Homeಮುಖಪುಟಗಾಝಾದಲ್ಲಿ ಮಾನವೀಯತೆಯನ್ನು ಸಮಾಧಿ ಮಾಡಿದ ನೆತನ್ಯಾಹು

ಗಾಝಾದಲ್ಲಿ ಮಾನವೀಯತೆಯನ್ನು ಸಮಾಧಿ ಮಾಡಿದ ನೆತನ್ಯಾಹು

- Advertisement -
- Advertisement -

ನಾಲ್ಕು ತಿಂಗಳ ಬಾಂಬ್‌ ದಾಳಿಯ ಮೂಲಕ ಗಾಝಾವನ್ನು ಬಹುಪಾಲು ಭಗ್ನಾವಶೇಷಗಳಾಗಿ ಮಾಡಿದ ಇಸ್ರೇಲ್‌ ಪ್ರಧಾನಿ ಬೆಂಜಮಿನ್ ನೆತನ್ಯಾಹು, ಇಸ್ರೇಲ್ ರಕ್ಷಣಾ ಪಡೆಗೆ (IDF) ಈಜಿಪ್ಟ್ ಗಡಿಯಲ್ಲಿರುವ ದಕ್ಷಿಣ ಗಾಝಾ ಪಟ್ಟಣವಾದ ರಫಾವನ್ನು ವಶಕ್ಕೆ ತೆಗೆದುಕೊಳ್ಳಲು ಸೂಚಿಸಿದ್ದಾರೆ. ಸಂಪೂರ್ಣ ಗೆಲುವು ಕೈಗೆಟುಕಲು ಇಸ್ರೇಲ್‌ಗೆ ಇನ್ನೇನು ಬಾಕಿ ಉಳಿದಿದೆ ಎಂಬಂತಹ ಪರಿಸ್ಥಿ ಇದೆ. ಜನಾಂಗೀಯ ಹತ್ಯೆ, ಜನರ ಬಲವಂತದ ವರ್ಗಾವಣೆ ಮೂಲಕ ಇಸ್ರೇಲ್‌ ತನ್ನ ನೈಜ ಮುಖವನ್ನು ವಿಶ್ವಕ್ಕೆ ಅನಾವರಣಗೊಳಿಸಿದೆ. ನಾಗರಿಕರ ನೋವು ಇಸ್ರೇಲ್‌ನ್ನು ಕ್ರೂರ ಕೃತ್ಯದಿಂದ ಹಿಂದೆ ಸರಿಯುವಂತೆ ಮಾಡಿಲ್ಲ. ನೆತನ್ಯಾಹು  ರಕ್ತಪಾತದ  ಬೆದರಿಕೆಯನ್ನು ಮುಂದವರಿಸಿದ್ದಾರೆ. ಗಾಝಾದಲ್ಲಿ ಕಾನೂನು ಮತ್ತು ಮಾನವೀಯತೆಯನ್ನು ಹೂತು ಹಾಕಿದ್ದಾರೆ.

ಅ.7ರಂದು ಇಸ್ರೇಲ್ ಗಾಝಾದ ಮೇಲೆ ಯುದ್ಧ ಘೋಷಿಸಿದ ಬಳಿಕ ಆ ಪ್ರದೇಶದಲ್ಲಿ ಸಾವಿನ ಸಂಖ್ಯೆ 29,000 ಮೀರಿದೆ. 69,000ಕ್ಕೂ ಹೆಚ್ಚು ಪ್ಯಾಲೆಸ್ತೀನ್‌ ನಾಗರಿಕರು ಗಾಯಗೊಂಡಿದ್ದಾರೆ ಎಂದು ಯುಎನ್ ವರದಿ ತಿಳಿಸಿದೆ. ಆದರೆ ವಾಸ್ತವ ಸಾವು ಮತ್ತು ಗಾಯಾಳುಗಳ ಸಂಖ್ಯೆಯಲ್ಲಿ ಗಣನೀಯ ಹೆಚ್ಚಳದ ಸಾಧ್ಯತೆ ಇದೆ. ಇಸ್ರೇಲ್‌ ನಡೆಸಿದ ಬಾಂಬ್‌ ದಾಳಿಗೆ ಲಕ್ಷಾಂತರ ಮನೆಗಳು, ಕಟ್ಟಡಗಳು ಧ್ವಂಸಗೊಂಡಿದೆ. ಲಕ್ಷಾಂತರ ಮಂದಿ ಮನೆಗಳನ್ನು ಕಳೆದುಕೊಂಡು ಕಿಕ್ಕಿರಿದ ಜನಸಂದಣಿಯ ನಿರಾಶ್ರಿತರ ಕೇಂದ್ರಗಳಲ್ಲಿ ದಿನದೂಡುವಂತಾಗಿದೆ. ಗಾಝಾದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮುಗ್ಧ ಮಕ್ಕಳು ಮತ್ತು ಮಹಿಳೆಯರ ಹತ್ಯೆ ನಡೆಸಿದರೂ ಇಸ್ರೇಲ್‌ ಪ್ರಧಾನಿ ಬೆಂಜಮಿನ್ ನೆತನ್ಯಾಹು ಯುದ್ಧ ದಾಹ ಮುಗಿದಿಲ್ಲ. ಹಮಾಸ್‌ನ್ನು ಸಂಪೂರ್ಣ ನಿರ್ನಾಮ ಮಾಡುತ್ತೇವೆ ಎಂದು ಹೇಳುತ್ತಿರುವ ನೆತನ್ಯಾಹು, ಪ್ಯಾಲೆಸ್ತೀನ್‌ನ ಮುಗ್ಧ ನಾಗರಿಕರ ಹತ್ಯೆಯನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಇದಲ್ಲದೆ ಗಾಝಾದಲ್ಲಿನ ಯುದ್ಧ ನಿರಾಶ್ರಿತರಿಗೆ ಮಾನವೀಯ ನೆರವನ್ನು ತಡೆಯುತ್ತಿರುವುದು ಮತ್ತು ಶುದ್ಧ ನೀರಿನ ಕೇಂದ್ರಗಳ ಮೇಲೆ ದಾಳಿ ನಡೆಸಿ ಕುಡಿಯಲು ಅಯೋಗ್ಯವನ್ನಾಗಿ ಮಾಡುವುದು ಇಸ್ರೇಲ್‌ ಯುದ್ಧ ಕ್ರೌರ್ಯವನ್ನು ಬಿಚ್ಚಿಡುತ್ತಿದೆ.

2007ರಲ್ಲಿ ಇಸ್ರೇಲ್ ಗಾಝಾದ ಮೇಲೆ ಆಕ್ರಮಿಸಿದ ಬಳಿಕ ರಫಾವು ಗಾಝಾದ ಯುದ್ದ ಸಂತ್ರಸ್ತ ಪ್ರದೇಶಕ್ಕೆ  ಹೆಚ್ಚಿನ ಮಾನವೀಯ ಸರಬರಾಜುಗಳನ್ನು ತಲುಪಿಸುವ ಮಾರ್ಗವಾಗಿತ್ತು. ಇಸ್ರೇಲ್‌ ಆಕ್ರಮಣಕ್ಕೆ ಮುಂಚಿತವಾಗಿ ಒಂದು ಲಕ್ಷ ಜನರು ಇಲ್ಲಿ ವಾಸಿಸುತ್ತಿದ್ದರು. ಇತ್ತೀಚಿನ ಇಸ್ರೇಲ್‌ ಯುದ್ಧ ಘೋಷಣೆ ಬಳಿಕ ಒಂದೂವರೆ ಮಿಲಿಯನ್‌ ಜನರು ಗಾಝಾದ ರಫಾವನ್ನು ಆಶ್ರಯ ಕೇಂದ್ರವನ್ನಾಗಿಸಿಕೊಂಡಿದ್ದಾರೆ. ಜನ ಸಂದಣಿಯಿಂದಾಗಿ ರಫಾದಲ್ಲಿ ವಾಸಿಸುವ ಜನರು ನೀರಿನ ಕೊರತೆ, ಮೂಲ ಸೌಕರ್ಯದ ಕೊರತೆ, ಆಹಾರದ ಕೊರತೆ, ನೈರ್ಮಲ್ಯದ ಕೊರತೆ, ಸಾಂಕ್ರಾಮಿಕ ರೋಗದಂತಹ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈಗ ಇಸ್ರೇಲ್‌ ರಫಾವನ್ನೇ ಟಾರ್ಗೆಟ್‌ ಮಾಡಿ ದಾಳಿಯನ್ನು ನಡೆಸುತ್ತಿದ್ದು, ಆಸ್ಪತ್ರೆಗಳು, ಮನೆಗಳು ಮತ್ತು ಮಸೀದಿಗಳನ್ನು ಧ್ವಂಸ ಮಾಡಿದೆ. ರಫಾದಲ್ಲಿ ಕೂಡ ಡಜನ್‌ ಗಟ್ಟಲೆ ಜನರನ್ನು ಹತ್ಯೆ ಮಾಡಿದೆ.

UNICEF ಹೇಳುವಂತೆ ಗಾಝಾವು ಮಕ್ಕಳ ಸಾವುಗಳ ಕೇಂದ್ರವಾಗುತ್ತಿದೆ. ಹತ್ತಾರು ಯುರೋಪಿಯನ್ ರಾಷ್ಟ್ರಗಳು  ತಕ್ಷಣದ ಕದನ ವಿರಾಮಕ್ಕೆ ಕರೆ ನೀಡಿವೆ. ರಫಾದ ಮೇಲೆ ಇಸ್ರೇಲ್‌ ಆಕ್ರಮಣವನ್ನು ಕೈಬಿಡುವಂತೆ ಆಗ್ರಹಿಸಿದೆ. ಅಲ್ ಜಝೀರಾ ವರದಿಯ ಪ್ರಕಾರ, ಉತ್ತರ ಗಾಝಾದಲ್ಲಿ ಮಾನವೀಯ ನೆರವಿಗಾಗಿ ಕಾಯುತ್ತಿದ್ದ ಅಂದರೆ ಆಹಾರದ ಪೊಟ್ಟಣಕ್ಕೆ ಕಾಯುತ್ತಿದ್ದ ಪ್ಯಾಲೆಸ್ತೀನ್‌ ನಾಗರಿಕರ ಮೇಲೆ ಇಸ್ರೇಲ್‌ ದಾಳಿ ನಡೆಸಿದೆ. ದಾಳಿಯಲ್ಲಿ ಓರ್ವ ನಾಗರಿಕ ಮೃತಪಟ್ಟು, ಹಲವಾರು ಮಂದಿ ಗಾಯಗೊಂಡಿದ್ದಾರೆ.

ಗಾಝಾದಲ್ಲಿ ಅಪೌಷ್ಟಿಕತೆಯ ಕುರಿತು ಯುಎನ್‌ನ ಮಕ್ಕಳ ಸಂಸ್ಥೆ (ಯುನಿಸೆಫ್), ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ)  ಕಳವಳವನ್ನು ವ್ಯಕ್ತಪಡಿಸಿದೆ. ಗಾಝಾ ಪಟ್ಟಿಯು ಪೌಷ್ಟಿಕಾಂಶದ ಬಿಕ್ಕಟ್ಟಿನ ಅಂಚಿನಲ್ಲಿದೆ ಎಂದು ನಾವು ವಾರಗಳಿಂದ ಎಚ್ಚರಿಸುತ್ತಿದ್ದೇವೆ. ಗಾಝಾದಲ್ಲಿ ಊಹಿಸಲು ಅಸಾಧ್ಯವಾದ ಮಟ್ಟದಲ್ಲಿ ಮಕ್ಕಳ ಸಾವುಗಳು ಸಂಭವಿಸುತ್ತದೆ ಎಂದು ಯುನಿಸೆಫ್‌ನ ಉಪ ಕಾರ್ಯನಿರ್ವಾಹಕ ನಿರ್ದೇಶಕ ಟೆಡ್ ಚೈಬಾನ್ ಹೇಳಿದ್ದಾರೆ.

ವರದಿಯ ಪ್ರಕಾರ, ಗಾಝಾದ ಉತ್ತರದಲ್ಲಿ ಪರಿಸ್ಥಿತಿಯು ಚಿಂತಾಜನಕವಾಗಿದೆ, ಈ ಪ್ರದೇಶಗಳಲ್ಲಿ ವಾರಗಳಿಂದ ಎಲ್ಲಾ ಮಾನವೀಯ ನೆರವು ಪರಿಹಾರ ಕಡಿತಗೊಂಡಿದೆ ಮತ್ತು ಅಲ್ಲಿನ ಆರು ಮಕ್ಕಳಲ್ಲಿ ಒಂದು ಮಗು ತೀವ್ರವಾಗಿ ಅಪೌಷ್ಟಿಕತೆಯಿಂದ ಬಳಲುತ್ತಿದೆ. ರಾಫಾದಲ್ಲಿ ಎರಡಕ್ಕಿಂತ ಕಡಿಮೆ ವಯಸ್ಸಿನ 5 ಪ್ರತಿಶತ ಮಕ್ಕಳು ತೀವ್ರವಾಗಿ ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ.

ಹಸಿವು ಮತ್ತು ರೋಗವು ಮಾರಣಾಂತಿಕವಾಗಿದೆ ಎಂದು WHO ನ ಆರೋಗ್ಯ ತುರ್ತು ಕಾರ್ಯಕ್ರಮದ ಮುಖ್ಯಸ್ಥ ಡಾ ಮೈಕ್ ರಯಾನ್ ಹೇಳಿದ್ದಾರೆ. ಹಸಿದ, ದುರ್ಬಲಗೊಂಡ ಮತ್ತು ಆಳವಾಗಿ ಆಘಾತಕ್ಕೊಳಗಾದ ಮಕ್ಕಳು ಅನಾರೋಗ್ಯಕ್ಕೆ ಒಳಗಾಗುವ ಸಾಧ್ಯತೆಯಿದೆ. ಇದು ಅಪಾಯಕಾರಿ ಮತ್ತು ಈ ದುರಂತ ನಮ್ಮ ಕಣ್ಣುಗಳ ಮುಂದೆ ನಡೆಯುತ್ತಿದೆ ಎಂದು ರಯಾನ್ ಹೇಳಿದ್ದಾರೆ.

ಐರಿಷ್ ವಿದೇಶಾಂಗ ಸಚಿವ ಮೈಕೆಲ್ ಮಾರ್ಟಿನ್ ಅವರು ದಕ್ಷಿಣ ಗಾಝಾದ ರಫಾಹ್ ಮೇಲೆ ದಾಳಿ ಮಾಡದಂತೆ ಯುರೋಪಿಯನ್ ಒಕ್ಕೂಟವು ಇಸ್ರೇಲ್‌ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಹೇಳಿದ್ದಾರೆ. ಬ್ರಸೆಲ್ಸ್‌ನಲ್ಲಿ ಮಾತನಾಡಿದ ಮಾರ್ಟಿನ್, ಗಾಝಾದಲ್ಲಿ ಈಗ ನಡೆಯುತ್ತಿರುವ ಅಮಾನವೀಯತೆಯ ಮಟ್ಟ ಜಗತ್ತನ್ನು ಬೆಚ್ಚಿಬೀಳಿಸಿದೆ. ರಫಾದಲ್ಲಿ ಇಸ್ರೇಲ್‌ನ ಯೋಜಿತ ಆಕ್ರಮಣವನ್ನು ತಡೆಯಲು ಯುರೋಪ್ ಸಾಧ್ಯವಾದ ಎಲ್ಲವನ್ನೂ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ. ಭಾನುವಾರ ಮತ್ತು ಸೋಮವಾರದ ನಡುವೆ ಗಾಝಾದ ಮೇಲಿನ ಇಸ್ರೇಲ್‌ ದಾಳಿಯಲ್ಲಿ ಹೆಚ್ಚುವರಿ 107 ಪ್ಯಾಲೆಸ್ತೀನ್‌ ನಾಗರಿಕರ ಹತ್ಯೆ ನಡೆದಿದೆ. ಈ ದಾಳಿಯಲ್ಲಿ 145 ಮಂದಿ ಗಾಯಗೊಂಡಿದ್ದಾರೆ. ಇಸ್ರೇಲ್‌ ಗಾಝಾ ಮೇಲೆ ಮತ್ತೆ ಆಕ್ರಮಣವನ್ನು ಮುಂದುವರಿಸಿದೆ.

ಇದನ್ನು ಓದಿ: 5 ವರ್ಷದ ಎಂಎಸ್ಪಿ ಗುತ್ತಿಗೆ; ಕೇಂದ್ರದ ಪ್ರಸ್ತಾವನೆ ತಿರಸ್ಕರಿಸಿದ ರೈತ ಮುಖಂಡರು: ನಾಳೆಯಿಂದ ದೆಹಲಿ ಚಲೋ ಆರಂಭ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...