Homeಮುಖಪುಟಕೇಂದ್ರದಿಂದ ರೈತಪರ ಸಾಮಾಜಿಕ ಮಾಧ್ಯಮ ಖಾತೆಗಳಿಗೆ ನಿರ್ಬಂಧ: ವರದಿ

ಕೇಂದ್ರದಿಂದ ರೈತಪರ ಸಾಮಾಜಿಕ ಮಾಧ್ಯಮ ಖಾತೆಗಳಿಗೆ ನಿರ್ಬಂಧ: ವರದಿ

- Advertisement -
- Advertisement -

ಸಾರ್ವಜನಿಕ ಸುವ್ಯವಸ್ಥೆಯನ್ನು ಕಾಪಾಡುವ ಅಥವಾ ರಾಷ್ಟ್ರೀಯ ಭದ್ರತೆಯನ್ನು ರಕ್ಷಿಸುವ ನೆಪದಲ್ಲಿ ಶಿಕ್ಷಣ ತಜ್ಞರು, ಹೋರಾಟಗಾರರು, ಬುದ್ಧಿ ಜೀವಿಗಳು ಮತ್ತು ವಿಮರ್ಶಕರ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸುವ ಕೇಂದ್ರ ಸರ್ಕಾರದ ಕ್ರಮಕ್ಕೆ ನ್ಯಾಯಾಂಗದ ಮಧ್ಯಸ್ಥಿಕೆ ಮಾತ್ರ ಏಕೈಕ ಪರಿಹಾರ ಎಂದು ದಿ ಸೌತ್ ಫಸ್ಟ್‌ ತನ್ನ ವರದಿಯಲ್ಲಿ ಅಭಿಪ್ರಾಯಪಟ್ಟಿದೆ.

ನಿನ್ನೆ(ಫೆಬ್ರವರಿ 19, ಸೋಮವಾರ) ಪತ್ರಕರ್ತ ಮತ್ತು ಆಲ್ಟ್ ನ್ಯೂಸ್‌ನ ಸಂಸ್ಥಾಪಕ ಮುಹಮ್ಮದ್ ಝುಬೈರ್ ಅವರು’ ರೈತ ಹೋರಾಟದ ಪರ ಇರುವ ಮತ್ತು ಕೇಂದ್ರದ ಬಿಜೆಪಿ ಸರ್ಕಾರವನ್ನು ಟೀಕಿಸುವ ಎಕ್ಸ್‌ ಖಾತೆಗಳನ್ನು ಬ್ಲಾಕ್ ಮಾಡಲಾಗುತ್ತಿದೆ ಎಂದು ಪೋಸ್ಟ್‌ ಹಾಕಿದ್ದರು. ನಿರ್ಬಂಧಿಸಲಾದ ಖಾತೆಗಳನ್ನು ಪುನಃಸ್ಥಾಪಿಸಲು ಸರ್ಕಾರಕ್ಕೆ ಅವರು ಮನವಿ ಮಾಡಿದ್ದರು.

“ಭಾರತದಲ್ಲಿ ರೈತರ ಪ್ರತಿಭಟನೆ ಪರ ಇರುವ ಗ್ರೌಂಡ್ ರಿಪೋರ್ಟರ್‌ಗಳು, ಪ್ರಮುಖ ರೈತ ಸಂಘಟನೆಗಳು ಮತ್ತು ಇತರ ಪ್ರಮುಖರ ಎಕ್ಸ್‌ ಖಾತೆಗಳನ್ನು ಅಮಾನತುಗೊಳಿಸಲಾಗಿದೆ. ಬ್ಲಾಕ್ ಮಾಡಲಾದ ಕೆಲ ಖಾತೆಗಳ ಮಾಹಿತಿ ಇಲ್ಲಿ ಹಂಚಿಕೊಂಡಿದ್ದೇನೆ. ಇವುಗಳಲ್ಲದೆ ಇನ್ನೂ ಹಲವು ಖಾತೆಗಳಿಗೆ ನಿರ್ಬಂಧ ವಿಧಿಸಲಾಗಿದೆ. ದಯವಿಟ್ಟು ಅವುಗಳನ್ನು ಮರು ಸ್ಥಾಪಿಸಿ” ಎಂದು ಝಬೈರ್ ವಿನಂತಿ ಮಾಡಿಕೊಂಡಿದ್ದರು.

@PunYaab, @GaonSavera, @mandeeppunia1,@tractor2twiter_1, @TribalArmy, @Rattan1990, @HansrajMeena, @PandherSarvan ಮತ್ತು @ramanmann1974 ಈ ಎಕ್ಸ್ ಖಾತೆಗಳನ್ನು ಪ್ರಮುಖವಾಗಿ ಬ್ಲಾಕ್ ಮಾಡಲಾಗಿದೆ ಎಂದು ಝುಬೈರ್ ಸ್ಕ್ರೀನ್ ಶಾಟ್ ಹಂಚಿಕೊಂಡಿದ್ದರು.

ಇಂದು (ಮಂಗಳವಾರ, 20 ಫೆಬ್ರವರಿ) ‘ದಿ ಹಿಂದೂಸ್ತಾನ್ ಟೈಮ್ಸ್’ ವರದಿಯೊಂದನ್ನು ಪ್ರಕಟಿಸಿದ್ದು, “ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ‘ಸಾರ್ವಜನಿಕ ಸುವ್ಯವಸ್ಥೆ’ ಕಾಪಾಡುವ ಕಾರಣ ಹೇಳಿ ರೈತರ ಪ್ರತಿಭಟನೆಗಳಿಗೆ ಸಂಬಂಧಿಸಿದ 177 ಸಾಮಾಜಿಕ ಮಾಧ್ಯಮ ಖಾತೆಗಳು ಮತ್ತು ಲಿಂಕ್‌ಗಳ ವಿರುದ್ಧ ತುರ್ತು ನಿರ್ಬಂಧದ ಆದೇಶ ಹೊರಡಿಸಲು ಸೋಮವಾರ ತೀರ್ಮಾನಿಸಿದೆ” ಎಂದು ಹೇಳಿದೆ.

ಒಟ್ಟು 35 ಫೇಸ್‌ಬುಕ್ ಲಿಂಕ್‌ಗಳು, 35 ಫೇಸ್‌ಬುಕ್ ಪ್ರೊಫೈಲ್‌ಗಳು, 14 ಇನ್‌ಸ್ಟಾಗ್ರಾಮ್ ಖಾತೆಗಳು, 42 ಎಕ್ಸ್ ಹ್ಯಾಂಡಲ್‌ಗಳು ಮತ್ತು ಒಂದು ಸ್ನ್ಯಾಪ್‌ಚಾಟ್ ಮತ್ತು ಒಂದು ರೆಡ್ಡಿಟ್ ಖಾತೆಗಳ ವಿರುದ್ಧ ಸೋಮವಾರ ನಿರ್ಬಂಧ ಆದೇಶ ಹೊರಡಿಸಲಾಗಿದೆ ಎಂದು ವರದಿ ತಿಳಿಸಿದೆ.

ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸುವ ಐಟಿ ಕಾಯ್ದೆಯ ಸೆಕ್ಷನ್ 69ಎ ಜಾರಿ ಕುರಿತ ಸಮಿತಿಯ ಸಭೆಯಲ್ಲಿ ಭಾಗವಹಿಸಿದ್ದ ಮೆಟಾ ಮತ್ತು ಎಕ್ಸ್ ಪ್ರತಿನಿಧಿಗಳು, ಸಂಪೂರ್ಣ ಖಾತೆಗಳನ್ನು ನಿರ್ಬಂಧಿಸುವ ಬದಲು, ವಿಷಯದೊಂದಿಗೆ ನಿರ್ದಿಷ್ಟ URLಗಳನ್ನು ನಿರ್ಬಂಧಿಸಬೇಕು ಎಂದು ಹೇಳಿರುವುದಾಗಿ ಹಿಂದುಸ್ತಾನ್ ಟೈಮ್ಸ್ ವರದಿ ಹೇಳಿದೆ.

ಇದಕ್ಕೆ ಪ್ರತಿಕ್ರಿಯಿಸಿರುವ ಸಮಿತಿ, “ಖಾತೆ ಸಕ್ರಿಯವಾಗಿದ್ದರೆ, ಸಾರ್ವಜನಿಕ ಅಶಾಂತಿ ಮತ್ತು ಸಾರ್ವಜನಿಕ ಸುವ್ಯವಸ್ಥೆ ಸಮಸ್ಯೆಗಳಿಗೆ ಕಾರಣವಾಗುವ ವಿಷಯವನ್ನು ಪೋಸ್ಟ್ ಮಾಡುವುದನ್ನು ಮುಂದುವರಿಸಬಹುದು” ಎಂದು ಹೇಳಿರುವುದಾಗಿ ವರದಿ ಉಲ್ಲೇಖಿಸಿದೆ.

“ಯಾರ ಖಾತೆಗಳನ್ನು ಬ್ಲಾಕ್ ಮಾಡಲಿದ್ದಾರೆ ಎಂಬುವುದರ ಮಾಹಿತಿ ಗೌಪ್ಯವಾಗಿರುವುದರಿಂದ, ಅದರ ಪಟ್ಟಿ ಪಡೆಯುವುದು ಸುಲಭವಲ್ಲ. 2009ರ ಸಾಮಾಜಿಕ ಖಾತೆಗಳನ್ನು ನಿರ್ಬಂಧಿಸುವ ನಿಯಮಗಳು ಗೌಪ್ಯತೆಯ ಷರತ್ತನ್ನು ಹೊಂದಿವೆ. ಅದು ಹೆಚ್ಚು ಕಡಿಮೆ ಯಾವಾಗಲೂ ಅನ್ವಯಿಸುತ್ತದೆ. ಈ ಹಿಂದೆ ಎಕ್ಸ್‌ ಲುಮೆನ್ ಡೇಟಾಬೇಸ್ ಮೂಲಕ ಕನಿಷ್ಠ ಬ್ಲಾಕ್ ಆದ URLಗಳನ್ನು ಬಹಿರಂಗಪಡಿಸುತ್ತಿತ್ತು. ಆದರೆ, ಏಪ್ರಿಲ್ 2023ರಲ್ಲಿ ಅದನ್ನು ನಿಲ್ಲಿಸಿದೆ ಎಂದು ಹೇಳಿರುವುದಾಗಿ ಹಿಂದೂಸ್ತಾನ್ ಟೈಮ್ಸ್ ತಿಳಿಸಿದೆ.

ಇದನ್ನೂ ಓದಿ : MSP ಕುರಿತು ಕಾನೂನು ತರಲು ಪ್ರಧಾನಿ ಅಧಿವೇಶನ ಕರೆಯಲಿ: ರೈತ ಮುಖಂಡರ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...