Homeಮುಖಪುಟವಿವಾಹವಾದ ಕಾರಣಕ್ಕೆ ಸೇನಾ ಮಹಿಳಾ ಅಧಿಕಾರಿಯ ವಜಾ; 'ಲಿಂಗ ತಾರತಮ್ಯ' ಎಂದ ಸುಪ್ರೀಂಕೋರ್ಟ್‌

ವಿವಾಹವಾದ ಕಾರಣಕ್ಕೆ ಸೇನಾ ಮಹಿಳಾ ಅಧಿಕಾರಿಯ ವಜಾ; ‘ಲಿಂಗ ತಾರತಮ್ಯ’ ಎಂದ ಸುಪ್ರೀಂಕೋರ್ಟ್‌

- Advertisement -
- Advertisement -

ವಿವಾಹವಾದ ಕಾರಣಕ್ಕೆ ಮಿಲಿಟರಿ ನರ್ಸಿಂಗ್ ಸೇವೆಯಲ್ಲಿ ಖಾಯಂ ನಿಯೋಜಿತ ಅಧಿಕಾರಿಯನ್ನು ವಜಾ ಮಾಡಿರುವುದು ಸ್ವೇಚ್ಛೆಯ ಹಾಗೂ ಸೂಕ್ಷ್ಮತೆ ಇಲ್ಲದ ಲಿಂಗ ತಾರತಮ್ಯ ಹಾಗೂ ಅಸಮಾನತೆಯನ್ನು ಬಿಂಬಿಸುತ್ತದೆ ಎಂದು ಸುಪ್ರೀಂಕೋರ್ಟ್‌ ಅಭಿಪ್ರಾಯಪಟ್ಟಿದೆ.

ನ್ಯಾಯಮೂರ್ತಿಗ‌ಳಾದ ಸಂಜೀವ್ ಖನ್ನಾ ಹಾಗೂ ದೀಪಂಕರ್‌ ದತ್ತಾ ಅವರಿದ್ದ ನ್ಯಾಯಪೀಠವು ಈ ಕುರಿತ ಅರ್ಜಿ ವಿಚಾರಣೆ ನಡೆಸಿದ್ದು, ಮಾಜಿ ಲೆಫ್ಟಿನೆಂಟ್ ಸೆಲಿನಾ ಜಾನ್‌ಗೆ 8 ವಾರಗಳಲ್ಲಿ 60 ಲಕ್ಷ ರೂಪಾಯಿಗಳನ್ನು ಪೂರ್ಣ ಮತ್ತು ಅಂತಿಮ ಪರಿಹಾರವಾಗಿ ಪಾವತಿಸಲು ಕೇಂದ್ರ ಸರ್ಕಾರಕ್ಕೆ ಆದೇಶಿಸಿದೆ. ನಿಯಮದ ಪ್ರಕಾರ  ವಿವಾಹದ ಕಾರಣದಿಂದ ಅವರ ಬಿಡುಗಡೆಯು ಕಾನೂನುಬಾಹಿರವಾಗಿದೆ. ನಿಗದಿತ ಅವಧಿ ಒಳಗಾಗಿ ಪರಿಹಾರ ಪಾವತಿಸದಿದ್ದಲ್ಲಿ, ಈ ಆದೇಶ ಪ್ರಕಟವಾದ ದಿನಾಂ‌ಕದಿಂದ ಪೂರ್ತಿ ಹಣ ಸಂದಾಯವಾಗುವವರೆಗೆ ವಾರ್ಷಿಕ ಶೇ 12ರಷ್ಟು ಬಡ್ಡಿಯೊಂದಿಗೆ ಪರಿಹಾರಧನವನ್ನು ಪಾವತಿಸಬೇಕು ಎಂದೂ ಆದೇಶದಲ್ಲಿ ತಿಳಿಸಲಾಗಿದೆ.

ನಿಯಮಗಳ ಕಾರಣ ನೀಡಿ ಮಹಿಳಾ ಅಧಿಕಾರಿಯೊಬ್ಬರನ್ನು ಉದ್ಯೋಗದಿಂದ ತೆಗೆದು ಹಾಕುವುದು ಲಿಂಗ ತಾರತಮ್ಯವನ್ನು ಬಿಂಬಿಸುತ್ತದೆ. ಇಂತಹ ಹಳೆಯ ನಿಯಮಗಳನ್ನು ಒಪ್ಪಿಕೊಳ್ಳುವುದೆಂದರೆ ಮಾನವನ ಘನತೆಯನ್ನು ಹಾಗೂ ತಾರತಮ್ಯ ರಹಿತ ಮತ್ತು ನ್ಯಾಯಯುತವಾಗಿ ನಡೆಸಿಕೊಳ್ಳಬೇಕು ಎಂಬ ಪ್ರತಿಪಾದನೆಯನ್ನು ಕಡೆಗಣಿಸಿದಂತೆ ಎಂದೂ ನ್ಯಾಯಪೀಠವು ಹೇಳಿದೆ.

ನಿವೃತ್ತ ಲಿಫ್ಟಿನೆಂಟ್ ಸೆಲಿನಾ ಅವರನ್ನು ವೃತ್ತಿಗೆ ಸಂಬಂಧಿಸಿದ ಎಲ್ಲ ಪ್ರಯೋಜನಗಳೊಂದಿಗೆ ಹುದ್ದೆಯಲ್ಲಿ ‌ಮರುಸ್ಥಾಪಿಸಬೇಕು ಎಂದು ಲಖನೌದ ಸಶಸ್ತ್ರ ಪಡೆಗಳ ನ್ಯಾಯಮಂಡಳಿ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಕೇಂದ್ರ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು. ಸೆಲಿನಾ ಅವರನ್ನು ಕರ್ತವ್ಯದಿಂದ ಬಿಡುಗಡೆ ಮಾಡಿ ನ್ಯಾಯಮಂಡಳಿ ನೀಡಿದ್ದ ಆದೇಶ ತಪ್ಪು ಹಾಗೂ ಕಾನೂನುಬಾಹಿರವಾಗಿದೆ, ಈ ವಿಷಯದಲ್ಲಿ ಸುಪ್ರೀಂಕೋರ್ಟ್‌ ಮಧ್ಯಪ್ರವೇಶಿಸುವ ಅಗ‌ತ್ಯವೇ ಇಲ್ಲ ಎಂದು ಹೇಳಿದೆ.

ಮಿಲಿಟರಿ ನರ್ಸಿಂಗ್ ಸೇವೆಯಲ್ಲಿ ಶಾಶ್ವತ ಆಯೋಗಗಳ ಮಂಜೂರಾತಿಗಾಗಿ ಸೇವಾ ನಿಯಮಗಳು ಮತ್ತು ಷರತ್ತುಗಳು ಎಂಬ ಶೀರ್ಷಿಕೆಯ 1977ರ ಆರ್ಮಿ ಸೂಚನೆ ಸಂಖ್ಯೆ 61ನ್ನು ನಂತರದ ಪತ್ರದ ಮೂಲಕ ಆಗಸ್ಟ್ 29, 1995ರಂದು ಹಿಂಪಡೆಯಲಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಲಾಗಿದೆ.

ಲಿಂಗ ಆಧರಿಸಿ ಪಕ್ಷಪಾತ ಮಾಡುವ ಕಾನೂನುಗಳು ಮತ್ತು ನಿಯಮಗಳಿಗೆ ಸಾಂವಿಧಾನಿಕ ಮಾನ್ಯತೆ ಇಲ್ಲ. ಅಲ್ಲದೇ ಮಹಿಳಾ ಉದ್ಯೋಗಿಗಳು ಮದುವೆ ಮಾಡಿಕೊಳ್ಳುವುದು ಹಾಗೂ ಕೌಟುಂಬಿಕ ಜವಾಬ್ದಾರಿ ನಿರ್ವಹಣೆ‌ಯಲ್ಲಿ ತೊಡಗಿರುವುದನ್ನು ಅವರನ್ನು ಉದ್ಯೋಗದಿಂದ ಅನರ್ಹಗೊಳಿಸುವುದಕ್ಕೆ ಕಾರಣ ಎಂದು ಆಧಾರ ಎಂದು ಪರಿ‌ಗಣಿಸುವುದು ಕೂಡ ಅಸಾಂವಿಧಾನಿಕ ಎಂದು ಪೀಠ ಹೇಳಿದೆ.

ಇದನ್ನು ಓದಿ: ಹೆಚ್ಚುವರಿ ಹಣ ಬೇಕಾದರೆ ಸುಪ್ರೀಂಕೋರ್ಟ್‌ನಿಂದ ಮೊಕದ್ದಮೆ ಹಿಂಪಡೆಯಿರಿ: ಕೇರಳ ಸರಕಾರಕ್ಕೆ ಹೇಳಿದ ಕೇಂದ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...