Homeಮುಖಪುಟಡಿಜಿಟಲ್ ಡಾಟಾ ಪ್ರೊಟೆಕ್ಷನ್ ಆ್ಯಕ್ಟ್‌: ಪತ್ರಕರ್ತರಿಗೆ ವಿನಾಯಿತಿ ಬಗ್ಗೆ ಕೇಂದ್ರಕ್ಕೆ ಪತ್ರ ಬರೆದ ಎಡಿಟರ್ಸ್ ಗಿಲ್ಡ್

ಡಿಜಿಟಲ್ ಡಾಟಾ ಪ್ರೊಟೆಕ್ಷನ್ ಆ್ಯಕ್ಟ್‌: ಪತ್ರಕರ್ತರಿಗೆ ವಿನಾಯಿತಿ ಬಗ್ಗೆ ಕೇಂದ್ರಕ್ಕೆ ಪತ್ರ ಬರೆದ ಎಡಿಟರ್ಸ್ ಗಿಲ್ಡ್

- Advertisement -
- Advertisement -

ಡಿಜಿಟಲ್ ಪರ್ಸನಲ್ ಡಾಟಾ ಪ್ರೊಟೆಕ್ಷನ್ ಆ್ಯಕ್ಟ್‌ನಲ್ಲಿ ಪತ್ರಕರ್ತರಿಗೆ ವಿನಾಯಿತಿ ಇಲ್ಲದಿರುವುದು ದೇಶದಲ್ಲಿ ಪತ್ರಿಕೋದ್ಯಮವನ್ನು ಸ್ಥಗಿತಗೊಳಿಸುತ್ತದೆ ಎಂದು ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯಕ್ಕೆ ಬರೆದ ಪತ್ರದಲ್ಲಿ ತಿಳಿಸಿದೆ.

ಕೇಂದ್ರಕ್ಕೆ ಕಳುಹಿಸಿದ ಪತ್ರವನ್ನು ಭಾನುವಾರ ಗಿಲ್ಡ್ ಸಾರ್ವಜನಿಕಗೊಳಿಸಿದ್ದು, ಆಗಸ್ಟ್‌ನಲ್ಲಿ ಸಂಸತ್ತು ಅಂಗೀಕರಿಸಿದ ಕಾಯಿದೆಯು ನಾಗರಿಕರ ದತ್ತಾಂಶಗಳ ಸಂಗ್ರಹಣೆ ಮತ್ತು ಪ್ರಕ್ರಿಯೆಗೆ ಸಂಬಂಧಿಸಿ ಖಾಸಗಿ ಮತ್ತು ಸರ್ಕಾರಿ ಘಟಕಗಳ ಮೇಲೆ ನಿರ್ಬಂಧಗಳನ್ನು ವಿಧಿಸುತ್ತದೆ. ವ್ಯಕ್ತಿಗಳ ಡಿಜಿಟಲ್ ಡೇಟಾವನ್ನು ದುರುಪಯೋಗಪಡಿಸಿಕೊಳ್ಳುವ ಅಥವಾ ರಕ್ಷಿಸಲು ವಿಫಲವಾದ ಘಟಕಗಳ ಮೇಲೆ 250 ಕೋಟಿ ರೂಪಾಯಿಗಳವರೆಗೆ ದಂಡವನ್ನು ಇದು ಪ್ರಸ್ತಾಪಿಸುತ್ತದೆ.

ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ, ಈ ಕಾಯಿದೆಯಲ್ಲಿ ಪತ್ರಕರ್ತರಿಗೆ ವಿನಾಯಿತಿ ನೀಡದ ಕಾರಣ ಮತ್ತು ಪತ್ರಿಕೋದ್ಯಮ ಚಟುವಟಿಕೆಗಳ ಮೇಲೆ ಪರಿಣಾಮ ಬೀರುವ ನಿಬಂಧನೆಯ ಬಗ್ಗೆ ಕಳವಳ ವ್ಯಕ್ತಪಡಿಸಿದೆ. ನಿರ್ದಿಷ್ಟವಾಗಿ, ತಮ್ಮ ಪತ್ರಿಕೋದ್ಯಮ ಚಟುವಟಿಕೆಗಳಿಗೆ ಯಾವುದೇ ವೈಯಕ್ತಿಕ ಡೇಟಾವನ್ನು ಉಪಯೋಗಿಸುವುದು ಡಿಪಿಡಿಪಿಎ [ಡಿಜಿಟಲ್ ಪರ್ಸನಲ್ ಡಾಟಾ ಪ್ರೊಟೆಕ್ಷನ್ ಆಕ್ಟ್, 2023] ಸೆಕ್ಷನ್ 7ರ ಅಡಿಯಲ್ಲಿ ಒಪ್ಪಿಗೆ ಪಡೆದುಕೊಳ್ಳಬೇಕಾದ ಅಗತ್ಯತೆಯ ಬಗ್ಗೆ ಗಿಲ್ಡ್ ಕಳವಳ ವ್ಯಕ್ತಪಡಿಸಿದೆ ಎಂದು ಹೇಳಿಕೊಂಡಿದೆ. ಪತ್ರಿಕೋದ್ಯಮ ಚಟುವಟಿಕೆಗಳಿಗೆ ಯಾವುದೇ ವಿನಾಯಿತಿ ಇಲ್ಲದಿರುವುದು ಪತ್ರಕರ್ತರು ತಮ್ಮ ಕೆಲಸದ ಸಂದರ್ಭದಲ್ಲಿ ಯಾವುದೇ ವೈಯಕ್ತಿಕ ಡೇಟಾವನ್ನು ಬಹಿರಂಗಗೊಳಿಸಲು ಒಪ್ಪಿಗೆಯ ಮೇಲೆ ಅವಲಂಬಿತರಾಗಬೇಕಾಗುತ್ತದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಒಪ್ಪಿಗೆಯ ನಿರಾಕರಣೆಯು ಪತ್ರಿಕಾ ಮಾಧ್ಯಮದ ಮೂಲಭೂತ ಪಾತ್ರ ಹಾಗು ಪಾರದರ್ಶಕತೆ ಮತ್ತು ಉತ್ತರದಾಯಿತ್ವವನ್ನು ಖಚಿತಪಡಿಸುವ ಅದರ ಸಾಮರ್ಥ್ಯವನ್ನು ದುರ್ಬಲಗೊಳಿಸುತ್ತದೆ ಎಂದು ಗಿಲ್ಡ್ ಹೇಳಿಕೊಂಡಿದೆ.

ತನಿಖಾ ಪತ್ರಿಕೋದ್ಯಮ, ಸಾಮಾನ್ಯ ಸುದ್ದಿ ವರದಿ, ಅಭಿಪ್ರಾಯ ಮತ್ತು ವಿಶ್ಲೇಷಣೆ, ಖಾಸಗಿ ಸಂಶೋಧನೆ  ತನಿಖಾ ಅಧ್ಯಯನ ಡೇಟಾ ಮೇಲೆ ಹೆಚ್ಚಾಗಿ ಅವಲಂಬಿತವಾಗಿವೆ. ಇದನ್ನು ಕಾನೂನುಬದ್ಧ ಬಳಕೆಗಳ ಪಟ್ಟಿಯಲ್ಲಿ ಉಲ್ಲೇಖಿಸಲಾಗಿಲ್ಲ ಎಂದು ಪತ್ರದಲ್ಲಿ ತಿಳಿಸಲಾಗಿದ್ದು, ಪತ್ರಕರ್ತರಿಗೆ ಕಾನೂನಿನಲ್ಲಿ ವಿನಾಯಿತಿ ನೀಡಬೇಕು. ಈ ವಿನಾಯಿತಿಯು ನಿರ್ದಿಷ್ಟವಾಗಿ ಸಮರ್ಥನೆಯಾಗಿದೆ, ಇಲ್ಲವಾದಲ್ಲಿ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕು ಮತ್ತು ಪತ್ರಕರ್ತರ ಕರ್ತವ್ಯದ ಹಕ್ಕಿನ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ ಎಂದು ಎಂದು ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ಕೇಂದ್ರ ಸರಕಾರವನ್ನು ಒತ್ತಾಯಿಸಿದೆ.

ಇದನ್ನು ಓದಿ: ಹಲ್ದ್ವಾನಿ ಹಿಂಸಾಚಾರ: ಲೋಪಗಳನ್ನು ಬಿಚ್ಚಿಟ್ಟ ಸತ್ಯಶೋಧನಾ ವರದಿ…

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...