HomeಮುಖಪುಟINDIA ಬಣದ ಜೊತೆ ಮೈತ್ರಿ ವದಂತಿಯನ್ನು ಅಲ್ಲಗೆಳೆದ ಮಾಯಾವತಿ

INDIA ಬಣದ ಜೊತೆ ಮೈತ್ರಿ ವದಂತಿಯನ್ನು ಅಲ್ಲಗೆಳೆದ ಮಾಯಾವತಿ

- Advertisement -
- Advertisement -

ಲೋಕಸಭೆ ಚುನಾವಣೆಗೂ ಮುನ್ನ INDIA ಬಣದ ಜೊತೆ ಮೈತ್ರಿ ಮಾಡಿಕೊಳ್ಳುವ ವದಂತಿಗಳನ್ನು ತಳ್ಳಿಹಾಕಿರುವ ಬಿಎಸ್‌ಪಿ ವರಿಷ್ಠೆ ಮಾಯಾವತಿ, ತಮ್ಮ ಪಕ್ಷವು ಸ್ವಂತ ಬಲದಿಂದ ಏಕಾಂಗಿಯಾಗಿ ಚುನಾವಣೆ ಎದುರಿಸಲಿದೆ ಎಂದು ಹೇಳಿದ್ದಾರೆ.

ಈ ಕುರಿತು ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ,  ಬಿಎಸ್ಪಿ ಕಾರ್ಯಕರ್ತರು ಇಂತಹ ವದಂತಿಗಳ ಬಗ್ಗೆ ಎಚ್ಚರದಿಂದಿರಬೇಕು ಎಂದು ಹೇಳಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಮಾಯಾವತಿ, ಮುಂಬರುವ ಲೋಕಸಭೆ ಚುನಾವಣೆಗೆ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಬಿಎಸ್‌ಪಿ ಪದೇ ಪದೇ ಘೋಷಿಸುತ್ತಿದ್ದರೂ, ಪ್ರತಿದಿನ ಮೈತ್ರಿ ಬಗ್ಗೆ ವದಂತಿಗಳು ಹರಡುತ್ತಿವೆ. ಬಿಎಸ್‌ಪಿ ಇಲ್ಲದೆ ಕೆಲವು ಪಕ್ಷಗಳು ಚೆನ್ನಾಗಿ ನಡೆಯುವುದಿಲ್ಲ ಎಂಬುದನ್ನು ಇದು ಸಾಬೀತುಪಡಿಸುತ್ತದೆ ಎಂದು ಅವರು ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಸಮಾಜದ ಹಿತಾಸಕ್ತಿ ಮತ್ತು ಕಲ್ಯಾಣವನ್ನು ಗಮನದಲ್ಲಿಟ್ಟುಕೊಂಡು, ವಿಶೇಷವಾಗಿ ಬಡವರು, ಶೋಷಿತರು ಮತ್ತು ನಿರ್ಲಕ್ಷ್ಯಕ್ಕೊಳಗಾದವರನ್ನು ಗಮನದಲ್ಲಿಟ್ಟುಕೊಂಡು ತನ್ನ ಜನರ ಬಲದೊಂದಿಗೆ ಲೋಕಸಭೆ ಚುನಾವಣೆಯನ್ನು ಬಿಎಸ್ಪಿಯು ಏಕಾಂಗಿಯಾಗಿ ಎದುರಿಸಲಿದೆ ಎಂದು ಮಾಯಾವತಿ ಹೇಳಿದ್ದಾರೆ.

ಬಿಎಸ್‌ಪಿ 2019ರ ಲೋಕಸಭೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದ ಜೊತೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸಿತ್ತು. ಈ ಮೊದಲು ಬಿಎಸ್ಪಿ INDIA ಬಣದ ಜೊತೆ ಸೇರಿಕೊಂಡರೆ ಎಸ್ಪಿ ಮೈತ್ರಿಯಿಂದ ಹೊರಗುಳಿಯಲಿದೆ ಎಂಬ ಬಗ್ಗೆ ಕೂಡ ಸುದ್ದಿಯಾಗಿತ್ತು.

ಉತ್ತರಪ್ರದೇಶ ಕಾಂಗ್ರೆಸ್‌ ಉಸ್ತುವಾರಿ ಅವಿನಾಶ್ ಪಾಂಡೆ ಹೇಳಿಕೆ:

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಹೋರಾಡಲು ರಚನೆಯಾಗಿರುವ ಐಕ್ಯ ಹೋರಾಟಕ್ಕೆ ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಸೇರಬೇಕು, ಅವರಿಗೆ ಇಂಡಿಯಾ ಬಣದ ಬಾಗಿಲು ತೆರೆದಿದೆ ಎಂದು ಉತ್ತರಪ್ರದೇಶ ಕಾಂಗ್ರೆಸ್‌ ಉಸ್ತುವಾರಿ ಅವಿನಾಶ್ ಪಾಂಡೆ ಭಾನುವಾರ ಹೇಳಿದ್ದರು. ಬಿಎಸ್‌ಪಿಯ ಮಾಯಾವತಿ ಏಕಾಂಗಿಯಾಗಿ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ, ಕಾಂಗ್ರೆಸ್-ಎಸ್‌ಪಿ ಒಕ್ಕೂಟವು ಉತ್ತರ ಪ್ರದೇಶದ ಸಣ್ಣ ಪಕ್ಷಗಳೊಂದಿಗೆ ಇಂಡಿಯಾ ಬ್ಲಾಕ್‌ಗೆ ಸೇರುವ ಕುರಿತು ಮಾತುಕತೆ ನಡೆಸುತ್ತಿದೆ. ಕೆಲವು ಪಕ್ಷಗಳು  ಮೈತ್ರಿ ಕೂಟದ ಜೊತೆ ಸೇರುತ್ತಿದೆ ಮತ್ತು ಕೆಲವು ಸೇರುವ ನಿರೀಕ್ಷೆಗಳಿದೆ. ಇದಕ್ಕೆ ಸ್ವಲ್ಪ ಸಮಯ ತೆಗೆದುಕೊಳ್ಳುತ್ತಿದೆ. ಆದರೆ, ಈ ತಿಂಗಳ ಅಂತ್ಯದ ವೇಳೆಗೆ ಎಲ್ಲವೂ ಬಗೆಹರಿಯಲಿದೆ ಎಂದು ಪಾಂಡೆ ಹೇಳಿದ್ದರು.

ಲೋಕಸಭೆ ಚುನಾವಣೆಗೆ ಸಮೀಪಿಸುತ್ತಿದ್ದಂತೆ ಬಿಎಸ್ಪಿ INDIA ಮೈತ್ರಿ ಕೂಟ ಅಥವಾ ಎನ್‌ಡಿಎ ಮೈತ್ರಿ ಪಕ್ಷಗಳ ಜೊತೆ ಸೇರಿಕೊಂಡಿಲ್ಲ. ಎರಡೂ ಮೈತ್ರಿ ಪಕ್ಷಗಳಿಂದ ದೂರ ಉಳಿದುಕೊಂಡಿದೆ. ಈ ಮೊದಲು ಬಿಜೆಪಿ ಜೊತೆ ಬಿಎಸ್ಪಿ ಮೈತ್ರಿ ಬಗ್ಗೆ ಊಹಾಪೋಹಗಳು ಕೂಡ ಭುಗಿಲೆದ್ದಿದ್ದವು. ಬಳಿಕ INDIA ಮೈತ್ರಿ ಕೂಟದ ಜೊತೆ ಸೇರುವ ಬಗ್ಗೆಯೂ ಸುದ್ದಿಯಾಗಿತ್ತು. ಇದರ ಬೆನ್ನಲ್ಲಿ ಸ್ಪಷ್ಟನೆ ನೀಡಿದ್ದ ಬಿಎಸ್ಪಿ ವರಿಷ್ಠೆ ಮಾಯಾವತಿ 2024ರ ಲೋಕಸಭೆ ಚುನಾವಣೆಯಲ್ಲಿ ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಸ್ಪಷ್ಟಪಡಿಸಿದ್ದರು.

ಇದನ್ನು ಓದಿ: ‘ಜೈ ಹಿಂದ್ ಟಿವಿ’ ಬ್ಯಾಂಕ್‌ ಖಾತೆ ಸ್ಥಗಿತಗೊಳಿಸಿದ ಐಟಿ ಇಲಾಖೆ: ಡಿಕೆ ಶಿವಕುಮಾರ್ ಹೂಡಿಕೆಗೆ ರಾಜಕೀಯ ಸೇಡು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...