Homeಮುಖಪುಟವಿವಾಹವಾದ ಕಾರಣಕ್ಕೆ ಸೇನಾ ಮಹಿಳಾ ಅಧಿಕಾರಿಯ ವಜಾ; 'ಲಿಂಗ ತಾರತಮ್ಯ' ಎಂದ ಸುಪ್ರೀಂಕೋರ್ಟ್‌

ವಿವಾಹವಾದ ಕಾರಣಕ್ಕೆ ಸೇನಾ ಮಹಿಳಾ ಅಧಿಕಾರಿಯ ವಜಾ; ‘ಲಿಂಗ ತಾರತಮ್ಯ’ ಎಂದ ಸುಪ್ರೀಂಕೋರ್ಟ್‌

- Advertisement -
- Advertisement -

ವಿವಾಹವಾದ ಕಾರಣಕ್ಕೆ ಮಿಲಿಟರಿ ನರ್ಸಿಂಗ್ ಸೇವೆಯಲ್ಲಿ ಖಾಯಂ ನಿಯೋಜಿತ ಅಧಿಕಾರಿಯನ್ನು ವಜಾ ಮಾಡಿರುವುದು ಸ್ವೇಚ್ಛೆಯ ಹಾಗೂ ಸೂಕ್ಷ್ಮತೆ ಇಲ್ಲದ ಲಿಂಗ ತಾರತಮ್ಯ ಹಾಗೂ ಅಸಮಾನತೆಯನ್ನು ಬಿಂಬಿಸುತ್ತದೆ ಎಂದು ಸುಪ್ರೀಂಕೋರ್ಟ್‌ ಅಭಿಪ್ರಾಯಪಟ್ಟಿದೆ.

ನ್ಯಾಯಮೂರ್ತಿಗ‌ಳಾದ ಸಂಜೀವ್ ಖನ್ನಾ ಹಾಗೂ ದೀಪಂಕರ್‌ ದತ್ತಾ ಅವರಿದ್ದ ನ್ಯಾಯಪೀಠವು ಈ ಕುರಿತ ಅರ್ಜಿ ವಿಚಾರಣೆ ನಡೆಸಿದ್ದು, ಮಾಜಿ ಲೆಫ್ಟಿನೆಂಟ್ ಸೆಲಿನಾ ಜಾನ್‌ಗೆ 8 ವಾರಗಳಲ್ಲಿ 60 ಲಕ್ಷ ರೂಪಾಯಿಗಳನ್ನು ಪೂರ್ಣ ಮತ್ತು ಅಂತಿಮ ಪರಿಹಾರವಾಗಿ ಪಾವತಿಸಲು ಕೇಂದ್ರ ಸರ್ಕಾರಕ್ಕೆ ಆದೇಶಿಸಿದೆ. ನಿಯಮದ ಪ್ರಕಾರ  ವಿವಾಹದ ಕಾರಣದಿಂದ ಅವರ ಬಿಡುಗಡೆಯು ಕಾನೂನುಬಾಹಿರವಾಗಿದೆ. ನಿಗದಿತ ಅವಧಿ ಒಳಗಾಗಿ ಪರಿಹಾರ ಪಾವತಿಸದಿದ್ದಲ್ಲಿ, ಈ ಆದೇಶ ಪ್ರಕಟವಾದ ದಿನಾಂ‌ಕದಿಂದ ಪೂರ್ತಿ ಹಣ ಸಂದಾಯವಾಗುವವರೆಗೆ ವಾರ್ಷಿಕ ಶೇ 12ರಷ್ಟು ಬಡ್ಡಿಯೊಂದಿಗೆ ಪರಿಹಾರಧನವನ್ನು ಪಾವತಿಸಬೇಕು ಎಂದೂ ಆದೇಶದಲ್ಲಿ ತಿಳಿಸಲಾಗಿದೆ.

ನಿಯಮಗಳ ಕಾರಣ ನೀಡಿ ಮಹಿಳಾ ಅಧಿಕಾರಿಯೊಬ್ಬರನ್ನು ಉದ್ಯೋಗದಿಂದ ತೆಗೆದು ಹಾಕುವುದು ಲಿಂಗ ತಾರತಮ್ಯವನ್ನು ಬಿಂಬಿಸುತ್ತದೆ. ಇಂತಹ ಹಳೆಯ ನಿಯಮಗಳನ್ನು ಒಪ್ಪಿಕೊಳ್ಳುವುದೆಂದರೆ ಮಾನವನ ಘನತೆಯನ್ನು ಹಾಗೂ ತಾರತಮ್ಯ ರಹಿತ ಮತ್ತು ನ್ಯಾಯಯುತವಾಗಿ ನಡೆಸಿಕೊಳ್ಳಬೇಕು ಎಂಬ ಪ್ರತಿಪಾದನೆಯನ್ನು ಕಡೆಗಣಿಸಿದಂತೆ ಎಂದೂ ನ್ಯಾಯಪೀಠವು ಹೇಳಿದೆ.

ನಿವೃತ್ತ ಲಿಫ್ಟಿನೆಂಟ್ ಸೆಲಿನಾ ಅವರನ್ನು ವೃತ್ತಿಗೆ ಸಂಬಂಧಿಸಿದ ಎಲ್ಲ ಪ್ರಯೋಜನಗಳೊಂದಿಗೆ ಹುದ್ದೆಯಲ್ಲಿ ‌ಮರುಸ್ಥಾಪಿಸಬೇಕು ಎಂದು ಲಖನೌದ ಸಶಸ್ತ್ರ ಪಡೆಗಳ ನ್ಯಾಯಮಂಡಳಿ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಕೇಂದ್ರ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು. ಸೆಲಿನಾ ಅವರನ್ನು ಕರ್ತವ್ಯದಿಂದ ಬಿಡುಗಡೆ ಮಾಡಿ ನ್ಯಾಯಮಂಡಳಿ ನೀಡಿದ್ದ ಆದೇಶ ತಪ್ಪು ಹಾಗೂ ಕಾನೂನುಬಾಹಿರವಾಗಿದೆ, ಈ ವಿಷಯದಲ್ಲಿ ಸುಪ್ರೀಂಕೋರ್ಟ್‌ ಮಧ್ಯಪ್ರವೇಶಿಸುವ ಅಗ‌ತ್ಯವೇ ಇಲ್ಲ ಎಂದು ಹೇಳಿದೆ.

ಮಿಲಿಟರಿ ನರ್ಸಿಂಗ್ ಸೇವೆಯಲ್ಲಿ ಶಾಶ್ವತ ಆಯೋಗಗಳ ಮಂಜೂರಾತಿಗಾಗಿ ಸೇವಾ ನಿಯಮಗಳು ಮತ್ತು ಷರತ್ತುಗಳು ಎಂಬ ಶೀರ್ಷಿಕೆಯ 1977ರ ಆರ್ಮಿ ಸೂಚನೆ ಸಂಖ್ಯೆ 61ನ್ನು ನಂತರದ ಪತ್ರದ ಮೂಲಕ ಆಗಸ್ಟ್ 29, 1995ರಂದು ಹಿಂಪಡೆಯಲಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಲಾಗಿದೆ.

ಲಿಂಗ ಆಧರಿಸಿ ಪಕ್ಷಪಾತ ಮಾಡುವ ಕಾನೂನುಗಳು ಮತ್ತು ನಿಯಮಗಳಿಗೆ ಸಾಂವಿಧಾನಿಕ ಮಾನ್ಯತೆ ಇಲ್ಲ. ಅಲ್ಲದೇ ಮಹಿಳಾ ಉದ್ಯೋಗಿಗಳು ಮದುವೆ ಮಾಡಿಕೊಳ್ಳುವುದು ಹಾಗೂ ಕೌಟುಂಬಿಕ ಜವಾಬ್ದಾರಿ ನಿರ್ವಹಣೆ‌ಯಲ್ಲಿ ತೊಡಗಿರುವುದನ್ನು ಅವರನ್ನು ಉದ್ಯೋಗದಿಂದ ಅನರ್ಹಗೊಳಿಸುವುದಕ್ಕೆ ಕಾರಣ ಎಂದು ಆಧಾರ ಎಂದು ಪರಿ‌ಗಣಿಸುವುದು ಕೂಡ ಅಸಾಂವಿಧಾನಿಕ ಎಂದು ಪೀಠ ಹೇಳಿದೆ.

ಇದನ್ನು ಓದಿ: ಹೆಚ್ಚುವರಿ ಹಣ ಬೇಕಾದರೆ ಸುಪ್ರೀಂಕೋರ್ಟ್‌ನಿಂದ ಮೊಕದ್ದಮೆ ಹಿಂಪಡೆಯಿರಿ: ಕೇರಳ ಸರಕಾರಕ್ಕೆ ಹೇಳಿದ ಕೇಂದ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...