Homeಅಂತರಾಷ್ಟ್ರೀಯವಿಶ್ವಸಂಸ್ಥೆಯಲ್ಲಿ ಹವಾಮಾನ ವೈಪರೀತ್ಯದ ಕುರಿತು 16ರ ಬಾಲೆ ಗ್ರೇಟಾ ತನ್ಬೆರ್ಗ್‌ ಮಾಡಿದ ಭಾಷಣ..

ವಿಶ್ವಸಂಸ್ಥೆಯಲ್ಲಿ ಹವಾಮಾನ ವೈಪರೀತ್ಯದ ಕುರಿತು 16ರ ಬಾಲೆ ಗ್ರೇಟಾ ತನ್ಬೆರ್ಗ್‌ ಮಾಡಿದ ಭಾಷಣ..

ನೀವು ನಮ್ಮನ್ನು ವಿಫಲಗೊಳಿಸುತ್ತಿದ್ದೀರಿ. ಆದರೆ ಯುವಜನರು ನಿಮ್ಮ ದ್ರೋಹವನ್ನು ಅರಿಯಲು ಪ್ರಾರಂಭಿಸಿದ್ದಾರೆ. ಮುಂದಿನ ಪೀಳಿಗೆಗಳ ಎಲ್ಲಾ ಕಣ್ಣುಗಳು ನಿಮ್ಮ ಮೇಲಿವೆ. ಒಂದು ವೇಳೆ ನೀವು ನಮ್ಮನ್ನು ವಿಫಲಗೊಳಿಸುವುದನ್ನು ಆಯ್ಕೆ ಮಾಡಿಕೊಂಡರೆ, ನಾವು ನಿಮ್ಮನ್ನು ಎಂದೆಂದಿಗೂ ಕ್ಷಮಿಸಲಾರೆವು.

- Advertisement -
- Advertisement -

ನಿಮ್ಮನ್ನು ಸತತವಾಗಿ ಗಮನಿಸುವೆ; ಇದುವೆ ನನ್ನ ಸಂದೇಶ : ಗ್ರೇಟಾ ತನ್ಬೆರ್ಗ್‌

ಕನ್ನಡಕ್ಕೆ: ರಾಜಶೇಖರ್ ಅಕ್ಕಿ

ಇದು ತಪ್ಪು. ನಾನಿಲ್ಲಿ ಇರಬಾರದಾಗಿತ್ತು. ನಾನೀಗ ನನ್ನ ಶಾಲೆಯಲ್ಲಿ, ಸಾಗರದಾಚೆ ಇರಬೇಕಿತ್ತು. ಆದರೂ ನೀವು ನಮ್ಮ ಕಡೆ, ಯುವಜನರ ಕಡೆ ಬರುತ್ತೀರ, ನಿಮ್ಮ ಭರವಸೆ, ನಿರೀಕ್ಷೆಗಳನ್ನು ಹುಡುಕಿಕೊಂಡು. ನಿಮಗೆಷ್ಟು ಧೈರ್ಯ?

ನೀವು ನಿಮ್ಮ ಖಾಲಿ ಮಾತುಗಳಿಂದ ನನ್ನ ಕನಸುಗಳನ್ನು ಹಾಗೂ ನನ್ನ ಬಾಲ್ಯವನ್ನು ನನ್ನಿಂದ ಕದ್ದಿದ್ದೀರ. ಆದರೂ ನಾನು ಅದೃಷ್ಟವಂತೆ. ಆದರೆ ಜನರು ನರಳುತ್ತಿದ್ದಾರೆ. ಜನರು ಸಾಯುತ್ತಿದ್ದಾರೆ. ಪರಿಸರ ವ್ಯವಸ್ಥೆಯು ಸಂಪೂರ್ಣವಾಗಿ ನಾಶವಾಗುತ್ತಿದೆ. ಒಂದು ಸಾಮೂಹಿಕ ಅಳಿವಿನ ಪ್ರಾರಂಭದ ಘಟ್ಟದಲ್ಲಿದ್ದೇವೆ. ಹಾಗೂ ಇಂಥ ಸಮಯದಲ್ಲಿ ನೀವು ದುಡ್ಡು ಮತ್ತು ಆರ್ಥಿಕ ಬೆಳವಣಿಗೆಯ ಚೆಂದದ ಕಥೆಗಳ ಬಗ್ಗೆಯೇ ಮಾತನಾಡುತ್ತೀರಿ. ನಿಮಗೆಷ್ಟು ಧೈರ್ಯ?

ಮೂವತ್ತು ವರ್ಷಗಳಗಿಂದ ವಿಜ್ಞಾನವು ಸ್ಪಷ್ಟವಾಗಿ ಹೇಳುತ್ತಲಿದೆ. ಆದರೂ ನಿಮ್ಮ ಮುಖವನ್ನು ಬೇರೆಡೆ ತಿರುಗಿಸಲು ನಿಮಗೆಷ್ಟು ಧೈರ್ಯ? ಹಾಗೂ ಈ ಸಮಸ್ಯೆಯ ಪರಿಹಾರ ಮತ್ತು ಇದಕ್ಕೆ ಬೇಕಿರುವ ರಾಜಕೀಯ ಕಾಣಿಸಿಕೊಳ್ಳದೇ ಇದ್ದರೂ ಇಲ್ಲಿ ಬಂದು, ನಾವು ಮಾಡಬೇಕಾದದ್ದನ್ನು ಮಾಡುತ್ತಿದ್ದೇವೆ ಎಂದು ಹೇಳಲು ನಿಮಗೆಷ್ಟು ಧೈರ್ಯ?

ನಮ್ಮ ಮಾತುಗಳನ್ನು ಕೇಳಿಸಿಕೊಳ್ಳುತ್ತೀರಿ ಮತ್ತು ಇದರ ತುರ್ತನ್ನು ಅರ್ಥಮಾಡಿಕೊಳ್ಳುತ್ತೀರಿ ಎಂದು ನೀವು ಹೇಳುತ್ತೀರಿ. ಆದರೆ, ನಾನೆಷ್ಟೇ ಸಿಟ್ಟಿನಲ್ಲಿರಲಿ ಮತ್ತು ದುಃಖದಲ್ಲಿರಲಿ, ನಿಮ್ಮ ಈ ಮಾತುಗಳನ್ನು ನಂಬಲು ಸಾಧ್ಯವಿಲ್ಲ. ಏಕೆಂದರೆ, ಒಂದು ವೇಳೆ ನೀವು ಪರಿಸ್ಥಿತಿಯನ್ನು ನಿಜವಾಗಿಯೂ ಅರ್ಥಮಾಡಿಕೊಂಡು ಇದರ ಬಗ್ಗೆ ಕ್ರಮ ತೆಗೆದುಕೊಳ್ಳಲು ವಿಫಲವಾಗುತ್ತಿದ್ದರೆ, ನೀವು ದುಷ್ಟರು ಎಂತಾಗುವುದು. ಹಾಗೂ ನಾನು ಇದನ್ನು ನಂಬಲು ತಯಾರಿಲ್ಲ.

ಹತ್ತು ವರ್ಷಗಳಲ್ಲಿ ಹೊರಸೂಸುವಿಕೆಯನ್ನು (ಎಮಿಷನ್ಸ್) ಅರ್ಧದಷ್ಟು ಕಡಿತಗೊಳಿಸುವ ಈ ಜನಪ್ರಿಯ ಪರಿಕಲ್ಪನೆ ಏನು ಮಾಡಬಲ್ಲದು ಗೊತ್ತೆ? ಇದು 1.5 ಡಿಗ್ರಿಗಿಂತ ಕಡಿಮೆ ಇರಲು ಕೇವಲ 50% ಅವಕಾಶವನ್ನು ನೀಡುತ್ತದೆ ಹಾಗೂ ಮನುಷ್ಯನ ನಿಯಂತ್ರಣವನ್ನು ಮೀರಿದ ಮತ್ತೇ ಬದಲಾಯಿಸಲಾಗದಂತಹ ಸರಣಿ ಪ್ರತಿಕ್ರಿಯೆಗಳನ್ನು ಪ್ರಾರಂಭಿಸುವ ಅಪಾಯ ಹೊಂದಿದೆ.

50% ನಿಮಗೆ ಒಪ್ಪಿಗೆ ಇರಬಹುದು. ಆದರೆ, ಈ ಸಂಖ್ಯೆಗಳು ನಿರ್ಣಾಯಕ ಹಂತಗಳನ್ನು (ಟಿಪಿಂಗ್ ಪಾಯಿಂಟ್ಸ್), ಹೆಚ್ಚಿನ ಫೀಡ್‍ಬ್ಯಾಕ್ ಲೂಪ್ಸ್, ವಾಯು ಮಾಲಿನ್ಯದಿಂದ ಕಾಣಿಸಿಕೊಳ್ಳದ ತಾಪಮಾನದ ಹೆಚ್ಚುವರಿ ಏರಿಕೆ ಅಥವಾ ಹವಾಮಾನದ ನ್ಯಾಯದ ಅಂಶಗಳನ್ನು ಹೊಂದಿಲ್ಲ. ಇದರೊಂದಿಗೆ, ಗಾಳಿಯಲ್ಲಿರುವ ಶತಕೋಟಿ ಟನ್‍ಗಳಷ್ಟಿರುವ ನಿಮ್ಮ ಕಾರ್ಬನ್ ಡೈಆಕ್ಸೈಡ್ ಅನ್ನು ನಮ್ಮ ಪೀಳಿಗೆಯ ಜನರು ಹೀರವವರು ಎನ್ನುವುದರ ಮೇಲೆ ಅವಲಂಬಿಸಿಲಾಗಿದೆ. ಈ ಗಾಳಿಯನ್ನು ಸೇವಿಸಲು ಬೇಕಾದ ತಂತ್ರಜ್ಞಾನದ ಅಭಿವೃದ್ಧಿಯೂ ಕಾಣಿಸಿಕೊಳ್ಳುತ್ತಿಲ್ಲ.

ಹಾಗಾಗಿ, ಈ 50% ನಮಗೆ ಒಪ್ಪಿಗೆಯಿಲ್ಲ – ಇದರ ಪರಿಣಾಮಗಳನ್ನು ಎದುರಿಸಬೇಕಾದ ನಮಗೆ ಒಪ್ಪಿಗೆಯಿಲ್ಲ.

ಜಾಗತಿಕ ತಾಪಮಾನದಲ್ಲಿ 1.5 ಡಿಗ್ರಿ ಹೆಚ್ಚಳಕ್ಕಿಂತ ಕೆಳಗಿರಬೇಕಾದ 67% ಅವಕಾಶವನ್ನು ಹೊಂದಬೇಕಾದರೆ, ಕ್ಲೈಮೇಟ್ ಚೇಂಜ್‍ನ ಅಂತತರಾಷ್ಟ್ರೀಯ ಪ್ಯಾನೆಲ್ ನೀಡಿದ ಅತಿ ಹೆಚ್ಚಿನ ಸಂಭವನೀಯತೆ – ಇಡೀ ವಿಶ್ವವು ಹೊರಸೂಸಲು 1ನೇ ಜನವರಿ 2018ರಂದು ಕಾರ್ಬನ್ ಡೈಆಕ್ಸೈಡ್ ನ 420 ಗಿಗಾಟನ್ ಹೊಂದಿತ್ತು. ಇಂದು ಆ ಸಂಖ್ಯಯೂ ಈಗಾಗಲೇ 350 ಗಿಗಾಟನ್‍ಗಳಗಿಂತ ಕಡಿಮೆಯಾಗಿದೆ.

ಕೆಲವು ತಾಂತ್ರಿಕ ಪರಿಹಾರಗಳಿಂದ ಮತ್ತು ‘ಎಂದಿನಂತೆ ನಡೆಯುವ ವ್ಯವಹಾರ’ದಿಂದ ಇದನ್ನು ಬಗೆಹರಿಸಬಹುದು ಎಂದು ನಟಿಸಲು ನಿಮಗೆಷ್ಟು ಧೈರ್ಯ? ಇಂದಿನ ಹೊರಸೂಸುವಿಕೆಯ ಲೆವೆಲ್ ನೋಡಿದರೆ, ಈಗ ಬಾಕಿ ಉಳಿದಿರುವ ಕಾರ್ಬನ್ ಡೈಆಕ್ಸೈಡ್ ಬಜೆಟ್ ಕೇವಲ ಎಂಟೂವರೆ ವರ್ಷಗಳಲ್ಲಿ ಮುಗಿದುಹೋಗುವುದು.

ಈ ಅಂಕಿ ಅಂಶಗಳಿಗೆ ಪೂರಕವಾಗಿ ಯಾವುದೇ ಪರಿಹಾರಗಳು ಅಥವಾ ಯೋಜನೆಗಳು ಇಂದು ಕಾಣಿಸಿಕೊಳ್ಳುವುದಿಲ್ಲ, ಏಕೆಂದರೆ, ಈ ಅಂಕಿಅಂಶಗಳು ತುಂಬಾ ಅನಾನುಕೂಲಕರವಾಗಿವೆ. ಹಾಗೂ ನೀವುಗಳು ಇದನ್ನು ಹೀಗೆಯೇ ಇದೆ ಎಂದು ಹೇಳಿಕೊಳ್ಳುವಷ್ಟು ಪ್ರಬುದ್ಧರಾಗಿಲ್ಲ.

ನೀವು ನಮ್ಮನ್ನು ವಿಫಲಗೊಳಿಸುತ್ತಿದ್ದೀರಿ. ಆದರೆ ಯುವಜನರು ನಿಮ್ಮ ದ್ರೋಹವನ್ನು ಅರಿಯಲು ಪ್ರಾರಂಭಿಸಿದ್ದಾರೆ. ಮುಂದಿನ ಪೀಳಿಗೆಗಳ ಎಲ್ಲಾ ಕಣ್ಣುಗಳು ನಿಮ್ಮ ಮೇಲಿವೆ. ಒಂದು ವೇಳೆ ನೀವು ನಮ್ಮನ್ನು ವಿಫಲಗೊಳಿಸುವುದನ್ನು ಆಯ್ಕೆ ಮಾಡಿಕೊಂಡರೆ, ನಾವು ನಿಮ್ಮನ್ನು ಎಂದೆಂದಿಗೂ ಕ್ಷಮಿಸಲಾರೆವು.

ಇದರಿಂದ ತಪ್ಪಿಸಿಕೊಳ್ಳಲು ನಿಮ್ಮನ್ನು ಬಿಡುವುದಿಲ್ಲ. ಇಲ್ಲಿಯೇ, ಇದೇ ಸಮಯದಲ್ಲಿ ನಾವು ಗೆರೆಯನ್ನು ಎಳೆಯುತ್ತಿದ್ದೇವೆ. ಜಗತ್ತು ಎಚ್ಚೆತ್ತುಕೊಳ್ಳುತ್ತಿದೆ. ಬದಲಾವಣೆ ಬರುತ್ತಿದೆ, ನಿಮಗಿಷ್ಟವಾಗಲಿ ಆಗದೇ ಇರಲಿ ಬದಲಾವಣೆ ಬರುತ್ತಿದೆ…

ಧನ್ಯವಾದಗಳು…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...