Homeಮುಖಪುಟಕೇಂದ್ರದಿಂದ ರೈತಪರ ಸಾಮಾಜಿಕ ಮಾಧ್ಯಮ ಖಾತೆಗಳಿಗೆ ನಿರ್ಬಂಧ: ವರದಿ

ಕೇಂದ್ರದಿಂದ ರೈತಪರ ಸಾಮಾಜಿಕ ಮಾಧ್ಯಮ ಖಾತೆಗಳಿಗೆ ನಿರ್ಬಂಧ: ವರದಿ

- Advertisement -
- Advertisement -

ಸಾರ್ವಜನಿಕ ಸುವ್ಯವಸ್ಥೆಯನ್ನು ಕಾಪಾಡುವ ಅಥವಾ ರಾಷ್ಟ್ರೀಯ ಭದ್ರತೆಯನ್ನು ರಕ್ಷಿಸುವ ನೆಪದಲ್ಲಿ ಶಿಕ್ಷಣ ತಜ್ಞರು, ಹೋರಾಟಗಾರರು, ಬುದ್ಧಿ ಜೀವಿಗಳು ಮತ್ತು ವಿಮರ್ಶಕರ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸುವ ಕೇಂದ್ರ ಸರ್ಕಾರದ ಕ್ರಮಕ್ಕೆ ನ್ಯಾಯಾಂಗದ ಮಧ್ಯಸ್ಥಿಕೆ ಮಾತ್ರ ಏಕೈಕ ಪರಿಹಾರ ಎಂದು ದಿ ಸೌತ್ ಫಸ್ಟ್‌ ತನ್ನ ವರದಿಯಲ್ಲಿ ಅಭಿಪ್ರಾಯಪಟ್ಟಿದೆ.

ನಿನ್ನೆ(ಫೆಬ್ರವರಿ 19, ಸೋಮವಾರ) ಪತ್ರಕರ್ತ ಮತ್ತು ಆಲ್ಟ್ ನ್ಯೂಸ್‌ನ ಸಂಸ್ಥಾಪಕ ಮುಹಮ್ಮದ್ ಝುಬೈರ್ ಅವರು’ ರೈತ ಹೋರಾಟದ ಪರ ಇರುವ ಮತ್ತು ಕೇಂದ್ರದ ಬಿಜೆಪಿ ಸರ್ಕಾರವನ್ನು ಟೀಕಿಸುವ ಎಕ್ಸ್‌ ಖಾತೆಗಳನ್ನು ಬ್ಲಾಕ್ ಮಾಡಲಾಗುತ್ತಿದೆ ಎಂದು ಪೋಸ್ಟ್‌ ಹಾಕಿದ್ದರು. ನಿರ್ಬಂಧಿಸಲಾದ ಖಾತೆಗಳನ್ನು ಪುನಃಸ್ಥಾಪಿಸಲು ಸರ್ಕಾರಕ್ಕೆ ಅವರು ಮನವಿ ಮಾಡಿದ್ದರು.

“ಭಾರತದಲ್ಲಿ ರೈತರ ಪ್ರತಿಭಟನೆ ಪರ ಇರುವ ಗ್ರೌಂಡ್ ರಿಪೋರ್ಟರ್‌ಗಳು, ಪ್ರಮುಖ ರೈತ ಸಂಘಟನೆಗಳು ಮತ್ತು ಇತರ ಪ್ರಮುಖರ ಎಕ್ಸ್‌ ಖಾತೆಗಳನ್ನು ಅಮಾನತುಗೊಳಿಸಲಾಗಿದೆ. ಬ್ಲಾಕ್ ಮಾಡಲಾದ ಕೆಲ ಖಾತೆಗಳ ಮಾಹಿತಿ ಇಲ್ಲಿ ಹಂಚಿಕೊಂಡಿದ್ದೇನೆ. ಇವುಗಳಲ್ಲದೆ ಇನ್ನೂ ಹಲವು ಖಾತೆಗಳಿಗೆ ನಿರ್ಬಂಧ ವಿಧಿಸಲಾಗಿದೆ. ದಯವಿಟ್ಟು ಅವುಗಳನ್ನು ಮರು ಸ್ಥಾಪಿಸಿ” ಎಂದು ಝಬೈರ್ ವಿನಂತಿ ಮಾಡಿಕೊಂಡಿದ್ದರು.

@PunYaab, @GaonSavera, @mandeeppunia1,@tractor2twiter_1, @TribalArmy, @Rattan1990, @HansrajMeena, @PandherSarvan ಮತ್ತು @ramanmann1974 ಈ ಎಕ್ಸ್ ಖಾತೆಗಳನ್ನು ಪ್ರಮುಖವಾಗಿ ಬ್ಲಾಕ್ ಮಾಡಲಾಗಿದೆ ಎಂದು ಝುಬೈರ್ ಸ್ಕ್ರೀನ್ ಶಾಟ್ ಹಂಚಿಕೊಂಡಿದ್ದರು.

ಇಂದು (ಮಂಗಳವಾರ, 20 ಫೆಬ್ರವರಿ) ‘ದಿ ಹಿಂದೂಸ್ತಾನ್ ಟೈಮ್ಸ್’ ವರದಿಯೊಂದನ್ನು ಪ್ರಕಟಿಸಿದ್ದು, “ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ‘ಸಾರ್ವಜನಿಕ ಸುವ್ಯವಸ್ಥೆ’ ಕಾಪಾಡುವ ಕಾರಣ ಹೇಳಿ ರೈತರ ಪ್ರತಿಭಟನೆಗಳಿಗೆ ಸಂಬಂಧಿಸಿದ 177 ಸಾಮಾಜಿಕ ಮಾಧ್ಯಮ ಖಾತೆಗಳು ಮತ್ತು ಲಿಂಕ್‌ಗಳ ವಿರುದ್ಧ ತುರ್ತು ನಿರ್ಬಂಧದ ಆದೇಶ ಹೊರಡಿಸಲು ಸೋಮವಾರ ತೀರ್ಮಾನಿಸಿದೆ” ಎಂದು ಹೇಳಿದೆ.

ಒಟ್ಟು 35 ಫೇಸ್‌ಬುಕ್ ಲಿಂಕ್‌ಗಳು, 35 ಫೇಸ್‌ಬುಕ್ ಪ್ರೊಫೈಲ್‌ಗಳು, 14 ಇನ್‌ಸ್ಟಾಗ್ರಾಮ್ ಖಾತೆಗಳು, 42 ಎಕ್ಸ್ ಹ್ಯಾಂಡಲ್‌ಗಳು ಮತ್ತು ಒಂದು ಸ್ನ್ಯಾಪ್‌ಚಾಟ್ ಮತ್ತು ಒಂದು ರೆಡ್ಡಿಟ್ ಖಾತೆಗಳ ವಿರುದ್ಧ ಸೋಮವಾರ ನಿರ್ಬಂಧ ಆದೇಶ ಹೊರಡಿಸಲಾಗಿದೆ ಎಂದು ವರದಿ ತಿಳಿಸಿದೆ.

ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸುವ ಐಟಿ ಕಾಯ್ದೆಯ ಸೆಕ್ಷನ್ 69ಎ ಜಾರಿ ಕುರಿತ ಸಮಿತಿಯ ಸಭೆಯಲ್ಲಿ ಭಾಗವಹಿಸಿದ್ದ ಮೆಟಾ ಮತ್ತು ಎಕ್ಸ್ ಪ್ರತಿನಿಧಿಗಳು, ಸಂಪೂರ್ಣ ಖಾತೆಗಳನ್ನು ನಿರ್ಬಂಧಿಸುವ ಬದಲು, ವಿಷಯದೊಂದಿಗೆ ನಿರ್ದಿಷ್ಟ URLಗಳನ್ನು ನಿರ್ಬಂಧಿಸಬೇಕು ಎಂದು ಹೇಳಿರುವುದಾಗಿ ಹಿಂದುಸ್ತಾನ್ ಟೈಮ್ಸ್ ವರದಿ ಹೇಳಿದೆ.

ಇದಕ್ಕೆ ಪ್ರತಿಕ್ರಿಯಿಸಿರುವ ಸಮಿತಿ, “ಖಾತೆ ಸಕ್ರಿಯವಾಗಿದ್ದರೆ, ಸಾರ್ವಜನಿಕ ಅಶಾಂತಿ ಮತ್ತು ಸಾರ್ವಜನಿಕ ಸುವ್ಯವಸ್ಥೆ ಸಮಸ್ಯೆಗಳಿಗೆ ಕಾರಣವಾಗುವ ವಿಷಯವನ್ನು ಪೋಸ್ಟ್ ಮಾಡುವುದನ್ನು ಮುಂದುವರಿಸಬಹುದು” ಎಂದು ಹೇಳಿರುವುದಾಗಿ ವರದಿ ಉಲ್ಲೇಖಿಸಿದೆ.

“ಯಾರ ಖಾತೆಗಳನ್ನು ಬ್ಲಾಕ್ ಮಾಡಲಿದ್ದಾರೆ ಎಂಬುವುದರ ಮಾಹಿತಿ ಗೌಪ್ಯವಾಗಿರುವುದರಿಂದ, ಅದರ ಪಟ್ಟಿ ಪಡೆಯುವುದು ಸುಲಭವಲ್ಲ. 2009ರ ಸಾಮಾಜಿಕ ಖಾತೆಗಳನ್ನು ನಿರ್ಬಂಧಿಸುವ ನಿಯಮಗಳು ಗೌಪ್ಯತೆಯ ಷರತ್ತನ್ನು ಹೊಂದಿವೆ. ಅದು ಹೆಚ್ಚು ಕಡಿಮೆ ಯಾವಾಗಲೂ ಅನ್ವಯಿಸುತ್ತದೆ. ಈ ಹಿಂದೆ ಎಕ್ಸ್‌ ಲುಮೆನ್ ಡೇಟಾಬೇಸ್ ಮೂಲಕ ಕನಿಷ್ಠ ಬ್ಲಾಕ್ ಆದ URLಗಳನ್ನು ಬಹಿರಂಗಪಡಿಸುತ್ತಿತ್ತು. ಆದರೆ, ಏಪ್ರಿಲ್ 2023ರಲ್ಲಿ ಅದನ್ನು ನಿಲ್ಲಿಸಿದೆ ಎಂದು ಹೇಳಿರುವುದಾಗಿ ಹಿಂದೂಸ್ತಾನ್ ಟೈಮ್ಸ್ ತಿಳಿಸಿದೆ.

ಇದನ್ನೂ ಓದಿ : MSP ಕುರಿತು ಕಾನೂನು ತರಲು ಪ್ರಧಾನಿ ಅಧಿವೇಶನ ಕರೆಯಲಿ: ರೈತ ಮುಖಂಡರ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...