Homeಫ್ಯಾಕ್ಟ್‌ಚೆಕ್Fact Check: ನಮಾಝ್‌ಗಾಗಿ ಹಮೀದ್ ಅನ್ಸಾರಿ ರಾಜ್ಯಸಭೆ ಕಲಾಪ ಮುಂದೂಡುತ್ತಿದ್ದರು ಎಂಬುವುದು ಸುಳ್ಳು

Fact Check: ನಮಾಝ್‌ಗಾಗಿ ಹಮೀದ್ ಅನ್ಸಾರಿ ರಾಜ್ಯಸಭೆ ಕಲಾಪ ಮುಂದೂಡುತ್ತಿದ್ದರು ಎಂಬುವುದು ಸುಳ್ಳು

- Advertisement -
- Advertisement -

ಮಾಜಿ ಉಪರಾಷ್ಟ್ರಪತಿ ಹಾಗೂ ರಾಜ್ಯಸಭೆಯ ಮಾಜಿ ಅಧ್ಯಕ್ಷ ಹಮೀದ್ ಅನ್ಸಾರಿ ಅವರು ಮತ್ತು ಬಹುಜನ ಸಮಾಜವಾದಿ ಪಕ್ಷ (ಬಿಎಸ್‌ಪಿ)ದ ಮುಖ್ಯಸ್ಥೆ ಮಾಯಾವತಿ ಅವರು ರಾಜ್ಯಸಭೆಯಲ್ಲಿ ಪರಸ್ಪರ ಮಾತನಾಡಿರುವ ವಿಡಿಯೋವೊಂದು ಭಾರೀ ವೈರಲ್‌ ಆಗಿದ್ದು, “ಹಮೀದ್ ಅನ್ಸಾರಿ ಅವರು ನಮಾಝ್‌ಗೆ ತೆರಳುವ ಸಲುವಾಗಿ ರಾಜ್ಯಸಭೆ ಕಲಾಪವನ್ನು ಮುಂದೂಡುತ್ತಿದ್ದರು. ಈ ಕುರಿತು ಮಾಯಾವತಿ ರಾಜ್ಯಸಭೆಯಲ್ಲಿ ಪ್ರಶ್ನೆ ಎತ್ತಿದ್ದರು” ಎಂದು ಶೀರ್ಷಿಕೆ ಕೊಟ್ಟು ಹಂಚಿಕೊಳ್ಳಲಾಗ್ತಿದೆ.

ಫೆ.10, 2024ರಂದು ಆಂಧ್ರ ಪ್ರದೇಶ ರಾಜ್ಯ ಬಿಜೆಪಿ ಉಪಾಧ್ಯಕ್ಷ ವಿಷ್ಣು ವರ್ಧನ್ ರೆಡ್ಡಿ ಅವರು ಎಕ್ಸ್‌ನಲ್ಲಿ ಈ ವಿಡಿಯೋ ಹಂಚಿಕೊಂಡಿದ್ದು, “ಹಮೀದ್ ಅನ್ಸಾರಿ ಅವರನ್ನು ಉಪ ರಾಷ್ಟ್ರಪತಿಯಾಗಿ ಕಾಂಗ್ರೆಸ್ ನಾಮನಿರ್ದೇಶನ ಮಾಡಿತ್ತು. ಅವರು ಪ್ರಾರ್ಥನೆ ಸಲ್ಲಿಸಲು ಕಲಾಪದ ವೇಳೆ ಪ್ರತಿದಿನ 12:00 ಗಂಟೆಗೆ ರಾಜ್ಯಸಭೆಯಿಂದ ಹೊರಡುತ್ತಿದ್ದರು. ಎಲ್ಲಾ ಸದಸ್ಯರು ಸಾಂವಿಧಾನಿಕ ಕಲಾಪವನ್ನು ನಿಲ್ಲಿಸಿ, ಅವರ ವಾಪಸಾತಿಗೆ ಕಾಯುತ್ತಾ ಖಾಲಿ ಕೂರುತ್ತಿದ್ದರು. ಮಾಯಾವತಿ ಅವರು ಈ ವಿಷಯವನ್ನು ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದ್ದರು. ಆದರೆ, ಕಾಂಗ್ರೆಸ್ ಅವರನ್ನು ಬೆಂಬಲಿಸಿರಲಿಲ್ಲ. ಈಗ ಕಾಂಗ್ರೆಸ್ ಜಾತ್ಯತೀತೆಯ ಬಗ್ಗೆ ಪಾಠ ಮಾಡುತ್ತಿದೆ” ಎಂದು ಬರೆದುಕೊಂಡಿದ್ದರು.

ನಿವೃತ್ತ ಐಎಎಸ್ ಅಧಿಕಾರಿ ಸೂರ್ಯ ಪ್ರತಾಪ್ ಸಿಂಗ್ ಅವರು ಫೆ.7, 2024ರಂದು ಈ ವಿಡಿಯೋ ಹಂಚಿಕೊಂಡಿದ್ದು, “ಉಪರಾಷ್ಟ್ರಪತಿಯಾಗಿದ್ದ ಹಮೀದ್ ಅನ್ಸಾರಿ ಅವರು ರಾಜ್ಯಸಭೆ ಕಲಾಪವನ್ನು ಪ್ರತಿದಿನ 12:00 ಗಂಟೆಗೆ ಮುಂದೂಡಿ ನಮಾಜ್ ಮಾಡಲು ಹೋಗುತ್ತಿದ್ದರು. ಎಲ್ಲಾ ಸಂಸದರು ಸಂವಿಧಾನಾತ್ಮಕ ಕೆಲಸಗಳನ್ನು ನಿಲ್ಲಿಸಿ ಅವರಿಗಾಗಿ ಕಾಯುತ್ತಾ ಕೂರುತ್ತಿದ್ದರು. ಹಮೀದ್ ಅನ್ಸಾರಿ ಅವರನ್ನು ಕಾಂಗ್ರೆಸ್ ನಾಮನಿರ್ದೇಶನ ಮಾಡಿತ್ತು. ಮಾಯಾವತಿಯವರು ಈ ವಿಷಯವನ್ನು ಪ್ರಸ್ತಾಪಿಸಿದಾಗ, ಅನ್ಸಾರಿಯವರ ಉತ್ತರವನ್ನು ನೋಡಿ” ಎಂದಿದ್ದರು.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಕುರಿತು ನಾನುಗೌರಿ.ಕಾಂ ಸತ್ಯಾಸತ್ಯತೆ ಪರಿಶೀಲನೆ ನಡೆಸಿದೆ. ಗೂಗಲ್‌ನಲ್ಲಿ ಈ ವಿಡಿಯೋ ಕುರಿತು ನಾವು ಹುಡುಕಾಟ ನಡೆಸಿದಾಗ, ಇದು 2012ರಲ್ಲಿ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಆಗಿನ ರಾಜ್ಯಸಭೆ ಅಧ್ಯಕ್ಷ ಹಮೀದ್ ಅನ್ಸಾರಿ ಅವರು ಮತ್ತು ಮಾಯಾವತಿ ನಡುವೆ ನಡೆದ ಚರ್ಚೆಯದ್ದು ಎಂದು ತಿಳಿದು ಬಂದಿದೆ. ವಿಡಿಯೋದಲ್ಲಿ “ಪ್ರತಿದಿನ 12 ಗಂಟೆಯ ನಂತರ ಕಲಾಪ ಸ್ಥಗಿತಗೊಳ್ಳುತ್ತಿದೆ. ನೀವು ಸದನದ ಅಧ್ಯಕ್ಷರು, ಪ್ರತಿದಿನ 12 ಗಂಟೆಗೆ ಎದ್ದು ಹೊರಡುತ್ತೀರಿ. ಹೀಗಾದರೆ ಯಾರು ಸಂಸತ್ತಿನ ಕಲಾಪಗಳ ಅಧ್ಯಕ್ಷತೆ ವಹಿಸುತ್ತಾರೆ? ಸದನವು ಕ್ರಮ ಬದ್ಧವಾಗಿ ನಡೆಯುವಂತೆ ನೋಡಿಕೊಳ್ಳಿ” ಎಂದು ಹಮೀದ್ ಅನ್ಸಾರಿಗೆ ಮಾಯಾವತಿ ಹೇಳಿರುವುದನ್ನು ನೋಡಬಹುದು.

ಮಾಯಾವತಿ ಪ್ರಶ್ನೆ ಮಾಡುತ್ತಿದ್ದಂತೆ ಹಮೀದ್ ಅನ್ಸಾರಿ ಅವರು ಕುಳಿತುಕೊಳ್ಳುವಂತೆ ಮನವಿ ಮಾಡಿರುವುದು ವಿಡಿಯೋದಲ್ಲಿದೆ. ಇಲ್ಲಿ ಮಾಯಾವತಿ ಅವರು ಅನ್ಸಾರಿ ಅವರಿಗೆ ಪ್ರಶ್ನೆ ಕೇಳಿರುವ ವಿಡಿಯೋ ನಿಜವಾದದ್ದೆ. ಆದರೆ, ಮಾಯಾವತಿ “ನೀವು 12 ಗಂಟೆಗೆ ಎದ್ದು ಹೊರಡುತ್ತೀರಿ ಎಂದು ಹೇಳಿದ್ದಾರೆಯೇ ಹೊರತು, ಎಲ್ಲೂ ನಮಾಝ್‌ಗೆ ಎದ್ದು ಹೋಗುತ್ತೀರಿ” ಎಂದು ಹೇಳಿಲ್ಲ.

ಮಾಯಾವತಿ ಅವರು ಮಾತನಾಡಿರುವ ಸಂಪೂರ್ಣ ವಿಡಿಯೋ ಇಲ್ಲಿದೆ

ವೈರಲ್ ವಿಡಿಯೋವನ್ನು ಮೊದಲು ಫೆಬ್ರವರಿ 4,2024 ರಂದು ಬಹುಜನ ಸಮಾಜ ಪಕ್ಷದ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾಗಿತ್ತು. ಆ ಬಳಿಕ ಅದನ್ನು ಹಲವರು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ ಮಾಡಿದ್ದು, ಅನ್ಸಾರಿ ಮತ್ತು ಕಾಂಗ್ರೆಸ್ ಮುಸ್ಲಿಂ ಪರ ಎಂದು ಆರೋಪಿಸಿದ್ದಾರೆ.

ಡಿಸೆಂಬರ್ 2012ರ ಮಾಧ್ಯಮ ವರದಿಗಳ ಪ್ರಕಾರ, ಮಾಯಾವತಿ ಅವರು ಸರ್ಕಾರಿ ಉದ್ಯೋಗ ಬಡ್ತಿಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಮೀಸಲಾತಿಯ ವಿಷಯದ ಬಗ್ಗೆ ಮಾತನಾಡಲು ಬಯಸಿದ್ದರು. ಆದರೆ, ಸಮಾಜವಾದಿ ಪಕ್ಷದ ಪ್ರತಿಭಟನೆಯಿಂದಾಗಿ ಸಂಸತ್ ಕಲಾಪ ಅಸ್ತವ್ಯಸ್ತಗೊಂಡಿತ್ತು. ಇದು ಮಾಯಾವತಿ ಅವರನ್ನು ಕೆರಳಿಸಿತ್ತು.

ವರದಿ ಲಿಂಕ್ ಇಲ್ಲಿದೆ 

ಅದೇ ದಿನ, ಮಾಯಾವತಿ ಅವರು ಪತ್ರಿಕಾಗೋಷ್ಠಿಯಲ್ಲಿ ಆಕ್ರೋಶ ವ್ಯಕ್ತಪಡಿಸಿ ಮಾತನಾಡಿದ್ದರು. “ಅನ್ಸಾರಿ ಅವರು ಪ್ರತಿದಿನ ಮಧ್ಯಾಹ್ನ ಸಂಸತ್ತಿನಿಂದ ಹೊರಡುತ್ತಾರೆ. ಮಧ್ಯಾಹ್ನದ ನಂತರ ಬೇರೆಯವರು ರಾಜ್ಯಸಭೆಯ ಅಧ್ಯಕ್ಷ ಪೀಠದಲ್ಲಿ ಕೂರುತ್ತಾರೆ. ಇದರಿಂದಾಗಿ ಸರ್ಕಾರಿ ಉದ್ಯೋಗ ಬಡ್ತಿಯಲ್ಲಿ ಎಸ್‌ಸಿ/ಎಸ್‌ಟಿಗಳಿಗೆ ಕೋಟಾ ಒದಗಿಸುವ ಮಸೂದೆಯನ್ನು ಚರ್ಚಿಸಲಾಗಲಿಲ್ಲ. ಸದನವನ್ನು ಕ್ರಮಬದ್ಧವಾಗಿಟ್ಟಿಲ್ಲ ಎಂದು ಅನ್ಸಾರಿ ಮತ್ತು ಸರ್ಕಾರವನ್ನು ಮಾಯಾವತಿ ದೂಷಿಸಿದ್ದರು.

ಈ ಘಟನೆಯ ಬಗ್ಗೆ ಹಮೀದ್ ಅನ್ಸಾರಿ ತಮ್ಮ ಆತ್ಮಚರಿತ್ರೆ “ಬೈ ಮೆನಿ ಎ ಹ್ಯಾಪಿ ಆಕ್ಸಿಡೆಂಟ್” ನಲ್ಲಿ ಬರೆದಿದ್ದಾರೆ ಎಂದು ‘ಇಂಡಿಯಾ ಟುಡೇ’ ವರದಿ ಮಾಡಿದೆ. ಅನ್ಸಾರಿ ಪ್ರಕಾರ, ಮಾಯಾವತಿ ಮರುದಿನ ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ್ದರು. ಆದರೆ, ಪುಸ್ತಕದಲ್ಲಿ ನಮಾಝ್‌ಗಾಗಿ ಎದ್ದು ಹೋಗಿದ್ದಕ್ಕೆ ಮಾಯಾವತಿ ಪ್ರಶ್ನೆ ಎತ್ತಿದ್ದರು ಎಂಬ ಬಗ್ಗೆ ಯಾವುದೇ ಉಲ್ಲೇಖವಿಲ್ಲ. ಹಾಗಾಗಿ, ಇದು 12 ವರ್ಷಗಳ ಹಿಂದೆ ಸಂಸತ್ತಿನಲ್ಲಿ ನಡೆದ ಘಟನೆಯ ವಿಡಿಯೋವನ್ನು ಕೋಮು ಕೋನದಲ್ಲಿ ತಪ್ಪಾದ ಮಾಹಿತಿಯೊಂದಿಗೆ ಹಂಚಿಕೊಂಡಿರುವುದು ಸ್ಪಷ್ಟವಾಗಿದೆ.

ಇದನ್ನೂ ಓದಿ : Fact Check : ದೆಹಲಿಯಲ್ಲಿ ಪ್ರತಿಭಟನಾ ನಿರತ ರೈತರು ಹಿಂದೂ ದೇವಾಲಯದ ಮೇಲೆ ದಾಳಿ ಮಾಡಿದ್ರಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...