Homeಮುಖಪುಟಚಂಡೀಗಢ ಮೇಯರ್ ಚುನಾವಣೆ: ಮತಪತ್ರ ತಿರುಚಿದ್ದನ್ನು ಒಪ್ಪಿಕೊಂಡ ಚುನಾವಣಾಧಿಕಾರಿ

ಚಂಡೀಗಢ ಮೇಯರ್ ಚುನಾವಣೆ: ಮತಪತ್ರ ತಿರುಚಿದ್ದನ್ನು ಒಪ್ಪಿಕೊಂಡ ಚುನಾವಣಾಧಿಕಾರಿ

- Advertisement -
- Advertisement -

ವಿವಾದಾತ್ಮಕ ಚಂಡೀಗಢ ಮೇಯರ್ ಚುನಾವಣೆ ಕುರಿತಂತೆ ಇಂದು ಸುಪ್ರೀಂ ಕೋರ್ಟ್‌ಗೆ ಹಾಜರಾದ ಚುನಾವಣಾಧಿಕಾರಿ ಅನಿಲ್ ಮಾಸಿಹ್, ತಾನು ಮತಪತ್ರಗಳನ್ನು ತಿರುಚಿರುವುದನ್ನು ಒಪ್ಪಿಕೊಂಡಿದ್ದಾರೆ. ಅವರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠ ಸೂಚಿಸಿದೆ.

ಮರು ಚುನಾವಣೆ ನಡೆಸುವ ಬದಲು ರಿಟರ್ನಿಂಗ್ ಅಧಿಕಾರಿ ಮಾಡಿದ ಗುರುತುಗಳನ್ನು ಗಣನೆಗೆ ತೆಗದುಕೊಳ್ಳದೆ ಮತಪತ್ರಗಳನ್ನು ಮರು ಎಣಿಕೆ ಮಾಡಿ ಫಲಿತಾಂಶ ಪ್ರಕಟಿಸಬೇಕು ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

ಕುದುರೆ ವ್ಯಾಪಾರದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ನ್ಯಾಯಾಲಯ, ನಾಳೆ ಎಲ್ಲಾ ಮತಪತ್ರಗಳನ್ನು ಹಾಜರುಪಡಿಸುವಂತೆ ಆದೇಶಿಸಿದೆ. ಲಭ್ಯ ಮತಪತ್ರಗಳನ್ನು ಕೂಲಂಕುಷ ಪರಿಶೀಲನೆ ನಡೆಸಬೇಕೆಂದು ಸೂಚಿಸಿದೆ.

ಸ್ವತಂತ್ರ ಭಾರತದ ಇತಿಹಾಸದಲ್ಲಿ ಮೊದಲ ಬಾರಿಗೆ ಚುನಾವಣಾ ಅಧಿಕಾರಿಯೊಬ್ಬರನ್ನು ದೇಶದ ಮುಖ್ಯ ನ್ಯಾಯಾಧೀಶರು ಅಡ್ಡ ಪ್ರಶ್ನೆಗೆ ಒಳಪಡಿಸಿರುವುದು ಎಂದು ಮಾಸಿಹ್ ಅವರಿಂದ ಉತ್ತರವನ್ನು ಕೇಳಿದ ನಂತರ ನ್ಯಾಯಾಲಯವು ವಿಷಾದ ವ್ಯಕ್ತಪಡಿಸಿದೆ.

ಜನವರಿ 30ರಂದು ನಡೆದ ಚಂಡೀಗಢ ಮುನ್ಸಿಪಲ್ ಕಾರ್ಪೋರೇಷನ್‌ನ ಮೇಯರ್ ಚುನಾವಣೆಯ ಮತ ಎಣಿಕೆಯಲ್ಲಿ ಎಂಟು ಮತಗಳು ಅಸಿಂಧು ಎಂದು ಚುನಾವಣಾಧಿಕಾರಿ ಅನಿಲ್ ಮಾಸಿಹ್ ಘೋಷಿಸಿದ್ದರು. ಈ ಮೂಲಕ ಎಎಪಿಯ ಮೇಯರ್ ಅಭ್ಯರ್ಥಿಯನ್ನು ಬಿಜೆಪಿಯ ಮನೋಜ್ ಸೋಂಕರ್ ನಾಲ್ಕು ಮತಗಳ ಅಂತರದಿಂದ ಸೋಲಿಸಿದ್ದರು. ಬಿಜೆಪಿಯ ಅಲ್ಪಸಂಖ್ಯಾತ ಘಟಕದ ಸದಸ್ಯರಾದ ಮಾಸಿಹ್ ಅವರು ಉದ್ದೇಶಪೂರ್ವಕವಾಗಿ ಮತಗಳನ್ನು ಅಮಾನ್ಯಗೊಳಿಸಿದ್ದಾರೆ ಎಂದು ಎಎಪಿ ಆರೋಪಿಸಿತ್ತು.

ಎಎಪಿಯ ಆರೋಪಕ್ಕೆ ಪುಷ್ಠಿ ನೀಡುವಂತೆ ಮಾಸಿಹ್ ಅವರು ಎಎಪಿಯ ಕೆಲ ಕೌನ್ಸಿಲರ್‌ಗಳ ಮತ ಪತ್ರಗಳಿಗೆ ಮಾರ್ಕ್‌ ಮಾಡಿರುವುದು ಕ್ಯಾಮಾರದಲ್ಲಿ ರೆಕಾರ್ಡ್‌ ಆಗಿತ್ತು. ಈ ಸಂಬಂಧ ಎಎಪಿ ಸುಪ್ರೀಂ ಕೋರ್ಟ್‌ ಮೊರೆ ಹೋಗಿತ್ತು. ಫೆಬ್ರವರಿ 5 ರಂದು ಪ್ರಕರಣದ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ಮಾಸಿಹ್ ಅವರ ಕೃತ್ಯ “ಪ್ರಜಾಪ್ರಭುತ್ವದ ಅಪಹಾಸ್ಯ” ಎಂದಿತ್ತು.

ಇಂದು (ಫೆ.19) ವಿಚಾರಣೆ ಮುಂದುವರೆಸಿದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರ ಪೀಠ, ನಿನ್ನೆ(ಫೆ.18) ಸಂಜೆ ಬಿಜೆಪಿಯ ಮನೋಜ್ ಸೋಂಕರ್ ಮೇಯರ್ ಸ್ಥಾನಕ್ಕೆ ರಾಜೀನಾಮೆ ನೀಡಿರುವುದನ್ನು ಗಮನಿಸಿತು ಮತ್ತು ಮಾಸಿಹ್ ಅವರು ಮುಂದೆ ಬಂದು ಕೆಲವು ಪ್ರಶ್ನೆಗಳಿಗೆ ಉತ್ತರಿಸುವಂತೆ ಸೂಚಿಸಿತು.

ವಿಚಾರಣೆ ವೇಳೆ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು “ಮಿಸ್ಟರ್ ಮಾಸಿಹ್, ನಾನು ನಿಮಗೆ ಕೆಲವು ಪ್ರಶ್ನೆಗಳನ್ನು ಕೇಳುತ್ತಿದ್ದೇನೆ. ನೀವು ಸತ್ಯವಾದ ಉತ್ತರಗಳನ್ನು ನೀಡದಿದ್ದರೆ ನಿಮ್ಮ ಮೇಲೆ ಕಾನೂನು ಕ್ರಮ ಜರುಗಿಸಲಾಗುವುದು. ಇದು ಗಂಭೀರ ವಿಚಾರ. ನೀವು ಕ್ಯಾಮರಾ ನೋಡುತ್ತಾ ಬ್ಯಾಲೆಟ್‌ ಪೇಪರ್‌ಗಳ ಮೇಲೆ ಮಾರ್ಕ್‌ ಮಾಡಿರುವ ವಿಡಿಯೋವನ್ನು ನಾವು ನೋಡಿದ್ದೇವೆ. ನೀವು ಮಾರ್ಕ್‌ ಯಾಕೆ ಮಾಡಿದ್ದು? ಎಂದು ಪ್ರಶ್ನಿಸಿದ್ದಾರೆ.

ಇದಕ್ಕೆ ಉತ್ತರಿಸಿದ ಮಾಸಿಹ್, ಎಂಟು ಬ್ಯಾಲೆಟ್ ಪೇಪರ್‌ಗಳಲ್ಲಿ ಕ್ರಾಸ್ (X)ಮಾಡಿರುವುದು ನಿಜ. ಅವುಗಳನ್ನು ವಿರೂಪಗೊಂಡಿದ್ದರಿಂದ ಪ್ರತ್ಯೇಕಿಸಲು ಹಾಗೆ ಮಾಡಿದೆ ಎಂದಿದ್ದಾರೆ.

ಮರು ಪ್ರಶ್ನೆ ಹಾಕಿದ ನ್ಯಾಯಮೂರ್ತಿಗಳು, “ನೀವು ಬ್ಯಾಲೆಟ್ ಪೇಪರ್‌ಗಳನ್ನು ವಿರೂಪಗೊಳಿಸಿದ್ದು ಯಾಕೆ? ನೀವು ಬ್ಯಾಲೆಟ್ ಪೇಪರ್‌ಗಳ ಮೇಲೆ ಸಹಿ ಮಾತ್ರ ಮಾಡಬಹುದು. ಅವುಗಳ ಮೇಲೆ ಮಾರ್ಕ್‌ ಮಾಡಬಹುದು ಎಂದು ನಿಯಮಗಳಲ್ಲಿ ಎಲ್ಲಿದೆ? ಎಂದು ಕೇಳಿದ್ದಾರೆ.

ಬಳಿಕ, ಚಂಡೀಗಢ ಆಡಳಿತವನ್ನು ಪ್ರತಿನಿಧಿಸುತ್ತಿದ್ದ ಭಾರತದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರ ಕಡೆಗೆ ತಿರುಗಿದ ನ್ಯಾಯಮೂರ್ತಿಗಳು “ಮಿಸ್ಟರ್ ಸಾಲಿಸಿಟರ್, ಮಾಸಿಹ್ ಅವರು ಚುನಾವಣಾ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡಿದ್ದಾರೆ. ಹಾಗಾಗಿ, ಅವರನ್ನು ವಿಚಾರಣೆಗೆ ಒಳಪಡಿಸಬೇಕು ಎಂದು ಆದೇಶಿಸಿದ್ದಾರೆ.

ಇದನ್ನೂ ಓದಿ :  ‘RAW’ ಕುರಿತ ದಿ ಪ್ರಿಂಟ್ ವರದಿಗೆ ನಿರ್ಬಂಧ ಕೋರಿದ್ದ ಪಿಐಎಲ್‌ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...