Homeಮುಖಪುಟಮತಾಂತರ: ಕಠಿಣ ಶಿಕ್ಷೆಗೆ ಅವಕಾಶ ಕಲ್ಪಿಸಬಲ್ಲ ಮಸೂದೆ ಮಂಡಿಸಲು ಛತ್ತೀಸ್‌ಗಢ ಸಜ್ಜು; ಪ್ರಾಸ್ತಾವಿತ ಮಸೂದೆಯಲ್ಲೇನಿದೆ?

ಮತಾಂತರ: ಕಠಿಣ ಶಿಕ್ಷೆಗೆ ಅವಕಾಶ ಕಲ್ಪಿಸಬಲ್ಲ ಮಸೂದೆ ಮಂಡಿಸಲು ಛತ್ತೀಸ್‌ಗಢ ಸಜ್ಜು; ಪ್ರಾಸ್ತಾವಿತ ಮಸೂದೆಯಲ್ಲೇನಿದೆ?

- Advertisement -
- Advertisement -

ಛತ್ತೀಸ್‌ಗಢದ ಬಿಜೆಪಿ ಸರಕಾರ ಮತಾಂತರದ ಬಗ್ಗೆ ಕಠಿಣ ಕ್ರಮಕ್ಕೆ ಮಸೂದೆಯನ್ನು ಜಾರಿಗೊಳಿಸಲು ಸಿದ್ಧತೆ ನಡೆಸುತ್ತಿದೆ. ಇನ್ನೊಂದು ಧರ್ಮಕ್ಕೆ ಮತಾಂತರಗೊಳ್ಳಲು ಇಚ್ಛಿಸುವ ವ್ಯಕ್ತಿಯು ಕನಿಷ್ಠ 60 ದಿನಗಳ ಮುಂಚಿತವಾಗಿ ವೈಯಕ್ತಿಕ ವಿವರಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಜಿಲ್ಲಾ ಮ್ಯಾಜಿಸ್ಟ್ರೇಟ್‌ಗೆ ಸಲ್ಲಿಸಬೇಕು, ನಂತರ ಅವರು ಮತಾಂತರದ ನೈಜ ಉದ್ದೇಶ, ಕಾರಣದ ಕುರಿತು ತನಿಖೆಗೆ ಪೊಲೀಸರಿಗೆ ಸೂಚಿಸುತ್ತಾರೆ. ಕಾನೂನು ಬಾಹಿರ ಎಂದು ಕಂಡು ಬಂದರೆ 10 ವರ್ಷಗಳವರೆಗೆ ಶಿಕ್ಷೆ ವಿಧಿಸಲು ಅವಕಾಶವನ್ನು ಮಸೂದೆಯಲ್ಲಿ ಕಲ್ಪಿಸಲಾಗಿದೆ.

ಹೊಸ ಮಸೂದೆಯ ಕರಡು ಸಿದ್ಧವಾಗಿದ್ದು, ಅಂತಿಮವಾಗಿ ವಿಧಾನಸೌಧದಲ್ಲಿ ಮಂಡಿಸುವ ಮುನ್ನ ಕೆಲವು ತಿದ್ದುಪಡಿಗಳನ್ನು ಮಾಡಬಹುದಾಗಿದೆ ಎಂದು ಮೂಲಗಳು ತಿಳಿಸಿವೆ. ಮತಾಂತರವಾಗುವ ವ್ಯಕ್ತಿಯು ಕನಿಷ್ಠ ಒಂದು ತಿಂಗಳುಗಳಿಗೆ ಮುಂಚಿತವಾಗಿ ಅರ್ಜಿಯನ್ನು ಭರ್ತಿ ಮಾಡಿ ಸಲ್ಲಿಸಬೇಕಾಗುತ್ತದೆ. ಅಧಿಕಾರದ ದುರುಪಯೋಗ, ಬಲವಂತ, ಅನಗತ್ಯ ಪ್ರಭಾವ, ಬಲಾತ್ಕಾರ, ಪ್ರಚೋದನೆ ಅಥವಾ ಯಾವುದೇ ಮೋಸದ ವಿಧಾನದಿಂದ ಅಥವಾ ಮದುವೆಯ ಮೂಲಕ ಒಂದು ಧರ್ಮದಿಂದ ಇನ್ನೊಂದು ಧರ್ಮಕ್ಕೆ ಮತಾಂತರಕ್ಕೆ ಮಸೂದೆಯು ಬ್ರೇಕ್‌ ಹಾಕುತ್ತದೆ ಎಂದು ಕರಡು ಹೇಳುತ್ತದೆ. ತನಿಖೆಯ ವೇಳೆ ಜಿಲ್ಲಾ ಮ್ಯಾಜಿಸ್ಟ್ರೇಟ್‌ ಇದೊಂದು ಕಾನೂನು ಬಾಹಿರ ಪ್ರಕರಣವೆಂದು ಮನಗಂಡರೆ, ಮತಾಂತರವನ್ನು ಕಾನೂನುಬಾಹಿರವೆಂದು ಪರಿಗಣಿಸಲಾಗುತ್ತದೆ.

‘ಛತ್ತೀಸ್‌ಗಢದ ಕಾನೂನುಬಾಹಿರ ಧಾರ್ಮಿಕ ಮತಾಂತರ ನಿಷೇಧ ಮಸೂದೆ”ಯು ಒಬ್ಬ ವ್ಯಕ್ತಿಯು 60 ದಿನಗಳೊಳಗೆ ಪರಿಶೀಲನೆಗಾಗಿ ಮ್ಯಾಜಿಸ್ಟ್ರೇಟ್‌ ಮುಂದೆ ಹಾಜರಾಗಬೇಕು ಎಂದು ಹೇಳುತ್ತದೆ. ಇದನ್ನು ಮಾಡದಿದ್ದರೆ, ಮತಾಂತರವನ್ನು ಕಾನೂನುಬಾಹಿರವೆಂದು ಪರಿಗಣಿಸಬಹುದಾಗಿದೆ. ಇದಲ್ಲದೆ ದೃಢೀಕರಣದ ದಿನಾಂಕದವರೆಗೆ ಜಿಲ್ಲಾ ಮ್ಯಾಜಿಸ್ಟ್ರೇಟ್‌ ತನ್ನ ಕಚೇರಿಯ ಸೂಚನಾ ಫಲಕದಲ್ಲಿ ಘೋಷಣೆಯ ಪ್ರತಿಯನ್ನು ಪ್ರದರ್ಶಿಸಲಿದ್ದಾರೆ. ಮತಾಂತರಗೊಳ್ಳುವ ಪ್ರತಿಯೊಬ್ಬರ ದಾಖಲೆಯನ್ನು ಜಿಲ್ಲಾ ಮ್ಯಾಜಿಸ್ಟ್ರೇಟರ್‌  ನಿರ್ವಹಿಸಲಿದ್ದಾರೆ.

ಈ ಬಗ್ಗೆ ಆಕ್ಷೇಪಣೆಯಿದ್ದಲ್ಲಿ ಮತಾಂತರಗೊಳ್ಳುವ ವ್ಯಕ್ತಿಯ ರಕ್ತ ಸಂಬಂಧಿಗಳು ಅಥವಾ ದತ್ತು ಪಡೆದ ವ್ಯಕ್ತಿ ಎಫ್‌ಐಆರ್ ದಾಖಲಿಸಬಹುದು. ಪ್ರಕರಣವು ಜಾಮೀನು ರಹಿತವಾಗಿರುತ್ತದೆ ಮತ್ತು ಸೆಷನ್ಸ್ ನ್ಯಾಯಾಲಯದಿಂದ ವಿಚಾರಣೆಗೆ ಒಳಪಡುತ್ತದೆ ಎಂದು ಮಸೂದೆಯು ಉಲ್ಲೇಖಿಸಿದೆ. ಅಪ್ರಾಪ್ತ ವಯಸ್ಕರು, ಮಹಿಳೆಯರು ಅಥವಾ ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡದ ಜನರನ್ನು  ಅಕ್ರಮವಾಗಿ ಮತಾಂತರ ಮಾಡುವುದು ಕಂಡು ಬಂದರೆ ಕನಿಷ್ಠ ಎರಡು ವರ್ಷ ಮತ್ತು ಗರಿಷ್ಠ 10 ವರ್ಷಗಳ ಜೈಲು ಶಿಕ್ಷೆ ಮತ್ತು ಕನಿಷ್ಠ 25,000 ರೂ.ದಂಡ ವಿಧಿಸಲಾಗುತ್ತದೆ. ಸಾಮೂಹಿಕ ಮತಾಂತರಕ್ಕೆ ಕನಿಷ್ಠ ಮೂರು ವರ್ಷ ಮತ್ತು ಗರಿಷ್ಠ 10 ವರ್ಷ ಶಿಕ್ಷೆ ಹಾಗೂ 50,000ರೂ. ದಂಡ ವಿಧಿಸಲಾಗುತ್ತದೆ. ಇದಲ್ಲದೆ ಧಾರ್ಮಿಕ ಮತಾಂತರದ ಸಂತ್ರಸ್ತರಿಗೆ 5 ಲಕ್ಷ ರೂಪಾಯಿಗಳವರೆಗೆ ಪರಿಹಾರವನ್ನು ನ್ಯಾಯಾಲಯವು ಅನುಮೋದಿಸಬಹುದು. ಆದರೆ ಹಿಂದಿನ ಧರ್ಮಕ್ಕೆ ಮರು ಮತಾಂತರಗೊಳ್ಳಲು ಬಯಸುವವರಿಗೆ ಕಾನೂನು ಅನ್ವಯಿಸುವುದಿಲ್ಲ.

ಕಳೆದ ಕೆಲವು ವರ್ಷಗಳಿಂದ ಛತ್ತೀಸ್‌ಗಢದ ಕೊಂಡಗಾಂವ್ ಮತ್ತು ನಾರಾಯಣಪುರದಂತಹ ಜಿಲ್ಲೆಗಳಲ್ಲಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡ ಬುಡಕಟ್ಟು ಜನಾಂಗದವರ ಮೇಲೆ ಹಲ್ಲೆ ನಡೆಸಿರುವ ಹಲವಾರು ನಿದರ್ಶನಗಳನ್ನು ರಾಜ್ಯ ಕಂಡಿದೆ. ಇದಲ್ಲದೆ ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ಬಿಜೆಪಿ ಮತಾಂತರವನ್ನು ಚುನಾವಣಾ ವಿಷಯವನ್ನಾಗಿ ಮಾಡಿಕೊಂಡಿತ್ತು. ಜಶ್ಪುರ್‌ನ ಹಿಂದಿನ ರಾಜಮನೆತನದ ದಿವಂಗತ ಕೇಂದ್ರ ಸಚಿವ ದಿಲೀಪ್ ಸಿಂಗ್ ಜೂಡಿಯೊ ಅವರು ತಮ್ಮ ಜಿಲ್ಲೆಯಲ್ಲಿ “ಘರ್ ವಾಪ್ಸಿ” ಅಭಿಯಾನಕ್ಕೆ ಮೊದಲು ಚಾಲನೆ ನೀಡಿದ್ದರು.

ಛತ್ತೀಸ್‌ಗಢದ ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ ಈ ಕುರಿತು ಪ್ರತಿಕ್ರಿಯಿಸಿದ್ದು, ಕಳೆದ ಐದು ವರ್ಷಗಳಲ್ಲಿ ಧಾರ್ಮಿಕ ಮತಾಂತರ ಹೆಚ್ಚಾಗಿದೆ. ಕಳೆದ ತಿಂಗಳು ಜಶ್‌ಪುರದಲ್ಲಿ ಘರ್ ವಾಪ್ಸಿ ಅಭಿಯಾನವನ್ನು ಜೂಡೋ ಜಿ ಪ್ರಾರಂಭಿಸಿದರು, ಇದರಿಂದಾಗಿ ನಮ್ಮ ಜಿಲ್ಲೆಯನ್ನು ರಕ್ಷಿಸಲಾಗಿದೆ. ಇಲ್ಲವಾದರೆ ಏಷ್ಯಾದ ಎರಡನೇ ದೊಡ್ಡ ಚರ್ಚ್ ನಮ್ಮ ಜಿಲ್ಲೆಯಲ್ಲಿದೆ ಮತ್ತು ಮತಾಂತರವು ವೇಗವಾಗಿ ನಡೆಯುತ್ತಿತ್ತು. ರಾಜನಾಗಿದ್ದರೂ ಮತಾಂತರಗೊಂಡ ಜನರ ಪಾದಗಳನ್ನು ತೊಳೆದು ಮತ್ತೆ ಹಿಂದೂ ಧರ್ಮಕ್ಕೆ ಕರೆತಂದರು, ಇಂದು ಈ ಕಾರ್ಯ ಮುನ್ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಗರ್ಭಿಣಿ ಮೇಲೆ ಸಾಮೂಹಿಕ ಅತ್ಯಾಚಾರಗೈದು ಬೆಂಕಿ ಹಚ್ಚಿದ ದುಷ್ಕರ್ಮಿಗಳು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...