Homeಮುಖಪುಟಗಾಝಾದಲ್ಲಿ ಮಾನವೀಯತೆಯನ್ನು ಸಮಾಧಿ ಮಾಡಿದ ನೆತನ್ಯಾಹು

ಗಾಝಾದಲ್ಲಿ ಮಾನವೀಯತೆಯನ್ನು ಸಮಾಧಿ ಮಾಡಿದ ನೆತನ್ಯಾಹು

- Advertisement -
- Advertisement -

ನಾಲ್ಕು ತಿಂಗಳ ಬಾಂಬ್‌ ದಾಳಿಯ ಮೂಲಕ ಗಾಝಾವನ್ನು ಬಹುಪಾಲು ಭಗ್ನಾವಶೇಷಗಳಾಗಿ ಮಾಡಿದ ಇಸ್ರೇಲ್‌ ಪ್ರಧಾನಿ ಬೆಂಜಮಿನ್ ನೆತನ್ಯಾಹು, ಇಸ್ರೇಲ್ ರಕ್ಷಣಾ ಪಡೆಗೆ (IDF) ಈಜಿಪ್ಟ್ ಗಡಿಯಲ್ಲಿರುವ ದಕ್ಷಿಣ ಗಾಝಾ ಪಟ್ಟಣವಾದ ರಫಾವನ್ನು ವಶಕ್ಕೆ ತೆಗೆದುಕೊಳ್ಳಲು ಸೂಚಿಸಿದ್ದಾರೆ. ಸಂಪೂರ್ಣ ಗೆಲುವು ಕೈಗೆಟುಕಲು ಇಸ್ರೇಲ್‌ಗೆ ಇನ್ನೇನು ಬಾಕಿ ಉಳಿದಿದೆ ಎಂಬಂತಹ ಪರಿಸ್ಥಿ ಇದೆ. ಜನಾಂಗೀಯ ಹತ್ಯೆ, ಜನರ ಬಲವಂತದ ವರ್ಗಾವಣೆ ಮೂಲಕ ಇಸ್ರೇಲ್‌ ತನ್ನ ನೈಜ ಮುಖವನ್ನು ವಿಶ್ವಕ್ಕೆ ಅನಾವರಣಗೊಳಿಸಿದೆ. ನಾಗರಿಕರ ನೋವು ಇಸ್ರೇಲ್‌ನ್ನು ಕ್ರೂರ ಕೃತ್ಯದಿಂದ ಹಿಂದೆ ಸರಿಯುವಂತೆ ಮಾಡಿಲ್ಲ. ನೆತನ್ಯಾಹು  ರಕ್ತಪಾತದ  ಬೆದರಿಕೆಯನ್ನು ಮುಂದವರಿಸಿದ್ದಾರೆ. ಗಾಝಾದಲ್ಲಿ ಕಾನೂನು ಮತ್ತು ಮಾನವೀಯತೆಯನ್ನು ಹೂತು ಹಾಕಿದ್ದಾರೆ.

ಅ.7ರಂದು ಇಸ್ರೇಲ್ ಗಾಝಾದ ಮೇಲೆ ಯುದ್ಧ ಘೋಷಿಸಿದ ಬಳಿಕ ಆ ಪ್ರದೇಶದಲ್ಲಿ ಸಾವಿನ ಸಂಖ್ಯೆ 29,000 ಮೀರಿದೆ. 69,000ಕ್ಕೂ ಹೆಚ್ಚು ಪ್ಯಾಲೆಸ್ತೀನ್‌ ನಾಗರಿಕರು ಗಾಯಗೊಂಡಿದ್ದಾರೆ ಎಂದು ಯುಎನ್ ವರದಿ ತಿಳಿಸಿದೆ. ಆದರೆ ವಾಸ್ತವ ಸಾವು ಮತ್ತು ಗಾಯಾಳುಗಳ ಸಂಖ್ಯೆಯಲ್ಲಿ ಗಣನೀಯ ಹೆಚ್ಚಳದ ಸಾಧ್ಯತೆ ಇದೆ. ಇಸ್ರೇಲ್‌ ನಡೆಸಿದ ಬಾಂಬ್‌ ದಾಳಿಗೆ ಲಕ್ಷಾಂತರ ಮನೆಗಳು, ಕಟ್ಟಡಗಳು ಧ್ವಂಸಗೊಂಡಿದೆ. ಲಕ್ಷಾಂತರ ಮಂದಿ ಮನೆಗಳನ್ನು ಕಳೆದುಕೊಂಡು ಕಿಕ್ಕಿರಿದ ಜನಸಂದಣಿಯ ನಿರಾಶ್ರಿತರ ಕೇಂದ್ರಗಳಲ್ಲಿ ದಿನದೂಡುವಂತಾಗಿದೆ. ಗಾಝಾದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮುಗ್ಧ ಮಕ್ಕಳು ಮತ್ತು ಮಹಿಳೆಯರ ಹತ್ಯೆ ನಡೆಸಿದರೂ ಇಸ್ರೇಲ್‌ ಪ್ರಧಾನಿ ಬೆಂಜಮಿನ್ ನೆತನ್ಯಾಹು ಯುದ್ಧ ದಾಹ ಮುಗಿದಿಲ್ಲ. ಹಮಾಸ್‌ನ್ನು ಸಂಪೂರ್ಣ ನಿರ್ನಾಮ ಮಾಡುತ್ತೇವೆ ಎಂದು ಹೇಳುತ್ತಿರುವ ನೆತನ್ಯಾಹು, ಪ್ಯಾಲೆಸ್ತೀನ್‌ನ ಮುಗ್ಧ ನಾಗರಿಕರ ಹತ್ಯೆಯನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಇದಲ್ಲದೆ ಗಾಝಾದಲ್ಲಿನ ಯುದ್ಧ ನಿರಾಶ್ರಿತರಿಗೆ ಮಾನವೀಯ ನೆರವನ್ನು ತಡೆಯುತ್ತಿರುವುದು ಮತ್ತು ಶುದ್ಧ ನೀರಿನ ಕೇಂದ್ರಗಳ ಮೇಲೆ ದಾಳಿ ನಡೆಸಿ ಕುಡಿಯಲು ಅಯೋಗ್ಯವನ್ನಾಗಿ ಮಾಡುವುದು ಇಸ್ರೇಲ್‌ ಯುದ್ಧ ಕ್ರೌರ್ಯವನ್ನು ಬಿಚ್ಚಿಡುತ್ತಿದೆ.

2007ರಲ್ಲಿ ಇಸ್ರೇಲ್ ಗಾಝಾದ ಮೇಲೆ ಆಕ್ರಮಿಸಿದ ಬಳಿಕ ರಫಾವು ಗಾಝಾದ ಯುದ್ದ ಸಂತ್ರಸ್ತ ಪ್ರದೇಶಕ್ಕೆ  ಹೆಚ್ಚಿನ ಮಾನವೀಯ ಸರಬರಾಜುಗಳನ್ನು ತಲುಪಿಸುವ ಮಾರ್ಗವಾಗಿತ್ತು. ಇಸ್ರೇಲ್‌ ಆಕ್ರಮಣಕ್ಕೆ ಮುಂಚಿತವಾಗಿ ಒಂದು ಲಕ್ಷ ಜನರು ಇಲ್ಲಿ ವಾಸಿಸುತ್ತಿದ್ದರು. ಇತ್ತೀಚಿನ ಇಸ್ರೇಲ್‌ ಯುದ್ಧ ಘೋಷಣೆ ಬಳಿಕ ಒಂದೂವರೆ ಮಿಲಿಯನ್‌ ಜನರು ಗಾಝಾದ ರಫಾವನ್ನು ಆಶ್ರಯ ಕೇಂದ್ರವನ್ನಾಗಿಸಿಕೊಂಡಿದ್ದಾರೆ. ಜನ ಸಂದಣಿಯಿಂದಾಗಿ ರಫಾದಲ್ಲಿ ವಾಸಿಸುವ ಜನರು ನೀರಿನ ಕೊರತೆ, ಮೂಲ ಸೌಕರ್ಯದ ಕೊರತೆ, ಆಹಾರದ ಕೊರತೆ, ನೈರ್ಮಲ್ಯದ ಕೊರತೆ, ಸಾಂಕ್ರಾಮಿಕ ರೋಗದಂತಹ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈಗ ಇಸ್ರೇಲ್‌ ರಫಾವನ್ನೇ ಟಾರ್ಗೆಟ್‌ ಮಾಡಿ ದಾಳಿಯನ್ನು ನಡೆಸುತ್ತಿದ್ದು, ಆಸ್ಪತ್ರೆಗಳು, ಮನೆಗಳು ಮತ್ತು ಮಸೀದಿಗಳನ್ನು ಧ್ವಂಸ ಮಾಡಿದೆ. ರಫಾದಲ್ಲಿ ಕೂಡ ಡಜನ್‌ ಗಟ್ಟಲೆ ಜನರನ್ನು ಹತ್ಯೆ ಮಾಡಿದೆ.

UNICEF ಹೇಳುವಂತೆ ಗಾಝಾವು ಮಕ್ಕಳ ಸಾವುಗಳ ಕೇಂದ್ರವಾಗುತ್ತಿದೆ. ಹತ್ತಾರು ಯುರೋಪಿಯನ್ ರಾಷ್ಟ್ರಗಳು  ತಕ್ಷಣದ ಕದನ ವಿರಾಮಕ್ಕೆ ಕರೆ ನೀಡಿವೆ. ರಫಾದ ಮೇಲೆ ಇಸ್ರೇಲ್‌ ಆಕ್ರಮಣವನ್ನು ಕೈಬಿಡುವಂತೆ ಆಗ್ರಹಿಸಿದೆ. ಅಲ್ ಜಝೀರಾ ವರದಿಯ ಪ್ರಕಾರ, ಉತ್ತರ ಗಾಝಾದಲ್ಲಿ ಮಾನವೀಯ ನೆರವಿಗಾಗಿ ಕಾಯುತ್ತಿದ್ದ ಅಂದರೆ ಆಹಾರದ ಪೊಟ್ಟಣಕ್ಕೆ ಕಾಯುತ್ತಿದ್ದ ಪ್ಯಾಲೆಸ್ತೀನ್‌ ನಾಗರಿಕರ ಮೇಲೆ ಇಸ್ರೇಲ್‌ ದಾಳಿ ನಡೆಸಿದೆ. ದಾಳಿಯಲ್ಲಿ ಓರ್ವ ನಾಗರಿಕ ಮೃತಪಟ್ಟು, ಹಲವಾರು ಮಂದಿ ಗಾಯಗೊಂಡಿದ್ದಾರೆ.

ಗಾಝಾದಲ್ಲಿ ಅಪೌಷ್ಟಿಕತೆಯ ಕುರಿತು ಯುಎನ್‌ನ ಮಕ್ಕಳ ಸಂಸ್ಥೆ (ಯುನಿಸೆಫ್), ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ)  ಕಳವಳವನ್ನು ವ್ಯಕ್ತಪಡಿಸಿದೆ. ಗಾಝಾ ಪಟ್ಟಿಯು ಪೌಷ್ಟಿಕಾಂಶದ ಬಿಕ್ಕಟ್ಟಿನ ಅಂಚಿನಲ್ಲಿದೆ ಎಂದು ನಾವು ವಾರಗಳಿಂದ ಎಚ್ಚರಿಸುತ್ತಿದ್ದೇವೆ. ಗಾಝಾದಲ್ಲಿ ಊಹಿಸಲು ಅಸಾಧ್ಯವಾದ ಮಟ್ಟದಲ್ಲಿ ಮಕ್ಕಳ ಸಾವುಗಳು ಸಂಭವಿಸುತ್ತದೆ ಎಂದು ಯುನಿಸೆಫ್‌ನ ಉಪ ಕಾರ್ಯನಿರ್ವಾಹಕ ನಿರ್ದೇಶಕ ಟೆಡ್ ಚೈಬಾನ್ ಹೇಳಿದ್ದಾರೆ.

ವರದಿಯ ಪ್ರಕಾರ, ಗಾಝಾದ ಉತ್ತರದಲ್ಲಿ ಪರಿಸ್ಥಿತಿಯು ಚಿಂತಾಜನಕವಾಗಿದೆ, ಈ ಪ್ರದೇಶಗಳಲ್ಲಿ ವಾರಗಳಿಂದ ಎಲ್ಲಾ ಮಾನವೀಯ ನೆರವು ಪರಿಹಾರ ಕಡಿತಗೊಂಡಿದೆ ಮತ್ತು ಅಲ್ಲಿನ ಆರು ಮಕ್ಕಳಲ್ಲಿ ಒಂದು ಮಗು ತೀವ್ರವಾಗಿ ಅಪೌಷ್ಟಿಕತೆಯಿಂದ ಬಳಲುತ್ತಿದೆ. ರಾಫಾದಲ್ಲಿ ಎರಡಕ್ಕಿಂತ ಕಡಿಮೆ ವಯಸ್ಸಿನ 5 ಪ್ರತಿಶತ ಮಕ್ಕಳು ತೀವ್ರವಾಗಿ ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ.

ಹಸಿವು ಮತ್ತು ರೋಗವು ಮಾರಣಾಂತಿಕವಾಗಿದೆ ಎಂದು WHO ನ ಆರೋಗ್ಯ ತುರ್ತು ಕಾರ್ಯಕ್ರಮದ ಮುಖ್ಯಸ್ಥ ಡಾ ಮೈಕ್ ರಯಾನ್ ಹೇಳಿದ್ದಾರೆ. ಹಸಿದ, ದುರ್ಬಲಗೊಂಡ ಮತ್ತು ಆಳವಾಗಿ ಆಘಾತಕ್ಕೊಳಗಾದ ಮಕ್ಕಳು ಅನಾರೋಗ್ಯಕ್ಕೆ ಒಳಗಾಗುವ ಸಾಧ್ಯತೆಯಿದೆ. ಇದು ಅಪಾಯಕಾರಿ ಮತ್ತು ಈ ದುರಂತ ನಮ್ಮ ಕಣ್ಣುಗಳ ಮುಂದೆ ನಡೆಯುತ್ತಿದೆ ಎಂದು ರಯಾನ್ ಹೇಳಿದ್ದಾರೆ.

ಐರಿಷ್ ವಿದೇಶಾಂಗ ಸಚಿವ ಮೈಕೆಲ್ ಮಾರ್ಟಿನ್ ಅವರು ದಕ್ಷಿಣ ಗಾಝಾದ ರಫಾಹ್ ಮೇಲೆ ದಾಳಿ ಮಾಡದಂತೆ ಯುರೋಪಿಯನ್ ಒಕ್ಕೂಟವು ಇಸ್ರೇಲ್‌ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಹೇಳಿದ್ದಾರೆ. ಬ್ರಸೆಲ್ಸ್‌ನಲ್ಲಿ ಮಾತನಾಡಿದ ಮಾರ್ಟಿನ್, ಗಾಝಾದಲ್ಲಿ ಈಗ ನಡೆಯುತ್ತಿರುವ ಅಮಾನವೀಯತೆಯ ಮಟ್ಟ ಜಗತ್ತನ್ನು ಬೆಚ್ಚಿಬೀಳಿಸಿದೆ. ರಫಾದಲ್ಲಿ ಇಸ್ರೇಲ್‌ನ ಯೋಜಿತ ಆಕ್ರಮಣವನ್ನು ತಡೆಯಲು ಯುರೋಪ್ ಸಾಧ್ಯವಾದ ಎಲ್ಲವನ್ನೂ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ. ಭಾನುವಾರ ಮತ್ತು ಸೋಮವಾರದ ನಡುವೆ ಗಾಝಾದ ಮೇಲಿನ ಇಸ್ರೇಲ್‌ ದಾಳಿಯಲ್ಲಿ ಹೆಚ್ಚುವರಿ 107 ಪ್ಯಾಲೆಸ್ತೀನ್‌ ನಾಗರಿಕರ ಹತ್ಯೆ ನಡೆದಿದೆ. ಈ ದಾಳಿಯಲ್ಲಿ 145 ಮಂದಿ ಗಾಯಗೊಂಡಿದ್ದಾರೆ. ಇಸ್ರೇಲ್‌ ಗಾಝಾ ಮೇಲೆ ಮತ್ತೆ ಆಕ್ರಮಣವನ್ನು ಮುಂದುವರಿಸಿದೆ.

ಇದನ್ನು ಓದಿ: 5 ವರ್ಷದ ಎಂಎಸ್ಪಿ ಗುತ್ತಿಗೆ; ಕೇಂದ್ರದ ಪ್ರಸ್ತಾವನೆ ತಿರಸ್ಕರಿಸಿದ ರೈತ ಮುಖಂಡರು: ನಾಳೆಯಿಂದ ದೆಹಲಿ ಚಲೋ ಆರಂಭ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...