Homeಮುಖಪುಟಸಿಖ್ ಪೊಲೀಸ್ ಅಧಿಕಾರಿಗೆ "ಖಲಿಸ್ತಾನಿ" ಹಣೆಪಟ್ಟಿ ಕಟ್ಟಿದ ಬಿಜೆಪಿಗರು; ಸುವೇಂದು ಅಧಿಕಾರಿ ವಿರುದ್ಧ ಭುಗಿಲೆದ್ದ ಆಕ್ರೋಶ

ಸಿಖ್ ಪೊಲೀಸ್ ಅಧಿಕಾರಿಗೆ “ಖಲಿಸ್ತಾನಿ” ಹಣೆಪಟ್ಟಿ ಕಟ್ಟಿದ ಬಿಜೆಪಿಗರು; ಸುವೇಂದು ಅಧಿಕಾರಿ ವಿರುದ್ಧ ಭುಗಿಲೆದ್ದ ಆಕ್ರೋಶ

- Advertisement -
- Advertisement -

ಪ.ಬಂಗಾಳದ ಸಿಖ್ ಪೊಲೀಸ್ ಅಧಿಕಾರಿಯೊಬ್ಬರಿಗೆ ಬಿಜೆಪಿ ನಾಯಕ ಸುವೇಂದು ಅಧಿಕಾರಿ “ಖಲಿಸ್ತಾನಿ” ಎಂದು ಕರೆದಿದ್ದು, ತಮ್ಮದೇ ರಾಜ್ಯದಲ್ಲಿ ಕೆಲಸ ಮಾಡುತ್ತಿದ್ದ ಸಿಖ್‌ ಸಮುದಾಯಕ್ಕೆ ಸೇರಿದ ಐಪಿಎಸ್‌ ಅಧಿಕಾರಿಯನ್ನು ಸಿಖ್‌ ಪ್ರತ್ಯೇಕತಾವಾದಿಗಳಿಗೆ ಹೋಲಿಕೆ ಮಾಡಿದ್ದಾರೆ, ಆ ಮೂಲಕ ದೇಶ ವಿರೋಧಿ ಎಂದು ಬಿಂಬಿಸಲು ಹೊರಟ್ಟಿದ್ದಾರೆ. ಕಾನೂನು ರಕ್ಷಕರನ್ನು ಧರ್ಮದ ಹೆಸರಿನಲ್ಲಿ ಪ್ರತ್ಯೇಖಿಸಿ ಹೇಳಿಕೆ ಕೊಡುವ ಬಿಜೆಪಿ ನಾಯಕರ ನಡೆಯು ಆಘಾತಕಾರಿಯಾಗಿದ್ದು, ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಬಿಜೆಪಿಯ ಸುವೇಂದು ಅಧಿಕಾರಿ ನಾಚಿಕೆಯಿಲ್ಲದೆ ಪೇಟ ಧರಿಸಿದ್ದ IPS ಅಧಿಕಾರಿಯನ್ನು ‘ಖಲಿಸ್ತಾನಿ’ ಎಂದು ಕರೆದಿದ್ದಾರೆ. ಬಿಜೆಪಿಯ ಈ ಲಜ್ಜೆಗೆಟ್ಟ ಮತ್ತು ವಿಭಜಕ ಹೇಳಿಕೆ ವಿರುದ್ಧ ಅಸನ್ಸೋಲ್‌ನ ಸಿಖ್ ಸಮುದಾಯವು ಬೀದಿಗಿಳಿದಿದೆ.

ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ವಿವಾದಿತ ಸಂದೇಶಖಲಿ ಪ್ರದೇಶಕ್ಕೆ ಪ್ರವೇಶಿಸಲು ಯತ್ನಿಸಿದ ವಿಪಕ್ಷ ಬಿಜೆಪಿ ನಾಯಕರನ್ನು ತಡೆದಾಗ ಗುಂಪಿನಲ್ಲಿ ಓರ್ವರು ಅಧಿಕಾರಿಯನ್ನು ಖಾಲಿಸ್ತಾನಿ ಎಂದು ಕರೆದಿದ್ದಾರೆ. ಖಾಲಿಸ್ತಾನಿ ಎಂದು ಕರೆದಿರುವುದನ್ನು ಕೇಳಿ ಐಪಿಎಸ್‌ ಅಧಿಕಾರಿ ಜಸ್‌ಪ್ರೀತ್‌ ಸಿಂಗ್‌, ಪೇಟ ಧರಿಸಿದ್ದೇನೆಂಬ ಮಾತ್ರಕ್ಕೆ ಖಾಲಿಸ್ತಾನಿ ಎನ್ನುತ್ತೀರಾ? ನಾನು ಈ ಬಗ್ಗೆ ಕ್ರಮ ತೆಗೆದುಕೊಳ್ಳುತ್ತೇನೆ. ನೀವು ನನ್ನ ಧರ್ಮದ ಮೇಲೆ ದಾಳಿ ಮಾಡಬಾರದು. ನಿಮ್ಮ ಧರ್ಮದ ಬಗ್ಗೆ ನಾನು ಏನನ್ನೂ ಹೇಳಿಲ್ಲ ಎಂದು ಸಿಟ್ಟಿಗೆದ್ದು ಪೊಲೀಸ್‌ ಅಧಿಕಾರಿ ಹೇಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಇಬ್ಬರು ಬಿಜೆಪಿ ನಾಯಕರು  ಅಸನ್ಸೋಲ್ ದಕ್ಷಿಣ ಶಾಸಕ ಅಗ್ನಿಮಿತ್ರ ಪಾಲ್ ಮತ್ತು ಸುವೇಂದು ಅಧಿಕಾರಿ ವಿಡಿಯೋದಲ್ಲಿ ಪ್ರಮುಖವಾಗಿ ಕಾಣಿಸಿಕೊಂಡಿದ್ದಾರೆ.

ದಿ ವೈರ್‌ನೊಂದಿಗೆ ಮಾತನಾಡಿದ ಸಿಂಗ್, ಈ ಘಟನೆ ನಡೆದಾಗ ಅವರು ಬಸಿರ್‌ಹತ್ ಪೊಲೀಸ್ ಠಾಣೆ ವ್ಯಾಪ್ತಿಯ ಸಂದೇಶಖಾಲಿ ಗ್ರಾಮದಲ್ಲಿ ಕರ್ತವ್ಯದಲ್ಲಿದ್ದರು. ಸೆಕ್ಷನ್ 144 CrPC ಜಾರಿಯಲ್ಲಿರುವುದರಿಂದ, ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ನೇತೃತ್ವದಲ್ಲಿ ನಾವು ರಾಜಕಾರಣಿಗಳ ಗುಂಪನ್ನು  ಸಂದೇಶಖಾಲಿ ಪ್ರವೇಶಿಸದಂತೆ ತಡೆಯಲು ಪ್ರಯತ್ನಿಸಿದ್ದೇವೆ. ನಾವು ರಾಜಕಾರಣಿಗಳನ್ನು ನಿಲ್ಲಿಸಿದಾಗ ಸುವೆಂದು ಅಧಿಕಾರಿ ನನ್ನನ್ನು ‘ಖಲಿಸ್ತಾನಿ’ ಎಂದು ಕರೆದರು, ಅದು ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ. ಇದರ ವಿರುದ್ಧ ನಾನು ತೀವ್ರವಾಗಿ ಪ್ರತಿಕ್ರಿಯಿಸಿದೆ ಎಂದು ಹೇಳಿದ್ದಾರೆ.

ತಮ್ಮದೇ ರಾಜ್ಯದ ಪೊಲೀಸ್‌ ಅಧಿಕಾರಿಯೋರ್ವರನ್ನು ಖಲಿಸ್ತಾನಿ ಎಂದು ಕರೆದಿರುವುದು ಬಿಜೆಪಿ ವಿರುದ್ಧ ವ್ಯಾಪಕವಾಗಿ ಆಕ್ರೋಶಕ್ಕೆ ಕಾರಣವಾಗಿದೆ. ಪ.ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಸಿಖ್ ಸಂಘಟನೆ ಎಸ್‌ಜಿಪಿಸಿ (ಶಿರೋಮಣಿ ಗುರುದ್ವಾರ ಪರ್ಬಂಧಕ್ ಸಮಿತಿ) ಮತ್ತು ಕಾಂಗ್ರೆಸ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿವೆ. ಬಂಗಾಳದ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಈ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿರುವ ರಾಜ್ಯ ಪೊಲೀಸರು ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ. ಬಿಜೆಪಿ ಆರೋಪವನ್ನು ತಳ್ಳಿಹಾಕಿದ್ದು, ಪೊಲೀಸರು ಆಡಳಿತಾರೂಢ ತೃಣಮೂಲ ಕಾಂಗ್ರೆಸ್‌ಗೆ ಅಧೀನರಾಗಿದ್ದಾರೆ ಎಂದು ಪ್ರತ್ಯಾರೋಪವನ್ನು ಮಾಡಿದೆ.

ನಮ್ಮದೇ ಅಧಿಕಾರಿಯೊಬ್ಬರನ್ನು ರಾಜ್ಯದ ವಿರೋಧ ಪಕ್ಷದ ನಾಯಕ ‘ಖಲಿಸ್ತಾನಿ’ ಎಂದು ಕರೆದರು. ಅದು ಅವರ ತಪ್ಪು, ಅವರು ಹೆಮ್ಮೆಯ ಸಿಖ್ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಪ್ರಯತ್ನಿಸುತ್ತಿರುವ ಸಮರ್ಥ ಪೋಲೀಸ್ ಅಧಿಕಾರಿಯಾಗಿದ್ದಾರೆ. ಬಿಜೆಪಿ ನಾಯಕರ ಹೇಳಿಕೆ ತುಂಬಾ ದುರುದ್ದೇಶಪೂರಿತವಾಗಿದೆ. ಇದು ಕೋಮು ಪ್ರಚೋದನೆಯಾಗಿರುವುದರಿಂದ ಜನಾಂಗೀಯವಾಗಿದೆ. ಇದು ಕ್ರಿಮಿನಲ್ ಕೃತ್ಯವಾಗಿದೆ ಎಂದು ರಾಜ್ಯ ಪೊಲೀಸ್‌ನ ಅಧಿಕೃತ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಲಾಗಿದೆ.

ಸುವೇಂದು ಅಧಿಕಾರಿ ನೇತೃತ್ವದಲ್ಲಿ ಪ್ರತಿಭಟನಾಕಾರರು ಸಂದೇಶಖಾಲಿಗೆ ತೆರಳುತ್ತಿದ್ದಾಗ ಪೊಲೀಸರು ತಡೆದಿದ್ದಾರೆ. ಬಳಿಕ ನಡೆದ ಘರ್ಷಣೆಯ ವೇಳೆ ಪ್ರತಿಭಟನಾಕಾರರಲ್ಲಿ ಒಬ್ಬರು ಸ್ಥಳದಲ್ಲಿ ಕರ್ತವ್ಯದಲ್ಲಿದ್ದ ಹಿರಿಯ ಪೊಲೀಸ್ ಅಧಿಕಾರಿಯನ್ನು ಖಲಿಸ್ತಾನಿ ಎಂದು ಕರೆದಿದ್ದಾರೆ.

ಬಿಜೆಪಿ ಒಡೆದು ಆಳುವ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದ ಪ.ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದನ್ನು ಖಂಡಿಸಿದ್ದಾರೆ. ಇಂದು ಬಿಜೆಪಿಯ ಒಡೆದು ಆಳುವ ರಾಜಕಾರಣ, ನಾಚಿಕೆಯಿಲ್ಲದೆ ಸಾಂವಿಧಾನಿಕ ಗಡಿಗಳನ್ನು ಮೀರಿದೆ. ಬಿಜೆಪಿ ಪ್ರಕಾರ, ಟರ್ಬನ್ ಧರಿಸಿರುವ ಪ್ರತಿಯೊಬ್ಬ ವ್ಯಕ್ತಿಯು ಖಲಿಸ್ತಾನಿ. ನಮ್ಮ ಸಿಖ್ ಸಹೋದರರು ಮತ್ತು ಸಹೋದರಿಯರ ಖ್ಯಾತಿಯನ್ನು ದುರ್ಬಲಗೊಳಿಸುವ ಈ ದಿಟ್ಟ ಪ್ರಯತ್ನವನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ, ಬಂಗಾಳದ ಸಾಮಾಜಿಕ ಸಾಮರಸ್ಯವನ್ನು ರಕ್ಷಿಸುವಲ್ಲಿ ನಾವು ದೃಢವಾಗಿ ನಿಲ್ಲುತ್ತೇವೆ ಮತ್ತು ಅದನ್ನು ಅಡ್ಡಿಪಡಿಸುವ ಯಾವುದೇ ಪ್ರಯತ್ನಗಳನ್ನು ತಡೆಯಲು ಕಠಿಣ ಕಾನೂನು ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

ದೇಶದ ಸ್ವಾತಂತ್ರ್ಯ ಮತ್ತು ರಕ್ಷಣೆಗಾಗಿ ಸಿಖ್ಖರು ಅತಿ ಹೆಚ್ಚು ತ್ಯಾಗ ಮಾಡಿದ್ದಾರೆ ಎಂಬುವುದನ್ನು ದೇಶದಲ್ಲಿ ಇಂತಹ ಚಿಂತನೆಯನ್ನು ಹೊಂದಿರುವ ನಾಯಕರು ಎಂದಿಗೂ ಮರೆಯಬಾರದು. ದೇಶದಲ್ಲಿ ಅಂತಹ ಜನರು ಉದ್ದೇಶಪೂರ್ವಕವಾಗಿ ದ್ವೇಷದ ವಾತಾವರಣವನ್ನು ಸೃಷ್ಟಿಸುತ್ತಾರೆ ಎಂಬುದು ದೊಡ್ಡ ಪ್ರಶ್ನೆಯಾಗಿದೆ ಆದರೆ ಸರ್ಕಾರಗಳು ಮೌನವಾಗಿವೆ ಎಂದು SGCP ಮುಖ್ಯಸ್ಥ ಹರ್ಜಿಂದರ್ ಸಿಂಗ್ ಧಾಮಿ ಪೋಸ್ಟ್ ಮಾಡಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನೇರವಾಗಿ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿಯವರು ಹಬ್ಬಿಸಿರುವ ಧಾರ್ಮಿಕ ಮತಾಂಧತೆಯ ಕುಟುಕು ನಮ್ಮ ವೈವಿಧ್ಯಮಯ ಸಂಸ್ಕೃತಿಯನ್ನು ವಿಷಪೂರಿತಗೊಳಿಸುತ್ತಿದೆ, ಕಾನೂನು ರಕ್ಷಕರನ್ನು ಧರ್ಮದ ಹೆಸರಿನಲ್ಲಿ ಭಯೋತ್ಪಾದಕರು ಎಂದು ಹೆಸರಿಸಲಾಗುತ್ತಿದೆ. ಸಬ್ಕಾ ಸಾಥ್ ಅಂದರೆ ಈಗ ಬಾಬಾಸಾಹೇಬ್ ಅಂಬೇಡ್ಕರ್ ರಚಿಸಿದ ಸಂವಿಧಾನವನ್ನು ಕಿತ್ತುಹಾಕುವುದಾ? ಮಿಸ್ಟರ್ ಮೋದಿ, ನಿಮ್ಮ ಏಕೈಕ ಉದ್ದೇಶವೆಂದರೆ ಧರ್ಮಗಳು, ಪಂಗಡಗಳು ಮತ್ತು ಸಮುದಾಯಗಳ ನಡುವೆ ಅಸಂಗತತೆ, ದ್ವೇಷ ಮತ್ತು ಹಿಂಸಾಚಾರವನ್ನು ಹರಡುವುದಾಗಿದೆ ಎಂದು ಖರ್ಗೆ ಹೇಳಿದ್ದಾರೆ.

ಇದನ್ನು ಓದಿ: ರಾಜಸ್ಥಾನದಿಂದ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾದ ಸೋನಿಯಾ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...