Homeಮುಖಪುಟಡಿಜಿಟಲ್ ಡಾಟಾ ಪ್ರೊಟೆಕ್ಷನ್ ಆ್ಯಕ್ಟ್‌: ಪತ್ರಕರ್ತರಿಗೆ ವಿನಾಯಿತಿ ಬಗ್ಗೆ ಕೇಂದ್ರಕ್ಕೆ ಪತ್ರ ಬರೆದ ಎಡಿಟರ್ಸ್ ಗಿಲ್ಡ್

ಡಿಜಿಟಲ್ ಡಾಟಾ ಪ್ರೊಟೆಕ್ಷನ್ ಆ್ಯಕ್ಟ್‌: ಪತ್ರಕರ್ತರಿಗೆ ವಿನಾಯಿತಿ ಬಗ್ಗೆ ಕೇಂದ್ರಕ್ಕೆ ಪತ್ರ ಬರೆದ ಎಡಿಟರ್ಸ್ ಗಿಲ್ಡ್

- Advertisement -
- Advertisement -

ಡಿಜಿಟಲ್ ಪರ್ಸನಲ್ ಡಾಟಾ ಪ್ರೊಟೆಕ್ಷನ್ ಆ್ಯಕ್ಟ್‌ನಲ್ಲಿ ಪತ್ರಕರ್ತರಿಗೆ ವಿನಾಯಿತಿ ಇಲ್ಲದಿರುವುದು ದೇಶದಲ್ಲಿ ಪತ್ರಿಕೋದ್ಯಮವನ್ನು ಸ್ಥಗಿತಗೊಳಿಸುತ್ತದೆ ಎಂದು ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯಕ್ಕೆ ಬರೆದ ಪತ್ರದಲ್ಲಿ ತಿಳಿಸಿದೆ.

ಕೇಂದ್ರಕ್ಕೆ ಕಳುಹಿಸಿದ ಪತ್ರವನ್ನು ಭಾನುವಾರ ಗಿಲ್ಡ್ ಸಾರ್ವಜನಿಕಗೊಳಿಸಿದ್ದು, ಆಗಸ್ಟ್‌ನಲ್ಲಿ ಸಂಸತ್ತು ಅಂಗೀಕರಿಸಿದ ಕಾಯಿದೆಯು ನಾಗರಿಕರ ದತ್ತಾಂಶಗಳ ಸಂಗ್ರಹಣೆ ಮತ್ತು ಪ್ರಕ್ರಿಯೆಗೆ ಸಂಬಂಧಿಸಿ ಖಾಸಗಿ ಮತ್ತು ಸರ್ಕಾರಿ ಘಟಕಗಳ ಮೇಲೆ ನಿರ್ಬಂಧಗಳನ್ನು ವಿಧಿಸುತ್ತದೆ. ವ್ಯಕ್ತಿಗಳ ಡಿಜಿಟಲ್ ಡೇಟಾವನ್ನು ದುರುಪಯೋಗಪಡಿಸಿಕೊಳ್ಳುವ ಅಥವಾ ರಕ್ಷಿಸಲು ವಿಫಲವಾದ ಘಟಕಗಳ ಮೇಲೆ 250 ಕೋಟಿ ರೂಪಾಯಿಗಳವರೆಗೆ ದಂಡವನ್ನು ಇದು ಪ್ರಸ್ತಾಪಿಸುತ್ತದೆ.

ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ, ಈ ಕಾಯಿದೆಯಲ್ಲಿ ಪತ್ರಕರ್ತರಿಗೆ ವಿನಾಯಿತಿ ನೀಡದ ಕಾರಣ ಮತ್ತು ಪತ್ರಿಕೋದ್ಯಮ ಚಟುವಟಿಕೆಗಳ ಮೇಲೆ ಪರಿಣಾಮ ಬೀರುವ ನಿಬಂಧನೆಯ ಬಗ್ಗೆ ಕಳವಳ ವ್ಯಕ್ತಪಡಿಸಿದೆ. ನಿರ್ದಿಷ್ಟವಾಗಿ, ತಮ್ಮ ಪತ್ರಿಕೋದ್ಯಮ ಚಟುವಟಿಕೆಗಳಿಗೆ ಯಾವುದೇ ವೈಯಕ್ತಿಕ ಡೇಟಾವನ್ನು ಉಪಯೋಗಿಸುವುದು ಡಿಪಿಡಿಪಿಎ [ಡಿಜಿಟಲ್ ಪರ್ಸನಲ್ ಡಾಟಾ ಪ್ರೊಟೆಕ್ಷನ್ ಆಕ್ಟ್, 2023] ಸೆಕ್ಷನ್ 7ರ ಅಡಿಯಲ್ಲಿ ಒಪ್ಪಿಗೆ ಪಡೆದುಕೊಳ್ಳಬೇಕಾದ ಅಗತ್ಯತೆಯ ಬಗ್ಗೆ ಗಿಲ್ಡ್ ಕಳವಳ ವ್ಯಕ್ತಪಡಿಸಿದೆ ಎಂದು ಹೇಳಿಕೊಂಡಿದೆ. ಪತ್ರಿಕೋದ್ಯಮ ಚಟುವಟಿಕೆಗಳಿಗೆ ಯಾವುದೇ ವಿನಾಯಿತಿ ಇಲ್ಲದಿರುವುದು ಪತ್ರಕರ್ತರು ತಮ್ಮ ಕೆಲಸದ ಸಂದರ್ಭದಲ್ಲಿ ಯಾವುದೇ ವೈಯಕ್ತಿಕ ಡೇಟಾವನ್ನು ಬಹಿರಂಗಗೊಳಿಸಲು ಒಪ್ಪಿಗೆಯ ಮೇಲೆ ಅವಲಂಬಿತರಾಗಬೇಕಾಗುತ್ತದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಒಪ್ಪಿಗೆಯ ನಿರಾಕರಣೆಯು ಪತ್ರಿಕಾ ಮಾಧ್ಯಮದ ಮೂಲಭೂತ ಪಾತ್ರ ಹಾಗು ಪಾರದರ್ಶಕತೆ ಮತ್ತು ಉತ್ತರದಾಯಿತ್ವವನ್ನು ಖಚಿತಪಡಿಸುವ ಅದರ ಸಾಮರ್ಥ್ಯವನ್ನು ದುರ್ಬಲಗೊಳಿಸುತ್ತದೆ ಎಂದು ಗಿಲ್ಡ್ ಹೇಳಿಕೊಂಡಿದೆ.

ತನಿಖಾ ಪತ್ರಿಕೋದ್ಯಮ, ಸಾಮಾನ್ಯ ಸುದ್ದಿ ವರದಿ, ಅಭಿಪ್ರಾಯ ಮತ್ತು ವಿಶ್ಲೇಷಣೆ, ಖಾಸಗಿ ಸಂಶೋಧನೆ  ತನಿಖಾ ಅಧ್ಯಯನ ಡೇಟಾ ಮೇಲೆ ಹೆಚ್ಚಾಗಿ ಅವಲಂಬಿತವಾಗಿವೆ. ಇದನ್ನು ಕಾನೂನುಬದ್ಧ ಬಳಕೆಗಳ ಪಟ್ಟಿಯಲ್ಲಿ ಉಲ್ಲೇಖಿಸಲಾಗಿಲ್ಲ ಎಂದು ಪತ್ರದಲ್ಲಿ ತಿಳಿಸಲಾಗಿದ್ದು, ಪತ್ರಕರ್ತರಿಗೆ ಕಾನೂನಿನಲ್ಲಿ ವಿನಾಯಿತಿ ನೀಡಬೇಕು. ಈ ವಿನಾಯಿತಿಯು ನಿರ್ದಿಷ್ಟವಾಗಿ ಸಮರ್ಥನೆಯಾಗಿದೆ, ಇಲ್ಲವಾದಲ್ಲಿ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕು ಮತ್ತು ಪತ್ರಕರ್ತರ ಕರ್ತವ್ಯದ ಹಕ್ಕಿನ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ ಎಂದು ಎಂದು ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ಕೇಂದ್ರ ಸರಕಾರವನ್ನು ಒತ್ತಾಯಿಸಿದೆ.

ಇದನ್ನು ಓದಿ: ಹಲ್ದ್ವಾನಿ ಹಿಂಸಾಚಾರ: ಲೋಪಗಳನ್ನು ಬಿಚ್ಚಿಟ್ಟ ಸತ್ಯಶೋಧನಾ ವರದಿ…

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...