Homeಮುಖಪುಟ5 ವರ್ಷದ ಎಂಎಸ್ಪಿ ಗುತ್ತಿಗೆ; ಕೇಂದ್ರದ ಪ್ರಸ್ತಾವನೆ ತಿರಸ್ಕರಿಸಿದ ರೈತ ಮುಖಂಡರು: ನಾಳೆಯಿಂದ ದೆಹಲಿ ಚಲೋ...

5 ವರ್ಷದ ಎಂಎಸ್ಪಿ ಗುತ್ತಿಗೆ; ಕೇಂದ್ರದ ಪ್ರಸ್ತಾವನೆ ತಿರಸ್ಕರಿಸಿದ ರೈತ ಮುಖಂಡರು: ನಾಳೆಯಿಂದ ದೆಹಲಿ ಚಲೋ ಆರಂಭ

- Advertisement -
- Advertisement -

ದ್ವಿದಳ ಧಾನ್ಯಗಳು, ಮೆಕ್ಕೆಜೋಳ ಮತ್ತು ಹತ್ತಿಯನ್ನು ಐದು ವರ್ಷಗಳವರೆಗೆ ಸರ್ಕಾರಿ ಸಂಸ್ಥೆಗಳಿಂದ ಎಂಎಸ್‌ಪಿ ದರದಲ್ಲಿ ಖರೀದಿಸುವ ಕೇಂದ್ರದ ಪ್ರಸ್ತಾವನೆಯನ್ನು ತಿರಸ್ಕರಿಸಿದ ‘ದೆಹಲಿ ಚಲೋ’ ಆಂದೋಲನದಲ್ಲಿ ಭಾಗವಹಿಸಿದ ರೈತ ಮುಖಂಡರು ಇದು ರೈತರ ಹಿತಾಸಕ್ತಿಯಲ್ಲ ಎಂದು ಹೇಳಿದ್ದು, ನಾವು ಬುಧವಾರ ಪಾದಯಾತ್ರೆ ಮಾಡುತ್ತೇವೆ ಎಂದು ಘೋಷಿಸಿದ್ದಾರೆ.

ನಮ್ಮ ಸಮಸ್ಯೆಗಳನ್ನು ಪರಿಹರಿಸಿ ಅಥವಾ ಬ್ಯಾರಿಕೇಡ್‌ಗಳನ್ನು ತೆಗೆದುಹಾಕಿ ಶಾಂತಿಯುತವಾಗಿ ಪ್ರತಿಭಟಿಸಲು ದೆಹಲಿಗೆ ಹೋಗಲು ನಮಗೆ ಅವಕಾಶ ಮಾಡಿಕೊಡಿ ಎಂದು ನಾವು ಸರ್ಕಾರಕ್ಕೆ ಮನವಿ ಮಾಡುತ್ತೇವೆ ಎಂದು ರೈತ ಮುಖಂಡ ಸರ್ವಾನ್ ಸಿಂಗ್ ಪಂಧೇರ್ ಹೇಳಿದ್ದಾರೆ.

ರೈತ ಮುಖಂಡರೊಂದಿಗಿನ ನಾಲ್ಕನೇ ಸುತ್ತಿನ ಮಾತುಕತೆಯಲ್ಲಿ, ಮೂವರು ಕೇಂದ್ರ ಸಚಿವರ ಸಮಿತಿಯು ದ್ವಿದಳ ಧಾನ್ಯಗಳು, ಮೆಕ್ಕೆಜೋಳ ಮತ್ತು ಹತ್ತಿಯನ್ನು ರೈತರಿಂದ ಐದು ವರ್ಷಗಳವರೆಗೆ ಕನಿಷ್ಠ ಬೆಂಬಲ ಬೆಲೆಗೆ ಖರೀದಿ ಮಾಡಲಾಗುವುದು, ಈ ಖರೀದಿಯು ಸರ್ಕಾರದ ಏಜೆನ್ಸಿಗಳ ಮೂಲಕ ನಡೆಯುತ್ತದೆ ಹಾಗೂ ಖರೀದಿ ವಿಚಾರವಾಗಿ ಒಪ್ಪಂದ ಮಾಡಿಕೊಳ್ಳಲಾಗುತ್ತದೆ ಎಂಬ ಪ್ರಸ್ತಾವವನ್ನು ಕೇಂದ್ರವು ರೈತರ ಮುಂದೆ ಇರಿಸಿತ್ತು. ಸಂಯುಕ್ತ ಕಿಸಾನ್ ಮೋರ್ಚಾ, ಸರ್ಕಾರದ ಪ್ರಸ್ತಾವನೆಯನ್ನು ತಿರಸ್ಕರಿಸಿದೆ. ಇದು MSPಗಾಗಿರುವ ರೈತರ ಬೇಡಿಕೆಯನ್ನು ದಿಕ್ಕು ತಪ್ಪಿಸುವ ಮತ್ತು ದುರ್ಬಲಗೊಳಿಸುವ ಪ್ರಯತ್ನವಾಗಿದೆ. ಆದ್ದರಿಂದ  ಸ್ವಾಮಿನಾಥನ್ ಆಯೋಗದ ವರದಿಯಲ್ಲಿ ಇರುವ ಶಿಫಾರಸಿನ ಅನುಷ್ಠಾನದ ಹೊರತಾಗಿ ಯಾವುದಕ್ಕೂ ಒಪ್ಪುವುದಿಲ್ಲ ಎಂದು ಹೇಳಿದೆ.

‘ದೆಹಲಿ ಚಲೋ’ ಪಾದಯಾತ್ರೆಯ ನೇತೃತ್ವ ವಹಿಸಿರುವ ಎಸ್‌ಕೆಎಂ ಮುಖಂಡ ಜಗಜಿತ್ ಸಿಂಗ್ ದಲ್ಲೆವಾಲ್ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ನಮ್ಮ ಎರಡು ವೇದಿಕೆಗಳಲ್ಲಿ ಚರ್ಚೆ ನಡೆಸಿದ ನಂತರ, ಕೇಂದ್ರದ ಪ್ರಸ್ತಾವನೆಯು ಹಿತದೃಷ್ಟಿಯಿಂದ ಕೂಡಿಲ್ಲ ಎಂದು ನಿರ್ಧರಿಸಲಾಗಿದೆ. ನಾವು ಈ ಪ್ರಸ್ತಾಪವನ್ನು ತಿರಸ್ಕರಿಸುತ್ತೇವೆ ಎಂದು ಹೇಳಿದ್ದಾರೆ.

ದೆಹಲಿಗೆ ಪಾದಯಾತ್ರೆ ಮುಂದುವರಿಯಲಿದೆಯಾ ಎಂಬ ಪ್ರಶ್ನೆಗೆ ಉತ್ತರಿಸಿದ ರೈತ ಮುಖಂಡ ಸರ್ವಾನ್ ಸಿಂಗ್ ಪಂಧೇರ್, ನಾವು ಫೆಬ್ರವರಿ 21ರಂದು ಬೆಳಿಗ್ಗೆ 11 ಗಂಟೆಗೆ ಶಾಂತಿಯುತವಾಗಿ ದೆಹಲಿಗೆ ಪ್ರತಿಭಟನಾ ಮರವಣಿಗೆಯನ್ನು ತೆರಳಿ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸುತ್ತೇವೆ ಎಂದು ಹೇಳಿದ್ದಾರೆ.

ಭಾನುವಾರ ರಾತ್ರಿ ರೈತ ಮುಖಂಡರೊಂದಿಗಿನ ಮಾತುಕತೆಯ ನಂತರ ಮಾತನಾಡಿದ್ದ ಕೇಂದ್ರ ಸಚಿವ ಪಿಯೂಷ್ ಗೋಯಲ್, ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟ ಮತ್ತು ಭಾರತೀಯ ರಾಷ್ಟ್ರೀಯ ಕೃಷಿ ಸಹಕಾರಿ ಮಾರಾಟ ಒಕ್ಕೂಟದಂತಹ ಸಹಕಾರ ಸಂಘಗಳು ಹಲಸು, ಉದ್ದಿನಬೇಳೆ ಬೆಳೆಯುವ ರೈತರೊಂದಿಗೆ ಒಪ್ಪಂದ ಮಾಡಿಕೊಳ್ಳಲಿವೆ. ದಾಲ್ ಅಥವಾ ಮೆಕ್ಕೆಜೋಳವನ್ನು ಮುಂದಿನ ಐದು ವರ್ಷಗಳವರೆಗೆ MSPಯಲ್ಲಿ ಖರೀದಿಸಲು ಒಪ್ಪಂದವನ್ನು ಮಾಡಿಕೊಳ್ಳಲಿದೆ.  ಇದಕ್ಕಾಗಿ ಪೋರ್ಟಲ್‌ನ್ನು ಅಭಿವೃದ್ಧಿಪಡಿಸಲಾಗುವುದು, ಇದಲ್ಲದೆ ಕಾಟನ್ ಕಾರ್ಪೊರೇಷನ್ ಆಫ್ ಇಂಡಿಯಾ ರೈತರೊಂದಿಗೆ ಕಾನೂನು ಒಪ್ಪಂದ ಮಾಡಿಕೊಂಡ ನಂತರ ಐದು ವರ್ಷಗಳವರೆಗೆ ಎಂಎಸ್‌ಪಿ ದರದಲ್ಲಿ ರೈತರಿಂದ ಹತ್ತಿ ಖರೀದಿಸಲಿದೆ ಎಂದು ಗೋಯಲ್ ಹೇಳಿದ್ದಾರೆ.

ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್‌ ಈ ಬಗ್ಗೆ ಮಾತನಾಡಿದ್ದು, ನಾನು ಒಬ್ಬ ವಕೀಲನಾಗಿ ಸಭೆಯಲ್ಲಿ ಪಾಲ್ಗೊಂಡಿದ್ದೇನೆ. ಕೇಂದ್ರದ ಪ್ರಸ್ತಾವದ ಕುರಿತು ಭಾಗಿದಾರರೇ ಅಂತಿಮ ತೀರ್ಮಾನ ತೆಗೆದುಕೊಳ್ಳಬೇಕು. ಪ್ರತಿಭಟನೆ ವೇಳೆ ಶಾಂತಿ ಕಾಯ್ದುಕೊಳ್ಳಬೇಕು. ಗೋಧಿಗೆ ಬದಲಾಗಿ ಬೇರೆ ಬೆಳೆಗಳ ಕೃಷಿಗೆ ಮುಂದಾಗುವ ಉದ್ದೇಶವಿದೆ. ಆದರೆ, ಕೃಷಿ ಉತ್ಪನ್ನಗಳ ಬೆಲೆ ಎಂಎಸ್‌ಪಿಗಿಂತಲೂ ಕುಸಿದಾಗ ನಷ್ಟ ಅನುಭವಿಸುವ ಭೀತಿ ಇದೆ ಎಂದು ಸಭೆಯಲ್ಲಿ ಆತಂಕ ವ್ಯಕ್ತಪಡಿಸಿದ್ದರು.

ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಸೇರಿದಂತೆ ವಿವಿಧ ಬೇಡಿಕೆಗಳಿಗಾಗಿ ಕೇಂದ್ರವನ್ನು ಒತ್ತಾಯಿಸಲು ರೈತರು ಉದ್ದೇಶಿಸಿದ್ದ ‘ದೆಹಲಿ ಚಲೋ’ ಮೆರವಣಿಗೆಯನ್ನು ಭದ್ರತಾ ಪಡೆಗಳು ತಡೆದ ನಂತರ ಪ್ರತಿಭಟನಾ ನಿರತ ರೈತರು ಹರಿಯಾಣ- ಪಂಜಾಬ್‌ನ ಗಡಿಯಲ್ಲಿರುವ ಶಂಭು ಮತ್ತು ಖಾನೌರಿ ಗಳಲ್ಲಿ ತಂಗಿದ್ದಾರೆ. ಎಂಎಸ್‌ಪಿ ಜಾರಿ, ಸ್ವಾಮಿನಾಥನ್ ಆಯೋಗದ ಶಿಫಾರಸುಗಳ ಅನುಷ್ಠಾನ, ರೈತರಿಗೆ ಪಿಂಚಣಿ, ಕೃಷಿ ಸಾಲ ಮನ್ನಾ, ವಿದ್ಯುತ್‌ ದರ ಏರಿಕೆ ಬೇಡ, ರೈತರ ಮೇಲಿನ ಪೊಲೀಸ್ ಪ್ರಕರಣಗಳನ್ನು ಹಿಂಪಡೆಯುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರೈತರು ಪ್ರತಿಭಟನೆ ನಡೆಸಿದ್ದಾರೆ. ಲಖಿಂಪುರ ಖೇರಿ ಹಿಂಸಾಚಾರ, ಭೂಸ್ವಾಧೀನ ಕಾಯಿದೆ 2013ರ ಮರುಸ್ಥಾಪನೆ ಮತ್ತು 2020-21ರಲ್ಲಿ ಆಂದೋಲನದ ವೇಳೆ ಮೃತಪಟ್ಟ ರೈತರ ಕುಟುಂಬಗಳಿಗೆ ಪರಿಹಾರವನ್ನು ಕೂಡ ನೀಡಬೇಕು ಎಂದು ಆಗ್ರಹಿಸಿ ರೈತರು ದೆಹಲಿ ಚಲೋ ಹಮ್ಮಿಕೊಂಡಿದ್ದರು.

ಇದನ್ನು ಓದಿ:ಸಿಬಿಐನಿಂದ ಕೊಚ್ಚರ್ ದಂಪತಿಯ ಬಂಧನ: ‘ಅಧಿಕಾರದ ದುರುಪಯೋಗ’ ಎಂದ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...