Homeಮುಖಪುಟಮಣಿಪುರ: ಸರಕಾರಿ ಕಚೇರಿಗಳನ್ನು ಬಲವಂತದಿಂದ ಬಂದ್‌ ಮಾಡಿಸುತ್ತಿರುವ ಕುಕಿ ಗುಂಪು

ಮಣಿಪುರ: ಸರಕಾರಿ ಕಚೇರಿಗಳನ್ನು ಬಲವಂತದಿಂದ ಬಂದ್‌ ಮಾಡಿಸುತ್ತಿರುವ ಕುಕಿ ಗುಂಪು

- Advertisement -
- Advertisement -

ಪೊಲೀಸ್ ಪೇದೆಯೊಬ್ಬರ ಅಮಾನತು ಹಿಂಪಡೆಯಲು ನೀಡಿದ ಗಡುವು ಅಂತ್ಯಗೊಂಡಿರುವುದರಿಂದ ಚುರಾಚಂದ್‌ಪುರ ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳನ್ನು ಇಂದಿನಿಂದ ಬಲವಂತವಾಗಿ ಬಂದ್‌ ಮಾಡಲಾಗುವುದು ಎಂದು ಸಂಘರ್ಷ ಪೀಡಿತ ಮಣಿಪುರದ ಸ್ಥಳೀಯ ಬುಡಕಟ್ಟು ನಾಯಕರ ವೇದಿಕೆ (ಐಟಿಎಲ್‌ಎಫ್) ಹೇಳಿಕೊಂಡಿದೆ.

ರಾಜ್ಯ ಗೃಹ ಇಲಾಖೆಯು ಎಲ್ಲಾ ಉದ್ಯೋಗಿಗಳಿಗೆ ಕುಕಿ ಸಂಘಟನೆಯ ಆದೇಶವನ್ನು ಅನುಸರಿಸದಂತೆ  ಕೇಳಿಕೊಂಡಿದೆ. ಕರ್ತವ್ಯಗಳಿಗೆ ಹಾಜರಾಗದವರ ವಿರುದ್ಧ “ನೋ ವರ್ಕ್‌ ನೋ ಪೇ” ಮಾನದಂಡಗಳನ್ನು ಜಾರಿಗೊಳಿಸಲಾಗುವುದು ಎಂದು ಹೇಳಿದೆ.

ITLF ಅಧ್ಯಕ್ಷ ಪಗಿನ್ ಹಾಕಿಪ್ ಮತ್ತು ಕಾರ್ಯದರ್ಶಿ ಹ್ಯೂಮನ್ ಟಾಂಬಿಂಗ್ ಈ ಕುರಿತು ಹೇಳಿಕೆಯನ್ನು ನೀಡಿದ್ದು, ಚುರಾಚಂದ್‌ಪುರ ಜಿಲ್ಲೆಯ ಎಲ್ಲಾ ಸರ್ಕಾರಿ ನೌಕರರು ಕಚೇರಿಗೆ ಹೋಗದಂತೆ ಕೇಳಿಕೊಂಡಿದ್ದಾರೆ. ಕಚೇರಿಯಲ್ಲಿ ಯಾರಾದರೂ ಕಂಡರೆ, ಏನಾದರೂ ಅನಾಹುತ ಸಂಭವಿಸಿದಲ್ಲಿ ಅವರೇ ಹೊಣೆಗಾರರು ಎಂದು ಹೇಳಿಕೊಂಡಿದ್ದರು.

ಕುಕಿ ಸಮುದಾಯಕ್ಕೆ ಸೇರಿದ ಕಾನ್‌ಸ್ಟೆಬಲ್ ಸಿಯಾಮ್‌ಲಾಲ್‌, ಶಸ್ತ್ರಧಾರಿ ಕುಕಿ ವ್ಯಕ್ತಿಯೊಂದಿಗೆ ಪೋಟೋ ತೆಗೆಸಿಕೊಂಡಿದ್ದರು ಎನ್ನಲಾಗಿದ್ದು, ಈ ಕಾರಣಕ್ಕೆ ಸಿಯಾಮ್‌ಲಾಲ್‌ ಅವರನ್ನು ಅಮಾನತು ಮಾಡಲಾಗಿತ್ತು. ಇದನ್ನು ಖಂಡಿಸಿ ಕುಕಿ ಸಮುದಾಯದವರು ಗುರುವಾರ ನಡೆಸಿದ್ದ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದ್ದು, ಈ ವೇಳೆ ಇಬ್ಬರ ಹತ್ಯೆ ನಡೆದಿದೆ.  ಇಬ್ಬರು ಕುಕಿಗಳ ಹತ್ಯೆಗೆ ಅವರನ್ನು ಹೊಣೆಗಾರರನ್ನಾಗಿ ಮಾಡಿ ಚುರಚಂದ್‌ಪುರವನ್ನು ತೊರೆಯಲು ಉಪ ಆಯುಕ್ತ ಎಸ್ ಧರುಣ್ ಕುಮಾರ್ ಮತ್ತು ಎಸ್‌ಪಿ ಶಿವಾನಂದ್ ಸುರ್ವೆ ಅವರಿಗೆ ಐಟಿಎಲ್‌ಎಫ್ ಶುಕ್ರವಾರ 24 ಗಂಟೆಗಳ ಗಡುವನ್ನು ನೀಡಿದೆ. ಪೇದೆಯನ್ನು ಅಮಾನತುಗೊಳಿಸಿದ ಆದೇಶ ಹಿಂಪಡೆಯದ ಕಾರಣ ಗುಂಪು ಡಿಸಿ ಮತ್ತು ಎಸ್ಪಿ ಕಚೇರಿಗೆ ನುಗ್ಗಿ ಬೆಂಕಿ ಹಚ್ಚಿತ್ತು.

ಸಶಸ್ತ್ರ ಮೈತೈ ಗುಂಪುಗಳೊಂದಿಗೆ ಛಾಯಾಚಿತ್ರಗಳನ್ನು ತೆಗೆಸಿಕೊಂಡಿರುವ ಅರಾಂಬೈ ಟೆಂಗೋಲ್‌ನಂತಹ ಮೈತೈ ಪೊಲೀಸ್ ಸಿಬ್ಬಂದಿ ವಿರುದ್ಧ ರಾಜ್ಯ ಸರ್ಕಾರವು ಕ್ರಮ ಕೈಗೊಂಡಿಲ್ಲ ಎಂದು ITLF ಆರೋಪಿಸಿದೆ. ಈ ಹಿಂದೆ ಘೋಷಿಸಿದಂತೆ, ಲಂಕಾ ಜಿಲ್ಲೆಯ ಎಲ್ಲಾ ರಾಜ್ಯ ಸರ್ಕಾರಿ ಕಚೇರಿಗಳನ್ನು ಸೋಮವಾರ ಮುಚ್ಚಲಾಗುವುದು ಎಂದು ಐಟಿಎಲ್ಎಫ್ ಹೇಳಿಕೆ ತಿಳಿಸಿದೆ. ಕುಕಿ ಗುಂಪುಗಳು ಚುರಾಚಂದ್‌ಪುರವನ್ನು ಲಮ್ಕಾ ಎಂದು ಮರುನಾಮಕರಣ ಮಾಡಿದ್ದಾರೆ. ಇದಲ್ಲದೆ ಹಣಕಾಸು, ವೈದ್ಯಕೀಯ ಮತ್ತು ಶೈಕ್ಷಣಿಕ ಸಂಸ್ಥೆಗಳಿಗೆ ಬಂದ್‌ನಿಂದ ವಿನಾಯಿತಿ ನೀಡಲಾಗುವುದು ಎಂದು ITLF ಹೇಳಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಮಣಿಪುರ ಸಿಎಂ ಎನ್ ಬಿರೇನ್ ಸಿಂಗ್, ಕಾನೂನು ಜಾರಿ ಸಂಸ್ಥೆಗಳು ಮತ್ತು ಸರ್ಕಾರಿ ಅಧಿಕಾರಿಗಳಿಗೆ ಬೆದರಿಕೆಗಳ ಬಗ್ಗೆ ಕಠಿಣವಾಗಿ ವ್ಯವಹರಿಸಲಾಗುವುದು ಮತ್ತು ರಾಜ್ಯ ಸರ್ಕಾರವು ಮೂಕ ಪ್ರೇಕ್ಷಕರಾಗಿ ಉಳಿಯುವುದಿಲ್ಲ ಎಂದು ಹೇಳಿದ್ದಾರೆ.

ಈ ಮಧ್ಯೆ, ಮಣಿಪುರದಲ್ಲಿ ನೆಲೆಸಿರುವ ಮ್ಯಾನ್ಮಾರ್‌ನಿಂದ ಬಂದ ಅಕ್ರಮ ಕುಕಿ ವಲಸಿಗರನ್ನು ರಕ್ಷಿಸಲು ಮತದಾರರ ಪಟ್ಟಿಯಂತಹ ದಾಖಲೆಗಳನ್ನು ನಾಶಪಡಿಸುವುದು ಕುಕಿಗಳ “ಹಿಡನ್ ಅಜೆಂಡಾ” ಎಂದು ಮೈತೈ ಸಂಘಟನೆ COCOMI ಹೇಳಿಕೊಂಡಿದೆ.

ಡಿಸಿ ಮತ್ತು ಎಸ್ಪಿ ಕಟ್ಟಡಗಳನ್ನು ಧ್ವಂಸದ ಹಿನ್ನೆಲೆ ಮಣಿಪುರ ಸರ್ಕಾರ ಭಾನುವಾರ ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಿಸಿದೆ. ತ್ರಿವರ್ಣ ಧ್ವಜವನ್ನು ಡಿಸಿ ಕಚೇರಿ ಕಟ್ಟಡದಿಂದ ಅನಧಿಕೃತವಾಗಿ ಹಾರಿಸಲಾಯಿತು ಮತ್ತು ವಿಧ್ವಂಸಕ ಕೃತ್ಯಗಳು, ಅಗ್ನಿಸ್ಪರ್ಶ ಸಂದರ್ಭದಲ್ಲಿ ಅವಮಾನಿಸಲಾಯಿತು. ಜಿಲ್ಲಾಧಿಕಾರಿ ಧರುಣ್ ಕುಮಾರ್   ಜೀವ ಮತ್ತು ಆಸ್ತಿ ನಷ್ಟಕ್ಕೆ ಕಾರಣವಾದ ಸಂದರ್ಭಗಳ ಬಗ್ಗೆ ತನಿಖೆ ನಡೆಸಲಿದ್ದಾರೆ ಎಂದು ರಾಜ್ಯ ಗೃಹ ಇಲಾಖೆ ಕಾರ್ಯದರ್ಶಿ ರಂಜನ್ ಯುಮ್ನಮ್ ಹೇಳಿದ್ದಾರೆ.

ಇದನ್ನು ಓದಿ: ಹಲ್ದ್ವಾನಿ ಹಿಂಸಾಚಾರ: ಲೋಪಗಳನ್ನು ಬಿಚ್ಚಿಟ್ಟ ಸತ್ಯಶೋಧನಾ ವರದಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...