Homeಚಳವಳಿಯುವಜನರು ಗಾಂಧೀಜಿಯನ್ನೇಕೆ ತಿಳಿಯಬೇಕು?

ಯುವಜನರು ಗಾಂಧೀಜಿಯನ್ನೇಕೆ ತಿಳಿಯಬೇಕು?

- Advertisement -
- Advertisement -

-ಪ್ರೊ. ಅವಿಜಿತ್ ಪಾಠಕ್, ಸಮಾಜ ಶಾಸ್ತ್ರ ಪ್ರಾಧ್ಯಾಪಕರು, ಜೆಎನ್‌ಯು

ಸಂಗ್ರಹಿತ ಭಾವಾನುವಾದ: ನಿಖಿಲ್ ಕೋಲ್ಪೆ

ಕೃಪೆ: ದಿವೈರ್‌

ಹಿಂಸೆಯು ಮಾನ್ಯತೆ ಪಡೆದು ಸಾಮಾನ್ಯ ಎನಿಸಿರುವ ಈ ಪ್ರಪಂಚದಲ್ಲಿ ಸಾಮೂಹಿಕ ಪರಿಹಾರಕ್ಕಾಗಿ ಶ್ರಮಿಸುತ್ತಿರುವ ಎಲ್ಲರೂ ಗಾಂಧಿಯವರತ್ತ ನೋಡಬೇಕು. ಗಾಂಧಿಯವರು ಅಸಾಮಾನ್ಯ ಎನಿಸುವುದು ಅವರು ಯಶಸ್ವಿಯಾದರು ಎಂಬುದಕ್ಕಲ್ಲ ಎಂದು ನನಗನಿಸಿದ ಕ್ಷಣಗಳಿವೆ. ಬದಲಾಗಿ ಅವರು ‘ಅಸಾಧ್ಯ’ವಾದುದಕ್ಕಾಗಿ ಶ್ರಮಿಸಿದರು ಎಂಬುದಕ್ಕೆ. ಹಿಂಸೆಯ ಕಾಲದಲ್ಲಿ ಅಹಿಂಸೆಗಾಗಿ; ಅಧಿಕಾರಶಾಹಿ ಮತ್ತು ತಾಂತ್ರಿಕತೆಯ ಅಮಾನವೀಯತೆಯು ಮಾನ್ಯತೆ ಪಡೆದಿರುವ ಕಾಲದಲ್ಲಿ ಸ್ವಾವಲಂಬನೆಗಾಗಿ; ಹೊರಗಿನ ತೋರಿಕೆಯೇ ಮಾನ್ಯತೆ ಪಡೆದಿರುವ ಕಾಲದಲ್ಲಿ ಆತ್ಮವಿಮರ್ಶೆಗಾಗಿ ದುಡಿದರು ಎಂಬ ಕಾರಣಕ್ಕಾಗಿ. ಗಾಂಧಿ ‘ವಿಫಲ’ರಾದರೆಂದು ಬಹಳಷ್ಟು ಸಲ ಹೇಳಲಾಗುತ್ತದೆ. 1948ರ ಜನವರಿ 30ದಂದು ಅವರಿಗೆ ಗುಂಡಿಕ್ಕಿದಾಗ ನಾಥುರಾಂ ಗೋಡ್ಸೆ ನೀಡಿದ ಸಂದೇಶವೆಂದರೆ, ಗಾಂಧಿಯವರ ವೈಫಲ್ಯ ಅಕ್ಷಮ್ಯ ಮತ್ತು ಅದಕ್ಕಾಗಿ ಅವರನ್ನು ತಿಳಿದುಕೊಳ್ಳುವ ಬದಲು ಕೊಲ್ಲಬೇಕು ಎಂಬುದಾಗಿದೆ.

ಸಾಮಾನ್ಯವಾಗಿ ಗೋಡ್ಸೆಯ ರಾಜಕೀಯದ ಜೊತೆ ಸಂಬಂಧವಿಲ್ಲದ ನಮ್ಮಲ್ಲಿನ ಹಲವರಲ್ಲಿಯೂ ಗೋಡ್ಸೆಯ ತುಣುಕೊಂದು ಅಡಗಿದೆಯೆ? ‘ಗಾಂಧಿ ನಿಂದನೆ’ ಎಂದು ನಾನು ಕರೆಯಲಿಚ್ಛಿಸುವ ಕೃತ್ಯದಲ್ಲಿ ನಾವು ತೊಡಗಿರುವುದನ್ನು ಗಮನಿಸಿ. ಆಧುನಿಕವಾದಿಗಳು (ಗಾಂಧಿಯವರ ಅತ್ಯಂತ ನಿಕಟ ಶಿಷ್ಯ ಎನಿಸಿದ ಜವಾಹರಲಾಲ್ ನೆಹರೂ ಅವರನ್ನೂ ಈ ಗುಂಪಿನಲ್ಲಿ ಸೇರಿಸಲು ಇಚ್ಛಿಸುತ್ತೇನೆ)  ಅವರ ‘ಸರಳ’ ಆದರೂ ವಿಸ್ತೃತವಾದ ಹಿಂದ್ ಸ್ವರಾಜ್ ಎಂಬ ವಸಾಹತುವಿರೋಧಿ ಮಾರ್ಗದರ್ಶಿ ಸೂತ್ರದ ಬಗ್ಗೆ ಇರಿಸುಮುರುಸು ಹೊಂದಿರುವುದು ನಿಜ.

ಜಾತಿಪ್ರಜ್ಞೆಯ ಬೀಜಗಳನ್ನು ನಿವಾರಿಸುವಲ್ಲಿ ಗಾಂಧಿಯವರು ಯಾವುದೇ ಅರ್ಥಪೂರ್ಣ ಪಾತ್ರ ಹೊಂದಿದ್ದರು ಎಂಬುದನ್ನು ನಂಬಲು ಅಂಬೇಡ್ಕರ್‌ವಾದಿಗಳು ನಿರಾಕರಿಸಬಹುದು. ಕಮ್ಯುನಿಸ್ಟರು ಅವರ ‘ಅಹಿಂಸಾತ್ಮಕ ಸಮಾಜವಾದ’ ಕಲ್ಪನೆಯ ಕುರಿತು ಬಹಳಷ್ಟು ಸಲ ನಗುತ್ತಾರೆ. ಮಧ್ಯಯುಗದ, ಮೃದು ಹಿಂದೂ, ಪಿತೃಪ್ರಧಾನ ಗಾಂಧಿ- ನಮ್ಮ ಇತಿಹಾಸದಲ್ಲಿನ ಅಪ್ರಿಯವಾದ ಎಲ್ಲಾ ವಿಷಯಗಳಿಗೆ ಹೊಣೆ ಎಂಬ ಭಾವ ಎಷ್ಟು ಬಾರಿ ನಮ್ಮ ಆತ್ಮಸಾಕ್ಷಿಯಲ್ಲಿ ಸುಳಿದಿಲ್ಲ? ಗೋಡ್ಸೆ ಅವರನ್ನು ದೈಹಿಕವಾಗಿ ಕೊಂದ. ಅವರಿಗೆ ಸಹಾನುಭೂತಿಯಿಲ್ಲದೇ ಕಳಂಕಹಚ್ಚುವ ಕೃತ್ಯದಿಂದ ನಮ್ಮಲ್ಲನೇಕರು ಅವರ ಚೈತನ್ಯವನ್ನು ಕೊಲ್ಲಲು ಬಯಸಿದ್ದೇವೆ.

ಗಾಂಧಿಯವರ ಕುರಿತು ಒಲವಿರುವ, ಅವರನ್ನು ಆಳವಾಗಿ ಮತ್ತು ಅರ್ಥಪೂರ್ಣವಾಗಿ ಅರ್ಥ ಮಾಡಿಕೊಳ್ಳಲು ಬಯಸುವ  ಕ್ರಾಂತಿಕಾರಿ ಯುವಜನರನ್ನು ಹುಡುಕುವುದು ಅಷ್ಟು ಸುಲಭದ ಕೆಲಸವಲ್ಲ ಎಂಬುದರಲ್ಲಿ ಯಾವುದೇ ಅಚ್ಚರಿಯಿಲ್ಲ. ಇದು ಬದಲಾಗಬೇಕೆಂದು ನಾನು ಭಾವಿಸುತ್ತೇನೆ. ಈ ಲೇಖನದಲ್ಲಿ ಇದು ಏಕೆ ಅಗತ್ಯ-ಅದರಲ್ಲೂ ಯುವ ಜನರು ಗಾಂಧಿಯವರನ್ನು ಸ್ವಲ್ಪ ಮಟ್ಟಿನ ಗಂಭೀರತೆಯಿಂದ ತಿಳಿದುಕೊಳ್ಳುವುದು ಏಕೆ ಅಗತ್ಯ ಎಂದು ನಾನು ವಾದಿಸುತ್ತೇನೆ.

ಮೂರು ಸೂಕ್ತ ಪ್ರಶ್ನೆಗಳು

ಮೊದಲಿಗೆ ನಮ್ಮ ಕಾಲದಲ್ಲಿ ನಮ್ಮ ಬದುಕೇ ಎತ್ತುವ ಮೂರು ಪ್ರಶ್ನೆಗಳನ್ನು ನಾನು ಎತ್ತುತ್ತೇನೆ. ಮೊದಲನೆಯದಾಗಿ ನವ ಉದಾರವಾದಿ ಜಾಗತಿಕ ಬಂಡವಾಳಶಾಹಿಯ ಮಾರುಕಟ್ಟೆ ಪ್ರೇರಿತ ಚಿಂತನೆ ಮತ್ತು ಅದರ ಜವಾಬ್ದಾರಿಯಿಲ್ಲದ ಸ್ಪರ್ಧೆ- ಪ್ರೀತಿ, ಕಾಳಜಿ ಮತ್ತು ನ್ಯಾಯಪ್ರಜ್ಞೆಯಿಲ್ಲದ ಸ್ವಾರ್ಥ ತುಂಬಿದ ವ್ಯಕ್ತಿಯನ್ನು ಕೇವಲ ಒಬ್ಬ ಸದಾ ಅತೃಪ್ತನಾದ ಚಡಪಡಿಕೆಯ ಗ್ರಾಹಕನನ್ನಾಗಿ ಮಾತ್ರ ಕಾಣುವ ಅದರ ಸೂಚ್ಯವಾದ ಚಿಂತನೆಯ ಕುರಿತು ಯೋಚಿಸಿ.

ಎರಡನೆಯದಾಗಿ, ಧರ್ಮವನ್ನು ಆತ್ಮರತಿಯನ್ನಾಗಿ ಪರಿವರ್ತಿಸುವ ಮತ್ತು ನಂಬಿಕೆ, ಜೀವನಶೈಲಿ, ಸಾಂಸ್ಕೃತಿಕ ಆಚಾರಗಳ ವೈವಿಧ್ಯಕ್ಕೆ ಕುರುಡಾಗಿರುವ ಕೇಂದ್ರೀಕೃತ, ಏಕರೂಪಿ ಚಿಂತನೆಯ ಧಾರ್ಮಿಕ ರಾಷ್ಟ್ರವಾದದ ಬೆಳವಣಿಗೆಯನ್ನು ನೋಡಿ.

ಮೂರನೆಯದಾಗಿ, ನಾನು ಆತ್ಮದ ಮಿಲಿಟರೀಕರಣ ಎಂದು ಕರೆಯುವ ಮೌಲ್ಯಗಳ ವೈಭವೀಕರಣವನ್ನು ನೋಡಿ. ಇಲ್ಲಿ ಕಾಳಜಿ, ಕರುಣೆ ಮತ್ತು ಉಳಿದವರ ಮಾತುಗಳನ್ನು ತಾಳ್ಮೆಯಿಂದ ಕೇಳುವುದನ್ನು ದೌರ್ಬಲ್ಯ ಎಂದು ಪರಿಗಣಿಸಲಾಗುತ್ತದೆ. ಬದಲಾಗಿ ಅತ್ಯಂತ ಆಕ್ರಮಣಕಾರಿಯಾದ ‘ಕಠೋರ’ ನಿರ್ಧಾರಗಳನ್ನು ಆರಾಧಿಸಲಾಗುತ್ತದೆ. ಯುದ್ಧದ ಅಥವಾ ಸರ್ಜಿಕಲ್ ಸ್ಟ್ರೈಕ್‌ನಂತಹಾ ಪ್ರತಿಮೆಗಳು ನಮ್ಮ ಮನೋಭಿತ್ತಿಯಲ್ಲಿ ಸದ್ದಿಲ್ಲದೇ ಸೇರಿಬಿಟ್ಟಿವೆ.

ಆದುದರಿಂದ, ಸಾಮೂಹಿಕವಾಗಿ ಇದಕ್ಕೆ ಪರಿಹಾರ ಮತ್ತು ನಮ್ಮ ಕಾಲದ ಉನ್ನತಿಗಾಗಿ ಶ್ರಮಿಸುತ್ತಿರುವ ಎಲ್ಲರೂ ಕೆಳಗಿನ ಮೂರು ಪ್ರಶ್ನೆಗಳನ್ನು ಕೇಳಿಕೊಳ್ಳಬೇಕು ಎಂದು ನಾನು ಹೇಳಿದರೆ ತಪ್ಪಾಗಲಾರದು.

1. ಮಾನಸಿಕವಾಗಿ ಮತ್ತು ಪಾರಿಸರಿಕವಾಗಿ ವಿನಾಶಕಾರಿಯಾದ ಕೊಳ್ಳುಬಾಕ ಸಂಸ್ಕೃತಿಗೆ ಅಸಹಕಾರ ತೋರಿಸಿ, ನಿಸರ್ಗ, ಪರಿಸರ ಮತ್ತು ಸಮಾಜದೊಂದಿಗೆ ಸಾಮರಸ್ಯದ ಸಂಬಂಧವನ್ನು ಹೊಂದಿರುವ ಜೀವಪ್ರೇಮಿಯಾದ, ಶಾಂತಿ ಮತ್ತು ಸರಳತೆಯೇ ಕೇಂದ್ರವಾಗಿರುವ ಚಿಂತನೆಯ ಕಡೆಗೆ ಸಾಗಬಲ್ಲ ಧೈರ್ಯವನ್ನು ತೋರುವ ವ್ಯಕ್ತಿಯನ್ನು ಮರುಕಲ್ಪಿಸಿಕೊಳ್ಳಲು ಸಾಧ್ಯವಿದೆಯೇ?

2. ಧರ್ಮವನ್ನು ಆಕ್ರಮಣಕಾರಿ ರಾಷ್ಟ್ರವಾದದ ಸಿದ್ಧಾಂತವನ್ನಾಗಿ ಕಾಣದೆ, ಜಾತ್ಯತೀತವಾದ, ಆಧ್ಯಾತ್ಮಿಕವಾದ, ಪ್ರೀತಿ ಮತ್ತು ಸಾಮರಸ್ಯದ ಭಾವನೆಯಾಗಿ ಧಾರ್ಮಿಕತೆಯನ್ನು ಕಾಣಲು ಸಾಧ್ಯವಿದೆಯೇ?

3.  ಕ್ರೌರ್ಯದಿಂದ ಕೂಡಿದ ಅಧಿಕಾರದ ತಕ್ಷಣದ ಲಾಲಸೆಗೆ ಬಲಿಬೀಳದೆ, ಅಹಿಂಸೆಯ ನೈತಿಕಶಕ್ತಿಯಾಗಿ ಧೈರ್ಯವನ್ನು ಮರುವ್ಯಾಖ್ಯಾನಿಸಲು, ಬಂಡಾಯವನ್ನು ಆತ್ಮದ ಉನ್ನತ ಮಟ್ಟಕ್ಕೆ ಒಯ್ದು, ಆ ಮೂಲಕ ಶೋಷಕನ ಹೃದಯವನ್ನು ಮುಟ್ಟಬಯಸುವ ಪ್ರತಿರೋಧದ ವಿಧಾನವನ್ನು ಕಂಡುಕೊಳ್ಳಲು ಸಾಧ್ಯವಿದೆಯೇ? ಬೇರೆ ಮಾತುಗಳಲ್ಲಿ ಹೇಳುವುದಾದರೆ ಗೆರಿಲ್ಲಾ ತಂತ್ರದಲ್ಲಿ ತರಬೇತಿ ಹೊಂದಿದ ಕ್ರಾಂತಿಕಾರಿಯಾಗುವ ಬದಲು ಸತ್ಯಾಗ್ರಹಿಯಾಗಲು ಸಾಧ್ಯವೆ?

ಗಾಂಧಿಯವರ ಅರ್ಥಪೂರ್ಣ ಅಧ್ಯಯನದಿಂದ ಈ ಮೂರು ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳಲು ಯುವಜನರಿಗೆ ಸಾಧ್ಯವಾದೀತು. ಅದಕ್ಕೆ ಮೊದಲು ಯಾವುದೇ ಚಿಂತಕ ಪರಿಪೂರ್ಣನಲ್ಲ; ತಪ್ಪುಗಳನ್ನು ಮಾಡುವುದು ಮಾನವ ಸಹಜ ಎಂಬ ತಿಳುವಳಿಕೆಯ ಅಗತ್ಯವಿದೆ. ಗಾಂಧಿಯವರಿಗೆ ಅವರ ತಪ್ಪುಗಳು ಗೊತ್ತಿದ್ದವು ಮತ್ತು ಅವುಗಳನ್ನು ಅವರು ಅತ್ಯಂತ ನಿರ್ಭಿಡೆಯಿಂದ ಮತ್ತು ಪಾರದರ್ಶಕತೆಯಿಂದ ಒಪ್ಪಿಕೊಂಡಿದ್ದಾರೆ ಕೂಡಾ. ನೀವು ಬಿ.ಆರ್. ಅಂಬೇಡ್ಕರ್ ಅಥವಾ ಕಾರ್ಲ್ ಮಾರ್ಕ್ಸ್ ಅಂತವರನ್ನು ಮೆಚ್ಚುತ್ತಿದ್ದರೂ ಗಾಂಧಿಯವರ ಜೊತೆ ಯಾವತ್ತೂ ಹೆಜ್ಜೆಹಾಕಲು ಸಾಧ್ಯವಿದೆ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...