Homeಕರ್ನಾಟಕಬಿಬಿಎಂಪಿ ಆಸ್ತಿ ತೆರಿಗೆ ತಿದ್ದುಪಡಿ ವಿಧೇಯಕ ಅಂಗೀಕಾರ: ತೆರಿಗೆ ಬಾಕಿ ಮೇಲಿನ ದಂಡ ಶೇ. 50ರಷ್ಟು...

ಬಿಬಿಎಂಪಿ ಆಸ್ತಿ ತೆರಿಗೆ ತಿದ್ದುಪಡಿ ವಿಧೇಯಕ ಅಂಗೀಕಾರ: ತೆರಿಗೆ ಬಾಕಿ ಮೇಲಿನ ದಂಡ ಶೇ. 50ರಷ್ಟು ಇಳಿಕೆ

- Advertisement -
- Advertisement -

ಬಿಬಿಎಂಪಿ ವ್ಯಾಪ್ತಿಯಲ್ಲಿ ಬಾಕಿ ಉಳಿಸಿಕೊಂಡಿರುವ ಆಸ್ತಿ ತೆರಿಗೆ ಮೇಲಿನ ದಂಡದ ಪ್ರಮಾಣ ಶೇಕಡ 50ರಷ್ಟು ಕಡಿತ ಸೇರಿದಂತೆ ತೆರಿಗೆದಾರರ ಸ್ನೇಹಿ ಬಿಬಿಎಂಪಿ (ತಿದ್ದುಪಡಿ) ವಿಧೇಯಕ 2024 ಅನ್ನು ವಿಧಾನಸಭೆಯಲ್ಲಿ ಬುಧವಾರ ಅಂಗೀಕರಿಸಲಾಗಿದೆ.

ವಿಧಾನಸಭೆಯಲ್ಲಿ ಭೋಜನ ವಿರಾಮದ ನಂತರ ನಡೆದ ಕಲಾಪದಲ್ಲಿ ಬೆಂಗಳೂರು ನಗರಾಭಿವೃದ್ದಿ ಖಾತೆಯನ್ನೂ ಹೊಂದಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಬಿಬಿಎಂಪಿ ಆಸ್ತಿ ತೆರಿಗೆ ತಿದ್ದುಪಡಿ ವಿಧೇಯಕವನ್ನು ಮಂಡಿಸಿದರು.

ಈ ವಿಧೇಯಕದಿಂದ ಬೆಂಗಳೂರಿನ ನಾಗರಿಕರಿಗೆ ತೆರಿಗೆ ಬಾಬತ್ತು, ದಂಡ ವಿನಾಯಿತಿ ಸೇರಿ ಸುಮಾರು ರೂ. 2,700 ಕೋಟಿ ರೂಪಾಯಿಯಷ್ಟು ಅನುಕೂಲವಾಗಲಿದೆ. ಜೊತೆಗೆ ಪಾಲಿಕೆಗೆ ಸುಮಾರು ರೂ.1,000 ಕೋಟಿಯಷ್ಟು ಆಸ್ತಿ ತೆರಿಗೆ ಬರಲಿದೆ. ಸುಮಾರು 5.51 ಲಕ್ಷ ತೆರಿಗೆ ಬಾಕಿದಾರರು, 5- 7 ಲಕ್ಷ ತೆರಿಗೆ ವ್ಯಾಪ್ತಿಗೆ ಬಾರದವರು ಹಾಗೂ 3 ಲಕ್ಷದಷ್ಟು ಮಂದಿ ಭಾಗಶಃ ತೆರಿಗೆ ಪಾವತಿದಾರರಿಗೆ ಒಟ್ಟಾರೆ 13 ರಿಂದ 15 ಲಕ್ಷ ಜನರಿಗೆ ಅನುಕೂಲವಾಗಲಿದೆ.

ಈ ವಿಧೇಯಕದಲ್ಲಿ ಬಡ ಹಾಗೂ ದುರ್ಬಲ ವರ್ಗದವರಿಗೆ ವಿಶೇಷ ವಿನಾಯಿತಿ ನೀಡಲಾಗಿದೆ. ಸರ್ಕಾರದ ವಸತಿ ಯೋಜನೆಯ ಆಸ್ತಿಗಳು ಹಾಗೂ ಕೊಳೆಗೇರಿ ಪ್ರದೇಶದ ಕಟ್ಟಡಗಳಿಗೆ ಬಡ್ಡಿ ಮೇಲಿನ ದಂಡ ಇರುವುದಿಲ್ಲ. 1 ಸಾವಿರ ಚದರ ಅಡಿವರೆಗಿನ ಸ್ವಯಂ ಬಳಕೆ ಆಸ್ತಿದಾರರಿಗೆ ಸಂಪೂರ್ಣ ದಂಡ ವಿನಾಯಿತಿ ನೀಡಲಾಗಿದೆ.

ವಸತಿ ಮತ್ತು ಮಿಶ್ರ ಆಸ್ತಿದಾರರ (ವಸತಿ ಮತ್ತು ವಾಣಿಜ್ಯ) ಬಾಕಿಯನ್ನು ಎಷ್ಟೇ ವರ್ಷದಿಂದ ಉಳಿಸಿಕೊಂಡಿದ್ದರೂ ಹಿಂದಿನ 5 ವರ್ಷಕ್ಕೆ ಮಾತ್ರ ಲೆಕ್ಕಾಚಾರ ಹಾಕಲು ನಿರ್ಧರಿಸಲಾಗಿದೆ. 5 ವರ್ಷಕ್ಕಿಂತ ಹಿಂದಿನ ಅವಧಿಗೆ ಬಡ್ಡಿ ಮನ್ನಾ ಮಾಡಲಾಗಿದೆ.

“ಇದೊಂದು ಜನಸ್ನೇಹಿ ತಿದ್ದುಪಡಿಯಾಗಿದ್ದು, ಸರ್ಕಾರಕ್ಕೆ ನಷ್ಟವಾದರೂ ಪರವಾಗಿಲ್ಲ, ಜನರಿಗೆ ಅನುಕೂಲವಾಗಲಿ ಎನ್ನುವ ನಿಟ್ಟಿನಲ್ಲಿ ಈ ಕಾನೂನನ್ನು ಜಾರಿಗೆ ತರಲಾಗಿದೆ” ಎಂದು ಶಿವಕುಮಾರ್ ಅವರು ಸದನದಲ್ಲಿ ತಿಳಿಸಿದರು.

ಹಿಂದಿನ ಬಿಜೆಪಿ ಸರ್ಕಾರ ತಂದಿದ್ದ ತಿದ್ದುಪಡಿ ವಿಧೇಯಕ ಅಂಗೀಕಾರದಿಂದ ಬಿಬಿಎಂಪಿ ವ್ಯಾಪ್ತಿಯಲ್ಲಿ ಬಾಕಿ ಉಳಿಸಿಕೊಂಡ ತೆರಿಗೆ ಮೇಲೆ ದುಪ್ಪಟ್ಟು ದಂಡ ಪಾವತಿಸಬೇಕಾಗಿ ಬಂದು ಬೆಂಗಳೂರು ನಾಗರಿಕರು ತೀವ್ರ ಸಂಕಷ್ಟಕ್ಕೆ ಸಿಕ್ಕಿದ್ದರು. ತೆರಿಗೆ ಮೊತ್ತಕ್ಕಿಂತ ದಂಡದ ಪ್ರಮಾಣವೇ ಸಿಕ್ಕಾಪಟ್ಟೆ ಹೆಚ್ಚಾಗಿತ್ತು. ಪ್ರಸ್ತುತ, ಸರ್ಕಾರ ಹಿಂದಿನ ಸರ್ಕಾರ ಅಂಗಿಕರಿಸಿದ್ದ ಕಾಯ್ದೆಗೆ ತಿದ್ದುಪಡಿ ತಂದು ನಾಗರಿಕರ ತೆರಿಗೆ ಹೊರೆ ಕಡಿಮೆ ಮಾಡಿದೆ.

ಇದನ್ನೂ ಓದಿ: ಪರಿಷತ್ ಫಲಿತಾಂಶ ಜೆಡಿಎಸ್‌ನ ಕೋಮುವಾದಿ ಅವತಾರಕ್ಕೆ ಮತದಾರನ ಕಪಾಳಮೋಕ್ಷ: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...