Homeಮುಖಪುಟನಿಯಮಿತ ವೇತನದ ಉದ್ಯೋಗ: ಹಿನ್ನೆಡೆ ಕಂಡ ಮುಸ್ಲಿಂ, ಕ್ರಿಶ್ಚಿಯನ್ ಸಮುದಾಯ; ವರದಿ

ನಿಯಮಿತ ವೇತನದ ಉದ್ಯೋಗ: ಹಿನ್ನೆಡೆ ಕಂಡ ಮುಸ್ಲಿಂ, ಕ್ರಿಶ್ಚಿಯನ್ ಸಮುದಾಯ; ವರದಿ

- Advertisement -
- Advertisement -

ಕಳೆದ ಐದು ವರ್ಷಗಳಲ್ಲಿ ಬಹುಸಂಖ್ಯಾತ ಹಿಂದೂ ಜನಸಂಖ್ಯೆಗೆ ಹೋಲಿಸಿದರೆ ಮುಸ್ಲಿಂ, ಕ್ರಿಶ್ಚಿಯನ್ ಮತ್ತು ಸಿಖ್‌ನಂತಹ ಧಾರ್ಮಿಕ ಅಲ್ಪಸಂಖ್ಯಾತ ಸಮುದಾಯದ ಜನರಲ್ಲಿ ನಿಯಮಿತ ವೇತನ ಹೊಂದಿರುವ ಉದ್ಯೋಗಿಗಳಾಗಿ ಕೆಲಸ ಮಾಡುವ ಜನರ ಪಾಲಿನಲ್ಲಿ ಹೆಚ್ಚಿನ ಕುಸಿತವನ್ನು ಕಂಡಿದೆ ಎಂದು ಬಿಸಿನೆಸ್ ಸ್ಟ್ಯಾಂಡರ್ಡ್ ಇತ್ತೀಚಿನ ವಿಶ್ಲೇಷಣೆಯಲ್ಲಿ ತಿಳಿಸಿದೆ.

ಆವರ್ತಕ ಕಾರ್ಮಿಕ ಪಡೆ ಸಮೀಕ್ಷೆ(Periodic Labour Force Survey (PLFS) ದತ್ತಾಂಶ ಈ ಶಾಕಿಂಗ್‌ ಮಾಹಿತಿಯನ್ನು ಹೊರಗಿಟ್ಟಿದೆ. ಈ ಅಲ್ಪಸಂಖ್ಯಾತರಲ್ಲಿ ಮುಸ್ಲಿಂ ಸಮುದಾಯಕ್ಕೆ ಸೇರಿದ ಕಾರ್ಮಿಕರು 2018-19 ಮತ್ತು 2022-23ರ ನಡುವೆ ನಿಯಮಿತ ವೇತನದ ಉದ್ಯೋಗ ಪಡೆಯುವಲ್ಲಿ ಹೆಚ್ಚಿನ ಕುಸಿತವನ್ನು ಕಂಡಿದ್ದಾರೆ ಎಂದು ವರದಿಯು ಉಲ್ಲೇಖಿಸಿದೆ.

ಏಪ್ರಿಲ್ 2017ರಲ್ಲಿ ರಾಷ್ಟ್ರೀಯ ಮಾದರಿ ಸಮೀಕ್ಷೆ ಕಚೇರಿಯಿಂದ PLFSನ್ನು ಪ್ರಾರಂಭಿಸಲಾಯಿತು. ಇದು ಪ್ರಮುಖ ಉದ್ಯೋಗ ಮತ್ತು ಕಾರ್ಮಿಕರ ಜನಸಂಖ್ಯೆಯ ಅನುಪಾತ, ಕಾರ್ಮಿಕ ಭಾಗವಹಿಸುವಿಕೆ ದರ ಮತ್ತು ನಿರುದ್ಯೋಗ ದರ,  ಸಾಮಾಜಿಕ ಮತ್ತು ಧಾರ್ಮಿಕ ಗುಂಪುಗಳಲ್ಲಿ ಉದ್ಯೋಗದ ಸ್ಥಿತಿಯನ್ನು ಅವಲೋಕಿಸಿ ವರದಿಯನ್ನು ಸಿದ್ದಪಡಿಸುತ್ತದೆ.

ಬಿಸಿನೆಸ್ ಸ್ಟ್ಯಾಂಡರ್ಡ್ ಇತ್ತೀಚಿನ ವಿಶ್ಲೇಷಣೆ ಪ್ರಕಾರ, 2018-19ರಲ್ಲಿ ಮುಸ್ಲಿಂ ಸಮುದಾಯಕ್ಕೆ ಸೇರಿದ 22.1% ಕಾರ್ಮಿಕರು ನಿಯಮಿತ ವೇತನ ಉದ್ಯೋಗಿಗಳಾಗಿ ಕೆಲಸ ಮಾಡಿದ್ದರೆ, 2022-23ರಲ್ಲಿ ಈ ಪಾಲು 15.3%ಕ್ಕೆ ಇಳಿದಿದೆ, ಇದು 6.8 ಶೇಕಡಾ ಪಾಯಿಂಟ್ ಕುಸಿತವನ್ನು ದಾಖಲಿಸಿದೆ.

ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿದ ಜನಸಂಖ್ಯೆಯು 3.2 ಶೇಕಡಾ ಪಾಯಿಂಟ್ ಕುಸಿತವನ್ನು ಕಂಡಿದೆ,  2022-23 ರಲ್ಲಿ ಕೇವಲ 28% ಕ್ರಿಶ್ಚಿಯನ್ ಕೆಲಸಗಾರರು ನಿಯಮಿತ ಉದ್ಯೋಗಗಳನ್ನು ಹೊಂದಿದ್ದಾರೆ. 2018-19 ರಲ್ಲಿ ಇದರ ಅಂಕಿ-ಅಂಶಗಳು 31.2% ರಷ್ಟಿತ್ತು.

ಸಿಖ್ ಸಮುದಾಯದಲ್ಲಿ ಈ ಅಂಕಿ-ಅಂಶಗಳು ಶೇಕಡಾ 2.5 ಪಾಯಿಂಟ್ ಕುಸಿತವನ್ನು ಕಂಡಿದೆ. 2022-23ರಲ್ಲಿ ಕೇವಲ 26% ಸಿಖ್ ಕಾರ್ಮಿಕರು ನಿಯಮಿತ ವೇತನದ ಉದ್ಯೋಗವನ್ನು ಹೊಂದಿದ್ದರು, 2018-19ರಲ್ಲಿ ಇದರ ಪಾಲು 28.5% ಇತ್ತು.

ಬಹುಸಂಖ್ಯಾತ ಹಿಂದೂ ಸಮುದಾಯಕ್ಕೆ ಉದ್ಯೋಗದ ಗುಣಮಟ್ಟದಲ್ಲಿ ಕ್ಷೀಣತೆ ಕಡಿಮೆಯಾಗಿದೆ. 21.4% ಕಾರ್ಮಿಕರು 2022-23ರಲ್ಲಿ ನಿಯಮಿತ ಸಂಬಳದ ಉದ್ಯೋಗಗಳನ್ನು ಹೊಂದಿದ್ದರು, 2018-19 ರಲ್ಲಿ ಇದು 23.7% ಇತ್ತು. ಅಂದರೆ 2.3 ಶೇಕಡಾ ಮಾತ್ರ ಕಡಿಮೆಯಾಗಿದೆ ಎಂದು ವರದಿ ಬಹಿರಂಗಪಡಿಸಿದೆ.

ಎಲ್ಲಾ ಧಾರ್ಮಿಕ ಗುಂಪುಗಳಲ್ಲಿ ಸ್ವಯಂ ಉದ್ಯೋಗ ಹೊಂದಿರುವವರ ಸಂಖ್ಯೆಯಲ್ಲಿ ಹೆಚ್ಚುತ್ತಿರುವಾಗ, ಅರೆಕಾಲಿಕ ಕೆಲಸಗಾರರ ಪಾಲು ಮುಸ್ಲಿಂ ಸಮುದಾಯದಲ್ಲಿ ಮಾತ್ರ ಹೆಚ್ಚಾಗಿದೆ ಎಂದು ದಿನಪತ್ರಿಕೆ ವರದಿ ಮಾಡಿದೆ. ಸುಮಾರು 26.3% ಮುಸ್ಲಿಂ ಕಾರ್ಮಿಕರು 2022-23 ರಲ್ಲಿ ಅರೆಕಾಲಿಕ ಕಾರ್ಮಿಕರಾಗಿ ಕೆಲಸ ಮಾಡಿದರು, 2018-19 ರಲ್ಲಿ ಇದರ ಅಂಕಿ-ಅಂಶಗಳು 25.7% ರಷ್ಟಿತ್ತು. ಇದು ಹಿಂದೂಗಳು, ಸಿಖ್ಖರು ಮತ್ತು ಕ್ರಿಶ್ಚಿಯನ್ನರಂತಹ ಇತರ ಧಾರ್ಮಿಕ ಗುಂಪುಗಳಿಗೆ ಹೋಲಿಸಿದರೆ ವ್ಯತಿರಿಕ್ತವಾಗಿದೆ, ಈ ಸಮುದಾಯಗಳಲ್ಲಿ ಅರೆಕಾಲಿಕ ಕಾರ್ಮಿಕರಾಗಿ ಕೆಲಸ ಮಾಡುವ ಜನಸಂಖ್ಯೆಯ ಪಾಲು ಇಳಿಮುಖವಾಗಿದೆ ಎಂದು ವರದಿ ಹೇಳಿದೆ.

ಅಕ್ಟೋಬರ್ 2023ರಲ್ಲಿ ಮುಸ್ಲಿಂ ಧಾರ್ಮಿಕ ಗುಂಪುಗಳಲ್ಲಿ ಕಾರ್ಮಿಕ ಬಲದ ಭಾಗವಹಿಸುವಿಕೆ ದರ (LFPR) ಮತ್ತು ಕಾರ್ಮಿಕರ ಜನಸಂಖ್ಯೆಯ ಅನುಪಾತ (WPR) ಕುಸಿದಿದೆ ಎಂದು ವರದಿ ಮಾಡಿದೆ. ಕಾರ್ಮಿಕ ಬಲದ ಭಾಗವಹಿಸುವಿಕೆಯ ಪ್ರಮಾಣವು ಕೆಲಸವನ್ನು ಹುಡುಕುತ್ತಿರುವ ಜನಸಂಖ್ಯೆಯ ಪಾಲು ಮತ್ತು ಕಾರ್ಮಿಕರ ಜನಸಂಖ್ಯೆಯ ಅನುಪಾತವು ಕೆಲಸ ಮಾಡುವ ದುಡಿಯುವ ವಯಸ್ಸಿನ ಜನಸಂಖ್ಯೆಯ ಪಾಲು ಆಗಿದೆ.

ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದ ಅರ್ಥಶಾಸ್ತ್ರದ ಪ್ರಾಧ್ಯಾಪಕ ಸಂತೋಷ್ ಮೆಹ್ರೋತ್ರಾ ಅವರು ಈ ದತ್ತಾಂಶವನ್ನು ವಿವರಿಸುತ್ತಾ, ಮುಸ್ಲಿಮರು ಗ್ರಾಮೀಣ ಜನಸಂಖ್ಯೆಗಿಂತ ನಗರ ಜನಸಂಖ್ಯೆಯಲ್ಲಿ ಹೆಚ್ಚಿನ ಪಾಲು ಹೊಂದಿದ್ದಾರೆ. ಏಕೆಂದರೆ ಹೆಚ್ಚಿನ ಮುಸ್ಲಿಮರು ನಗರ ಪ್ರದೇಶಗಳಲ್ಲಿ ವಾಸಿಸುತ್ತಿದ್ದಾರೆ. ಆದ್ದರಿಂದ, ಮೊದಲ ಕೋವಿಡ್ ನಂತರದ ವರ್ಷದಲ್ಲಿ ಕಾರ್ಮಿಕ ಮಾರುಕಟ್ಟೆ ಪುನಶ್ಚೇತನಗೊಂಡಾಗ ಮುಸ್ಲಿಮರ ವರ್ಕಿಂಗ್‌ ಪಾಪ್ಯುಲೇಷನ್‌ ಅನುಪಾತದಲ್ಲಿ 2 ಶೇಕಡಾವಾರು ಕುಸಿತ ಕಂಡು ಬಂದಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಅಲ್ಪಸಂಖ್ಯಾತರಿಗೆ ಬಜೆಟ್‌ನಲ್ಲಿ ನೀಡಿರುವುದು ಶೇ.1ಕ್ಕಿಂತ ಕಡಿಮೆ ಅನುದಾನ: ಸಚಿವ ಝಮೀರ್ ಅಹ್ಮದ್ ಖಾನ್

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...