Homeಫ್ಯಾಕ್ಟ್‌ಚೆಕ್Fact Check: ನಮಾಝ್‌ಗಾಗಿ ಹಮೀದ್ ಅನ್ಸಾರಿ ರಾಜ್ಯಸಭೆ ಕಲಾಪ ಮುಂದೂಡುತ್ತಿದ್ದರು ಎಂಬುವುದು ಸುಳ್ಳು

Fact Check: ನಮಾಝ್‌ಗಾಗಿ ಹಮೀದ್ ಅನ್ಸಾರಿ ರಾಜ್ಯಸಭೆ ಕಲಾಪ ಮುಂದೂಡುತ್ತಿದ್ದರು ಎಂಬುವುದು ಸುಳ್ಳು

- Advertisement -
- Advertisement -

ಮಾಜಿ ಉಪರಾಷ್ಟ್ರಪತಿ ಹಾಗೂ ರಾಜ್ಯಸಭೆಯ ಮಾಜಿ ಅಧ್ಯಕ್ಷ ಹಮೀದ್ ಅನ್ಸಾರಿ ಅವರು ಮತ್ತು ಬಹುಜನ ಸಮಾಜವಾದಿ ಪಕ್ಷ (ಬಿಎಸ್‌ಪಿ)ದ ಮುಖ್ಯಸ್ಥೆ ಮಾಯಾವತಿ ಅವರು ರಾಜ್ಯಸಭೆಯಲ್ಲಿ ಪರಸ್ಪರ ಮಾತನಾಡಿರುವ ವಿಡಿಯೋವೊಂದು ಭಾರೀ ವೈರಲ್‌ ಆಗಿದ್ದು, “ಹಮೀದ್ ಅನ್ಸಾರಿ ಅವರು ನಮಾಝ್‌ಗೆ ತೆರಳುವ ಸಲುವಾಗಿ ರಾಜ್ಯಸಭೆ ಕಲಾಪವನ್ನು ಮುಂದೂಡುತ್ತಿದ್ದರು. ಈ ಕುರಿತು ಮಾಯಾವತಿ ರಾಜ್ಯಸಭೆಯಲ್ಲಿ ಪ್ರಶ್ನೆ ಎತ್ತಿದ್ದರು” ಎಂದು ಶೀರ್ಷಿಕೆ ಕೊಟ್ಟು ಹಂಚಿಕೊಳ್ಳಲಾಗ್ತಿದೆ.

ಫೆ.10, 2024ರಂದು ಆಂಧ್ರ ಪ್ರದೇಶ ರಾಜ್ಯ ಬಿಜೆಪಿ ಉಪಾಧ್ಯಕ್ಷ ವಿಷ್ಣು ವರ್ಧನ್ ರೆಡ್ಡಿ ಅವರು ಎಕ್ಸ್‌ನಲ್ಲಿ ಈ ವಿಡಿಯೋ ಹಂಚಿಕೊಂಡಿದ್ದು, “ಹಮೀದ್ ಅನ್ಸಾರಿ ಅವರನ್ನು ಉಪ ರಾಷ್ಟ್ರಪತಿಯಾಗಿ ಕಾಂಗ್ರೆಸ್ ನಾಮನಿರ್ದೇಶನ ಮಾಡಿತ್ತು. ಅವರು ಪ್ರಾರ್ಥನೆ ಸಲ್ಲಿಸಲು ಕಲಾಪದ ವೇಳೆ ಪ್ರತಿದಿನ 12:00 ಗಂಟೆಗೆ ರಾಜ್ಯಸಭೆಯಿಂದ ಹೊರಡುತ್ತಿದ್ದರು. ಎಲ್ಲಾ ಸದಸ್ಯರು ಸಾಂವಿಧಾನಿಕ ಕಲಾಪವನ್ನು ನಿಲ್ಲಿಸಿ, ಅವರ ವಾಪಸಾತಿಗೆ ಕಾಯುತ್ತಾ ಖಾಲಿ ಕೂರುತ್ತಿದ್ದರು. ಮಾಯಾವತಿ ಅವರು ಈ ವಿಷಯವನ್ನು ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದ್ದರು. ಆದರೆ, ಕಾಂಗ್ರೆಸ್ ಅವರನ್ನು ಬೆಂಬಲಿಸಿರಲಿಲ್ಲ. ಈಗ ಕಾಂಗ್ರೆಸ್ ಜಾತ್ಯತೀತೆಯ ಬಗ್ಗೆ ಪಾಠ ಮಾಡುತ್ತಿದೆ” ಎಂದು ಬರೆದುಕೊಂಡಿದ್ದರು.

ನಿವೃತ್ತ ಐಎಎಸ್ ಅಧಿಕಾರಿ ಸೂರ್ಯ ಪ್ರತಾಪ್ ಸಿಂಗ್ ಅವರು ಫೆ.7, 2024ರಂದು ಈ ವಿಡಿಯೋ ಹಂಚಿಕೊಂಡಿದ್ದು, “ಉಪರಾಷ್ಟ್ರಪತಿಯಾಗಿದ್ದ ಹಮೀದ್ ಅನ್ಸಾರಿ ಅವರು ರಾಜ್ಯಸಭೆ ಕಲಾಪವನ್ನು ಪ್ರತಿದಿನ 12:00 ಗಂಟೆಗೆ ಮುಂದೂಡಿ ನಮಾಜ್ ಮಾಡಲು ಹೋಗುತ್ತಿದ್ದರು. ಎಲ್ಲಾ ಸಂಸದರು ಸಂವಿಧಾನಾತ್ಮಕ ಕೆಲಸಗಳನ್ನು ನಿಲ್ಲಿಸಿ ಅವರಿಗಾಗಿ ಕಾಯುತ್ತಾ ಕೂರುತ್ತಿದ್ದರು. ಹಮೀದ್ ಅನ್ಸಾರಿ ಅವರನ್ನು ಕಾಂಗ್ರೆಸ್ ನಾಮನಿರ್ದೇಶನ ಮಾಡಿತ್ತು. ಮಾಯಾವತಿಯವರು ಈ ವಿಷಯವನ್ನು ಪ್ರಸ್ತಾಪಿಸಿದಾಗ, ಅನ್ಸಾರಿಯವರ ಉತ್ತರವನ್ನು ನೋಡಿ” ಎಂದಿದ್ದರು.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಕುರಿತು ನಾನುಗೌರಿ.ಕಾಂ ಸತ್ಯಾಸತ್ಯತೆ ಪರಿಶೀಲನೆ ನಡೆಸಿದೆ. ಗೂಗಲ್‌ನಲ್ಲಿ ಈ ವಿಡಿಯೋ ಕುರಿತು ನಾವು ಹುಡುಕಾಟ ನಡೆಸಿದಾಗ, ಇದು 2012ರಲ್ಲಿ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಆಗಿನ ರಾಜ್ಯಸಭೆ ಅಧ್ಯಕ್ಷ ಹಮೀದ್ ಅನ್ಸಾರಿ ಅವರು ಮತ್ತು ಮಾಯಾವತಿ ನಡುವೆ ನಡೆದ ಚರ್ಚೆಯದ್ದು ಎಂದು ತಿಳಿದು ಬಂದಿದೆ. ವಿಡಿಯೋದಲ್ಲಿ “ಪ್ರತಿದಿನ 12 ಗಂಟೆಯ ನಂತರ ಕಲಾಪ ಸ್ಥಗಿತಗೊಳ್ಳುತ್ತಿದೆ. ನೀವು ಸದನದ ಅಧ್ಯಕ್ಷರು, ಪ್ರತಿದಿನ 12 ಗಂಟೆಗೆ ಎದ್ದು ಹೊರಡುತ್ತೀರಿ. ಹೀಗಾದರೆ ಯಾರು ಸಂಸತ್ತಿನ ಕಲಾಪಗಳ ಅಧ್ಯಕ್ಷತೆ ವಹಿಸುತ್ತಾರೆ? ಸದನವು ಕ್ರಮ ಬದ್ಧವಾಗಿ ನಡೆಯುವಂತೆ ನೋಡಿಕೊಳ್ಳಿ” ಎಂದು ಹಮೀದ್ ಅನ್ಸಾರಿಗೆ ಮಾಯಾವತಿ ಹೇಳಿರುವುದನ್ನು ನೋಡಬಹುದು.

ಮಾಯಾವತಿ ಪ್ರಶ್ನೆ ಮಾಡುತ್ತಿದ್ದಂತೆ ಹಮೀದ್ ಅನ್ಸಾರಿ ಅವರು ಕುಳಿತುಕೊಳ್ಳುವಂತೆ ಮನವಿ ಮಾಡಿರುವುದು ವಿಡಿಯೋದಲ್ಲಿದೆ. ಇಲ್ಲಿ ಮಾಯಾವತಿ ಅವರು ಅನ್ಸಾರಿ ಅವರಿಗೆ ಪ್ರಶ್ನೆ ಕೇಳಿರುವ ವಿಡಿಯೋ ನಿಜವಾದದ್ದೆ. ಆದರೆ, ಮಾಯಾವತಿ “ನೀವು 12 ಗಂಟೆಗೆ ಎದ್ದು ಹೊರಡುತ್ತೀರಿ ಎಂದು ಹೇಳಿದ್ದಾರೆಯೇ ಹೊರತು, ಎಲ್ಲೂ ನಮಾಝ್‌ಗೆ ಎದ್ದು ಹೋಗುತ್ತೀರಿ” ಎಂದು ಹೇಳಿಲ್ಲ.

ಮಾಯಾವತಿ ಅವರು ಮಾತನಾಡಿರುವ ಸಂಪೂರ್ಣ ವಿಡಿಯೋ ಇಲ್ಲಿದೆ

ವೈರಲ್ ವಿಡಿಯೋವನ್ನು ಮೊದಲು ಫೆಬ್ರವರಿ 4,2024 ರಂದು ಬಹುಜನ ಸಮಾಜ ಪಕ್ಷದ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾಗಿತ್ತು. ಆ ಬಳಿಕ ಅದನ್ನು ಹಲವರು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ ಮಾಡಿದ್ದು, ಅನ್ಸಾರಿ ಮತ್ತು ಕಾಂಗ್ರೆಸ್ ಮುಸ್ಲಿಂ ಪರ ಎಂದು ಆರೋಪಿಸಿದ್ದಾರೆ.

ಡಿಸೆಂಬರ್ 2012ರ ಮಾಧ್ಯಮ ವರದಿಗಳ ಪ್ರಕಾರ, ಮಾಯಾವತಿ ಅವರು ಸರ್ಕಾರಿ ಉದ್ಯೋಗ ಬಡ್ತಿಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಮೀಸಲಾತಿಯ ವಿಷಯದ ಬಗ್ಗೆ ಮಾತನಾಡಲು ಬಯಸಿದ್ದರು. ಆದರೆ, ಸಮಾಜವಾದಿ ಪಕ್ಷದ ಪ್ರತಿಭಟನೆಯಿಂದಾಗಿ ಸಂಸತ್ ಕಲಾಪ ಅಸ್ತವ್ಯಸ್ತಗೊಂಡಿತ್ತು. ಇದು ಮಾಯಾವತಿ ಅವರನ್ನು ಕೆರಳಿಸಿತ್ತು.

ವರದಿ ಲಿಂಕ್ ಇಲ್ಲಿದೆ 

ಅದೇ ದಿನ, ಮಾಯಾವತಿ ಅವರು ಪತ್ರಿಕಾಗೋಷ್ಠಿಯಲ್ಲಿ ಆಕ್ರೋಶ ವ್ಯಕ್ತಪಡಿಸಿ ಮಾತನಾಡಿದ್ದರು. “ಅನ್ಸಾರಿ ಅವರು ಪ್ರತಿದಿನ ಮಧ್ಯಾಹ್ನ ಸಂಸತ್ತಿನಿಂದ ಹೊರಡುತ್ತಾರೆ. ಮಧ್ಯಾಹ್ನದ ನಂತರ ಬೇರೆಯವರು ರಾಜ್ಯಸಭೆಯ ಅಧ್ಯಕ್ಷ ಪೀಠದಲ್ಲಿ ಕೂರುತ್ತಾರೆ. ಇದರಿಂದಾಗಿ ಸರ್ಕಾರಿ ಉದ್ಯೋಗ ಬಡ್ತಿಯಲ್ಲಿ ಎಸ್‌ಸಿ/ಎಸ್‌ಟಿಗಳಿಗೆ ಕೋಟಾ ಒದಗಿಸುವ ಮಸೂದೆಯನ್ನು ಚರ್ಚಿಸಲಾಗಲಿಲ್ಲ. ಸದನವನ್ನು ಕ್ರಮಬದ್ಧವಾಗಿಟ್ಟಿಲ್ಲ ಎಂದು ಅನ್ಸಾರಿ ಮತ್ತು ಸರ್ಕಾರವನ್ನು ಮಾಯಾವತಿ ದೂಷಿಸಿದ್ದರು.

ಈ ಘಟನೆಯ ಬಗ್ಗೆ ಹಮೀದ್ ಅನ್ಸಾರಿ ತಮ್ಮ ಆತ್ಮಚರಿತ್ರೆ “ಬೈ ಮೆನಿ ಎ ಹ್ಯಾಪಿ ಆಕ್ಸಿಡೆಂಟ್” ನಲ್ಲಿ ಬರೆದಿದ್ದಾರೆ ಎಂದು ‘ಇಂಡಿಯಾ ಟುಡೇ’ ವರದಿ ಮಾಡಿದೆ. ಅನ್ಸಾರಿ ಪ್ರಕಾರ, ಮಾಯಾವತಿ ಮರುದಿನ ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ್ದರು. ಆದರೆ, ಪುಸ್ತಕದಲ್ಲಿ ನಮಾಝ್‌ಗಾಗಿ ಎದ್ದು ಹೋಗಿದ್ದಕ್ಕೆ ಮಾಯಾವತಿ ಪ್ರಶ್ನೆ ಎತ್ತಿದ್ದರು ಎಂಬ ಬಗ್ಗೆ ಯಾವುದೇ ಉಲ್ಲೇಖವಿಲ್ಲ. ಹಾಗಾಗಿ, ಇದು 12 ವರ್ಷಗಳ ಹಿಂದೆ ಸಂಸತ್ತಿನಲ್ಲಿ ನಡೆದ ಘಟನೆಯ ವಿಡಿಯೋವನ್ನು ಕೋಮು ಕೋನದಲ್ಲಿ ತಪ್ಪಾದ ಮಾಹಿತಿಯೊಂದಿಗೆ ಹಂಚಿಕೊಂಡಿರುವುದು ಸ್ಪಷ್ಟವಾಗಿದೆ.

ಇದನ್ನೂ ಓದಿ : Fact Check : ದೆಹಲಿಯಲ್ಲಿ ಪ್ರತಿಭಟನಾ ನಿರತ ರೈತರು ಹಿಂದೂ ದೇವಾಲಯದ ಮೇಲೆ ದಾಳಿ ಮಾಡಿದ್ರಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...