Homeಮುಖಪುಟಸಿಖ್ ಪೊಲೀಸ್ ಅಧಿಕಾರಿಗೆ "ಖಲಿಸ್ತಾನಿ" ಹಣೆಪಟ್ಟಿ ಕಟ್ಟಿದ ಬಿಜೆಪಿಗರು; ಸುವೇಂದು ಅಧಿಕಾರಿ ವಿರುದ್ಧ ಭುಗಿಲೆದ್ದ ಆಕ್ರೋಶ

ಸಿಖ್ ಪೊಲೀಸ್ ಅಧಿಕಾರಿಗೆ “ಖಲಿಸ್ತಾನಿ” ಹಣೆಪಟ್ಟಿ ಕಟ್ಟಿದ ಬಿಜೆಪಿಗರು; ಸುವೇಂದು ಅಧಿಕಾರಿ ವಿರುದ್ಧ ಭುಗಿಲೆದ್ದ ಆಕ್ರೋಶ

- Advertisement -
- Advertisement -

ಪ.ಬಂಗಾಳದ ಸಿಖ್ ಪೊಲೀಸ್ ಅಧಿಕಾರಿಯೊಬ್ಬರಿಗೆ ಬಿಜೆಪಿ ನಾಯಕ ಸುವೇಂದು ಅಧಿಕಾರಿ “ಖಲಿಸ್ತಾನಿ” ಎಂದು ಕರೆದಿದ್ದು, ತಮ್ಮದೇ ರಾಜ್ಯದಲ್ಲಿ ಕೆಲಸ ಮಾಡುತ್ತಿದ್ದ ಸಿಖ್‌ ಸಮುದಾಯಕ್ಕೆ ಸೇರಿದ ಐಪಿಎಸ್‌ ಅಧಿಕಾರಿಯನ್ನು ಸಿಖ್‌ ಪ್ರತ್ಯೇಕತಾವಾದಿಗಳಿಗೆ ಹೋಲಿಕೆ ಮಾಡಿದ್ದಾರೆ, ಆ ಮೂಲಕ ದೇಶ ವಿರೋಧಿ ಎಂದು ಬಿಂಬಿಸಲು ಹೊರಟ್ಟಿದ್ದಾರೆ. ಕಾನೂನು ರಕ್ಷಕರನ್ನು ಧರ್ಮದ ಹೆಸರಿನಲ್ಲಿ ಪ್ರತ್ಯೇಖಿಸಿ ಹೇಳಿಕೆ ಕೊಡುವ ಬಿಜೆಪಿ ನಾಯಕರ ನಡೆಯು ಆಘಾತಕಾರಿಯಾಗಿದ್ದು, ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಬಿಜೆಪಿಯ ಸುವೇಂದು ಅಧಿಕಾರಿ ನಾಚಿಕೆಯಿಲ್ಲದೆ ಪೇಟ ಧರಿಸಿದ್ದ IPS ಅಧಿಕಾರಿಯನ್ನು ‘ಖಲಿಸ್ತಾನಿ’ ಎಂದು ಕರೆದಿದ್ದಾರೆ. ಬಿಜೆಪಿಯ ಈ ಲಜ್ಜೆಗೆಟ್ಟ ಮತ್ತು ವಿಭಜಕ ಹೇಳಿಕೆ ವಿರುದ್ಧ ಅಸನ್ಸೋಲ್‌ನ ಸಿಖ್ ಸಮುದಾಯವು ಬೀದಿಗಿಳಿದಿದೆ.

ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ವಿವಾದಿತ ಸಂದೇಶಖಲಿ ಪ್ರದೇಶಕ್ಕೆ ಪ್ರವೇಶಿಸಲು ಯತ್ನಿಸಿದ ವಿಪಕ್ಷ ಬಿಜೆಪಿ ನಾಯಕರನ್ನು ತಡೆದಾಗ ಗುಂಪಿನಲ್ಲಿ ಓರ್ವರು ಅಧಿಕಾರಿಯನ್ನು ಖಾಲಿಸ್ತಾನಿ ಎಂದು ಕರೆದಿದ್ದಾರೆ. ಖಾಲಿಸ್ತಾನಿ ಎಂದು ಕರೆದಿರುವುದನ್ನು ಕೇಳಿ ಐಪಿಎಸ್‌ ಅಧಿಕಾರಿ ಜಸ್‌ಪ್ರೀತ್‌ ಸಿಂಗ್‌, ಪೇಟ ಧರಿಸಿದ್ದೇನೆಂಬ ಮಾತ್ರಕ್ಕೆ ಖಾಲಿಸ್ತಾನಿ ಎನ್ನುತ್ತೀರಾ? ನಾನು ಈ ಬಗ್ಗೆ ಕ್ರಮ ತೆಗೆದುಕೊಳ್ಳುತ್ತೇನೆ. ನೀವು ನನ್ನ ಧರ್ಮದ ಮೇಲೆ ದಾಳಿ ಮಾಡಬಾರದು. ನಿಮ್ಮ ಧರ್ಮದ ಬಗ್ಗೆ ನಾನು ಏನನ್ನೂ ಹೇಳಿಲ್ಲ ಎಂದು ಸಿಟ್ಟಿಗೆದ್ದು ಪೊಲೀಸ್‌ ಅಧಿಕಾರಿ ಹೇಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಇಬ್ಬರು ಬಿಜೆಪಿ ನಾಯಕರು  ಅಸನ್ಸೋಲ್ ದಕ್ಷಿಣ ಶಾಸಕ ಅಗ್ನಿಮಿತ್ರ ಪಾಲ್ ಮತ್ತು ಸುವೇಂದು ಅಧಿಕಾರಿ ವಿಡಿಯೋದಲ್ಲಿ ಪ್ರಮುಖವಾಗಿ ಕಾಣಿಸಿಕೊಂಡಿದ್ದಾರೆ.

ದಿ ವೈರ್‌ನೊಂದಿಗೆ ಮಾತನಾಡಿದ ಸಿಂಗ್, ಈ ಘಟನೆ ನಡೆದಾಗ ಅವರು ಬಸಿರ್‌ಹತ್ ಪೊಲೀಸ್ ಠಾಣೆ ವ್ಯಾಪ್ತಿಯ ಸಂದೇಶಖಾಲಿ ಗ್ರಾಮದಲ್ಲಿ ಕರ್ತವ್ಯದಲ್ಲಿದ್ದರು. ಸೆಕ್ಷನ್ 144 CrPC ಜಾರಿಯಲ್ಲಿರುವುದರಿಂದ, ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ನೇತೃತ್ವದಲ್ಲಿ ನಾವು ರಾಜಕಾರಣಿಗಳ ಗುಂಪನ್ನು  ಸಂದೇಶಖಾಲಿ ಪ್ರವೇಶಿಸದಂತೆ ತಡೆಯಲು ಪ್ರಯತ್ನಿಸಿದ್ದೇವೆ. ನಾವು ರಾಜಕಾರಣಿಗಳನ್ನು ನಿಲ್ಲಿಸಿದಾಗ ಸುವೆಂದು ಅಧಿಕಾರಿ ನನ್ನನ್ನು ‘ಖಲಿಸ್ತಾನಿ’ ಎಂದು ಕರೆದರು, ಅದು ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ. ಇದರ ವಿರುದ್ಧ ನಾನು ತೀವ್ರವಾಗಿ ಪ್ರತಿಕ್ರಿಯಿಸಿದೆ ಎಂದು ಹೇಳಿದ್ದಾರೆ.

ತಮ್ಮದೇ ರಾಜ್ಯದ ಪೊಲೀಸ್‌ ಅಧಿಕಾರಿಯೋರ್ವರನ್ನು ಖಲಿಸ್ತಾನಿ ಎಂದು ಕರೆದಿರುವುದು ಬಿಜೆಪಿ ವಿರುದ್ಧ ವ್ಯಾಪಕವಾಗಿ ಆಕ್ರೋಶಕ್ಕೆ ಕಾರಣವಾಗಿದೆ. ಪ.ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಸಿಖ್ ಸಂಘಟನೆ ಎಸ್‌ಜಿಪಿಸಿ (ಶಿರೋಮಣಿ ಗುರುದ್ವಾರ ಪರ್ಬಂಧಕ್ ಸಮಿತಿ) ಮತ್ತು ಕಾಂಗ್ರೆಸ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿವೆ. ಬಂಗಾಳದ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಈ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿರುವ ರಾಜ್ಯ ಪೊಲೀಸರು ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ. ಬಿಜೆಪಿ ಆರೋಪವನ್ನು ತಳ್ಳಿಹಾಕಿದ್ದು, ಪೊಲೀಸರು ಆಡಳಿತಾರೂಢ ತೃಣಮೂಲ ಕಾಂಗ್ರೆಸ್‌ಗೆ ಅಧೀನರಾಗಿದ್ದಾರೆ ಎಂದು ಪ್ರತ್ಯಾರೋಪವನ್ನು ಮಾಡಿದೆ.

ನಮ್ಮದೇ ಅಧಿಕಾರಿಯೊಬ್ಬರನ್ನು ರಾಜ್ಯದ ವಿರೋಧ ಪಕ್ಷದ ನಾಯಕ ‘ಖಲಿಸ್ತಾನಿ’ ಎಂದು ಕರೆದರು. ಅದು ಅವರ ತಪ್ಪು, ಅವರು ಹೆಮ್ಮೆಯ ಸಿಖ್ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಪ್ರಯತ್ನಿಸುತ್ತಿರುವ ಸಮರ್ಥ ಪೋಲೀಸ್ ಅಧಿಕಾರಿಯಾಗಿದ್ದಾರೆ. ಬಿಜೆಪಿ ನಾಯಕರ ಹೇಳಿಕೆ ತುಂಬಾ ದುರುದ್ದೇಶಪೂರಿತವಾಗಿದೆ. ಇದು ಕೋಮು ಪ್ರಚೋದನೆಯಾಗಿರುವುದರಿಂದ ಜನಾಂಗೀಯವಾಗಿದೆ. ಇದು ಕ್ರಿಮಿನಲ್ ಕೃತ್ಯವಾಗಿದೆ ಎಂದು ರಾಜ್ಯ ಪೊಲೀಸ್‌ನ ಅಧಿಕೃತ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಲಾಗಿದೆ.

ಸುವೇಂದು ಅಧಿಕಾರಿ ನೇತೃತ್ವದಲ್ಲಿ ಪ್ರತಿಭಟನಾಕಾರರು ಸಂದೇಶಖಾಲಿಗೆ ತೆರಳುತ್ತಿದ್ದಾಗ ಪೊಲೀಸರು ತಡೆದಿದ್ದಾರೆ. ಬಳಿಕ ನಡೆದ ಘರ್ಷಣೆಯ ವೇಳೆ ಪ್ರತಿಭಟನಾಕಾರರಲ್ಲಿ ಒಬ್ಬರು ಸ್ಥಳದಲ್ಲಿ ಕರ್ತವ್ಯದಲ್ಲಿದ್ದ ಹಿರಿಯ ಪೊಲೀಸ್ ಅಧಿಕಾರಿಯನ್ನು ಖಲಿಸ್ತಾನಿ ಎಂದು ಕರೆದಿದ್ದಾರೆ.

ಬಿಜೆಪಿ ಒಡೆದು ಆಳುವ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದ ಪ.ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದನ್ನು ಖಂಡಿಸಿದ್ದಾರೆ. ಇಂದು ಬಿಜೆಪಿಯ ಒಡೆದು ಆಳುವ ರಾಜಕಾರಣ, ನಾಚಿಕೆಯಿಲ್ಲದೆ ಸಾಂವಿಧಾನಿಕ ಗಡಿಗಳನ್ನು ಮೀರಿದೆ. ಬಿಜೆಪಿ ಪ್ರಕಾರ, ಟರ್ಬನ್ ಧರಿಸಿರುವ ಪ್ರತಿಯೊಬ್ಬ ವ್ಯಕ್ತಿಯು ಖಲಿಸ್ತಾನಿ. ನಮ್ಮ ಸಿಖ್ ಸಹೋದರರು ಮತ್ತು ಸಹೋದರಿಯರ ಖ್ಯಾತಿಯನ್ನು ದುರ್ಬಲಗೊಳಿಸುವ ಈ ದಿಟ್ಟ ಪ್ರಯತ್ನವನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ, ಬಂಗಾಳದ ಸಾಮಾಜಿಕ ಸಾಮರಸ್ಯವನ್ನು ರಕ್ಷಿಸುವಲ್ಲಿ ನಾವು ದೃಢವಾಗಿ ನಿಲ್ಲುತ್ತೇವೆ ಮತ್ತು ಅದನ್ನು ಅಡ್ಡಿಪಡಿಸುವ ಯಾವುದೇ ಪ್ರಯತ್ನಗಳನ್ನು ತಡೆಯಲು ಕಠಿಣ ಕಾನೂನು ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

ದೇಶದ ಸ್ವಾತಂತ್ರ್ಯ ಮತ್ತು ರಕ್ಷಣೆಗಾಗಿ ಸಿಖ್ಖರು ಅತಿ ಹೆಚ್ಚು ತ್ಯಾಗ ಮಾಡಿದ್ದಾರೆ ಎಂಬುವುದನ್ನು ದೇಶದಲ್ಲಿ ಇಂತಹ ಚಿಂತನೆಯನ್ನು ಹೊಂದಿರುವ ನಾಯಕರು ಎಂದಿಗೂ ಮರೆಯಬಾರದು. ದೇಶದಲ್ಲಿ ಅಂತಹ ಜನರು ಉದ್ದೇಶಪೂರ್ವಕವಾಗಿ ದ್ವೇಷದ ವಾತಾವರಣವನ್ನು ಸೃಷ್ಟಿಸುತ್ತಾರೆ ಎಂಬುದು ದೊಡ್ಡ ಪ್ರಶ್ನೆಯಾಗಿದೆ ಆದರೆ ಸರ್ಕಾರಗಳು ಮೌನವಾಗಿವೆ ಎಂದು SGCP ಮುಖ್ಯಸ್ಥ ಹರ್ಜಿಂದರ್ ಸಿಂಗ್ ಧಾಮಿ ಪೋಸ್ಟ್ ಮಾಡಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನೇರವಾಗಿ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿಯವರು ಹಬ್ಬಿಸಿರುವ ಧಾರ್ಮಿಕ ಮತಾಂಧತೆಯ ಕುಟುಕು ನಮ್ಮ ವೈವಿಧ್ಯಮಯ ಸಂಸ್ಕೃತಿಯನ್ನು ವಿಷಪೂರಿತಗೊಳಿಸುತ್ತಿದೆ, ಕಾನೂನು ರಕ್ಷಕರನ್ನು ಧರ್ಮದ ಹೆಸರಿನಲ್ಲಿ ಭಯೋತ್ಪಾದಕರು ಎಂದು ಹೆಸರಿಸಲಾಗುತ್ತಿದೆ. ಸಬ್ಕಾ ಸಾಥ್ ಅಂದರೆ ಈಗ ಬಾಬಾಸಾಹೇಬ್ ಅಂಬೇಡ್ಕರ್ ರಚಿಸಿದ ಸಂವಿಧಾನವನ್ನು ಕಿತ್ತುಹಾಕುವುದಾ? ಮಿಸ್ಟರ್ ಮೋದಿ, ನಿಮ್ಮ ಏಕೈಕ ಉದ್ದೇಶವೆಂದರೆ ಧರ್ಮಗಳು, ಪಂಗಡಗಳು ಮತ್ತು ಸಮುದಾಯಗಳ ನಡುವೆ ಅಸಂಗತತೆ, ದ್ವೇಷ ಮತ್ತು ಹಿಂಸಾಚಾರವನ್ನು ಹರಡುವುದಾಗಿದೆ ಎಂದು ಖರ್ಗೆ ಹೇಳಿದ್ದಾರೆ.

ಇದನ್ನು ಓದಿ: ರಾಜಸ್ಥಾನದಿಂದ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾದ ಸೋನಿಯಾ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...