Homeಮುಖಪುಟನ್ಯಾಯಾಲಯದಲ್ಲೇ ಮತ ಎಣಿಕೆ, ನ್ಯಾಯಾಧೀಶರಿಂದಲೇ ಫಲಿತಾಂಶ ಘೋಷಣೆ: ಹೊಸ ಇತಿಹಾಸ ಬರೆದ ಸುಪ್ರೀಂ ಕೋರ್ಟ್

ನ್ಯಾಯಾಲಯದಲ್ಲೇ ಮತ ಎಣಿಕೆ, ನ್ಯಾಯಾಧೀಶರಿಂದಲೇ ಫಲಿತಾಂಶ ಘೋಷಣೆ: ಹೊಸ ಇತಿಹಾಸ ಬರೆದ ಸುಪ್ರೀಂ ಕೋರ್ಟ್

- Advertisement -
- Advertisement -

ಚಂಡೀಗಢ ಮೇಯರ್ ಚುನಾವಣೆಯ ಮತ ಎಣಿಕೆಗೆ ಸಾಕ್ಷಿಯಾಗಿದ್ದಲ್ಲದೆ, ಫಲಿತಾಂಶವನ್ನೂ ಘೋಷಿಸುವ ಮೂಲಕ ಸುಪ್ರೀಂ ಕೋರ್ಟ್‌ ಇಂದು (ಫೆ.20) ಹೊಸ ಇತಿಹಾಸ ನಿರ್ಮಿಸಿದೆ.

ಇಂದು ಬೆಳಗ್ಗೆ ಮತಪತ್ರಗಳನ್ನು ಪರಿಶೀಲಿಸಿದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಸುಪ್ರೀಂ ಕೋರ್ಟ್‌ ಪೀಠ, ಎಂಟು ಮತಪತ್ರಗಳನ್ನು ವಿರೂಪಗೊಳಿಸಿ ಅಮಾನ್ಯಗೊಳಿಸಿದ ಚುನಾವಣಾಧಿಕಾರಿಯನ್ನು ತರಾಟೆಗೆ ತೆಗೆದುಕೊಂಡಿತು. ನಂತರದ ಪ್ರಕ್ರಿಯೆಯನ್ನು ಚುನಾವಣಾ ಆಯೋಗಕ್ಕೆ ನೀಡಲು ನಿರಾಕರಿಸಿತು. ಹೊಸದಾಗಿ ಚುನಾವಣೆ ನಡೆಸುವಂತೆ ಕೋರಿದ್ದ ಬಿಜೆಪಿಯ ಮನವಿಯನ್ನೂ ತಿರಸ್ಕರಿಸಿತು.

“ಚಂಡೀಗಢದಲ್ಲಿ ನಡೆದಂತಹ ಕುತಂತ್ರಗಳಿಂದ ಪ್ರಜಾಪ್ರಭುತ್ವ ಪ್ರಕ್ರಿಯೆಯು ನಿಷ್ಪ್ರಯೋಜಕವಾಗದಂತೆ ನೋಡಿಕೊಳ್ಳುವುದು ನ್ಯಾಯಾಲಯದ ಕರ್ತವ್ಯ. ಇಂತಹ ವಿರಳ ಸನ್ನಿವೇಶಗಳಲ್ಲಿ ನ್ಯಾಯಾಲಯವು ಮಧ್ಯಪ್ರವೇಶಿಸಿ, ಮೂಲಭೂತ ಪ್ರಜಾಸತ್ತಾತ್ಮಕ ಜನಮತವನ್ನು ಖಾತರಿಗೊಳಿಸಬೇಕಿದೆ” ಎಂದು ನ್ಯಾಯಾಧೀಶರು ಹೇಳಿದರು.

ಮತ ಎಣಿಕೆಯ ಬಳಿಕ ಅರ್ಜಿದಾರ ಎಎಪಿಯ ಕುಲದೀಪ್ ಕುಮಾರ್ ಚಂಡೀಗಢ ಮುನ್ಸಿಪಲ್ ಕಾರ್ಪೋರೇಷನ್‌ನ ಮೇಯರ್‌ ಹುದ್ದೆಗೆ ಮಾನ್ಯವಾಗಿ ಚುನಾಯಿತರಾಗಿದ್ದಾರೆ ಎಂದು ನ್ಯಾಯಾಧೀಶರು ಘೋಷಿಸಿದರು.

ಚುನಾವಣೆಯಲ್ಲಿ ಅಕ್ರಮವೆಸಗಿದ ಬಿಜೆಪಿಯ ಅಲ್ಪ ಸಂಖ್ಯಾತ ಘಟಕದ ಮಾಜಿ ಸದಸ್ಯರೂ ಆಗಿರುವ ಅನಿಲ್ ಮಾಸಿಹ್ ವಿರುದ್ದ ಕ್ರಮ ಕೈಗೊಳ್ಳುವಂತೆ ಮುಖ್ಯನ್ಯಾಯಮೂರ್ತಿ ಸೂಚಿಸಿದರು. 8 ಮತಪತ್ರಗಳು ವಿರೂಪಗೊಂಡಿದ್ದರಿಂದ ಅವುಗಳ ಮೇಲೆ ಗುರುತು ಹಾಕಿದೆ ಎಂದು ನ್ಯಾಯಾಲಯಕ್ಕೆ ಸುಳ್ಳು ಹೇಳಿದ್ದ ಅನಿಲ್ ಮಾಸಿಹ್ ವಿರುದ್ದ ಸಿಆರ್‌ಪಿಸಿ ಸೆಕ್ಷನ್ 340 ಅಡಿಯಲ್ಲಿ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು ಮುಖ್ಯ ನ್ಯಾಯಮೂರ್ತಿ ಆದೇಶಿಸಿದರು. ಮಾಸಿಹ್ ವಿರುದ್ಧ ಏಕೆ ಕ್ರಮ ಕೈಗೊಳ್ಳಬಾರದು? ಎಂದು ಮೂರು ವಾರದೊಳಗೆ ಕಾರಣ ತಿಳಿಸುವಂತೆ ಹೇಳಿದರು.

ನ್ಯಾಯಾಲಯದ ಐತಿಹಾಸಿಕ ತೀರ್ಪಿನಿಂದ ಜನವರಿ 30ರಂದು ಚುನಾವಣಾಧಿಕಾರಿ ನೀಡಿದ್ದ ಫಲಿತಾಂಶ ರದ್ದಾಗಿದೆ. ಅಂದು ಮೇಯರ್ ಆಗಿ ಬಿಜೆಪಿಯ ಮನೋಜ್ ಸೋಂಕರ್ ಆಯ್ಕೆಯಾಗಿರುವುದೂ ರದ್ದುಗೊಂಡಿದೆ. ನ್ಯಾಯಯುತವಾಗಿ ಕಾಂಗ್ರೆಸ್-ಎಎಪಿಯ ಮೈತ್ರಿ ಅಭ್ಯರ್ಥಿ ಕುಲದೀಪ್ ಕುಮಾರ್ ಮೇಯರ್ ಪಟ್ಟಕ್ಕೇರಿದ್ದಾರೆ.

ಸುಪ್ರೀಂ ಕೋರ್ಟ್‌ನಲ್ಲಿ ಎಎಪಿಯ ಕುಲದೀಪ್ ಕುಮಾರ್ ಅವರಿಗೆ ನ್ಯಾಯ ಸಿಗಲು ಮುಖ್ಯ ಕಾರಣ ಕಾಂಗ್ರೆಸ್ ಮತ್ತು ಎಎಪಿ ಜಂಟಿಯಾಗಿ ಬಿಡುಗಡೆ ಮಾಡಿದ್ದ ವಿಡಿಯೋ ಆಗಿದೆ. ಅದರಲ್ಲಿ ಚುನಾವಣಾಧಿಕಾರಿ ಅನಿಲ್ ಮಾಸಿಹ್ ಎಎಪಿಯ ಎಂಟು ಸದಸ್ಯರ ಮತ ಪತ್ರಗಳ ಮೇಲೆ ಉದ್ದೇಶಪೂರ್ವಕವಾಗಿ ಮಾರ್ಕ್‌ ಮಾಡಿರುವುದು ಸ್ಪಷ್ಟವಾಗಿ ರೆಕಾರ್ಡ್‌ ಆಗಿತ್ತು.

ನಿನ್ನೆ (ಫೆ.19) ಪ್ರಕರಣ ವಿಚಾರಣೆ ನಡೆಸಿದ್ದ ನ್ಯಾಯಪೀಠ, “ಮತಪತ್ರಗಳ ಮೇಲೆ ಮಾರ್ಕ್‌ ಯಾಕೆ ಮಾಡಿದ್ರಿ? ಸಹಿ ಹಾಕುವುದನ್ನು ಹೊರತು ಬೇರೆ ಮಾರ್ಕ್‌ ಮಾಡಲು ನಿಯಮಗಳ ಪ್ರಕಾರ ನಿಮಗೆ ಎಲ್ಲಿ ಅವಕಾಶವಿದೆ? ಎಂದು ಅನಿಲ್ ಮಾಸಿಹ್‌ಗೆ ಖಾರವಾಗಿ ಕೇಳಿತ್ತು.

ಒಟ್ಟಿನಲ್ಲಿ ಮೊದಲ ಬಾರಿಗೆ ಸುಪ್ರೀಂ ಕೋರ್ಟ್‌ನಲ್ಲೇ ಮತ ಎಣಿಕೆ ನಡೆದು ಫಲಿತಾಂಶ ಪ್ರಕಟಗೊಳ್ಳುವ ಮೂಲಕ ಹೊಸ ಇತಿಹಾಸ ನಿರ್ಮಾಣವಾಗಿದೆ. ಈ ಪ್ರಕರಣವನ್ನು ನ್ಯಾಯಾಲಯ ಅತ್ಯಂತ ಮುತುವರ್ಜಿ ವಹಿಸಿ ತುರ್ತಾಗಿ ವಿಲೇವಾರಿ ಮಾಡಿದೆ.

ಇದನ್ನೂ ಓದಿ: ಎಎಪಿಯ ಕುಲದೀಪ್ ಕುಮಾರ್ ಚಂಡೀಗಢ ಮೇಯರ್: ಸುಪ್ರೀಂ ಕೋರ್ಟ್ ಮಹತ್ವದ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...