Homeಮುಖಪುಟ'ED'ಯನ್ನು ಬಂದ್‌ ಮಾಡಿದರೆ ಅರ್ಧದಷ್ಟು ಬಿಜೆಪಿ ನಾಯಕರು ಪಕ್ಷ ತೊರೆಯುತ್ತಾರೆ: ಅರವಿಂದ್ ಕೇಜ್ರಿವಾಲ್

‘ED’ಯನ್ನು ಬಂದ್‌ ಮಾಡಿದರೆ ಅರ್ಧದಷ್ಟು ಬಿಜೆಪಿ ನಾಯಕರು ಪಕ್ಷ ತೊರೆಯುತ್ತಾರೆ: ಅರವಿಂದ್ ಕೇಜ್ರಿವಾಲ್

- Advertisement -
- Advertisement -

ಜಾರಿ ನಿರ್ದೇಶನಾಲಯವನ್ನು(ಇಡಿ)ಯನ್ನು ಬಂದ್‌ ಮಾಡಿದರೆ ಮತ್ತು ಪಿಎಂಎಲ್‌ಎಯ ಸೆಕ್ಷನ್ 45ನ್ನು ರದ್ದುಗೊಳಿಸಿದರೆ ಯಾರೂ ಕೂಡ ಬಿಜೆಪಿಗೆ ಹೋಗುವುದಿಲ್ಲ ಮತ್ತು ಶಿವರಾಜ್ ಸಿಂಗ್ ಚೌಹಾಣ್ ಮತ್ತು ವಸುಂಧರಾ ರಾಜೆ ಅವರಂತಹ ನಾಯಕರು ತಮ್ಮದೇ ಆದ ರಾಜಕೀಯ ಪಕ್ಷಗಳನ್ನು ರಚಿಸುತ್ತಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ಕಾಂಗ್ರೆಸ್ ಸಂಸದ ಅಭಿಷೇಕ್ ಸಿಂಘ್ವಿ ಅವರ ನಿವಾಸದಲ್ಲಿ ಆಯೋಜಿಸಿದ್ದ ಭೋಜನಕೂಟದಲ್ಲಿ ವಿರೋಧ ಪಕ್ಷದ ನಾಯಕರು ಬಿಜೆಪಿಗೆ ಸೇರ್ಪಡೆಗೊಳ್ಳುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌, ಇಂದು ಇಡಿಯನ್ನು (ಜಾರಿ ನಿರ್ದೇಶನಾಲಯ) ಬಂದ್‌ ಮಾಡಿದರೆ ಮತ್ತು ಪಿಎಂಎಲ್‌ಎ (ಹಣ-ಲಾಂಡರಿಂಗ್ ತಡೆ ಕಾಯ್ದೆ) ಸೆಕ್ಷನ್ 45 ರದ್ದುಪಡಿಸಿದರೆ, ಅರ್ಧದಷ್ಟು ಬಿಜೆಪಿ ನಾಯಕರು ಪಕ್ಷವನ್ನು ತೊರೆಯುತ್ತಾರೆ, ಇಂದು ನಾಯಕರು ಬಿಜೆಪಿಗೆ ಸೇರುವುದಕ್ಕೆ ಒಂದೇ ಒಂದು ಏಜೆನ್ಸಿ (ಇಡಿ) ಕಾರಣವಾಗಿದೆ. ಪಿಎಂಎಲ್‌ಎ ಸೆಕ್ಷನ್ 45ನ್ನು ತೆಗೆದುಹಾಕಿದರೆ ಯಾರೂ ಬಿಜೆಪಿಗೆ ಸೇರುವುದಿಲ್ಲ. ಶಿವರಾಜ್ ಸಿಂಗ್ ಚೌಹಾಣ್ ಮತ್ತು ವಸುಂಧರಾ ರಾಜೆ ಅವರಂತಹ ನಾಯಕರು ಸೆಕ್ಷನ್ 45ನ್ನು ತೆಗೆದು ಹಾಕಿದ ಸಂಜೆಯೊಳಗೆ ತಮ್ಮದೇ ಆದ ಪಕ್ಷಗಳನ್ನು ರಚಿಸಬಹುದು ಎಂದು ಹೇಳಿದ್ದಾರೆ.

ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷವು ಅಧಿಕಾರಕ್ಕೆ ಮರಳುವುದನ್ನು ತಿಳಿದಿದ್ದರೂ  ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ಚೌಹಾಣ್ ಮತ್ತು ರಾಜೇ ಅವರನ್ನು ಬಿಜೆಪಿ ಕಡೆಗಣಿಸಿತ್ತು. ಪಂಜಾಬ್‌ನಲ್ಲಿ ಪ್ರತ್ಯೇಕವಾಗಿ ಚುನಾವಣೆಯಲ್ಲಿ ಸ್ಪರ್ಧಿಸಲು ಎಎಪಿ ಮತ್ತು ಕಾಂಗ್ರೆಸ್ ಪರಸ್ಪರ ಒಪ್ಪಿಗೆ ಸೂಚಿಸಿವೆ ಎಂದು ಕೇಜ್ರಿವಾಲ್ ಅವರು ಭೋಜನಕೂಟದಲ್ಲಿ ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಲೋಕಸಭೆ ಚುನಾವಣೆಗೆ ದೆಹಲಿಯಲ್ಲಿ ಎಎಪಿ ಮತ್ತು ಕಾಂಗ್ರೆಸ್ ನಡುವೆ ಮೈತ್ರಿ ಕುರಿತು ಮಾತುಕತೆ ನಡೆಯುತ್ತಿದ್ದು, ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಕೇಜ್ರಿವಾಲ್ ಹೇಳಿದ್ದಾರೆ. ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಕಳೆದ ತಿಂಗಳು ಲೋಕಸಭೆ ಚುನಾವಣೆಗೆ ರಾಜ್ಯದಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಹೇಳಿದ್ದರು. ಎಎಪಿ ಎಲ್ಲಾ 13 ಸ್ಥಾನಗಳನ್ನು ಗೆಲ್ಲುತ್ತದೆ ಎಂದು ಹೇಳಿದ್ದರು.

ಇಂಡಿಯಾ ಬಣದ ಭಾಗವಾಗಿರುವ ಎಎಪಿ ಮತ್ತು ಕಾಂಗ್ರೆಸ್ ದೆಹಲಿಯಲ್ಲಿ ಸೀಟು ಹಂಚಿಕೆಯಲ್ಲಿ ಭಿನ್ನಾಭಿಪ್ರಾಯ ಹೊಂದಿದ್ದು, ಕೇಜ್ರಿವಾಲ್ ನೇತೃತ್ವದ ಎಎಪಿ, ಕಾಂಗ್ರೆಸ್‌ ಪಕ್ಷಕ್ಕೆ ಕೇವಲ ಒಂದು ಸ್ಥಾನವನ್ನು ನೀಡಲು ಇಚ್ಛೆಯನ್ನು ವ್ಯಕ್ತಪಡಿಸಿದೆ ಎಂದು ಹೇಳಲಾಗಿದೆ. ಕಳೆದ ವಾರ ಎಎಪಿ ರಾಜ್ಯಸಭಾ ಸಂಸದ ಸಂದೀಪ್ ಪಾಠಕ್, ದೆಹಲಿಯಲ್ಲಿ ಕಾಂಗ್ರೆಸ್‌ಗೆ ಒಂದು ಸ್ಥಾನ ನೀಡಲು ಪಕ್ಷ ಸಿದ್ಧವಿದೆ ಎಂದು ಹೇಳಿದ್ದರು.

ಇದನ್ನು ಓದಿ: ಹಲ್ದ್ವಾನಿ ಹಿಂಸಾಚಾರ: ಲೋಪಗಳನ್ನು ಬಿಚ್ಚಿಟ್ಟ ಸತ್ಯಶೋಧನಾ ವರದಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...