Homeಮುಖಪುಟಹಲ್ದ್ವಾನಿ ಹಿಂಸಾಚಾರ: ಲೋಪಗಳನ್ನು ಬಿಚ್ಚಿಟ್ಟ ಸತ್ಯಶೋಧನಾ ವರದಿ...

ಹಲ್ದ್ವಾನಿ ಹಿಂಸಾಚಾರ: ಲೋಪಗಳನ್ನು ಬಿಚ್ಚಿಟ್ಟ ಸತ್ಯಶೋಧನಾ ವರದಿ…

- Advertisement -
- Advertisement -

ಬಿಜೆಪಿ ಆಡಳಿತದ ಉತ್ತರಾಖಂಡದ ಹಲ್ದ್ವಾನಿಯಲ್ಲಿ ಮರ್ಯಮ್ ಮಸೀದಿ ಮತ್ತು ಅಬ್ದುಲ್ ರಝಾಕ್ ಝಕರಿಯಾ ಮದರಸಾವನ್ನು ಧ್ವಂಸಗೊಳಿಸಿದ ನಂತರ ಉದ್ವಿಗ್ನತೆ ಉಂಟಾಗಿ ಒಂದು ವಾರ ಕಳೆದಿದೆ. ಇದೀಗ ಈ ಕುರಿತ ಸತ್ಯಶೋಧನಾ ವರದಿಯು ಹಿಂಸಾಚಾರ ಹೇಗೆ ಭುಗಿಲೆದ್ದಿತು ಮತ್ತು ನಡೆದ ಲೋಪಗಳ ಬಗ್ಗೆ ಬೆಳಕು ಚೆಲ್ಲಿದೆ.

ಅಸೋಸಿಯೇಷನ್ ಫಾರ್ ಪ್ರೊಟೆಕ್ಷನ್ ಆಫ್ ಸಿವಿಲ್ ರೈಟ್ಸ್ (APCR)  ‘Bulldozing Peace: State Violence and Apathy in Muslim Settlements of Haldwani’ (ಬುಲ್ಡೋಜಿಂಗ್ ಪೀಸ್:  ಹ ಸ್ಟೇಟ್ ವಯಲೆನ್ಸ್ ಆ್ಯಂಡ್ ಅಪಾಥಿ ಇನ್ ಮುಸ್ಲಿಂ ಸೆಟ್ಲಮೆಂಟ್ಸ್ ಆಫ್ ಹಲ್ದ್ವಾನಿ)’ ಎಂಬ ಶೀರ್ಷಿಕೆಯಡಿಯಲ್ಲಿ ಸತ್ಯಶೋಧನಾ ವರದಿಯನ್ನು ಬಿಡುಗಡೆ ಮಾಡಿದೆ.

ಸತ್ಯಶೋಧನಾ ತಂಡದಲ್ಲಿ ಅಸೋಸಿಯೇಷನ್ ಫಾರ್ ಪ್ರೊಟೆಕ್ಷನ್ ಆಫ್ ಸಿವಿಲ್ ರೈಟ್ಸ್‌ನ ನದೀಮ್ ಖಾನ್ ಮತ್ತು ಮೊಹಮ್ಮದ್ ಮೊಬಾಶ್ಶಿರ್ ಅನೀಕ್, ಕರವಾನ್-ಎ-ಮೊಹಬ್ಬತ್‌ನ ಹರ್ಷ್ ಮಂದರ್, ನವಶರಣ್ ಸಿಂಗ್, ಅಶೋಕ್ ಶರ್ಮಾ, ಕುಮಾರ್ ನಿಖಿಲ್ ಮತ್ತು ನಾಗರಿಕ ಹಕ್ಕುಗಳ ಕಾರ್ಯಕರ್ತ ಜಾಹಿದ್ ಖಾದ್ರಿ ಇದ್ದರು.

ಹಲ್ದ್ವಾನಿ ಹಿಂಸಾಚಾರದಲ್ಲಿ ಚಾಲಕ ಫಹೀಮ್ ಹಾದಿ ಮತ್ತು ತಂದೆ-ಮಗ ಮೊಹಮ್ಮದ್ ಜಾಹಿದ್ ಮತ್ತು ಅನಾಸ್ ಸೇರಿದಂತೆ ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ. ಘಟನೆಯ ನಂತರ ಸುಮಾರು 300 ಮನೆಗಳು ಪೊಲೀಸ್ ದಬ್ಬಾಳಿಕೆಯನ್ನು ಎದುರಿಸಿದವು, ಪೊಲೀಸರು ಮುಸ್ಲಿಮರ ಮನೆಗಳಿಗೆ ನುಗ್ಗಿ ವಸ್ತುಗಳನ್ನು ಹಾನಿಗೊಳಿಸಿದ್ದಾರೆ, ಮನೆಯಲ್ಲಿದ್ದವರ ಮೇಲೆ ದೌರ್ಜನ್ಯ ನಡೆಸಿದ್ದಾರೆ, ಹಲವರನ್ನು  ಬಂಧಿಸಿದ್ದಾರೆ.

ದಿ ಕ್ವಿಂಟ್‌ ವರದಿಯ ಪ್ರಕಾರ, ಅಧಿಕೃತ ಮಾಹಿತಿಯಲ್ಲಿ ಕೇವಲ 30-36 ಜನರನ್ನು ಮಾತ್ರ ಬಂಧಿಸಲಾಗಿದೆ ಎಂದು ಹೇಳುತ್ತದೆ, ಆದರೆ ಸತ್ಯವು ವಿಭಿನ್ನವಾಗಿದೆ. ಪೊಲೀಸರು ಚಿತ್ರಹಿಂಸೆ ಕೊಠಡಿಗಳನ್ನು ಹೋಲುವ ರೀತಿಯ ಬಂಧನ ಕೇಂದ್ರಗಳನ್ನು ಸ್ಥಾಪಿಸಿದ್ದಾರೆ, ಅಲ್ಲಿ ವಿವಿಧ ಕಾರಣಗಳಿಗಾಗಿ ಬೇರೆ ನಗರಗಳಿಂದ ಬಂಧಿತರಿದ್ದರು ಎಂದು ವರದಿಯು ಉಲ್ಲೇಖಿಸಿದೆ.

ಪ್ರೆಸ್ ಕ್ಲಬ್ ಆಫ್ ಇಂಡಿಯಾದ ಜೊತೆ ಮಾತನಾಡಿದ ನದೀಮ್ ಖಾನ್, ಬಂಧನಕ್ಕಿಂತ ಹೆಚ್ಚು ಜನರನ್ನು ವಶಕ್ಕೆ ತೆಗೆದುಕೊಳ್ಳಲಾಗಿತ್ತು. ಸ್ಥಳೀಯ ಮೂಲಗಳ ಪ್ರಕಾರ 15 ಕಿ.ಮೀ. ದೂರದಲ್ಲಿರುವ ಶಾಲೆಯೊಂದನ್ನು ಬಂಧನ ಕೇಂದ್ರವಾಗಿ ಬಳಸಲಾಗಿತ್ತು. ಹಿಂಸಾಚಾರದಲ್ಲಿ 5,000ಕ್ಕೂ ಅಧಿಕ ಜನರು ಭಾಗಿಯಾಗಿದ್ದಾರೆ ಎಂದು ಸ್ಥಳೀಯರು ನಮಗೆ ತಿಳಿಸಿದ್ದಾರೆ. ಆದರೆ ವೀಡಿಯೊ ಮಾದರಿಗಳು ಅವರಿಗೆ ಹೋಲಿಕೆ ಮಾಡಲು ಸಾಧ್ಯವಾಗಿಲ್ಲ. ಯಾಕೆಂದರೆ ಆರೋಪಿಗಳು ಸ್ಥಳೀಯರು ಅಲ್ಲದಿರಬಹುದು ಎಂದು ಹೇಳಿದ್ದಾರೆ.

ದಿ ಕ್ವಿಂಟ್‌ನೊಂದಿಗೆ ಮಾತನಾಡಿದ ಹಲ್ದ್ವಾನಿ ಪೊಲೀಸರ ಸಾರ್ವಜನಿಕ ಸಂಪರ್ಕ ಅಧಿಕಾರಿ ದಿನೇಶ್ ಜೋಶಿ,  ಬಂಧನ ಕೇಂದ್ರ ಸ್ಥಾಪಿಸಿರುವ ಕುರಿತ ಆರೋಪಗಳನ್ನು ನಿರಾಕರಿಸಿದ್ದಾರೆ. ಇಲ್ಲಿ ಅಂತಹ ಯಾವುದೇ ಬಂಧನ ಕೇಂದ್ರವಿಲ್ಲ. ಶಾಲೆಯು ಎಂದಿನಂತೆ ಕಾರ್ಯನಿರ್ವಹಿಸುತ್ತಿದೆ. ಬೋರ್ಡ್ ಪರೀಕ್ಷೆಗಳು ನಡೆಯುತ್ತಿದೆ ಎಂದು ಹೇಳಿದ್ದಾರೆ.

ತಂಡದ ವರದಿಯ ಪ್ರಕಾದ, ಹಲ್ದ್ವಾನಿ ಘಟನೆಯು ಉತ್ತರಾಖಂಡವನ್ನು ದೇವಭೂಮಿಯಾಗಿ ಅಂದರೆ ಹಿಂದೂಗಳ ಪವಿತ್ರ ಭೂಮಿಯಾಗಿ ರಚಿಸುವ ಕಲ್ಪನೆಯೊಂದಿಗೆ ಆಳವಾಗಿ ಸಂಬಂಧ ಹೊಂದಿದೆ, ಅದು ಇತರ ಧಾರ್ಮಿಕ ಅಲ್ಪಸಂಖ್ಯಾತರಿಗೆ ಅಲ್ಲಿ ಅವಕಾಶವನ್ನು ನಿರಾಕರಿಸುತ್ತದೆ. ಅರಣ್ಯ ಭೂಮಿಯಲ್ಲಿ ಅನಧಿಕೃತ ಹಿಂದೂ ಧಾರ್ಮಿಕ ರಚನೆಗಳ ಬಗ್ಗೆ ಮೌನವಾಗಿರುವ ಉತ್ತರಖಂಡ ಸರಕಾರ, ರಾಜ್ಯದಲ್ಲಿ 3000 ಮಜಾರ್‌ಗಳನ್ನು ಅಕ್ರಮದ ಹಣೆಪಟ್ಟಿಯಲ್ಲಿ ಧ್ವಂಸ ಮಾಡಿ ತಮ್ಮ ಸರ್ಕಾರದ ಸಾಧನೆ ಎಂದು ಘೋಷಿಸಿದ ಮುಖ್ಯಮಂತ್ರಿಯ ಹೇಳಿಕೆಯು ಇದನ್ನು ಪ್ರತಿನಿಧಿಸುತ್ತದೆ ಎಂದು ವರದಿಯು ಉಲ್ಲೇಖಿಸಿದೆ.

ಸಾವಿನ ಸಂಖ್ಯೆಯಿಂದ ಹಿಡಿದು ಕಂಡಲ್ಲಿ ಗುಂಡು ಆದೇಶದವರೆಗಿನ ನಡೆಯು ಸಂಶಯಾಸ್ಪದವಾಗಿದೆ. ಹಿಂಸಾಚಾರವು 7 ವ್ಯಕ್ತಿಗಳ ಸಾವಿಗೆ ಕಾರಣವಾಯಿತು. ಇದುವರೆಗೆ 31 ಜನರನ್ನು ಬಂಧಿಸಲಾಗಿದೆ ಮತ್ತು 90ಕ್ಕೂ ಹೆಚ್ಚು ಜನರನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ. 5,000 ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಸಾವಿನ ಸಂಖ್ಯೆ 20ಕ್ಕಿಂತ ಹೆಚ್ಚಿದೆ ಎಂದು ಸ್ಥಳೀಯರು ಹೇಳಿಕೊಳ್ಳುತ್ತಾರೆ ಎಂದು ವರದಿಯು ಉಲ್ಲೇಖಿಸಿದೆ.

ಹಿಂಸಾಚಾರದ ಕುರಿತು ಮಾತನಾಡಿದ ನದೀಮ್, ಘಟನೆಯನ್ನು ಪರಿಶೀಲಿಸಲು ಸಮಿತಿಯನ್ನು ರಚಿಸಲಾಗಿದೆ, ಸಮಿತಿಯ ಸದಸ್ಯರು ಪೊಲೀಸ್ ಅಧಿಕಾರಿಗಳನ್ನು ಒಳಗೊಂಡಿರುತ್ತಾರೆ. ಪೊಲೀಸ್ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಹಿಂಸಾಚಾರದ ವೇಳೆ ತೆಗೆದುಕೊಂಡ ಕ್ರಮಗಳನ್ನು ತನಿಖೆ ಮಾಡುತ್ತಾರೆ ಎಂದು ಹೇಳಿದ್ದಾರೆ.

ಲವ್ ಜಿಹಾದ್, ಭೂಮಿ ಜಿಹಾದ್, ವ್ಯಾಪಾರಿ ಜಿಹಾದ್ ಹಾಗೂ ಮಝಾರ್ ಜಿಹಾದ್‌ನಂತಹ ಆಧಾರವಿಲ್ಲದ ಪ್ರತಿಪಾದನೆಗಳು ಹಾಗೂ ಅಲ್ಪಸಂಖ್ಯಾತರ ಮೇಲಿನ ಆರ್ಥಿಕ ಹಾಗೂ ಸಾಮಾಜಿಕ ಬಹಿಷ್ಕಾರದ ಕರೆಗಳು ಅಶಾಂತಿ ಉಲ್ಬಣಿಸುವಲ್ಲಿ ಪ್ರಮುಖ ಪಾತ್ರ ವಹಿಸಿವೆ ಎಂದು ಸತ್ಯಶೋಧನಾ ವರದಿ ಹೇಳಿದೆ. ಸ್ಥಳೀಯ ಮುಸ್ಲಿಂ ಮಹಿಳೆಯರು ತೋರಿದ ಪ್ರತಿರೋಧವನ್ನು ಪೊಲೀಸರು ಪ್ರಶ್ನಿಸಿದ್ದಾರೆ, ಆದರೆ ಇದು ಇದ್ದಕ್ಕಿದ್ದಂತೆ ಅಲ್ಲ. ನಗರದಲ್ಲಿ ಸಿಎಎ ವಿರೋಧಿ ಆಂದೋಲನದ ಸಂದರ್ಭದಲ್ಲಿ ಸ್ಥಳೀಯ ಮಹಿಳೆಯರು ಕೂಡ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಅವರಿಗೂ ತಪ್ಪಾಗಿ ಥಳಿಸಲಾಗಿದೆ ಎಂದು ನದೀಮ್ ಹೇಳಿದ್ದಾರೆ.

ಉದ್ಭವಿಸಿದ ಪ್ರಶ್ನೆ: 

ಫೆಬ್ರುವರಿ 8ರಂದು ಮಸೀದಿ-ಮದರಸ ಕೆಡವುವ ಮುನ್ನ ಸಮುದಾಯದ ಮುಖಂಡರನ್ನು ಮಾತುಕತೆಗೆ ಕರೆಯಲಾಗಿತ್ತು ಆದರೆ ಸ್ವಿಚ್ ಆಫ್ ಆಗಿದ್ದರಿಂದ ಅವರ ಫೋನ್ ಸಂಪರ್ಕಕ್ಕೆ ಬರಲಿಲ್ಲ ಎಂದು ಜಿಲ್ಲಾಧಿಕಾರಿಗಳು ಹೇಳಿಕೆ ನೀಡಿದ್ದಾರೆ. ಆದರೆ, ಮುಸ್ಲಿಂ ಧರ್ಮಗುರುಗಳು ಮತ್ತು ಮುಖಂಡರು ಈ ಹೇಳಿಕೆಯನ್ನು ಅಲ್ಲಗಳೆದಿದ್ದಾರೆ. 80 ವ್ಯಕ್ತಿಗಳು ಒಂದೇ ಸಮಯದಲ್ಲಿ ತಮ್ಮ ಫೋನ್‌ಗಳನ್ನು ಆಫ್ ಮಾಡುವುದು ಹೇಗೆ ಸಾಧ್ಯ? ತಮ್ಮ ಹೇಳಿಕೆ ಬಗ್ಗೆ ಸಾಬೀತುಪಡಿಸಲು ಜಿಲ್ಲಾ ಮ್ಯಾಜಿಸ್ಟ್ರೇಟ್ ಅವರಿಗೆ ಆಗ್ರಹಿಸಿದ್ದಾರೆ.

ಫೆಬ್ರವರಿ 14ರಂದು ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಯಲಿದ್ದರೂ ಮಸೀದಿ ಮತ್ತು ಮದರಸಾವನ್ನು ಕೆಡವಲು ಆಡಳಿತವು ಏಕೆ ಆತುರ ತೋರಿತು?

ಮುಸ್ಲಿಮ್ ಸಮುದಾಯವು ಮಸೀದಿ ಸೀಲಿಂಗ್ ಸಮಯದಲ್ಲಿ ಸಹಕರಿಸಿದಾಗ ಎರಡನೇ ಬಾರಿಗೆ ಅವರನ್ನು ಏಕೆ ವಿಶ್ವಾಸಕ್ಕೆ ತೆಗೆದುಕೊಳ್ಳಲಿಲ್ಲ?

ಮುನ್ಸಿಪಲ್ ಕಮಿಷನರ್ ಪಂಕಜ್ ಉಪಾಧ್ಯಾಯ ಅವರಂತಹ ಆಕ್ಷೇಪಾರ್ಹ ವ್ಯಕ್ತಿಯನ್ನು ಮತ್ತೊಂದು ಕಚೇರಿಗೆ ವರ್ಗಾಯಿಸಿದ್ದರೂ ಈ ಸಂದರ್ಭಗಳನ್ನು ನಿರ್ವಹಿಸಲು ಅವರಿಗೆ ಏಕೆ ಅನುಮತಿಸಲಾಗಿದೆ?

ಉತ್ತರಾಂಚಲದ ದೀಪ್‌ನ ಪತ್ರಕರ್ತ ಸಲೀಂ ಖಾನ್ ಅವರ ಮನೆಗೆ ಪೊಲೀಸರು ನುಗ್ಗಿದ್ದಾರೆ. ಅವರ ಪತ್ನಿ ಮಕ್ಕಳು ಮೇಲೆ ಹಲ್ಲೆ ನಡೆಸಿದ್ದಾರೆ. ಕರ್ಫ್ಯ್ಯೂ ಹಾಗೂ ಕಂಡಲ್ಲಿ ಗುಂಡು ಹಾರಿಸುವ ಆದೇಶ ಜಾರಿಯಲ್ಲಿರುವಾಗ ಪರಿಸ್ಥಿತಿ ಶಾಂತಿಯುತವಾಗಿದೆ ಎಂದು ಸರಕಾರ ಹೇಗೆ ಹೇಳಿತು?

ಅಚ್ಚರಿ ಎಂದರೆ ಮುಸ್ಲಿಂ ಮನೆಯೊಂದರಲ್ಲಿ ವಿವಾಹ ಸಮಾರಂಭದ ಮೇಲೆ ದಾಳಿ ನಡೆಸಿದ ಗುಂಪು ಪೊಲೀಸ್ ಠಾಣೆಯ ಮೇಲೂ ದಾಳಿ ನಡೆಸಿದೆ. ಸ್ಥಳೀಯರು ಹಾಗೂ ಪೊಲೀಸರಿಗೆ ಅವರನ್ನು ಗುರುತಿಸಲು ಸಾಧ್ಯವಾಗಲಿಲ್ಲ. ಇದು ದಾಳಿಕೋರರು ಹೊರಗಿನವರು ಎಂದು ಸೂಚಿಸುತ್ತದೆ. ಗುಂಪು ಅಥವಾ ದಾಳಿಕೋರರು ಅಲ್ಪಸಂಖ್ಯಾತರು ಆಗಿದ್ದರೆ, ಅವರು ಅಲ್ಪಸಂಖ್ಯಾತರ ಮೇಲೆಯೇ ಯಾಕೆ ದಾಳಿ ನಡೆಸುತ್ತಿದ್ದರು?

ಇದಲ್ಲದೆ ಹಿಂಸಾಚಾರದ ಸಮಯದಲ್ಲಿ ಎರಡು ಗಂಟೆಗಳಲ್ಲಿ ಸುಮಾರು 1,000-2,000 ಸುತ್ತುಗಳಷ್ಟು ಗುಂಡು ಹಾರಿಸುವುದರೊಂದಿಗೆ ವಿವಿಧ ನಗರ ಪ್ರದೇಶಗಳಲ್ಲಿ ನಿರಂತರ ಪೊಲೀಸ್ ಫೈರಿಂಗ್ ಮಾಡಲಾಗಿದೆ. ಆದರೆ ಮಾಧ್ಯಮಗಳು ಕೇವಲ 350 ಸುತ್ತು ಗುಂಡು ಹಾರಿಸಿವೆ ಎಂದು ಹೇಳಿಕೊಂಡಿದೆ ಎಂದು ವರದಿಯು ಉಲ್ಲೇಖಿಸಿದೆ.

ಇದನ್ನು ಓದಿ: ಬಿಜೆಪಿಯ ಅನ್ವರ್ಥನಾಮ ‘ಸುಳ್ಳಿನ ಪಕ್ಷ’; ಅವರಿಗೆ ಪಾಠ ಕಲಿಸಲು ಕಾಂಗ್ರೆಸ್‌ ಬೆಂಬಲಿಸಿ: ಸಿದ್ದರಾಮಯ್ಯ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...