Homeಮುಖಪುಟಪಡಿತರ ಚೀಲದ ಮೇಲೆ ಮೋದಿ ಪೋಟೋ ಹಾಕಲು ಸಾರ್ವಜನಿಕ ತೆರಿಗೆಯ ಕೋಟ್ಯಾಂತರ ರೂ. ವೆಚ್ಚ

ಪಡಿತರ ಚೀಲದ ಮೇಲೆ ಮೋದಿ ಪೋಟೋ ಹಾಕಲು ಸಾರ್ವಜನಿಕ ತೆರಿಗೆಯ ಕೋಟ್ಯಾಂತರ ರೂ. ವೆಚ್ಚ

- Advertisement -
- Advertisement -

2024ರ ಸಾರ್ವತ್ರಿಕ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿ ವಿಭಿನ್ನ ರೀತಿಯಲ್ಲಿ ಪ್ರಚಾರವನ್ನು ಮಾಡುತ್ತಿದ್ದು, ಇದೀಗ ಮೋದಿ ಬಗ್ಗೆ ಪ್ರಚಾರಕ್ಕೆ ಕೋಟ್ಯಾಂತರ ರೂ. ಸರಕಾರದ ಹಣ ದುರ್ಬಳಕೆ ಮಾಡುತ್ತಿರುವ ಆರೋಪ ಕೇಳಿ ಬಂದಿದೆ. ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ ಅಡಿಯಲ್ಲಿ ವಿತರಿಸಲಾಗುವ ಆಹಾರ ಧಾನ್ಯದ ಚೀಲಗಳಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಪೋಟೋವನ್ನು ಸ್ಪಷ್ಟವಾಗಿ ಪ್ರದರ್ಶಿಸಲು ಕೇಂದ್ರ ಸರ್ಕಾರವು ಮುಂದಾಗಿದೆ.

ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿಯಲ್ಲಿ, ಅಂತ್ಯೋದಯ ಅನ್ನ ಯೋಜನೆ (AAY) ಮತ್ತು ಆದ್ಯತಾ ಕುಟುಂಬಗಳ (PHH) ಸುಮಾರು 81.35 ಕೋಟಿ ಫಲಾನುಭವಿಗಳಿಗೆ ಉಚಿತ ಆಹಾರ ಧಾನ್ಯಗಳನ್ನು ಒದಗಿಸಲಾಗುತ್ತಿದೆ. 2020-21 ಮತ್ತು 2021-22ರ ಹಣಕಾಸು ವರ್ಷಗಳಲ್ಲಿ PMGKAY ಅನುಷ್ಠಾನದ ಸಮಯದಲ್ಲಿ 75 ಕೋಟಿಗೂ ಹೆಚ್ಚು ಫಲಾನುಭವಿಗಳು ಆಹಾರ ಧಾನ್ಯಗಳನ್ನು ಪಡೆದಿದ್ದಾರೆ ಎಂದು ಕೇಂದ್ರ ಸರ್ಕಾರ ಹೇಳಿಕೊಂಡಿದೆ. ಜನವರಿ 12, 2024ರ ಸುತ್ತೋಲೆಯಲ್ಲಿ, ಭಾರತೀಯ ಆಹಾರ ನಿಗಮವು (ಎಫ್‌ಸಿಐ) ತನ್ನ ಎಲ್ಲಾ 26 ಪ್ರಾದೇಶಿಕ ಕಚೇರಿಗಳಿಗೆ ಪಿಎಂಜಿಕೆಎವೈ ಅಡಿಯಲ್ಲಿ ಆಹಾರ ಧಾನ್ಯಗಳನ್ನು ವಿತರಿಸುವಾಗ, ಆಹಾರ ಧಾನ್ಯದ ಚೀಲಗಳಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಪೋಟೋಗಳನ್ನು ಹಾಕುವಂತೆ ಸೂಚಿಸಲಾಗಿದೆ.

ಇದರಿಂದಾಗಿ ರಾಜಸ್ಥಾನ ಒಂದರಲ್ಲೇ ಮೋದಿಯ ಪೋಟೋ ಇರುವ ಬ್ಯಾಗ್‌ಗಳಿಗೆ 13.29 ಕೋಟಿ ಬೆಲೆ ರೂ.ವೆಚ್ಚ ಮಾಡಲಾಗಿದೆ. ಸಾಮಾಜಿ ಕಾರ್ಯಕರ್ತ ಅಜಯ್ ಬೋಸ್‌ ಅವರು ರಾಜಸ್ಥಾನದ ಜೈಪುರದ ಪ್ರಾದೇಶಿಕ ಕಚೇರಿಯಲ್ಲಿ ಎಫ್‌ಸಿಐನ ಶೇಖರಣಾ ವಿಭಾಗಕ್ಕೆ ಮಾಹಿತಿ ಕೋರಿ ಸಲ್ಲಿಸಿದ ಅರ್ಜಿಗೆ ಈ ಉತ್ತರವನ್ನು ನೀಡಲಾಗಿದೆ. ರಾಜಸ್ಥಾನವು ಪ್ರತಿ ಚೀಲಕ್ಕೆ 12.375 ದರದಲ್ಲಿ 1.07 ಕೋಟಿ ಸಿಂಥೆಟಿಕ್ ಬ್ಯಾಗ್‌ಗಳ ಪೂರೈಕೆ ಆದೇಶವನ್ನು ನೀಡಿದೆ.

ರಾಜಸ್ಥಾನದಲ್ಲಿ ಈ ಕುರಿತು ಟೆಂಡರ್‌ಗಳನ್ನು ಐದು ಕಂಪನಿಗಳಿಗೆ ನೀಡಲಾಗಿದೆ, ರಾಜಸ್ಥಾನ ಮೂಲದ ಸಲಾಸರ್ ಟೆಕ್ನೋಟೆಕ್ಸ್ ಪ್ರೈವೇಟ್ ಲಿಮಿಟೆಡ್, ರಾಜಸ್ಥಾನ ಫ್ಲೆಕ್ಸಿಬಲ್ ಪ್ಯಾಕೇಜಿಂಗ್ ಲಿಮಿಟೆಡ್, ಅಲಯನ್ಸ್ ಪಾಲಿಸಾಕ್ಸ್ ಪ್ರೈವೇಟ್ ಲಿಮಿಟೆಡ್ ಮತ್ತು ಗುಜರಾತ್ ಮೂಲದ ಮೋರ್ ಟೆಕ್‌ಫ್ಯಾಬ್ ಪ್ರೈವೇಟ್ ಲಿಮಿಟೆಡ್ ಮತ್ತು ಗುಜರಾತ್ ಬ್ಲಾಸ್ಟ್ ಇಂಡಸ್ಟ್ರೀಸ್‌ಗೆ ಟೆಂಡರ್‌ ನೀಡಲಾಗಿದೆ.

ರಾಜಸ್ಥಾನವು ಪ್ರತಿ ಚೀಲಕ್ಕೆ 12.375ರಂತೆ ಒಪ್ಪಂದವನ್ನು ನೀಡಿದರೆ, ನಾಗಾಲ್ಯಾಂಡ್ ಕೇವಲ ಒಂದು ಕಂಪನಿಗೆ ಇದರ ಗುತ್ತಿಗೆ ನೀಡಿದೆ. ರಾಜಸ್ಥಾನ್ ಫ್ಲೆಕ್ಸಿಬಲ್ ಪ್ಯಾಕೇಜಿಂಗ್ ಪ್ರತಿ ಚೀಲಕ್ಕೆ 9.30ಕ್ಕೆ ನೀಡುವ ಬಗ್ಗೆ ಒಪ್ಪಂದವನ್ನು ಮಾಡಿಕೊಂಡಿದೆ ಎಂದು ದಿಮಾಪುರ್‌ನಲ್ಲಿರುವ ಎಫ್‌ಸಿಐ ಪ್ರಾದೇಶಿಕ ಕಚೇರಿ ಆರ್‌ಟಿಐ ಉತ್ತರದಲ್ಲಿ ತಿಳಿಸಿದೆ. ತಮಿಳುನಾಡು 1.14 ಕೋಟಿ ಚೀಲಗಳ ಪೂರೈಕೆಗೆ ಟೆಂಡರ್ ಕರೆದಿದೆ. ತಮಿಳುನಾಡಿನ ಎಫ್‌ಸಿಐನ ಪ್ರಾದೇಶಿಕ ಕಚೇರಿಯು ನೀಡಿರುವ ಆರ್‌ಟಿಐ ಮಾಹಿತಿಯಲ್ಲಿ ಇದು ಬಯಲಾಗಿದೆ. ಮಹಾರಾಷ್ಟ್ರ ಇನ್ನೂ ಟೆಂಡರ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಿಲ್ಲ.

ಸಾಂಕ್ರಾಮಿಕ ರೋಗದ ವೇಳೆ 2020ರಲ್ಲಿ ಪ್ರಾರಂಭವಾದ PMGKAY ಯೋಜನೆಯಡಿಯಲ್ಲಿನ ಉಚಿತ ಆಹಾರ ಧಾನ್ಯ ವಿತರಣೆ ಯೋಜನೆಯನ್ನು ಇತ್ತೀಚೆಗೆ ಮುಂದುವರಿಸಲಾಗಿತ್ತು. ಇದೀಗ ಈ ಯೋಜನೆಯ ಅಕ್ಕಿ ಚೀಲದಲ್ಲಿ ಮೋದಿ ಪೋಟೋವನ್ನು ಹಾಕುವಂತೆ ಸೂಚಿಸಲಾಗಿದೆ. ಇದು ಚುನಾವಣಾ ಪ್ರಚಾರದ ಭಾಗ ಎಂದು ವ್ಯಾಪಕ ಟೀಕೆಗೆ ಕಾರಣವಾಗಿದೆ.

ಪಡಿತರ ಅಂಗಡಿಗಳಲ್ಲಿ ಪ್ರಧಾನಿ ನರೇಂದ್ರ ಅವರ ಕಟೌಟ್ ಇರುವ ಸೆಲ್ಫಿ ಪಾಯಿಂಟ್‌ಗಳನ್ನು, ಫ್ಲೆಕ್ಸ್‌ಗಳನ್ನು ಮತ್ತು ಬೋರ್ಡ್‌ಗಳನ್ನು ಅಳವಡಿಸುವಂತೆ ಕೇಂದ್ರ ಸರ್ಕಾರ ನೀಡಿರುವ ನಿರ್ದೇಶನವನ್ನು ಕೇರಳ ಸರಕಾರ ತಿರಸ್ಕರಿಸಿತ್ತು. ಇದು ಖಂಡಿತವಾಗಿಯೂ ಲೋಕಸಭೆ ಚುನಾವಣೆಯ ಪ್ರಚಾರದ ಭಾಗವಾಗಿದೆ. ಇದು ಸರಿಯಲ್ಲ ಮತ್ತು ಇದನ್ನು ಕೇರಳದಲ್ಲಿ ಜಾರಿಗೆ ತರುವುದು ಕಷ್ಟ ಎಂದು ನಾವು ಕೇಂದ್ರಕ್ಕೆ ತಿಳಿಸುತ್ತೇವೆ ಎಂದು ಕೇರಳ ಸಿಎಂ ಪಿಣರಾಯ್‌ ವಿಜಯನ್‌ ಹೇಳಿದ್ದರು.

ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಕೇಂದ್ರ ಸರ್ಕಾರದ ಪ್ರಚಾರದ ಭಾಗದಲ್ಲಿ ‘ಸೆಲ್ಫಿ ಪಾಯಿಂಟ್‌ಗಳು’ ದೊಡ್ಡ ಭಾಗವಾಗಿದೆ. ಅವುಗಳನ್ನು ಸಾರ್ವಜನಿಕ ಸ್ಥಳಗಳು, ರೈಲು ನಿಲ್ದಾಣಗಳು, ಶಿಕ್ಷಣ ಸಂಸ್ಥೆಗಳು ಇತ್ಯಾದಿಗಳಲ್ಲಿ ಇರಿಸುವಂತೆ ಈ ಮೊದಲು ನಿರ್ದೇಶನವನ್ನು ನೀಡಲಾಗಿತ್ತು. ಇವೆಲ್ಲವನ್ನೂ ಸಾರ್ವಜನಿಕರ ತೆರಿಗೆ ಹಣದಿಂದ ನಿರ್ಮಿಸಲಾಗುತ್ತಿದೆ. ಇತ್ತೀಚೆಗೆ ವಿಶ್ವವಿದ್ಯಾನಿಲಯಗಳಲ್ಲಿ ಮೋದಿ ಸೆಲ್ಫಿ ಪಾಯಿಂಟ್‌ಗಳ ನಿರ್ಮಾಣಕ್ಕೆ ಆದೇಶ ಕೊಟ್ಟಿರುವುದು ವಿವಾದಕ್ಕೆ ಕಾರಣವಾಗಿತ್ತು. ಆ ಬಳಿಕ ರೈಲ್ವೇ ನಿಲ್ದಾಣಗಳಲ್ಲಿ ಸಾರ್ವಜನಿಕರ ವೆಚ್ಚದಲ್ಲಿ ಮೋದಿಯ ಪೋಟೋ ಇರುವಂತೆ ಸೆಲ್ಫಿ ಪಾಯಿಂಟ್‌ಗಳನ್ನು ನಿರ್ಮಿಸಲಾಗಿದೆ ಎನ್ನವುದು ಆರ್‌ಟಿಐ ಮಾಹಿತಿಯಿಂದ ಬಯಲಾಗಿತ್ತು. ಮೋದಿ ಸಾರ್ವಜನಿಕರ ತೆರಿಗೆ ಹಣವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಪ್ರತಿಪಕ್ಷಗಳು ಟೀಕಿಸಿದ್ದವು.

ಇದನ್ನು ಓದಿ: ‘ಅಕ್ಬರ್‌’, ‘ಸೀತಾ’ ಹೆಸರಿನ ಸಿಂಹಗಳನ್ನು ಒಂದೇ ಸ್ಥಳದಲ್ಲಿ ಬಿಟ್ಟಿದ್ದಕ್ಕೆ ಹೈಕೋರ್ಟ್‌ ಮೆಟ್ಟಿಲೇರಿದ ವಿಹೆಚ್‌ಪಿ: ವಿಲಕ್ಷಣ ಘಟನೆ

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...