Homeಮುಖಪುಟರೈತರನ್ನು ದೆಹಲಿ ಪ್ರವೇಶಿಸದಂತೆ ತಡೆಯಲು ಬಿಜೆಪಿ ಸರಕಾರಗಳಿಂದ ಹರಸಾಹಸ: ಅಶ್ರುವಾಯು ಪ್ರಯೋಗ, ಗಡಿ ಪ್ರದೇಶದಲ್ಲಿ ಹೈ...

ರೈತರನ್ನು ದೆಹಲಿ ಪ್ರವೇಶಿಸದಂತೆ ತಡೆಯಲು ಬಿಜೆಪಿ ಸರಕಾರಗಳಿಂದ ಹರಸಾಹಸ: ಅಶ್ರುವಾಯು ಪ್ರಯೋಗ, ಗಡಿ ಪ್ರದೇಶದಲ್ಲಿ ಹೈ ಅಲರ್ಟ್‌

- Advertisement -
- Advertisement -

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತ ಮಖಂಡರು ಮತ್ತು ಕೇಂದ್ರ ಸರಕಾರದ ನಡುವಿನ ನಾಲ್ಕನೇ ಸುತ್ತಿನ ಮಾತುಕತೆ ವಿಫಲವಾದ ಬೆನ್ನಲ್ಲಿ ಕೇಂದ್ರದ ಐದು ವರ್ಷಗಳ ಎಂಎಸ್‌ಪಿ ಗ್ಯಾರೆಂಟಿಯನ್ನು ತಿರಸ್ಕರಿಸಿ ರೈತ ಮುಖಂಡರು ದೆಹಲಿ ಚಲೋ ಪ್ರತಿಭಟನೆಯನ್ನು ಮತ್ತೆ ಮುಂದುವರಿಸಿದ್ದು, ಪಂಜಾಬ್-ಹರ್ಯಾಣ ಗಡಿಯಲ್ಲಿ ಪ್ರತಿಭಟನಾಕಾರರ ಮೇಲೆ ಅಶ್ರುವಾಯು ಶೆಲ್‌ಗಳನ್ನು ಬಳಸಲಾಗಿದೆ. ರೈತರನ್ನು ದೆಹಲಿ ಪ್ರವೇಶಿಸದಂತೆ ತಡೆಯಲು ಹರ್ಯಾಣದ ಬಿಜೆಪಿ ಸರಕಾರ ಮತ್ತು ಕೇಂದ್ರ ಸರಕಾರ ಸತಾಯಗತಾಯ ಪ್ರಯತ್ನಿಸುತ್ತಿದೆ.

ಪ್ರತಿಭಟನೆಯಿಂದಾಗಿ ರಾಷ್ಟ್ರ ರಾಜಧಾನಿಯ ಗಡಿಗಳಲ್ಲಿ ಟ್ರಾಫಿಕ್ ಜಾಮ್‌ಗಳು ಉಂಟಾಗಿದೆ. ದೆಹಲಿಯಲ್ಲಿ ಕೂಡ ಭಾರೀ ಜನಸಂದಣಿ ಕಂಡು ಬಂದಿದೆ. ಶಂಭು ಗಡಿಯಲ್ಲಿ 14,000 ಜನರು ಮತ್ತು 1,200 ಟ್ರಾಕ್ಟರ್‌ಗಳಿದೆ. ರೈತರ ದೆಹಲಿ ಚಲೋ ಹಿನ್ನೆಲೆ ರೈತರಿಂದ ಮಣ್ಣು ತೆಗೆಯುವ ಉಪಕರಣಗಳನ್ನು ವಶಪಡಿಸಿಕೊಳ್ಳಿ ಎಂದು ಪಂಜಾಬ್‌ ಪೊಲೀಸರಿಗೆ ಹರ್ಯಾಣ ಡಿಜಿಪಿ ಆಗ್ರಹಿಸಿದ್ದಾರೆ.

ರೈತರು ಶಂಭು ಗಡಿಯಿಂದ ದೆಹಲಿಯತ್ತ ಮೆರವಣಿಗೆ ಆರಂಭಿಸಿದಾಗ ಹರಿಯಾಣ ಪೊಲೀಸರು ಯಾವುದೇ ಪ್ರಚೋದನೆ ಇಲ್ಲದೆ 14 ಅಶ್ರುವಾಯು ಶೆಲ್‌ಗಳನ್ನು ಬಳಸಿದ್ದಾರೆ ಎಂದು ಪಟಿಯಾಲಾ ರೇಂಜ್‌ನ ಡಿಐಜಿ ಎಚ್‌ಎಸ್ ಭುಲ್ಲಾರ್ ಬುಧವಾರ ಹೇಳಿದ್ದಾರೆ.

ಈ ಮಧ್ಯೆ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಅರ್ಜುನ್ ಮುಂಡಾ ಬುಧವಾರ ಮತ್ತೆ ರೈತ ಮುಖಂಡರನ್ನು ಎಂಎಸ್‌ಪಿ ವಿಷಯದ ಕುರಿತು ಚರ್ಚೆಗೆ ಆಹ್ವಾನಿಸಿದ್ದಾರೆ. ಐದನೇ ಸುತ್ತಿನಲ್ಲಿ ಎಂಎಸ್‌ಪಿ ಬೇಡಿಕೆ, ಬೆಳೆ ವೈವಿಧ್ಯೀಕರಣ, ರೈತರ ಮೇಲಿನ ಎಫ್‌ಐಆರ್‌ ಸೇರಿ ಎಲ್ಲಾ ವಿಷಯಗಳ ಬಗ್ಗೆ ಚರ್ಚಿಸಲು ಸರ್ಕಾರ ಸಿದ್ಧವಾಗಿದೆ ಎಂದು ಹೇಳಿದ್ದಾರೆ.

ರೈತ ಮುಖಂಡ ಜಗಜಿತ್ ಸಿಂಗ್ ದಲ್ಲೆವಾಲ್, ಶಂಭು ಗಡಿಯಲ್ಲಿ ರೈತರೊಂದಿಗೆ ಮಾತನಾಡುತ್ತಾ, ನೀವು ಹಿಂದೆ ಇರಿ, ನಾವು ಮೆರವಣಿಗೆಯನ್ನು ಮುನ್ನಡೆಸುತ್ತೇವೆ. ಯಂತ್ರಗಳನ್ನು ನಿಲ್ಲಿಸೋಣ ಮತ್ತು ನಾವು ನಡೆಯೋಣ ಎಂದು ಹೇಳಿದ್ದಾರೆ.

ಎಲ್ಲ ಕಡೆಯೂ ರಾಜಕೀಯ ನಡೆಯುತ್ತಿದೆ. ಪಂಜಾಬ್ ಈ ಯಂತ್ರಗಳನ್ನು/ಪ್ರತಿಭಟನಕಾರರನ್ನು ಮೊದಲೇ ಏಕೆ ನಿಲ್ಲಿಸಲಿಲ್ಲ? ಎಂದು ಪಂಜಾಬ್‌ ಹರ್ಯಾಣ ಹೈಕೋರ್ಟ್‌ ಪ್ರಶ್ನಿಸಿತ್ತು. ಹರ್ಯಾಣ ಸರ್ಕಾರವು ಬುಧವಾರ ಮತ್ತೆ ಹೈಕೋರ್ಟ್‌ ಮೊರೆ ಹೋಗಿದ್ದು, ರೈತರು ತಮ್ಮ ಉಪಕರಣಗಳೊಂದಿಗೆ ಮುಂದುವರಿಯುವುದನ್ನು ತಡೆಯಲು ನಿರ್ದೇಶನಗಳನ್ನು ಕೋರಿದೆ.

ಪ್ರತಿಭಟನೆಯ ಬಗ್ಗೆ ಮಾದ್ಯಮವನ್ನುದ್ದೇಶಿಸಿ ಮಾತನಾಡಿದ ರೈತ ಮುಖಂಡರಾದ ಸರ್ವಾನ್ ಸಿಂಗ್ ಪಂಧೇರ್ ಮತ್ತು ದಲ್ಲೆವಾಲ್ ಅವರು ಶಂಭು ಗಡಿಯಲ್ಲಿನ ಬ್ಯಾರಿಕೇಡ್‌ಗಳನ್ನು ತೆಗೆದುಹಾಕಲು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಇದರಿಂದಾಗಿ ದೆಹಲಿಗೆ ಶಾಂತಿಯುತವಾಗಿ ಮೆರವಣಿಗೆ ನಡೆಸಬಹುದು. ಇದಲ್ಲದೆ ರಾಷ್ಟ್ರದ ಹಿತಾಸಕ್ತಿಗಾಗಿ ಸಾಯಲು ಸಿದ್ಧರಿದ್ದೇವೆ ಎಂದು ಹೇಳಿದ್ದಾರೆ.

ಬುಧವಾರ ಬೆಳಗ್ಗೆ 11 ಗಂಟೆಗೆ ಗಡಿ ಪ್ರದೇಶವಾದ ಶಂಭು ಮತ್ತು ಖಾನೌರಿಯಿಂದ ದೆಹಲಿಗೆ ರೈತರ ಪ್ರತಿಭಟನಾ ಮೆರವಣಿಗೆ ಆರಂಭವಾದ ಹಿನ್ನೆಲೆಯಲ್ಲಿ ಪಂಜಾಬ್ ಸರ್ಕಾರ ಭದ್ರತಾ ಕ್ರಮಗಳನ್ನು ಹೆಚ್ಚಿಸಿದೆ.

ರೈತ ಸಂಘಟನೆಗಳು ದೆಹಲಿಯತ್ತ ಪಾದಯಾತ್ರೆಗೆ ಸಿದ್ಧತೆ ನಡೆಸಿದ್ದು, ಶಂಭು ಗಡಿಯಲ್ಲಿ ರೈತ ಸಂಘಟನೆಗಳು ಮಾನವ ಸರಪಳಿ ನಿರ್ಮಿಸಿವೆ. ಒಂದು ಕಡೆ, ಅಗೆಯುವ ಯಂತ್ರಗಳು ಮತ್ತು ಟ್ರ್ಯಾಕ್ಟರ್‌ಗಳ ಸಾಲು ನಿಂತಿದ್ದರೆ, ಇನ್ನೊಂದು ಕಡೆ ಬ್ಯಾರಿಕೇಡ್‌ಗಳನ್ನು ಮುರಿದು ರೈತರು ಹರ್ಯಾಣಕ್ಕೆ ಪ್ರವೇಶಿಸುವ ಬಗ್ಗೆ ಪೊಲೀಸರು ಅಲರ್ಟ್‌ನಲ್ಲಿದ್ದಾರೆ.

ಗಡಿ ಪ್ರದೇಶಗಳಲ್ಲಿ ಭಾರೀ ಭದ್ರತಾ ಕ್ರಮವನ್ನು ಕೈಗೊಳ್ಳಲಾಗಿದ್ದು, ದೆಹಲಿ ಪೊಲೀಸ್ ಸಿಬ್ಬಂದಿಗಳ ಎಲ್ಲಾ ರಜೆಗಳನ್ನು ರದ್ದುಗೊಳಿಸಲಾಗಿದೆ. ಕೆಂಪು ಕೋಟೆ ಮತ್ತು ಇಂಡಿಯಾ ಗೇಟ್‌ನಂತಹ ಐತಿಹಾಸಿಕ ಸ್ಥಳಗಳಿಗೆ ಭಾರೀ ಭದ್ರತೆ ಒದಗಿಸಲಾಗಿದೆ. ಪಂಜಾಬ್ ಮತ್ತು ಹರ್ಯಾಣ ನಡುವಿನ ಶಂಭು ಮತ್ತು ಖಾನೌರಿ ಗಡಿ ಗಡಿಗಳು ಸಂಘರ್ಷದ ಕೇಂದ್ರ ಬಿಂದುಗಳಾಗಿವೆ. ಅಗೆಯುವ ಯಂತ್ರಗಳನ್ನು ಹೊಂದಿದ ರೈತರು, ಹರ್ಯಾಣ ಭದ್ರತಾ ಸಿಬ್ಬಂದಿ ನಿರ್ಮಿಸಿದ ಬ್ಯಾರಿಕೇಡ್‌ಗಳನ್ನು ಭೇದಿಸಲು ನಿರ್ಧರಿಸಿದ್ದಾರೆ.

ರೈತರ ಬೇಡಿಕೆಯೇನು? 

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರು ಫೆಬ್ರವರಿ 13ರಿಂದ ಪಂಜಾಬ್-ಹರಿಯಾಣ ಗಡಿ ಪ್ರದೇಶಗಳಲ್ಲಿ ಮೊಕ್ಕಾಂ ಹೂಡಿದ್ದಾರೆ. ರೈತರು ಉದ್ದೇಶಿಸಿದ್ದ ದೆಹಲಿ ಚಲೋಗೆ ಬಿಜೆಪಿ ಸರಕಾರ ತಡೆದಿದ್ದು, ಸಿಂಘು ಬಾರ್ಡರ್, ಟಿಕ್ರಿ ಬಾರ್ಡರ್ ಮತ್ತು ಘಾಜಿಪುರ ಬಾರ್ಡರ್‌ಗಳಲ್ಲಿ ಮುಳ್ಳುತಂತಿ, ಮೊಳೆಗಳು, ಸಿಮೆಂಟ್ ಮತ್ತು ಕಲ್ಲಿನ ಗೋಡೆಗಳನ್ನು, ಬ್ಯಾರಿಕೇಡ್‌ಗಳನ್ನು ನಿರ್ಮಿಸಿ ರೈತರು ದೆಹಲಿಗೆ ತೆರಳದಂತೆ ತಡೆದಿದ್ದರು.

23 ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ), ರೈತರ ಸಾಲ ಮನ್ನಾ, ಸ್ವಾಮಿನಾಥನ್ ಆಯೋಗದ ಶಿಫಾರಸುಗಳ ಅನುಷ್ಠಾನ, ರೈತರು ಮತ್ತು ರೈತ ಕಾರ್ಮಿಕರಿಗೆ ಪಿಂಚಣಿ, ವಿದ್ಯುತ್ ದರ ಹೆಚ್ಚಳ ಬೇಡ, ರೈತರ  ಮೇಲಿನ ಪೊಲೀಸ್ ಪ್ರಕರಣಗಳನ್ನು ಹಿಂಪಡೆಯಬೇಕು ಮತ್ತು 2021ರ ಲಖಿಂಪುರ ಖೇರಿ ಹಿಂಸಾಚಾರದ ಸಂತ್ರಸ್ತರಿಗೆ ನ್ಯಾಯ ಒದಗಿಸಬೇಕು, ಭೂ ಸ್ವಾಧೀನ ಕಾಯಿದೆ ಮತ್ತು 2020-21ರ ಪ್ರತಿಭಟನೆ ವೇಳೆ ಮೃತ ರೈತರಿಗೆ ಪರಿಹಾರವನ್ನು ನೀಡಬೇಕು ಎಂದು ರೈತರು ಆಗ್ರಹಿಸಿದ್ದಾರೆ.

ಇದನ್ನು ಓದಿ: Fact check: ರಾಜ್ಯ ಬಜೆಟ್‌ಗೆ ಕೋಮು ಬಣ್ಣ ಬಳಿದ ಸಂಪಾದಕ, ಸತ್ಯಾಂಶ ಇಲ್ಲಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...