Homeಮುಖಪುಟಎಂಎಸ್‌ಪಿಗೆ ಹೊಸ ಪ್ರಸ್ತಾವನೆ ಮುಂದಿಟ್ಟ ಸರ್ಕಾರ: ರೈತರ 'ದೆಹಲಿ ಚಲೋ' ತಾತ್ಕಾಲಿಕ ಸ್ಥಗಿತ

ಎಂಎಸ್‌ಪಿಗೆ ಹೊಸ ಪ್ರಸ್ತಾವನೆ ಮುಂದಿಟ್ಟ ಸರ್ಕಾರ: ರೈತರ ‘ದೆಹಲಿ ಚಲೋ’ ತಾತ್ಕಾಲಿಕ ಸ್ಥಗಿತ

- Advertisement -
- Advertisement -

ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನೀಡುವ ಸಂಬಂಧ ಕೇಂದ್ರ ಸರ್ಕಾರ ಹೊಸ ಪ್ರಸ್ತಾವನೆ ಮುಂದಿಟ್ಟಿದೆ. ಈ ಹಿನ್ನೆಲೆ, ಮುಂದಿನ ಎರಡು ದಿನಗಳಲ್ಲಿ ಪ್ರಸ್ತಾವನೆಯನ್ನು ಅಧ್ಯಯನ ಮಾಡುವುದಾಗಿ ರೈತ ಮುಖಂಡರು ಘೋಷಿಸಿದ್ದು, ಅಲ್ಲಿಯವರೆಗೆ ‘ದೆಹಲಿ ಚಲೋ’ ಮೆರವಣಿಗೆಯನ್ನು ಸ್ಥಗಿತಗೊಳಿಸುವುದಾಗಿ ಹೇಳಿದ್ದಾರೆ.

ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಅರ್ಜುನ್ ಮುಂಡಾ, ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಮತ್ತು ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಅವರು ಚಂಡೀಗಢದಲ್ಲಿ ರೈತ ಮುಖಂಡರೊಂದಿಗೆ ಭಾನುವಾರ ನಾಲ್ಕನೇ ಸುತ್ತಿನ ಮಾತುಕತೆ ನಡೆಸಿದ್ದಾರೆ. ಆ ಬಳಿಕ ರೈತ ಮುಖಂಡರು ದೆಹಲಿ ಚಲೋ ತಾತ್ಕಾಲಿಕ ಸ್ಥಗಿತಗೊಳಿಸುವ ನಿರ್ಧಾರ ತೆಗೆದುಕೊಂಡಿದ್ದಾರೆ.

ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಪಿಯೂಷ್ ಗೋಯಲ್, “ರೈತರೊಂದಿಗೆ ಒಪ್ಪಂದ ಮಾಡಿಕೊಂಡ ನಂತರ ಐದು ವರ್ಷಗಳವರೆಗೆ ಕನಿಷ್ಠ ಬೆಂಬಲ ಬೆಲೆಯಲ್ಲಿ ದ್ವಿದಳ ಧಾನ್ಯಗಳು, ಮೆಕ್ಕೆಜೋಳ ಮತ್ತು ಹತ್ತಿ ಬೆಳೆಗಳನ್ನು ಸರ್ಕಾರಿ ಸಂಸ್ಥೆಗಳ ಮೂಲಕ ಖರೀದಿಸುವ ಪ್ರಸ್ತಾವನೆಯನ್ನು ಮುಂದಿಡಲಾಗಿದೆ” ಎಂದಿದ್ದಾರೆ.

“ನ್ಯಾಷನಲ್ ಕೋ ಆಪರೇಟಿವ್ ಕನ್ಸ್ಯೂಮರ್ಸ್ ಫೆಡರೇಶನ್ (ಎನ್‌ಸಿಸಿಎಫ್), ನ್ಯಾಷನಲ್ ಅಗ್ರೀಕಲ್ಚರಲ್ ಕೋ ಆಪರೇಟಿವ್ ಮಾರ್ಕೆಟಿಂಗ್ ಫೆಡರೇಶನ್ ಆಫ್ ಇಂಡಿಯಾ (ಎನ್‌ಎಎಫ್‌ಇಡಿ) ನಂತಹ ಸಹಕಾರ ಸಂಘಗಳು ತೊಗರಿ ಬೇಳೆ, ಉದ್ದಿನ ಬೇಳೆ, ಮೆಕ್ಕೆಜೋಳವನ್ನು ಬೆಳೆಯುವ ರೈತರೊಂದಿಗೆ ಒಪ್ಪಂದ ಮಾಡಿಕೊಳ್ಳಲಿವೆ. ಮುಂದಿನ ಐದು ವರ್ಷಗಳವರೆಗೆ ಈ ಸಂಸ್ಥೆಗಳು ರೈತರ ಉತ್ಪನ್ನಗಳನ್ನು ಎಂಎಸ್‌ಪಿ ದರದಲ್ಲಿ ಖರೀದಿಸಲಿದೆ. ರೈತರ ಉತ್ಪನ್ನಗಳನ್ನು ಖರೀದಿಸುವುದಕ್ಕೆ ಯಾವುದೇ ಮಿತಿ ಇರುವುದಿಲ್ಲ. ಅದಕ್ಕಾಗಿ ಪೋರ್ಟಲ್ ಅನ್ನು ಅಭಿವೃದ್ಧಿಪಡಿಸಲಾಗುವುದು” ಎಂದು ಸಭೆಯ ನಂತರ ಗೋಯಲ್ ತಿಳಿಸಿದ್ದಾರೆ.

“ಫೆ.19 ಮತ್ತು 20ರಂದು ನಮ್ಮ ವೇದಿಕೆಗಳಲ್ಲಿ ಸರ್ಕಾರದ ಪ್ರಸ್ತಾವನೆಯ ಕುರಿತು ಚರ್ಚಿಸಿ, ಈ ಬಗ್ಗೆ ತಜ್ಞರ ಅಭಿಪ್ರಾಯನ್ನೂ ಪಡೆದು ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ” ಎಂದು ರೈತ ಮುಖಂಡ ಸರ್ವಾನ್ ಸಿಂಗ್ ಪಂಧೇರ್ ಹೇಳಿದ್ದಾರೆ.

“ಸಾಲ ಮನ್ನಾ ಮತ್ತು ಇತರ ನಮ್ಮ ಬೇಡಿಕೆಗಳ ಕುರಿತು ಚರ್ಚೆ ಬಾಕಿ ಉಳಿದಿದ್ದು, ಇನ್ನೆರಡು ದಿನಗಳಲ್ಲಿ ಇವುಗಳು ಬಗೆಹರಿಯಲಿವೆ ಎಂದು ನಾವು ಭಾವಿಸುತ್ತೇವೆ. ಪ್ರಸ್ತುತ ‘ದೆಹಲಿ ಚಲೋ’ ಮೆರವಣಿಗೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಫೆಬ್ರವರಿ 21 ರಂದು ಬೆಳಿಗ್ಗೆ 11 ಗಂಟೆಗೆ ಪುನರಾರಂಭಿಸುತ್ತವೆ. ನಮ್ಮ ಎಲ್ಲಾ ಸಮಸ್ಯೆಗಳನ್ನು ಪರಿಹಾರವಾಗಿಲ್ಲ” ಎಂದು ಪಂಧೇರ್ ತಿಳಿಸಿದ್ದಾರೆ.

ನಾವು ಸರ್ಕಾರದೊಂದಿಗೆ ಮಾತುಕತೆಯ ಮೂಲಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸುತ್ತಿದ್ದೇವೆ. ಆದರೆ, ಕಾರಣಾಂತರಗಳಿಂದ ಅದು ಆಗುತ್ತಿಲ್ಲ. ಶಾಂತಿಯುತವಾಗಿ ದೆಹಲಿಗೆ ಹೋಗಲು ಅವಕಾಶ ನೀಡುವಂತೆ ನಾವು ಸರ್ಕಾರವನ್ನು ಕೋರುತ್ತೇವೆ” ಎಂದಿದ್ದಾರೆ.

ಕೇಂದ್ರ ಸಚಿವರು ಮತ್ತು ರೈತ ಮುಖಂಡರು ಈ ಹಿಂದೆ ಫೆಬ್ರವರಿ 8, 12 ಮತ್ತು 15 ರಂದು ಸಭೆ ನಡೆಸಿದ್ದಾರೆ. ಇದುವರೆಗೆ ಒಟ್ಟು ನಾಲ್ಕು ಬಾರಿ ಪರಸ್ಪರ ಚರ್ಚೆ ನಡೆದಿದೆ. ಮೂರು ಸಭೆಗಳಲ್ಲಿ ಯಾವುದೇ ತೀರ್ಮಾನಕ್ಕೆ ಬರಲು ಸಾಧ್ಯವಾಗಿರಲಿಲ್ಲ. ನಾಲ್ಕನೇ ಸಭೆಯಲ್ಲಿ ಸರ್ಕಾರ ಹೊಸ ಪ್ರಸ್ತಾವನೆ ಮುಂದಿಟ್ಟಿದೆ. ಇದಕ್ಕೆ ಒಪ್ಪಿ ರೈತರು ದೆಹಲಿ ಚಲೋ ಕೈ ಬಿಡುತ್ತಾರಾ? ಇಲ್ಲ , ಪ್ರತಿಭಟನೆ ಮುಂದುವರೆಸುತ್ತಾರಾ? ಕಾದು ನೋಡಬೇಕಿದೆ.

ಇದನ್ನೂ ಓದಿ: ಮಣಿಪುರ: ಸರಕಾರಿ ಕಚೇರಿಗಳನ್ನು ಬಲವಂತದಿಂದ ಬಂದ್‌ ಮಾಡಿಸುತ್ತಿರುವ ಕುಕಿ ಗುಂಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...