Homeಚಳವಳಿ"ಗಾಂಧೀಜಿಗಿಂತ ದೊಡ್ಡ ಹಿಂದು ಯಾರೂ ಇಲ್ಲ: ಸ್ವಾತಂತ್ರ್ಯ ತಂದು ಕೊಟ್ಟವನನ್ನೇ ಬಿಡಲಿಲ್ಲ ನಾವು"

“ಗಾಂಧೀಜಿಗಿಂತ ದೊಡ್ಡ ಹಿಂದು ಯಾರೂ ಇಲ್ಲ: ಸ್ವಾತಂತ್ರ್ಯ ತಂದು ಕೊಟ್ಟವನನ್ನೇ ಬಿಡಲಿಲ್ಲ ನಾವು”

- Advertisement -
- Advertisement -

ಉತ್ತರಪ್ರದೇಶದ ವಾರಾಣಸಿಯ ಸೆಂಟ್ರಲ್ ಹಿಂದು ಬಾಲಕರ ಶಾಲೆಯ ವಿದ್ಯಾರ್ಥಿ ಆಯುಷ್ ಚತುರ್ವೇದಿ, ಗಾಂಧಿ ಜಯಂತಿಯಂದು ಮಾಡಿದ ಭಾಷಣದ ವಿಡಿಯೋ ಸಾಕಷ್ಟು ವೈರಲ್ ಆಗಿದೆ. ಧರ್ಮ ಹಾಗೂ ಕೋಮುಗಳ ಹೆಸರಲ್ಲಿ ನಡೆಯುತ್ತಿರುವ ಹಲ್ಲೆ, ಕೊಲೆಗೆ ಆಯುಷ್ ಭಾಷಣ ತಕ್ಕ ತಿರುಗೇಟು ನೀಡಿದೆ. ಗಾಂಧೀಜಿಯವರ ಕಥೆಯೊಂದಿಗೆ ಆರಂಭವಾಗುವ ಆತನ ಭಾಷಣವನ್ನು ರಾಜಶೇಖರ್ ಅಕ್ಕಿಯವರು ಕನ್ನಡಕ್ಕೆ ಅನುವಾದಿಸಿದ್ದಾರೆ…

ಮಹಾತ್ಮ ಗಾಂಧೀಜಿ ಒಂದು ಬಾರಿ ರೈಲಿನಲ್ಲಿ ಫರ್ಸ್ಟ್ ಕ್ಲಾಸ್ ಕಂಪಾರ್ಟ್ ಮೆಂಟಿನಲ್ಲಿ ಟಿಕೆಟ್ ಖರೀದಿಸಿ ಪ್ರಯಾಣಿಸುತ್ತಿದ್ದರು. ಆ ಕಾಲದಲ್ಲಿ ವರ್ಣಭೇದ ನೀತಿ ವ್ಯಾಪಕವಾಗಿತ್ತು. ವರ್ಣಭೇದ ನೀತಿಯಿಂದಾಗಿಯೇ ಗಾಂಧೀಜಿಯವರನ್ನು ಟ್ರೇನ್‍ನಿಂದ ಹೊರದಬ್ಬಲಾಯಿತು. ಅಂದು ಆದ ಗಾಯವನ್ನು ಗಾಂಧೀಜಿಯವರು ಮಾಯಲು ಬಿಡಲೇ ಇಲ್ಲ. ಗಾಯವನ್ನು ಇನ್ನಷ್ಟು ಕೆದರಿದರು. ಇದರಿಂದ ಮಹಾತ್ಮನಿಗೆ ಸಿಕ್ಕ ಅಸ್ತ್ರವೇ ಅಸಹಕಾರ ಚಳವಳಿ.

ದುಷ್ಟರು ಹೇಳುವುದನ್ನು ಮಾಡದೇ ಇರುವುದೇ ಅಸಹಕಾರ ಚಳವಳಿ. ಇದರಿಂದಲೇ ಒಂದು ಇತಿಹಾಸದ ಪ್ರಾರಂಭವಾಯಿತು. ಲೂಯಿ ಫಿಷರ್ ಒಂದು ಮಾತು ಹೇಳುತ್ತಾರೆ, ರೈಲಿನಿಂದ ಗಾಂಧೀಜಿಯವರನ್ನು ಹೊರದಬ್ಬಿದ ಬ್ರಿಟಿಷ್ ವ್ಯಕ್ತಿಗೆ ತಾನು ಹೊರದಬ್ಬಿದ ವ್ಯಕ್ತಿ ಮುಂದೊಂದು ದಿನ ಬ್ರಿಟಿಷ್ ಆಳ್ವಿಕೆಯನ್ನು ವಿಶ್ವದಿಂದ ಸಂಪೂರ್ಣವಾಗಿ ಹೊರದಬ್ಬುತ್ತಾನೆ ಎಂದು ಮೊದಲೇ ತಿಳಿದಿದ್ದರೆ ಬ್ರಿಟಿಷ್ ವ್ಯಕ್ತಿ ಅಂತಹ ತಪ್ಪು ಮಾಡುತ್ತಿರಲಿಲ್ಲವೇನೋ..?

ಅತ್ಯಂತ ವಿಡಂಬನೆಯ ಒಂದು ವಿಷಯವೇನೆಂದರೆ, ಗಾಂಧೀಜಿಯ ದೇಶವಾಸಿಗಳೇ ಗಾಂಧೀಜಿಯನ್ನು ಅತ್ಯಂತ ಕಡಿಮೆ ಓದಿಕೊಂಡಿದ್ದಾರೆ ಮತ್ತು ಅರ್ಥೈಸಿಕೊಂಡಿದ್ದಾರೆ. ಹ್ಯಾರಿ ಪಾಟರ್ ಮತ್ತು ಚೇತನ್ ಭಗತ್ ಅವರ ಪುಸ್ತಕಗಳನ್ನು ಓದುವ ಯುವಜನತೆ, ಒಂದು ವೇಳೆ ಗಾಂಧೀಜಿಯವರನ್ನು ಗಂಭೀರವಾಗಿ ಓದಿಕೊಂಡಿದ್ದರೆ, ಇಂದು ನಮ್ಮ ಪೀಳಿಗೆಯ ಪಾಠಗಳೇ ಬೇರೆಯಾಗಿರುತ್ತಿದ್ದವು. ಆದರೆ, ನಾವು ಹಾಗೆ ಮಾಡಲಿಲ್ಲ. ಹಾಗೂ ಇದೇ ಕಾರಣಕ್ಕಾಗಿ ನಾವೆಲ್ಲ ಫ್ಯಾನ್ಸಿ ಫೇಸ್‍ಬುಕ್ ಗ್ಯಾಂಗ್ ಆಗಿ ಬದಲಾಗಿದ್ದೇವೆ.

ದೇಶ ವಿಭಜನೆಯ ಶಾಶ್ವತ ಕಾರಣ ಗಾಂಧೀಜಿ ಎಂದು ನಂಬುವುದು ಹಾಗೂ ಗಾಂಧೀಜಿಯವರನ್ನು ಮುಸ್ಲಿಂ ಪರ ಎಂದು ಕರೆಯುವುದು. ಒಂದು ಮಾತು ಸ್ಪಷ್ಟವಾಗಿ ಹೇಳ ಬಯಸುತ್ತೇನೆ. ಗಾಂಧಿಗಿಂತ ದೊಡ್ಡ, ಮಹಾನ್ ಹಿಂದು ಯಾರೂ ಆಗಿಲ್ಲ. ಆದರೆ ಗಾಂಧೀಜಿಯ ‘ಹೇ ರಾಮ್’ ಮಂತ್ರ ಮಠಣದಿಂದ ಇತರೆ ಸಮುದಾಯಗಳು ಹೆದರುತ್ತಿರಲಿಲ್ಲ. ಏಕೆಂದರೆ, ಗಾಂಧೀಜಿ ಜಾತ್ಯತೀತತೆಯ ಪ್ರತೀಕವಾಗಿದ್ದರು. ಪ್ರಸ್ತುತ ಅಹಿಂಸೆಯನ್ನು ಹೇಡಿತನದ ಮತ್ತು ದೌರ್ಬಲ್ಯದ ಪ್ರತೀಕ ಎಂದೇ ಹೇಳಲಾಗುತ್ತಿದೆ. ಆದರೆ ಜನರು ಮರೆಯುತ್ತಿರುವ ಅಂಶವೇನೆಂದರೆ ವಿಶ್ವದ ಅತಿ ದೊಡ್ಡ ಸೇನೆಯೊಂದಿಗೆ ಶಸ್ತ್ರಾಸ್ತ್ರಗಳಿಂದ ಹೋರಾಟ ಮಾಡುವುದು ಸಾಧ್ಯವಿಲ್ಲ. ಅದಕ್ಕೆ ನಾವು ಆಯ್ಕೆ ಮಾಡಿಕೊಳ್ಳುವ ಅಸ್ತ್ರದ ಸಾಟಿಯನ್ನು ಅವರಿಗೆ ಮಾಡಲು ಸಾಧ್ಯವಾಗಬಾರದು. ಆ ಅಸ್ತ್ರವೇ ಅಹಿಂಸೆ. ಒಂದು ಕಣ್ಣಿಗೆ ಇನ್ನೊಂದು ಕಣ್ಣನ್ನು ತೆಗೆಯುವುದರಿಂದ ಸಂಪೂರ್ಣ ವಿಶ್ವವೇ ಕುರುಡಾಗುತ್ತದೆ ಎಂದು ಗಾಂಧೀಜಿ ಹೇಳುತ್ತಿದ್ದರು. ನಿಮ್ಮಲ್ಲಿರುವ ಪ್ರತಿಭೆಯನ್ನು ಹೆಚ್ಚಿಸದ ಶಿಕ್ಷಣ, ಮೂರ್ಖ ಶಿಕ್ಷಣವೆಂದೂ ಬಾಪೂಜಿ ಹೇಳುತ್ತಿದ್ದರು.

ಗಾಂಧೀಜಿ ಮತ್ತು ಇತರೆ ನಾಯಕರ, ಸೇನಾನಿಗಳ ಬಲಿದಾನ, ಆಂದೋಲನ ಮತ್ತು ಜೈಲುವಾಸದ ಪರಿಣಾಮ 1947ರ ಆಗಸ್ಟ್ 15ರಂದು ನಮಗೆ ಸ್ವಾತಂತ್ರ್ಯ ಸಿಕ್ಕಿತು. ಸ್ವಾತಂತ್ರ್ಯ ತಂದು ಕೊಟ್ಟ ಮಹಾತ್ಮನನ್ನು ನಾವೆಷ್ಟು ಪ್ರೀತಿಸಿದೆವೆಂದರೆ ಮಾರನೇ ವರ್ಷ ಮೂರು ಗುಂಡು ಹಾರಿಸಿ ಅವರ ಸಮಾಧಿ ಮಾಡಿಬಿಟ್ಟೆವು. ಆದರೆ ಗಾಂಧಿ ಎಂದೂ ಸಾಯುವವರಲ್ಲ. ಏಕೆಂದರೆ ಗಾಂಧಿ ಎನ್ನುವುದು ಒಂದು ವಿಚಾರದ ಹೆಸರು, ಅದು ಒಬ್ಬ ವ್ಯಕ್ತಿಯ ಹೆಸರಲ್ಲ. ಹೀಗಾಗಿ ವಿಚಾರ ಎಂದಿಗೂ ಜೀವಂತವಾಗಿರುತ್ತದೆ.

ಕೊನೆಯದಾಗಿ, ದುಷ್ಯಂತ್ ಕುಮಾರ್ ಅವರ ಒಂದು ಕವಿತೆಯೊಂದಿಗೆ ನನ್ನ ಮಾತುಗಳನ್ನು ಮುಗಿಸುತ್ತೇನೆ.

ದೇವರಿಲ್ಲವೇ? ಆಯಿತು, ಒಬ್ಬ ವ್ಯಕ್ತಿಯ ಕನಸಾದರೂ ಇದೆಯಲ್ಲ.

ನೋಡಲು ಒಂದು ಸುಂದರ ದೃಷ್ಯವಂತೂ ಇದೆಯಲ್ಲ

ಕಲ್ಲು ಕರಗುವುದಿಲ್ಲವೆಂದು ಅವರು ಸಮಾಧಾನದಲ್ಲಿದ್ದಾರೆ

ಧ್ವನಿಯಲ್ಲಿ ಪರಿಣಾಮ ಕಾಣಲೆಂದು ನಾನು ಕಾತುರನಾಗಿದ್ದೇನೆ….

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...