Homeಮುಖಪುಟ'ಜೈ ಹಿಂದ್ ಟಿವಿ' ಬ್ಯಾಂಕ್‌ ಖಾತೆ ಸ್ಥಗಿತಗೊಳಿಸಿದ ಐಟಿ ಇಲಾಖೆ: ಡಿಕೆ ಶಿವಕುಮಾರ್ ಹೂಡಿಕೆಗೆ ರಾಜಕೀಯ...

‘ಜೈ ಹಿಂದ್ ಟಿವಿ’ ಬ್ಯಾಂಕ್‌ ಖಾತೆ ಸ್ಥಗಿತಗೊಳಿಸಿದ ಐಟಿ ಇಲಾಖೆ: ಡಿಕೆ ಶಿವಕುಮಾರ್ ಹೂಡಿಕೆಗೆ ರಾಜಕೀಯ ಸೇಡು?

- Advertisement -
- Advertisement -

‘ಜೈಹಿಂದ್ ಟಿವಿ’ ಬ್ಯಾಂಕ್ ಖಾತೆಗಳನ್ನು ಆದಾಯ ತೆರಿಗೆ ಇಲಾಖೆ ಫ್ರೀಝ್‌ ಮಾಡಿದ್ದು, ಇದನ್ನು ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರು ಹೂಡಿಕೆ ಮಾಡಿರುವುದರಿಂದ ತೆಗೆದುಕೊಂಡ ರಾಜಕೀಯ ಸೇಡಿನ ಕ್ರಮ ಎಂದು ಜೈಹಿಂದ್ ಟಿವಿ ಮುಖ್ಯಸ್ಥರು ಹೇಳಿಕೊಂಡಿದ್ದಾರೆ.

ಜೈಹಿಂದ್ ಟಿವಿಯ ವ್ಯವಸ್ಥಾಪಕ ನಿರ್ದೇಶಕ ಬಿ.ಎಸ್.ಶಿಜು ಈ ಕುರಿತು ಹೇಳಿಕೆ ನೀಡಿದ್ದು, ಕಾಂಗ್ರೆಸ್ ನಾಯಕ ಮತ್ತು ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಾಡಿರುವ ಹೂಡಿಕೆಯಿಂದಾಗಿ ಖಾತೆಗಳನ್ನು ಸ್ಥಗಿತಗೊಳಿಸಿರಬಹುದು ಮತ್ತು ಐಟಿ ಇಲಾಖೆ ಕ್ರಮ ಪ್ರತೀಕಾರಕವಾಗಿದೆ. ಬ್ಯಾಂಕ್ ಖಾತೆಗಳ ಸ್ಥಗಿತಗೊಳಿಸುವಿಕೆಯು ಸೇವಾ ತೆರಿಗೆ ಬಾಕಿಗೆ ಸಂಬಂಧಿಸಿದ ಏಳು ವರ್ಷಗಳ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿದೆ, ಈ ಕುರಿತ ಪ್ರಕರಣ ಪ್ರಸ್ತುತ ಹೈಕೋರ್ಟ್‌ನಲ್ಲಿ ಬಾಕಿ ಇದೆ. ಜೈ ಹಿಂದ್ ಟಿವಿಯ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಲಾಗಿದೆ. ಆರಂಭದಲ್ಲಿ, ಎಚ್‌ಡಿಎಫ್‌ಸಿ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಲಾಯಿತು, ನಂತರ ಐಸಿಐಸಿಐ ಬ್ಯಾಂಕ್‌ ಖಾತೆ ಕೂಡ ಸ್ಥಗಿತಗೊಂಡಿದೆ. ಸಾಕಷ್ಟು ಹಣವನ್ನು ಹೊಂದಿದ್ದರೂ ಖಾತೆಯನ್ನು ಸ್ಥಗಿತಗೊಳಿಸಿದ್ದರಿಂದ ಪಾವತಿಗಳು ವಿಫಲವಾಗಿದೆ ಎಂದು ಹೇಳಿದ್ದಾರೆ.

ಬ್ಯಾಂಕ್ ಅಧಿಕಾರಿಗಳು ಕೇಂದ್ರ ಸರ್ಕಾರದ ಅಧಿಕಾರಿಗಳ ನಿರ್ದೇಶನಗಳನ್ನು ಫ್ರೀಝ್‌ ಹಿಂದಿನ ಕಾರಣವಾಗಿ ತಾರ್ಕಿಕವಾಗಿ ಉಲ್ಲೇಖಿಸಿದ್ದಾರೆ. ನಾವು ಕ್ರಮದ ಹಿಂದಿನ ಕಾರಣಕ್ಕೆ ಒತ್ತಾಯಿಸಿ ಪತ್ರ ಬರೆದಿದ್ದೇವೆ. ಅಂತಿಮವಾಗಿ, ಎಚ್‌ಡಿಎಫ್‌ಸಿ ಬ್ಯಾಂಕ್ ಸಿಜಿಎಸ್‌ಟಿ ಇಲಾಖೆಯಿಂದ ಬಂದ ಪತ್ರದ ಪ್ರತಿಯನ್ನು ನೀಡಿದೆ.  ಐಸಿಐಸಿಐ ಬ್ಯಾಂಕ್ ಅಧಿಕಾರಿಗಳು ನಕಲು ಪ್ರತಿ ನೀಡದಂತೆ ನಮಗೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.

ಬ್ಯಾಂಕ್ ಖಾತೆಗಳನ್ನು ಆದಾಯ ತೆರಿಗೆ ಇಲಾಖೆ ಫ್ರೀಝ್‌ ಮಾಡಿರುವುದು ಪೂರ್ವ ಎಚ್ಚರಿಕೆ ನೀಡದೆ ತೆಗೆದುಕೊಂಡ ಕ್ರಮವಾಗಿದೆ. ಇದು ಚಾನಲ್‌ನ ದೈನಂದಿನ ಕಾರ್ಯಾಚರಣೆಗಳಿಗೆ ಗಮನಾರ್ಹ ಅಡ್ಡಿ ಉಂಟುಮಾಡುತ್ತದೆ. ಈ ಹಠಾತ್ ಕ್ರಮ ನಿಜಕ್ಕೂ ದುರದೃಷ್ಟಕರ ಮತ್ತು ಚಾನಲ್‌ನ್ನು ಬಿಕ್ಕಟ್ಟಿನ ಸ್ಥಿತಿಗೆ ತಳ್ಳಿದೆ ಎಂದು ಶಿಜು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಜೈಹಿಂದ್ ಟಿವಿಯಲ್ಲಿ ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಅವರ ಕುಟುಂಬ ಸದಸ್ಯರಿಂದ ಹೂಡಿಕೆ ವಿವರಗಳನ್ನು ಕೋರಿ ಡಿಸೆಂಬರ್ 22, 2023ರಂದು ಸ್ವೀಕರಿಸಿದ ನೋಟಿಸ್‌ನ್ನು ಶಿಜು ಫ್ರೀಝ್‌ ಮಾಡಿರುವುದರ ಕುರಿತ ಸಾಂಭವ್ಯ ಕಾರಣವಾಗಿ ಉಲ್ಲೇಖಿಸಿದ್ದಾರೆ. ನೋಟಿಸ್‌ಗೆ ಸಂಬಂಧಿಸಿದಂತೆ ತನಿಖಾ ಸಂಸ್ಥೆಗಳೊಂದಿಗೆ ಸಹಕರಿಸಿದ್ದೇವೆ ಆದರೆ ನಂತರ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳು ಮತ್ತು ಏಜೆನ್ಸಿಗಳಿಂದ ಹಲವಾರು ನೋಟಿಸ್‌ಗಳನ್ನು ನೀಡಲಾಗಿದೆ ಎಂದು ಚಾನಲ್‌ ಹೇಳಿಕೊಂಡಿದೆ.

ಇದು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಮತ್ತು ಡಿಕೆ ಶಿವಕುಮಾರ್ ವಿರುದ್ಧದ ರಾಜಕೀಯ ಸೇಡಿನ ಪ್ರಕರಣ ಎಂಬುದು ಸ್ಪಷ್ಟವಾಗಿದೆ ಎಂದು ಶಿಜು ಆರೋಪಿಸಿದ್ದಾರೆ. ಭಾರತ್‌ ಜೋಡೋ ನ್ಯಾಯ ಯಾತ್ರೆಯ ವಿವರಗಳನ್ನು ಸಂಪೂರ್ಣವಾಗಿ ಪ್ರಸಾರ ಮಾಡುವ ಏಕೈಕ ಚಾನೆಲ್ ನಮ್ಮದಾಗಿದೆ, ಆದ್ದರಿಂದ ಇದಕ್ಕೆ ಅಡ್ಡಿಯುಂಟು ಮಾಡಲು ತೆಗೆದುಕೊಂಡ ಕ್ರಮವಾಗಿರಬಹುದು ಎಂದು ಶಿಜು ಹೇಳಿದ್ದಾರೆ.

ಫೆಬ್ರವರಿ 16ರಂದು ಕಾಂಗ್ರೆಸ್ ಮುಖಂಡ ಅಜಯ್ ಮಾಕನ್ ಅವರು ಪಕ್ಷದ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದರು. ಕಾಂಗ್ರೆಸ್ ಪಕ್ಷದ ಖಾತೆಗಳನ್ನೂ ಜಪ್ತಿ ಮಾಡಲಾಗಿದೆ. ಯೂತ್ ಕಾಂಗ್ರೆಸ್ ಮತ್ತು ಕಾಂಗ್ರೆಸ್ ಪಕ್ಷದಿಂದ 210 ಕೋಟಿ ರೂ. ವಸೂಲಾತಿಗೆ ಆದಾಯ ತೆರಿಗೆ ಇಲಾಖೆ ಕೇಳಿಕೊಂಡಿದೆ. ಕ್ರೌಡ್ ಫಂಡಿಂಗ್ ಮೂಲಕ ಪಕ್ಷಕ್ಕೆ ಬಂದ ಹಣವನ್ನೂ ಸ್ಥಗಿತಗೊಳಿಸಲಾಗಿದೆ ಎಂದು ಹೇಳಿದ್ದರು.

ಇದನ್ನು ಓದಿ: ಹಲ್ದ್ವಾನಿ ಹಿಂಸಾಚಾರ: ಲೋಪಗಳನ್ನು ಬಿಚ್ಚಿಟ್ಟ ಸತ್ಯಶೋಧನಾ ವರದಿ…

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...