Homeಮುಖಪುಟವಿವಾಹವಾದ ಕಾರಣಕ್ಕೆ ಸೇನಾ ಮಹಿಳಾ ಅಧಿಕಾರಿಯ ವಜಾ; 'ಲಿಂಗ ತಾರತಮ್ಯ' ಎಂದ ಸುಪ್ರೀಂಕೋರ್ಟ್‌

ವಿವಾಹವಾದ ಕಾರಣಕ್ಕೆ ಸೇನಾ ಮಹಿಳಾ ಅಧಿಕಾರಿಯ ವಜಾ; ‘ಲಿಂಗ ತಾರತಮ್ಯ’ ಎಂದ ಸುಪ್ರೀಂಕೋರ್ಟ್‌

- Advertisement -
- Advertisement -

ವಿವಾಹವಾದ ಕಾರಣಕ್ಕೆ ಮಿಲಿಟರಿ ನರ್ಸಿಂಗ್ ಸೇವೆಯಲ್ಲಿ ಖಾಯಂ ನಿಯೋಜಿತ ಅಧಿಕಾರಿಯನ್ನು ವಜಾ ಮಾಡಿರುವುದು ಸ್ವೇಚ್ಛೆಯ ಹಾಗೂ ಸೂಕ್ಷ್ಮತೆ ಇಲ್ಲದ ಲಿಂಗ ತಾರತಮ್ಯ ಹಾಗೂ ಅಸಮಾನತೆಯನ್ನು ಬಿಂಬಿಸುತ್ತದೆ ಎಂದು ಸುಪ್ರೀಂಕೋರ್ಟ್‌ ಅಭಿಪ್ರಾಯಪಟ್ಟಿದೆ.

ನ್ಯಾಯಮೂರ್ತಿಗ‌ಳಾದ ಸಂಜೀವ್ ಖನ್ನಾ ಹಾಗೂ ದೀಪಂಕರ್‌ ದತ್ತಾ ಅವರಿದ್ದ ನ್ಯಾಯಪೀಠವು ಈ ಕುರಿತ ಅರ್ಜಿ ವಿಚಾರಣೆ ನಡೆಸಿದ್ದು, ಮಾಜಿ ಲೆಫ್ಟಿನೆಂಟ್ ಸೆಲಿನಾ ಜಾನ್‌ಗೆ 8 ವಾರಗಳಲ್ಲಿ 60 ಲಕ್ಷ ರೂಪಾಯಿಗಳನ್ನು ಪೂರ್ಣ ಮತ್ತು ಅಂತಿಮ ಪರಿಹಾರವಾಗಿ ಪಾವತಿಸಲು ಕೇಂದ್ರ ಸರ್ಕಾರಕ್ಕೆ ಆದೇಶಿಸಿದೆ. ನಿಯಮದ ಪ್ರಕಾರ  ವಿವಾಹದ ಕಾರಣದಿಂದ ಅವರ ಬಿಡುಗಡೆಯು ಕಾನೂನುಬಾಹಿರವಾಗಿದೆ. ನಿಗದಿತ ಅವಧಿ ಒಳಗಾಗಿ ಪರಿಹಾರ ಪಾವತಿಸದಿದ್ದಲ್ಲಿ, ಈ ಆದೇಶ ಪ್ರಕಟವಾದ ದಿನಾಂ‌ಕದಿಂದ ಪೂರ್ತಿ ಹಣ ಸಂದಾಯವಾಗುವವರೆಗೆ ವಾರ್ಷಿಕ ಶೇ 12ರಷ್ಟು ಬಡ್ಡಿಯೊಂದಿಗೆ ಪರಿಹಾರಧನವನ್ನು ಪಾವತಿಸಬೇಕು ಎಂದೂ ಆದೇಶದಲ್ಲಿ ತಿಳಿಸಲಾಗಿದೆ.

ನಿಯಮಗಳ ಕಾರಣ ನೀಡಿ ಮಹಿಳಾ ಅಧಿಕಾರಿಯೊಬ್ಬರನ್ನು ಉದ್ಯೋಗದಿಂದ ತೆಗೆದು ಹಾಕುವುದು ಲಿಂಗ ತಾರತಮ್ಯವನ್ನು ಬಿಂಬಿಸುತ್ತದೆ. ಇಂತಹ ಹಳೆಯ ನಿಯಮಗಳನ್ನು ಒಪ್ಪಿಕೊಳ್ಳುವುದೆಂದರೆ ಮಾನವನ ಘನತೆಯನ್ನು ಹಾಗೂ ತಾರತಮ್ಯ ರಹಿತ ಮತ್ತು ನ್ಯಾಯಯುತವಾಗಿ ನಡೆಸಿಕೊಳ್ಳಬೇಕು ಎಂಬ ಪ್ರತಿಪಾದನೆಯನ್ನು ಕಡೆಗಣಿಸಿದಂತೆ ಎಂದೂ ನ್ಯಾಯಪೀಠವು ಹೇಳಿದೆ.

ನಿವೃತ್ತ ಲಿಫ್ಟಿನೆಂಟ್ ಸೆಲಿನಾ ಅವರನ್ನು ವೃತ್ತಿಗೆ ಸಂಬಂಧಿಸಿದ ಎಲ್ಲ ಪ್ರಯೋಜನಗಳೊಂದಿಗೆ ಹುದ್ದೆಯಲ್ಲಿ ‌ಮರುಸ್ಥಾಪಿಸಬೇಕು ಎಂದು ಲಖನೌದ ಸಶಸ್ತ್ರ ಪಡೆಗಳ ನ್ಯಾಯಮಂಡಳಿ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಕೇಂದ್ರ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು. ಸೆಲಿನಾ ಅವರನ್ನು ಕರ್ತವ್ಯದಿಂದ ಬಿಡುಗಡೆ ಮಾಡಿ ನ್ಯಾಯಮಂಡಳಿ ನೀಡಿದ್ದ ಆದೇಶ ತಪ್ಪು ಹಾಗೂ ಕಾನೂನುಬಾಹಿರವಾಗಿದೆ, ಈ ವಿಷಯದಲ್ಲಿ ಸುಪ್ರೀಂಕೋರ್ಟ್‌ ಮಧ್ಯಪ್ರವೇಶಿಸುವ ಅಗ‌ತ್ಯವೇ ಇಲ್ಲ ಎಂದು ಹೇಳಿದೆ.

ಮಿಲಿಟರಿ ನರ್ಸಿಂಗ್ ಸೇವೆಯಲ್ಲಿ ಶಾಶ್ವತ ಆಯೋಗಗಳ ಮಂಜೂರಾತಿಗಾಗಿ ಸೇವಾ ನಿಯಮಗಳು ಮತ್ತು ಷರತ್ತುಗಳು ಎಂಬ ಶೀರ್ಷಿಕೆಯ 1977ರ ಆರ್ಮಿ ಸೂಚನೆ ಸಂಖ್ಯೆ 61ನ್ನು ನಂತರದ ಪತ್ರದ ಮೂಲಕ ಆಗಸ್ಟ್ 29, 1995ರಂದು ಹಿಂಪಡೆಯಲಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಲಾಗಿದೆ.

ಲಿಂಗ ಆಧರಿಸಿ ಪಕ್ಷಪಾತ ಮಾಡುವ ಕಾನೂನುಗಳು ಮತ್ತು ನಿಯಮಗಳಿಗೆ ಸಾಂವಿಧಾನಿಕ ಮಾನ್ಯತೆ ಇಲ್ಲ. ಅಲ್ಲದೇ ಮಹಿಳಾ ಉದ್ಯೋಗಿಗಳು ಮದುವೆ ಮಾಡಿಕೊಳ್ಳುವುದು ಹಾಗೂ ಕೌಟುಂಬಿಕ ಜವಾಬ್ದಾರಿ ನಿರ್ವಹಣೆ‌ಯಲ್ಲಿ ತೊಡಗಿರುವುದನ್ನು ಅವರನ್ನು ಉದ್ಯೋಗದಿಂದ ಅನರ್ಹಗೊಳಿಸುವುದಕ್ಕೆ ಕಾರಣ ಎಂದು ಆಧಾರ ಎಂದು ಪರಿ‌ಗಣಿಸುವುದು ಕೂಡ ಅಸಾಂವಿಧಾನಿಕ ಎಂದು ಪೀಠ ಹೇಳಿದೆ.

ಇದನ್ನು ಓದಿ: ಹೆಚ್ಚುವರಿ ಹಣ ಬೇಕಾದರೆ ಸುಪ್ರೀಂಕೋರ್ಟ್‌ನಿಂದ ಮೊಕದ್ದಮೆ ಹಿಂಪಡೆಯಿರಿ: ಕೇರಳ ಸರಕಾರಕ್ಕೆ ಹೇಳಿದ ಕೇಂದ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...