Homeಮುಖಪುಟದಾಳಿಗಳ ಬಗ್ಗೆ ತಲೆಕೆಡಿಸಿಕೊಳ್ಳಲ್ಲ; ಬಿಜೆಪಿಯ ಪಾಳೆಗಾರಿಕೆಯನ್ನು ಕೊನೆಗಾಣಿಸುತ್ತೇವೆ: ಅಭಿಷೇಕ್ ಬ್ಯಾನರ್ಜಿ

ದಾಳಿಗಳ ಬಗ್ಗೆ ತಲೆಕೆಡಿಸಿಕೊಳ್ಳಲ್ಲ; ಬಿಜೆಪಿಯ ಪಾಳೆಗಾರಿಕೆಯನ್ನು ಕೊನೆಗಾಣಿಸುತ್ತೇವೆ: ಅಭಿಷೇಕ್ ಬ್ಯಾನರ್ಜಿ

- Advertisement -
- Advertisement -

ಪಶ್ಚಿಮ ಬಂಗಾಳಕ್ಕೆ ಕೇಂದ್ರದಿಂದ ಬರಬೇಕಾದ ಹಣಕಾಸಿನ ಬಾಕಿ ಬಿಡುಗಡೆಗಾಗಿ ಹೋರಾಟವನ್ನು ಮುಂದುವರಿಸುವ ತಮ್ಮ ಬದ್ಧತೆಯನ್ನು ಪುನರುಚ್ಚರಿಸಿರುವ ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ, ‘ನಮ್ಮ ಹಣಕ್ಕಾಗಿ ನಡೆಯುತ್ತಿರುವ ಹೋರಾಟಕ್ಕೆ ಕೇಂದ್ರೀಯ ಸಂಸ್ಥೆಗಳಿಂದ ಬೆದರಿಸುವುದರಿಂದ ಟಿಎಂಸಿಯನ್ನು ಹತ್ತಿಕ್ಕುವುದಕ್ಕೆ ಸಾಧ್ಯವಿಲ್ಲ’ ಎಂದಿದ್ದಾರೆ.

‘ಬಾಕಿ ತಡೆಹಿಡಿಯುವ ಕೇಂದ್ರದ ನಿರ್ಧಾರದ ವಿರುದ್ಧ ಪಕ್ಷವು ತನ್ನ ಅಭಿಯಾನವನ್ನು ಮುಂದುವರಿಸಲಿದೆ’ ಎಂದು ಟಿಎಂಸಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬ್ಯಾನರ್ಜಿ ಹೇಳಿದ್ದಾರೆ.

ಬಿಜೆಪಿಯ ಪಾಳೆಗಾರಿಕೆ ಸಂಸ್ಕೃತಿಯನ್ನು ನಾವು ಕೊನೆಗಾಣಿಸುತ್ತೇವೆ. ಅವರು ಕೇಂದ್ರ ತಂಡಗಳನ್ನು ಕಳುಹಿಸುತ್ತಾರೆ ಮತ್ತು ದಾಳಿಗಳನ್ನು ನಡೆಸುತ್ತಾರೆ. ದಾಳಿಗಳ ಬಗ್ಗೆ ನಮಗೆ ಚಿಂತೆ ಇಲ್ಲ; ಆದರೆ ಅವರು ಜನರ ನ್ಯಾಯಯುತ ಹಣವನ್ನು ಬಿಡುಗಡೆ ಮಾಡಬೇಕಾಗಿದೆ. ಎಂದು ಅವರು ಹೇಳಿದರು.

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸೋದರಳಿಯನೂ ಆಗಿರುವ ಅಭಿಷೇಕ್, ವಿವಿಧ ಭ್ರಷ್ಟಾಚಾರ ಪ್ರಕರಣಗಳ ತನಿಖೆಗೆ ಸಂಬಂಧಿಸಿದಂತೆ ಕೇಂದ್ರೀಯ ಏಜೆನ್ಸಿಗಳಿಂದ ಹಲವು ಬಾರಿ ಸಮನ್ಸ್ ಪಡೆದಿದ್ದಾರೆ. ಕೇಂದ್ರೀಯ ಸಂಸ್ಥೆಗಳು ಪ್ರತಿದಿನ 10ಕ್ಕೂ ಹೆಚ್ಚು ದಾಳಿ ನಡೆಸಬಹುದು, ಆದರೆ ಜನರ ಹಣವನ್ನು ಬಿಡುಗಡೆ ಮಾಡಬೇಕಾಗಿದೆ ಎಂದು ಅವರು ಹೇಳಿದರು.

ಈ ವಿಚಾರವಾಗಿ ಮಮತಾ ಬ್ಯಾನರ್ಜಿ ಅವರು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಪದೇ ಪದೇ ಟೀಕಿಸಿದ್ದಾರೆ. ಇದು ರಾಜ್ಯದ ಒಟ್ಟು ₹ 1.18 ಲಕ್ಷ ಕೋಟಿ ಬಾಕಿಯನ್ನು ತಡೆಹಿಡಿಯುವ ಮೂಲಕ ‘ಆರ್ಥಿಕ ದಿಗ್ಬಂಧನ’ ಜಾರಿಗೆ ತಂದಿದೆ ಎಂದು ಅವರು ಆರೋಪಿಸಿದ್ದಾರೆ.

‘ಮುಂಬರುವ ಚುನಾವಣೆಗಳು ಜನರ ಹಕ್ಕುಗಳನ್ನು ಆಧರಿಸಿವೆ, ಜನರು ತಮ್ಮ ಹಕ್ಕುಗಳ ಆಧಾರದ ಮೇಲೆ ಮತ ಚಲಾಯಿಸಿದರೆ, ಅವರ ಹಕ್ಕುಗಳನ್ನು ಕಸಿದುಕೊಳ್ಳುವ ಅಧಿಕಾರ ಯಾವುದೇ ಪ್ರಧಾನಿ, ಮುಖ್ಯಮಂತ್ರಿ, ರಾಷ್ಟ್ರಪತಿ, ರಾಜ್ಯಪಾಲರು ಅಥವಾ ಮಂತ್ರಿಗಳಿಗೆ ಇಲ್ಲ. ಇದುವೆ ಪ್ರಜಾಪ್ರಭುತ್ವದ ಮೂಲತತ್ವ ಮತ್ತು ಪರಂಪರೆ’ ಎಂದು ಅವರು ಹೇಳಿದರು.

ಪಶ್ಚಿಮ ಬಂಗಾಳದ ಎಂಜಿಎನ್‌ಆರ್‌ಇಜಿಎ ಕಾರ್ಯಕರ್ತರು ಮತ್ತು ಆವಾಸ್ ಯೋಜನೆ ಸ್ವೀಕರಿಸುವವರ ಮೇಲೆ ಪರಿಣಾಮ ಬೀರುವ ಕೇಂದ್ರದ ಬಾಕಿಗಳನ್ನು ಪಾವತಿಸಲು ಸಿಎಂ ಇತ್ತೀಚೆಗೆ ಘೋಷಿಸಿದ್ದರು.

‘ಫೆಬ್ರವರಿ 21 ರೊಳಗೆ 21 ಲಕ್ಷ ಎಂಜಿಎನ್‌ಆರ್‌ಇಜಿಎ ಕಾರ್ಮಿಕರಿಗೆ ಹಣವನ್ನು ಬಿಡುಗಡೆ ಮಾಡಲು ನಾನು ಹಿಂದೆ ಬದ್ಧನಾಗಿದ್ದೆ. ಆದರೆ ಇದು ಕೆಲವು ದಿನಗಳು ವಿಳಂಬವಾಗಲಿದೆ. ಪ್ರಸ್ತುತ ಕಾರ್ಮಿಕರ ಸಂಖ್ಯೆ 24.5 ಲಕ್ಷಕ್ಕೆ ಏರಿದೆ. ಆದ್ದರಿಂದ, ರಾಜ್ಯ ಆಡಳಿತವು ಮಾರ್ಚ್‌ನಿಂದ ಪಾವತಿಗಳನ್ನು ನೀಡಲು ಪ್ರಾರಂಭಿಸುತ್ತದೆ’ ಎಂದರು.

ಹೆಚ್ಚುವರಿಯಾಗಿ, ಏಪ್ರಿಲ್‌ನಲ್ಲಿ 11 ಲಕ್ಷ ಆವಾಸ್ ಯೋಜನೆ ಫಲಾನುಭವಿಗಳಿಗೆ ಹಣವನ್ನು ವಿತರಿಸಲು ಕೇಂದ್ರ ಸರ್ಕಾರ ವಿಫಲವಾದರೆ, ‘ರಾಜ್ಯವು ಮೇ 1 ರಿಂದ ಹಣವನ್ನು ವಿತರಿಸಲು ಪ್ರಾರಂಭಿಸುತ್ತದೆ’ ಎಂದು ಸಿಎಂ ಹೇಳಿದ್ದಾರೆ.

ಇದನ್ನೂ ಓದಿ; ಸಂಸ್ಥಾಪಕರಿಂದಲೆ ಪಕ್ಷ ಕಿತ್ತುಕೊಂಡ ರೀತಿ ತಪ್ಪು: ಎನ್‌ಸಿಪಿ ಸಂಸದೆ ಸುಪ್ರಿಯಾ ಸುಳೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...