆ ಉತ್ಸುಕನಾಗುತ್ತಿಲ್ಲ. ಅಂತಹ ಏನಾದರೂ ನಿರ್ಧಾರ ಇದ್ದರೆ, ನಾನು ಮೊದಲು ನಿಮಗೆ ತಿಳಿಸುತ್ತೇನೆ’ ಎಂದಿದ್ದಾರೆ.

ಮಾಜಿ ಮುಖ್ಯಮಂತ್ರಿ ಮತ್ತು ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಅವರು ಇಂದು ಮುಂಜಾನೆ ಊಹಾಪೋಹಗಳನ್ನು ತಳ್ಳಿಹಾಕಿದ್ದು, ‘ಕಳೆದ ರಾತ್ರಿ ಛಿಂದ್ವಾರಾದಲ್ಲಿದ್ದ ಕಮಲ್ ನಾಥ್ ಅವರೊಂದಿಗೆ ಮಾತನಾಡಿದ್ದೇನೆ, ಅವರು ಛಿಂದ್ವಾರಾದಲ್ಲಿದ್ದಾರೆ’ ಎಂದು ಅವರು ಹೇಳಿದರು.

‘ಜನತಾ ಪಕ್ಷದಿಂದ ಇಂದಿರಾ ಗಾಂಧಿಯನ್ನು ಜೈಲಿಗೆ ಕಳುಹಿಸಿದಾಗ ನೆಹರೂ-ಗಾಂಧಿ ಕುಟುಂಬದೊಂದಿಗೆ ರಾಜಕೀಯ ಪ್ರಯಾಣವನ್ನು ಪ್ರಾರಂಭಿಸಿದ ವ್ಯಕ್ತಿ, ಅಂತಹ ವ್ಯಕ್ತಿ ಎಂದಿಗೂ ಕಾಂಗ್ರೆಸ್ ಮತ್ತು ಗಾಂಧಿ ಕುಟುಂಬವನ್ನು ತೊರೆಯುತ್ತಾರೆ ಎಂದು ನೀವು ಭಾವಿಸುತ್ತೀರಾ’ ಎಂದು ಸಿಂಗ್ ಪ್ರಶ್ನಿಸಿದರು.

ರಾಜ್ಯಸಭಾ ಸ್ಥಾನ ಕೊಡದಿರುವ ಬಗ್ಗೆ ಕಮಲ್ ನಾಥ್ ಅವರು ಅಸಮಾಧಾನ ಹೊಂದಿದ್ದಾರೆ ಮತ್ತು ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವು ಸೋತ ನಂತರ ಅವವರು ತಡವಾಗಿ ರಾಹುಲ್ ಗಾಂಧಿ ಅವರನ್ನು ವಿರೋಧಿಸುತ್ತಿದ್ದಾರೆ ಎಂದು ಹೇಳಲಾಗುತ್ತದೆ. 2023 ರ ಮಧ್ಯಪ್ರದೇಶ ಚುನಾವಣೆಯಲ್ಲಿ, 230 ವಿಧಾನಸಭಾ ಸ್ಥಾನಗಳಲ್ಲಿ 163 ಸ್ಥಾನಗಳನ್ನು ಗೆದ್ದ ನಂತರ ಬಿಜೆಪಿ ಕಾಂಗ್ರೆಸ್ ಅನ್ನು ಸೋಲಿಸಿತು. ಕಾಂಗ್ರೆಸ್ ಕೇವಲ 66 ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ. ನಂತರ ಕಮಲ್ ನಾಥ್ ಅವರನ್ನು ಮಧ್ಯಪ್ರದೇಶ ಘಟಕದ ಮುಖ್ಯಸ್ಥ ಸ್ಥಾನದಿಂದ ಬದಲಾಯಿಸಲಾಯಿತು.

ಇದನ್ನೂ ಓದಿ; ಕಾಂಗ್ರೆಸ್‌ ರಾಜೀನಾಮೆ ಸರಣಿಗೆ ಮತ್ತೆರಡು ಹೆಸರು ಸೇರ್ಪಡೆ; ಬಿಜೆಪಿ ಸೇರಲಿರುವ ಕಮಲ್ ನಾಥ್, ಅವರ ಪುತ್ರ ನಕುಲ್?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...