Homeಮುಖಪುಟ'ಅಕ್ಬರ್‌', 'ಸೀತಾ' ಹೆಸರಿನ ಸಿಂಹಗಳನ್ನು ಒಂದೇ ಸ್ಥಳದಲ್ಲಿ ಬಿಟ್ಟಿದ್ದಕ್ಕೆ ಹೈಕೋರ್ಟ್‌ ಮೆಟ್ಟಿಲೇರಿದ ವಿಹೆಚ್‌ಪಿ: ವಿಲಕ್ಷಣ...

‘ಅಕ್ಬರ್‌’, ‘ಸೀತಾ’ ಹೆಸರಿನ ಸಿಂಹಗಳನ್ನು ಒಂದೇ ಸ್ಥಳದಲ್ಲಿ ಬಿಟ್ಟಿದ್ದಕ್ಕೆ ಹೈಕೋರ್ಟ್‌ ಮೆಟ್ಟಿಲೇರಿದ ವಿಹೆಚ್‌ಪಿ: ವಿಲಕ್ಷಣ ಘಟನೆ

- Advertisement -
- Advertisement -

ಪಶ್ಚಿಮ ಬಂಗಾಳದ ಅರಣ್ಯ ಇಲಾಖೆ ನಡೆಸುತ್ತಿರುವ ಸಫಾರಿ ಪಾರ್ಕ್‌ನಲ್ಲಿ ಅಕ್ಬರ್‌ ಹಾಗೂ ಸೀತಾ ಎನ್ನುವ ಹೆಸರಿನ ಸಿಂಹದ ಜೋಡಿಯನ್ನು ಅರಣ್ಯ ಇಲಾಖೆ ಒಂದೇ ಸ್ಥಳದಲ್ಲಿ ಬಿಟ್ಟಿದ್ದನ್ನು ಪ್ರಶ್ನಿಸಿ ವಿಶ್ವ ಹಿಂದೂ ಪರಿಷತ್‌ ಮುಖಂಡರು ಹೈಕೋರ್ಟ್‌ ಮೆಟ್ಟಿಲೇರಿರುವ ವಿಲಕ್ಷಣ ಘಟನೆ ನಡೆದಿದೆ.

ಸಿಲಿಗುರಿಯಲ್ಲಿರುವ ಬಂಗಾಳ ಸಫಾರಿ ಪಾರ್ಕ್‌ಗೆ ಫೆಬ್ರವರಿ 12ರಂದು ತ್ರಿಪುರಾದ ಸೆಪಹಿಜಲಾ ಝುವೊಲಾಜಿಕಲ್‌ ಪಾರ್ಕಿನಿಂದ ಎರಡು ಸಿಂಹಗಳನ್ನು ತರಲಾಗಿತ್ತು. ಅವುಗಳಲ್ಲಿ ಒಂದಕ್ಕೆ ʼಅಕ್ಬರ್‌ʼ ಎಂದು ಹೆಸರನ್ನಿಡಲಾಗಿದ್ದರೆ, ಇನ್ನೊಂದಕ್ಕೆ ಸೀತಾ ಎಂಬ ಹೆಸರನ್ನಿಡಲಾಗಿದೆ. ಈ 7 ವರ್ಷದ ʼಅಕ್ಬರ್‌ ಮತ್ತು 5 ವರ್ಷದ ಸೀತಾ ಸಿಂಹದ ಜೋಡಿಯನ್ನು ಒಂದೇ ಕಡೆ ಅಧಿಕಾರಿಗಳು ಇರಿಸಿದ್ದಾರೆ. ಇದನ್ನು ಪ್ರಶ್ನಿಸಿ ವಿಶ್ವ ಹಿಂದೂ ಪರಿಷತ್‌ ಕೋಲ್ಕತಾ ಹೈಕೋರ್ಟ್‌ ಮೊರೆ ಹೋಗಿದೆ. ಇದು ಹಿಂದೂ ಧರ್ಮಕ್ಕೆ ಅವಮಾನ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.
ಕೋಲ್ಕತ್ತ ಉಚ್ಚ ನ್ಯಾಯಾಲಯದ ಜಲ್‌ ಪಾಯ್‌ಗುರಿ ಸರ್ಕ್ಯೂಟ್‌ ಪೀಠಕ್ಕೆ ವಿಶ್ವಹಿಂದೂ ಪರಿಷತ್‌ ಅರ್ಜಿಯನ್ನು ಸಲ್ಲಿಸಿದೆ. ಈ ಕುರಿತು ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡ ಸುಗತಾ ಭಟ್ಟಾಚಾರ್ಯ ಅವರ ಪೀಠವು ವಿಚಾರಣೆಯನ್ನು ಫೆಬ್ರವರಿ 20ಕ್ಕೆ ಮುಂದೂಡಿದ್ದಾರೆ.

 

ಪಶ್ಚಿಮ ಬಂಗಾಳದ ಅರಣ್ಯ ಇಲಾಖೆಯು ಹಲವಾರು ವರ್ಷಗಳಿಂದ ಪ್ರವಾಸಿ ತಾಣವಾದ ಸಿಲಿಗುರಿಯಲ್ಲಿ ವನ್ಯಜೀವಿಗಳ ಸಫಾರಿ ಪಾರ್ಕ್‌ ಹೊಂದಿದೆ. ಇಲ್ಲಿ ಆನೆ, ಸಿಂಹ, ಹುಲಿ ಸಹಿತ ಪ್ರಮುಖ ಪ್ರಾಣಿಗಳಿವೆ. ಇಲ್ಲಿಗೆ ನಿತ್ಯ ನೂರಾರು ಪ್ರವಾಸಿಗರು ಕೂಡ ಭೇಟಿ ನೀಡುತ್ತಾರೆ. ʼಅಕ್ಬರ್‌ʼ  ಮತ್ತುಸೀತಾ ಸಿಂಹದ ಜೋಡಿಯನ್ನು ಒಂದೇ ಕಡೆ ಅಧಿಕಾರಿಗಳು ಬಿಟ್ಟಿರುವುದನ್ನು ಗಮನಿಸಿದ ವಿಶ್ವ ಹಿಂದೂ ಪರಿಷತ್‌ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಸಿಂಹಗಳ ಹೆಸರನ್ನು ಬದಲಿಸಿ ಅಥವಾ ಸಿಂಹಗಳನ್ನು ಒಂದೇ ಕಡೆ ಇರುವುದನ್ನು ತಪ್ಪಿಸಿ ಎಂದು ಹೇಳಿದ್ದರು. ಆದರೆ ಈಗಾಗಲೇ ಸಿಂಹಗಳಿಗೆ ಹೆಸರು ಇಡಲಾಗಿದೆ. ಹೆಸರು ಬದಲಾಯಿಸಲು ಆಗುವುದಿಲ್ಲ. ಅವುಗಳನ್ನು ಸ್ಥಳಾಂತರಿಸುವ ವಿಷಯವೂ ನಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂದು ಅಧಿಕಾರಿಗಳು ಸ್ಪಷ್ಟನೆಯನ್ನು ನೀಡಿದ್ದರು. ಇದನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳದ ವಿಶ್ವ ಹಿಂದೂ ಪರಿಷತ್‌ ಮುಖಂಡರು ಹೈಕೋರ್ಟ್ ಮೊರೆ ಹೋಗಿದ್ದಾರೆ.

ಅಕ್ಬರ್‌ ಎನ್ನುವ ಸಿಂಹವನ್ನು ಸೀತಾ ಎನ್ನುವ ಸಿಂಹದ ಜತೆಗೆ ಇರಿಸುವುದು ಸರಿಯಲ್ಲ. ಈ ಮೂಲಕ ಹಿಂದೂ ಭಾವನೆಗಳನ್ನು ಕೆರಳಿಸಲಾಗಿದೆ. ಕೂಡಲೇ ಸಿಂಹದ ಹೆಸರು ಬದಲಿಸಬೇಕು ಎಂದು ಹೈಕೋರ್ಟ್‌ಗೆ ಸಲ್ಲಿಸಲಾಗಿರುವ ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. ಪಶ್ವಿಮ ಬಂಗಾಳದ ಅರಣ್ಯ ಇಲಾಖೆ ಅಧಿಕಾರಿಗಳು, ಸಿಲಿಗುರಿ ಸಫಾರಿ ಪಾರ್ಕ್‌ ನಿರ್ದೇಶಕರನ್ನು ಪ್ರತಿವಾದಿಯನ್ನಾಗಿ ಮಾಡಲಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ವಿಶ್ವಹಿಂದೂ ಪರಿಷತ್‌ ಮುಖಂಡ ದುಲಾಲ್‌ ಚಂದ್ರ ರೇ, ಅಕ್ಬರ್‌ ಹೆಸರಿನ ಸಿಂಹದ ಜೋಡಿಯಾಗಿರುವ ಹೆಣ್ಣು ಸಿಂಹಕ್ಕೆ ಸೀತಾ ಹೆಸರಿಟ್ಟಿದ್ದು ಹಿಂದೂ ಧರ್ಮದ ಜನರ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಮತಾಂತರ: ಕಠಿಣ ಶಿಕ್ಷೆಗೆ ಅವಕಾಶ ಕಲ್ಪಿಸಬಲ್ಲ ಮಸೂದೆ ಮಂಡಿಸಲು ಛತ್ತೀಸ್‌ಗಢ ಸಜ್ಜು; ಪ್ರಾಸ್ತಾವಿತ ಮಸೂದೆಯಲ್ಲೇನಿದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...