HomeUncategorized'RAW' ಕುರಿತ ದಿ ಪ್ರಿಂಟ್ ವರದಿಗೆ ನಿರ್ಬಂಧ ಕೋರಿದ್ದ ಪಿಐಎಲ್‌ ವಜಾ

‘RAW’ ಕುರಿತ ದಿ ಪ್ರಿಂಟ್ ವರದಿಗೆ ನಿರ್ಬಂಧ ಕೋರಿದ್ದ ಪಿಐಎಲ್‌ ವಜಾ

- Advertisement -
- Advertisement -

ರಿಸರ್ಚ್ ಅಂಡ್ ಅನಾಲಿಸಿಸ್ ವಿಂಗ್ (RAW) ಉತ್ತರ ಅಮೆರಿಕಾದಲ್ಲಿ ತನ್ನ ಕಾರ್ಯಾಚರಣೆಗಳನ್ನು ಸ್ಥಗಿತಗೊಳಿಸಿರುವ ಕುರಿತು ‘ದಿ ಪ್ರಿಂಟ್’ ಪ್ರಕಟಿಸಿದ್ದ ಲೇಖನವನ್ನು ತೆಗೆದು ಹಾಕಲು ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್)ಯನ್ನು ದೆಹಲಿ ಹೈಕೋರ್ಟ್ ಸೋಮವಾರ ತಿರಸ್ಕರಿಸಿದೆ.

ಮೇಲ್ನೋಟಕ್ಕೆ ಲೇಖನವು ಅಧಿಕಾರಿಗಳ ವೃತ್ತಿ ಜೀವನ ಅಥವಾ ಅವರ ಕುಟುಂಬ ಸದಸ್ಯರ ಜೀವಕ್ಕೆ ಯಾವುದೇ ಅಪಾಯವನ್ನುಂಟು ಮಾಡುವುದಿಲ್ಲ ಎಂದು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನಮೋಹನ್ ಮತ್ತು ನ್ಯಾಯಮೂರ್ತಿ ಮನಮೀತ್ ಪ್ರೀತಮ್ ಸಿಂಗ್ ಅರೋರಾ ಅವರ ವಿಭಾಗೀಯ ಪೀಠ ತಿಳಿಸಿದೆ.

ಪತ್ರಿಕಾ ಸ್ವಾತಂತ್ರ್ಯವನ್ನು ಅತ್ಯಂತ ಉನ್ನತ ಮಟ್ಟದಲ್ಲಿ ಇರಿಸಲಾಗಿದೆ. ಲೇಖನ ತೆಗೆದು ಹಾಕುವಂತೆ ನಾವು ಆದೇಶಿಸಲು ಸಾಧ್ಯವಿಲ್ಲ ಎಂದು ಒತ್ತಿ ಹೇಳಿದೆ.

ಸರ್ಕಾರವು ಅಗತ್ಯವೆಂದು ಪರಿಗಣಿಸಿದರೆ ಸಮಸ್ಯೆಯನ್ನು ನಿಭಾಯಿಸಲು ಅಧಿಕಾರ ಹೊಂದಿದೆ ಎಂದು ನ್ಯಾಯಾಲಯವು ಪಿಐಎಲ್‌ ತಿರಸ್ಕರಿಸುವಾಗ ತಿಳಿಸಿದೆ.

‘ದಿ ಪ್ರಿಂಟ್’ ನವೆಂಬರ್ 30, 2023 ರಂದು “Nijjar-Pannun effect: RAW downs shutters in North America 1st time since inception in 1968”ಎಂಬ ಶೀರ್ಷಿಕೆಯಲ್ಲಿ ಲೇಖನವನ್ನು ಪ್ರಕಟಿಸಿತ್ತು. ಇದನ್ನು ದಿ ಪ್ರಿಂಟ್‌ಗೆ ಕಾಂಟ್ರಿಬ್ಯೂಟಿಂಗ್ ಎಡಿಟರ್ ಪ್ರವೀಣ್ ಸ್ವಾಮಿ ಅವರು ಬರೆದಿದ್ದರು.

ಭಾರತೀಯ ಹೈಕಮಿಷನ್‌ನಲ್ಲಿ ಕೆಲಸ ಮಾಡುವವರಿಂದ ತನಗೆ ಬಂದ ಮಾಹಿತಿಯ ಪ್ರಕಾರ, ಲೇಖನವು ಭಾರತೀಯ ರಾಜತಾಂತ್ರಿಕರು ಮತ್ತು ಗುಪ್ತಚರ ಕಾರ್ಯಕರ್ತರ ಜೀವಕ್ಕೆ ಅಪಾಯವನ್ನುಂಟು ಮಾಡಲಿದೆ ಎಂದು ವಕೀಲ ರಾಘವ್ ಅವಸ್ತಿ ಎಂಬವರು ಹೈಕೋರ್ಟ್‌ಗೆ ಪಿಐಎಲ್ ಸಲ್ಲಿಸಿದ್ದರು.

ವಿದೇಶದಲ್ಲಿ ಕೆಲಸ ಮಾಡುವ ಯಾವುದೇ ಸರ್ಕಾರಿ ಅಧಿಕಾರಿ ಅಥವಾ ರಾಜತಾಂತ್ರಿಕರು ಗುಪ್ತಚರ ಸೇವೆಗಳಿಗಾಗಿ ಕೆಲಸ ಮಾಡುತ್ತಿದ್ದಾರೆಯೇ ಎಂಬ ಬಗ್ಗೆ ಮೂಲ ಆಧಾರಿತ ಊಹಾಪೋಹಗಳನ್ನು ಪ್ರಕಟಿಸದಂತೆ ಮಾಧ್ಯಮ ಸಂಸ್ಥೆಗಳಿಗೆ ನಿರ್ಬಂಧ ಹೇರಲು ಪಿಐಎಲ್‌ನಲ್ಲಿ ಕೋರಲಾಗಿತ್ತು.

‘ದಿ ಪ್ರಿಂಟ್‌’ನ ಲೇಖನವು ಸಂಪೂರ್ಣವಾಗಿ ಮೂಲ ಆಧಾರಿತವಾಗಿದೆ. ಇದು ಭಾರತೀಯ ರಾಜತಾಂತ್ರಿಕರ ವೃತ್ತಿ ಜೀವನಕ್ಕೆ ಹಾನಿಯನ್ನುಂಟು ಮಾಡಲಿದೆ ಮತ್ತು ಅವರ ಜೀವನವನ್ನು ಅಪಾಯಕ್ಕೆ ತಳ್ಳಲಿದೆ. ತನ್ನನ್ನು ಸಂಪರ್ಕಿಸಿದ ರಾಜತಾಂತ್ರಿಕರ ಗುರುತನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಲು ಸಿದ್ಧ. ಅಧಿಕಾರಿಗಳ ಗುರುತನ್ನು ಮರೆ ಮಾಚಲು ನ್ಯಾಯಾಲಯ ವಿಡಿಯೋ ಕಾನ್ಫರೆನ್ಸ್ ಮೂಲಕ ಕಲಾಪ ನಡೆಸಬಹುದು ಎಂದು ಅವಸ್ತಿ ಪಿಐಎಲ್‌ನಲ್ಲಿ ಹೇಳಿದ್ದರು.

ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಈ ರೀತಿಯ ಸುದ್ದಿಗಳ ವರದಿಯನ್ನು ನಿರ್ಬಂಧಿಸಿ ಆದೇಶಿಸಲು ಸಾಧ್ಯವಿಲ್ಲ ಎಂದು ವಾದವನ್ನು ತಿರಸ್ಕರಿಸಿದೆ. ಭಾರತ ಸರ್ಕಾರವು ಸಮಸ್ಯೆಯನ್ನು ನಿಭಾಯಿಸಲು ಸಾಕಷ್ಟು ಅಧಿಕಾರವನ್ನು ಹೊಂದಿದೆ. ರಾಷ್ಟ್ರೀಯ ಭದ್ರತೆಗೆ ಏನಾದರೂ ಅಪಾಯವಿದೆ ಎಂದು ಸರ್ಕಾರ ಭಾವಿಸಿದರೆ, ಅವರು ಅದರ ಮೇಲೆ ಕಾರ್ಯನಿರ್ವಹಿಸಲು ಸ್ವತಂತ್ರರು ಎಂದು ನ್ಯಾಯಾಲಯ ಹೇಳಿದೆ. ಪಿಐಎಲ್‌ ಊಹೆಗಳ ಮೇಲೆ ಸಲ್ಲಿಸಲಾಗಿದೆ ಎಂದು ಅದನ್ನು ತಿರಸ್ಕರಿಸಿದೆ.

ಇದನ್ನೂ ಓದಿ : ಸಿಬಿಐನಿಂದ ಕೊಚ್ಚರ್ ದಂಪತಿಯ ಬಂಧನ: ‘ಅಧಿಕಾರದ ದುರುಪಯೋಗ’ ಎಂದ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...