Homeಅಂತರಾಷ್ಟ್ರೀಯವಿಶ್ವಸಂಸ್ಥೆಯಲ್ಲಿ ಹವಾಮಾನ ವೈಪರೀತ್ಯದ ಕುರಿತು 16ರ ಬಾಲೆ ಗ್ರೇಟಾ ತನ್ಬೆರ್ಗ್‌ ಮಾಡಿದ ಭಾಷಣ..

ವಿಶ್ವಸಂಸ್ಥೆಯಲ್ಲಿ ಹವಾಮಾನ ವೈಪರೀತ್ಯದ ಕುರಿತು 16ರ ಬಾಲೆ ಗ್ರೇಟಾ ತನ್ಬೆರ್ಗ್‌ ಮಾಡಿದ ಭಾಷಣ..

ನೀವು ನಮ್ಮನ್ನು ವಿಫಲಗೊಳಿಸುತ್ತಿದ್ದೀರಿ. ಆದರೆ ಯುವಜನರು ನಿಮ್ಮ ದ್ರೋಹವನ್ನು ಅರಿಯಲು ಪ್ರಾರಂಭಿಸಿದ್ದಾರೆ. ಮುಂದಿನ ಪೀಳಿಗೆಗಳ ಎಲ್ಲಾ ಕಣ್ಣುಗಳು ನಿಮ್ಮ ಮೇಲಿವೆ. ಒಂದು ವೇಳೆ ನೀವು ನಮ್ಮನ್ನು ವಿಫಲಗೊಳಿಸುವುದನ್ನು ಆಯ್ಕೆ ಮಾಡಿಕೊಂಡರೆ, ನಾವು ನಿಮ್ಮನ್ನು ಎಂದೆಂದಿಗೂ ಕ್ಷಮಿಸಲಾರೆವು.

- Advertisement -
- Advertisement -

ನಿಮ್ಮನ್ನು ಸತತವಾಗಿ ಗಮನಿಸುವೆ; ಇದುವೆ ನನ್ನ ಸಂದೇಶ : ಗ್ರೇಟಾ ತನ್ಬೆರ್ಗ್‌

ಕನ್ನಡಕ್ಕೆ: ರಾಜಶೇಖರ್ ಅಕ್ಕಿ

ಇದು ತಪ್ಪು. ನಾನಿಲ್ಲಿ ಇರಬಾರದಾಗಿತ್ತು. ನಾನೀಗ ನನ್ನ ಶಾಲೆಯಲ್ಲಿ, ಸಾಗರದಾಚೆ ಇರಬೇಕಿತ್ತು. ಆದರೂ ನೀವು ನಮ್ಮ ಕಡೆ, ಯುವಜನರ ಕಡೆ ಬರುತ್ತೀರ, ನಿಮ್ಮ ಭರವಸೆ, ನಿರೀಕ್ಷೆಗಳನ್ನು ಹುಡುಕಿಕೊಂಡು. ನಿಮಗೆಷ್ಟು ಧೈರ್ಯ?

ನೀವು ನಿಮ್ಮ ಖಾಲಿ ಮಾತುಗಳಿಂದ ನನ್ನ ಕನಸುಗಳನ್ನು ಹಾಗೂ ನನ್ನ ಬಾಲ್ಯವನ್ನು ನನ್ನಿಂದ ಕದ್ದಿದ್ದೀರ. ಆದರೂ ನಾನು ಅದೃಷ್ಟವಂತೆ. ಆದರೆ ಜನರು ನರಳುತ್ತಿದ್ದಾರೆ. ಜನರು ಸಾಯುತ್ತಿದ್ದಾರೆ. ಪರಿಸರ ವ್ಯವಸ್ಥೆಯು ಸಂಪೂರ್ಣವಾಗಿ ನಾಶವಾಗುತ್ತಿದೆ. ಒಂದು ಸಾಮೂಹಿಕ ಅಳಿವಿನ ಪ್ರಾರಂಭದ ಘಟ್ಟದಲ್ಲಿದ್ದೇವೆ. ಹಾಗೂ ಇಂಥ ಸಮಯದಲ್ಲಿ ನೀವು ದುಡ್ಡು ಮತ್ತು ಆರ್ಥಿಕ ಬೆಳವಣಿಗೆಯ ಚೆಂದದ ಕಥೆಗಳ ಬಗ್ಗೆಯೇ ಮಾತನಾಡುತ್ತೀರಿ. ನಿಮಗೆಷ್ಟು ಧೈರ್ಯ?

ಮೂವತ್ತು ವರ್ಷಗಳಗಿಂದ ವಿಜ್ಞಾನವು ಸ್ಪಷ್ಟವಾಗಿ ಹೇಳುತ್ತಲಿದೆ. ಆದರೂ ನಿಮ್ಮ ಮುಖವನ್ನು ಬೇರೆಡೆ ತಿರುಗಿಸಲು ನಿಮಗೆಷ್ಟು ಧೈರ್ಯ? ಹಾಗೂ ಈ ಸಮಸ್ಯೆಯ ಪರಿಹಾರ ಮತ್ತು ಇದಕ್ಕೆ ಬೇಕಿರುವ ರಾಜಕೀಯ ಕಾಣಿಸಿಕೊಳ್ಳದೇ ಇದ್ದರೂ ಇಲ್ಲಿ ಬಂದು, ನಾವು ಮಾಡಬೇಕಾದದ್ದನ್ನು ಮಾಡುತ್ತಿದ್ದೇವೆ ಎಂದು ಹೇಳಲು ನಿಮಗೆಷ್ಟು ಧೈರ್ಯ?

ನಮ್ಮ ಮಾತುಗಳನ್ನು ಕೇಳಿಸಿಕೊಳ್ಳುತ್ತೀರಿ ಮತ್ತು ಇದರ ತುರ್ತನ್ನು ಅರ್ಥಮಾಡಿಕೊಳ್ಳುತ್ತೀರಿ ಎಂದು ನೀವು ಹೇಳುತ್ತೀರಿ. ಆದರೆ, ನಾನೆಷ್ಟೇ ಸಿಟ್ಟಿನಲ್ಲಿರಲಿ ಮತ್ತು ದುಃಖದಲ್ಲಿರಲಿ, ನಿಮ್ಮ ಈ ಮಾತುಗಳನ್ನು ನಂಬಲು ಸಾಧ್ಯವಿಲ್ಲ. ಏಕೆಂದರೆ, ಒಂದು ವೇಳೆ ನೀವು ಪರಿಸ್ಥಿತಿಯನ್ನು ನಿಜವಾಗಿಯೂ ಅರ್ಥಮಾಡಿಕೊಂಡು ಇದರ ಬಗ್ಗೆ ಕ್ರಮ ತೆಗೆದುಕೊಳ್ಳಲು ವಿಫಲವಾಗುತ್ತಿದ್ದರೆ, ನೀವು ದುಷ್ಟರು ಎಂತಾಗುವುದು. ಹಾಗೂ ನಾನು ಇದನ್ನು ನಂಬಲು ತಯಾರಿಲ್ಲ.

ಹತ್ತು ವರ್ಷಗಳಲ್ಲಿ ಹೊರಸೂಸುವಿಕೆಯನ್ನು (ಎಮಿಷನ್ಸ್) ಅರ್ಧದಷ್ಟು ಕಡಿತಗೊಳಿಸುವ ಈ ಜನಪ್ರಿಯ ಪರಿಕಲ್ಪನೆ ಏನು ಮಾಡಬಲ್ಲದು ಗೊತ್ತೆ? ಇದು 1.5 ಡಿಗ್ರಿಗಿಂತ ಕಡಿಮೆ ಇರಲು ಕೇವಲ 50% ಅವಕಾಶವನ್ನು ನೀಡುತ್ತದೆ ಹಾಗೂ ಮನುಷ್ಯನ ನಿಯಂತ್ರಣವನ್ನು ಮೀರಿದ ಮತ್ತೇ ಬದಲಾಯಿಸಲಾಗದಂತಹ ಸರಣಿ ಪ್ರತಿಕ್ರಿಯೆಗಳನ್ನು ಪ್ರಾರಂಭಿಸುವ ಅಪಾಯ ಹೊಂದಿದೆ.

50% ನಿಮಗೆ ಒಪ್ಪಿಗೆ ಇರಬಹುದು. ಆದರೆ, ಈ ಸಂಖ್ಯೆಗಳು ನಿರ್ಣಾಯಕ ಹಂತಗಳನ್ನು (ಟಿಪಿಂಗ್ ಪಾಯಿಂಟ್ಸ್), ಹೆಚ್ಚಿನ ಫೀಡ್‍ಬ್ಯಾಕ್ ಲೂಪ್ಸ್, ವಾಯು ಮಾಲಿನ್ಯದಿಂದ ಕಾಣಿಸಿಕೊಳ್ಳದ ತಾಪಮಾನದ ಹೆಚ್ಚುವರಿ ಏರಿಕೆ ಅಥವಾ ಹವಾಮಾನದ ನ್ಯಾಯದ ಅಂಶಗಳನ್ನು ಹೊಂದಿಲ್ಲ. ಇದರೊಂದಿಗೆ, ಗಾಳಿಯಲ್ಲಿರುವ ಶತಕೋಟಿ ಟನ್‍ಗಳಷ್ಟಿರುವ ನಿಮ್ಮ ಕಾರ್ಬನ್ ಡೈಆಕ್ಸೈಡ್ ಅನ್ನು ನಮ್ಮ ಪೀಳಿಗೆಯ ಜನರು ಹೀರವವರು ಎನ್ನುವುದರ ಮೇಲೆ ಅವಲಂಬಿಸಿಲಾಗಿದೆ. ಈ ಗಾಳಿಯನ್ನು ಸೇವಿಸಲು ಬೇಕಾದ ತಂತ್ರಜ್ಞಾನದ ಅಭಿವೃದ್ಧಿಯೂ ಕಾಣಿಸಿಕೊಳ್ಳುತ್ತಿಲ್ಲ.

ಹಾಗಾಗಿ, ಈ 50% ನಮಗೆ ಒಪ್ಪಿಗೆಯಿಲ್ಲ – ಇದರ ಪರಿಣಾಮಗಳನ್ನು ಎದುರಿಸಬೇಕಾದ ನಮಗೆ ಒಪ್ಪಿಗೆಯಿಲ್ಲ.

ಜಾಗತಿಕ ತಾಪಮಾನದಲ್ಲಿ 1.5 ಡಿಗ್ರಿ ಹೆಚ್ಚಳಕ್ಕಿಂತ ಕೆಳಗಿರಬೇಕಾದ 67% ಅವಕಾಶವನ್ನು ಹೊಂದಬೇಕಾದರೆ, ಕ್ಲೈಮೇಟ್ ಚೇಂಜ್‍ನ ಅಂತತರಾಷ್ಟ್ರೀಯ ಪ್ಯಾನೆಲ್ ನೀಡಿದ ಅತಿ ಹೆಚ್ಚಿನ ಸಂಭವನೀಯತೆ – ಇಡೀ ವಿಶ್ವವು ಹೊರಸೂಸಲು 1ನೇ ಜನವರಿ 2018ರಂದು ಕಾರ್ಬನ್ ಡೈಆಕ್ಸೈಡ್ ನ 420 ಗಿಗಾಟನ್ ಹೊಂದಿತ್ತು. ಇಂದು ಆ ಸಂಖ್ಯಯೂ ಈಗಾಗಲೇ 350 ಗಿಗಾಟನ್‍ಗಳಗಿಂತ ಕಡಿಮೆಯಾಗಿದೆ.

ಕೆಲವು ತಾಂತ್ರಿಕ ಪರಿಹಾರಗಳಿಂದ ಮತ್ತು ‘ಎಂದಿನಂತೆ ನಡೆಯುವ ವ್ಯವಹಾರ’ದಿಂದ ಇದನ್ನು ಬಗೆಹರಿಸಬಹುದು ಎಂದು ನಟಿಸಲು ನಿಮಗೆಷ್ಟು ಧೈರ್ಯ? ಇಂದಿನ ಹೊರಸೂಸುವಿಕೆಯ ಲೆವೆಲ್ ನೋಡಿದರೆ, ಈಗ ಬಾಕಿ ಉಳಿದಿರುವ ಕಾರ್ಬನ್ ಡೈಆಕ್ಸೈಡ್ ಬಜೆಟ್ ಕೇವಲ ಎಂಟೂವರೆ ವರ್ಷಗಳಲ್ಲಿ ಮುಗಿದುಹೋಗುವುದು.

ಈ ಅಂಕಿ ಅಂಶಗಳಿಗೆ ಪೂರಕವಾಗಿ ಯಾವುದೇ ಪರಿಹಾರಗಳು ಅಥವಾ ಯೋಜನೆಗಳು ಇಂದು ಕಾಣಿಸಿಕೊಳ್ಳುವುದಿಲ್ಲ, ಏಕೆಂದರೆ, ಈ ಅಂಕಿಅಂಶಗಳು ತುಂಬಾ ಅನಾನುಕೂಲಕರವಾಗಿವೆ. ಹಾಗೂ ನೀವುಗಳು ಇದನ್ನು ಹೀಗೆಯೇ ಇದೆ ಎಂದು ಹೇಳಿಕೊಳ್ಳುವಷ್ಟು ಪ್ರಬುದ್ಧರಾಗಿಲ್ಲ.

ನೀವು ನಮ್ಮನ್ನು ವಿಫಲಗೊಳಿಸುತ್ತಿದ್ದೀರಿ. ಆದರೆ ಯುವಜನರು ನಿಮ್ಮ ದ್ರೋಹವನ್ನು ಅರಿಯಲು ಪ್ರಾರಂಭಿಸಿದ್ದಾರೆ. ಮುಂದಿನ ಪೀಳಿಗೆಗಳ ಎಲ್ಲಾ ಕಣ್ಣುಗಳು ನಿಮ್ಮ ಮೇಲಿವೆ. ಒಂದು ವೇಳೆ ನೀವು ನಮ್ಮನ್ನು ವಿಫಲಗೊಳಿಸುವುದನ್ನು ಆಯ್ಕೆ ಮಾಡಿಕೊಂಡರೆ, ನಾವು ನಿಮ್ಮನ್ನು ಎಂದೆಂದಿಗೂ ಕ್ಷಮಿಸಲಾರೆವು.

ಇದರಿಂದ ತಪ್ಪಿಸಿಕೊಳ್ಳಲು ನಿಮ್ಮನ್ನು ಬಿಡುವುದಿಲ್ಲ. ಇಲ್ಲಿಯೇ, ಇದೇ ಸಮಯದಲ್ಲಿ ನಾವು ಗೆರೆಯನ್ನು ಎಳೆಯುತ್ತಿದ್ದೇವೆ. ಜಗತ್ತು ಎಚ್ಚೆತ್ತುಕೊಳ್ಳುತ್ತಿದೆ. ಬದಲಾವಣೆ ಬರುತ್ತಿದೆ, ನಿಮಗಿಷ್ಟವಾಗಲಿ ಆಗದೇ ಇರಲಿ ಬದಲಾವಣೆ ಬರುತ್ತಿದೆ…

ಧನ್ಯವಾದಗಳು…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...