Homeಅಂತರಾಷ್ಟ್ರೀಯಕದನ ವಿರಾಮ ನಿರ್ಣಯ: ಉಲ್ಟಾ ಹೊಡೆದ ಯುಎಸ್‌: ಅಮೆರಿಕದ ಯುದ್ಧ ದಾಹಕ್ಕೆ ಜಗತ್ತಿನ ಹಲವು ರಾಷ್ಟ್ರಗಳು...

ಕದನ ವಿರಾಮ ನಿರ್ಣಯ: ಉಲ್ಟಾ ಹೊಡೆದ ಯುಎಸ್‌: ಅಮೆರಿಕದ ಯುದ್ಧ ದಾಹಕ್ಕೆ ಜಗತ್ತಿನ ಹಲವು ರಾಷ್ಟ್ರಗಳು ಖಂಡನೆ

- Advertisement -
- Advertisement -

ಗಾಝಾದಲ್ಲಿ ಇಸ್ರೇಲ್‌ ನಡೆಸುತ್ತಿರುವ ನರಹತ್ಯೆಯನ್ನು ನಿಲ್ಲಿಸುವಂತೆ ಯುಎನ್ ಸೆಕ್ಯುರಿಟಿ ಕೌನ್ಸಿಲ್ (ಯುಎನ್‌ಎಸ್‌ಸಿ) ಮಂಡಿಸಿದ ಕರಡು ನಿರ್ಣಯವನ್ನು ಮತ್ತೊಮ್ಮೆ ವೀಟೋ ಅಧಿಕಾರವನ್ನು ಬಳಕೆ ಮಾಡುವ ಮೂಲಕ ಅಮೆರಿಕ ತಡೆದಿದ್ದು, ಇದಕ್ಕೆ ಮಿತ್ರರಾಷ್ಟ್ರಗಳು ಸೇರಿದಂತೆ ಅಂತರಾಷ್ಟ್ರೀಯ ಮಟ್ಟದಲ್ಲಿ ವ್ಯಾಪಕವಾದ ಖಂಡನೆ ವ್ಯಕ್ತವಾಗಿದೆ.

ಗಾಝಾದಲ್ಲಿ ಕದನ ವಿರಾಮವನ್ನು ಒತ್ತಾಯಿಸುವ ಯುಎನ್‌ಎಸ್‌ಸಿ ಮಂಡಿಸಿದ ಮೂರನೇ ನಿರ್ಣಯವನ್ನು ಕೂಡ ಅಮೆರಿಕ ವಿಟೋ ಅಧಿಕಾರವನ್ನು ಬಳಸಿ ತಡೆದಿದೆ. ಇದು ಅಮೆರಿಕಾದ ಅಮಾನವೀಯ ಕೃತ್ಯ, ಇಸ್ರೇಲ್‌ ನಡೆಸುತ್ತಿರುವ ನರಮೇಧಕ್ಕೆ ಅಮೆರಿಕಾ ಪಾಲುದಾರವಾಗಿದೆ ಎಂದು ವಿಶ್ವದ ಬಹುತೇಖ ರಾಷ್ಟ್ರಗಳು ಖಂಡನೆಯನ್ನು ವ್ಯಕ್ತಪಡಿಸಿದೆ.

ಅಮೆರಿಕ ನಿನ್ನೆ ಪ್ಯಾಲೆಸ್ತೀನ್‌ ಎನ್‌ಕ್ಲೇವ್‌ನಿಂದ ಎಲ್ಲಾ ಇಸ್ರೇಲ್‌ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲು ಮತ್ತು ತಾತ್ಕಾಲಿಕ ಕದನ ವಿರಾಮವನ್ನು ಬೆಂಬಲಿಸುವ ನಿರ್ಣಯವನ್ನು ಬೆಂಬಲಿಸಿತ್ತು. ಇದರ ಬೆನ್ನಲ್ಲಿ ಅಮೆರಿಕ ಮತ್ತೆ ಉಲ್ಟಾ ಹೊಡೆದಿದೆ. ಗಾಝಾದಲ್ಲಿ 29,000ಕ್ಕೂ ಅಧಿಕ ಜನರ ಹತ್ಯೆಯ ಬೆನ್ನಲ್ಲಿ ಸಂಘರ್ಷವನ್ನು ಕೊನೆಗೊಳಿಸಲು ಜಗತ್ತಿನಾದ್ಯಂತದ ದೇಶಗಳು ಬಲವಾದ ಬೆಂಬಲವನ್ನು ವ್ಯಕ್ತಪಡಿಸಿದೆ. ಯುಎನ್‌ ‘ಕದನ ವಿರಾಮ’ದ ಕುರಿತ ನಿರ್ಣಯಕ್ಕೆ 15-ಸದಸ್ಯ ಮಂಡಳಿಯಲ್ಲಿನ ಮತವು 13-1 ಆಗಿದ್ದು, ಯುನೈಟೆಡ್ ಕಿಂಗ್‌ಡಮ್ ಮತಗಳಿಂದ ದೂರ ಉಳಿದಿತ್ತು. ಅಮೆರಿಕಾ ವೀಟೋ ಅಧಿಕಾರವನ್ನು ಬಳಸಿ ನಿರ್ಣಯಕ್ಕೆ ವಿರೋಧವನ್ನು ವ್ಯಕ್ತಪಡಿಸಿತ್ತು.

ಅಮೆರಿಕ ನಡೆಗೆ ಚೀನಾ ವಿರೋಧ:

ಯುಎಸ್‌ ಕದನ ವಿರಾಮವನ್ನು ಬೆಂಬಲಿಸದ ಹಿನ್ನೆಲೆ, ಚೀನಾದ ರಾಯಭಾರಿ ಜಾಂಗ್ ಜುನ್, ಯುಎಸ್‌ ಬಗ್ಗೆ ಬಲವಾದ ನಿರಾಶೆ ಮತ್ತು ಅತೃಪ್ತಿಯನ್ನು ವ್ಯಕ್ತಪಡಿಸಿದ್ದಾರೆ. ಯುಎಸ್‌ನ ವೀಟೋ ತಪ್ಪು ಸಂದೇಶವನ್ನು ಕಳುಹಿಸುತ್ತದೆ, ಗಾಝಾದಲ್ಲಿನ ಪರಿಸ್ಥಿತಿಯನ್ನು ಹೆಚ್ಚು ಅಪಾಯಕಾರಿ ಸ್ಥಿತಿಗೆ ತಳ್ಳುತ್ತದೆ ಎಂದು ಜಾಂಗ್ ಹೇಳಿದ್ದಾರೆ. ಗಾಝಾದಲ್ಲಿ ಕದನ ವಿರಾಮಕ್ಕೆ ಆಕ್ಷೇಪಣೆಯು ಮುಂದುವರಿದ ಹತ್ಯೆಗೆ ಹಸಿರು ನಿಶಾನೆ ತೋರುವುದಕ್ಕಿಂತ ಭಿನ್ನವಾಗಿಲ್ಲ. ಗಾಝಾದಲ್ಲಿನ ಯುದ್ಧವನ್ನು ತಡೆಯುವ ಮೂಲಕ  ಮಾತ್ರ ಇಡೀ ಪ್ರದೇಶವನ್ನು ಆವರಿಸಿರುವ ನರಕದ ಬೆಂಕಿಯನ್ನು ಜಗತ್ತು ತಡೆಯಬಹುದು ಎಂದು ಚೀನಾ ಹೇಳಿದೆ.

ರಷ್ಯಾ 

ಗಾಝಾದಲ್ಲಿ ಕದನ ವಿರಾಮಕ್ಕೆ ಯುಎಸ್ ವೀಟೋ ಅಧಿಕಾರವನ್ನು ಬಳಕೆ ಮಾಡಿ ಆಕ್ಷೇಪಣೆಯನ್ನು ವ್ಯಕ್ತಪಡಿಸಿದ್ದಕ್ಕೆ ರಷ್ಯಾದ ರಾಯಭಾರಿ ವಾಸಿಲಿ ನೆಬೆಂಜಿಯಾ ಅವರು ಯುಎಸ್ ವೀಟೋ ಅಧಿಕಾರ ಬಳಕೆ ಭದ್ರತಾ ಮಂಡಳಿಯ ಇತಿಹಾಸದಲ್ಲಿ ಮತ್ತೊಂದು ಕಪ್ಪು ಚುಕ್ಕಿ ಎಂದು ಹೇಳಿದ್ದಾರೆ. ಇಸ್ರೇಲ್ ಗಾಝಾದಲ್ಲಿ  ಅಮಾನವೀಯ ಯೋಜನೆಗಳನ್ನು ಪೂರ್ಣಗೊಳಿಸಲು ಅಮೆರಿಕ ಬೆಂಬಲಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಫ್ರಾನ್ಸ್‌

ಫ್ರಾನ್ಸ್‌ನ ಯುಎನ್ ರಾಯಭಾರಿ ನಿಕೋಲಸ್ ಡಿ ರಿವಿಯೆರ್ ಅವರು ಗಾಝಾದಲ್ಲಿನ ವಿನಾಶಕಾರಿ ಪರಿಸ್ಥಿತಿಯನ್ನು ಗಮನಿಸಿದರೂ,  ಯುಎಸ್‌ ಕದನ ವಿರಾಮ ನಿರ್ಣಯವನ್ನು ಅಂಗೀಕರಿಸಲಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು. ನಿರ್ಣಯಕ್ಕೆ ಮತ ಹಾಕಿದ ಫ್ರಾನ್ಸ್, ಎಲ್ಲಾ ಬಂಧಿತರನ್ನು ಬಿಡುಗಡೆ ಮಾಡಲು ಮತ್ತು ಕದನ ವಿರಾಮವನ್ನು ತಕ್ಷಣ ಕಾರ್ಯಗತಗೊಳಿಸಲು ಕೆಲಸ ಮಾಡುವುದನ್ನು ಮುಂದುವರಿಸುತ್ತದೆ ಎಂದು ಹೇಳಿದೆ.

ಅಲ್ಜೀರಿಯಾ

ಅಲ್ಜೀರಿಯಾದ ರಾಯಭಾರಿ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಯುಎನ್‌ಎಸ್‌ಸಿ ಮತ್ತೊಮ್ಮೆ ವಿಫಲವಾಗಿದೆ. ಈ ಕ್ರಮವು ಒಟ್ಟಾರೆಯಾಗಿ ಮಧ್ಯಪ್ರಾಚ್ಯಕ್ಕೆ ಆಳವಾದ ಪರಿಣಾಮಗಳನ್ನು ಉಂಟುಮಾಡಬಹುದು. ಪ್ಯಾಲೆಸ್ತೀನ್‌ ನಾಗರಿಕರನ್ನು ಹತ್ಯೆಯನ್ನು ಕೊನೆಗೊಳಿಸಲು ಅಂತರಾಷ್ಟ್ರೀಯ ಸಮುದಾಯವು ತಕ್ಷಣದ ಕದನ ವಿರಾಮಕ್ಕೆ ಕರೆ ನೀಡುವ ಮೂಲಕ ಪ್ರತಿಕ್ರಿಯಿಸಬೇಕು. ಅಂತಹ ಕರೆಗಳಿಗೆ ಅಡ್ಡಿಪಡಿಸುವವರೆಲ್ಲರೂ ತಮ್ಮ ನೀತಿಗಳು  ಪರಿಶೀಲಿಸಬೇಕು. ಏಕೆಂದರೆ ಇಂದಿನ ತಪ್ಪು ನಿರ್ಧಾರಗಳು ನಾಳೆ ಬೆಲೆ ತೆರವುಂತೆ ಮಾಡುತ್ತದೆ. ಆದ್ದರಿಂದ ನಿಮ್ಮನ್ನು ಕೇಳಿಕೊಳ್ಳಿ, ನಿಮ್ಮ ಆತ್ಮಸಾಕ್ಷಿಯನ್ನು ಪರೀಕ್ಷಿಸಿಕೊಳ್ಳಿ. ಇಂದು ನಿಮ್ಮ ನಿರ್ಧಾರಗಳು ಏನನ್ನು ಉಂಟುಮಾಡುತ್ತವೆ? ಇತಿಹಾಸವು ನಿಮ್ಮನ್ನು ಏನೆಂದು ಹೇಳುತ್ತದೆ ಎಂದು ಅಮೆರಿಕದ ನಿರ್ಧಾರವನ್ನು ಉಲ್ಲೇಖಿಸಿ ಅಲ್ಜೀರಿಯಾ ಹೇಳಿದೆ.

ಹಮಾಸ್‌

ಅಲ್ಜೀರಿಯಾದ ಕರಡು ನಿರ್ಣಯವನ್ನು ನಿರ್ಬಂಧಿಸುವ ಯುಎಸ್ ಅಧ್ಯಕ್ಷ ಜೋ ಬಿಡೆನ್ ಅವರ ನಿರ್ಧಾರವು,   ಇಸ್ರೇಲ್‌ ಆಕ್ರಮಣದ ಮುಂದುವರಿಕೆಗೆ ಸಹಾಯವನ್ನು ಮಾಡುತ್ತದೆ. ಇದು ಪ್ಯಾಲೇಸ್ತೀನ್‌ ನಾಗರಿಕರನ್ನು  “ಕೊಲ್ಲುವ ಮತ್ತು ಸ್ಥಳಾಂತರಿಸುವ” ಗುರಿಯನ್ನು ಹೊಂದಿದೆ ಎಂದು ಹಮಾಸ್‌ ಹೇಳಿದೆ.

ಪ್ಯಾಲೆಸ್ತೀನ್‌

ಪ್ಯಾಲೆಸ್ತೀನ್‌ ಅಧ್ಯಕ್ಷ ಮಹಮೂದ್ ಅಬ್ಬಾಸ್ ಅವರ ಕಚೇರಿಯು ಯುಎಸ್ ವೀಟೋ ಅಂತರಾಷ್ಟ್ರೀಯ ಸಮುದಾಯವನ್ನು ಧಿಕ್ಕರಿಸಿರುವ ಬೆಳವಣಿಗೆಯಾಗಿದೆ ಮತ್ತು ಇಸ್ರೇಲ್‌ಗೆ ಗಾಝಾದ ಜನರ ವಿರುದ್ಧ ತನ್ನ ಆಕ್ರಮಣವನ್ನು ಮುಂದುವರೆಸಲು ಮತ್ತು ರಫಾಹ್ ಮೇಲಿನ ದಾಳಿಗೆ ಹಸಿರು ನಿಶಾನೆ ತೋರಿದಂತಾಗಿದೆ ಎಂದು ಹೇಳಿದೆ.

ಗಾಝಾದಲ್ಲಿ ಮಕ್ಕಳು, ಮಹಿಳೆಯರು ಮತ್ತು ವೃದ್ಧರ ವಿರುದ್ಧ ಇಸ್ರೇಲ್‌ನ “ಅನಾಗರಿಕ ದಾಳಿ” ಗಳಿಗೆ “ಬೆಂಬಲಿಸುವ ಮತ್ತು ರಕ್ಷಣೆ ನೀಡುವ” ಜವಾಬ್ದಾರಿಯನ್ನು US ಆಡಳಿತ ಹೊಂದಿದೆ. ಈ ನೀತಿಯು ನರಮೇಧ ಮತ್ತು ಜನಾಂಗೀಯ ಹತ್ಯಾಕಾಂಡದ ಅಪರಾಧಗಳಲ್ಲಿ ಇಸ್ರೇಲ್‌ ಪಡೆಗಳು ಮಾಡುತ್ತಿರುವ ಯುದ್ಧ ಅಪರಾಧಗಳಲ್ಲಿ ಯುನೈಟೆಡ್ ಸ್ಟೇಟ್ಸ್‌ ಪಾಲುದಾರನನ್ನಾಗಿ ಮಾಡುತ್ತದೆ ಎಂದು ಹೇಳಿದೆ.

ಕತಾರ್‌

ಕತಾರ್‌ನ ಯುಎನ್ ರಾಯಭಾರಿ ಅಲ್ಯಾ ಅಹ್ಮದ್ ಸೈಫ್ ಅಲ್ ಥಾನಿ ಅವರು ಅಲ್ಜೀರಿಯಾ-ಕರಡು ನಿರ್ಣಯವನ್ನು ಅಂಗೀಕರಿಸುವಲ್ಲಿ ಯುಎನ್‌ಎಸ್‌ಸಿ ವಿಫಲವಾದ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ ಮತ್ತು ಗಾಝಾದಲ್ಲಿ ಕದನ ವಿರಾಮಕ್ಕೆ ಪ್ರಯತ್ನಗಳನ್ನು ಮುಂದುವರಿಸುವುದಾಗಿ ಪ್ರತಿಜ್ಞೆ ಮಾಡಿದೆ.

ಸೌದಿ ಅರೇಬಿಯಾ
ಸೌದಿ ಅರೇಬಿಯಾದ ವಿದೇಶಾಂಗ ಸಚಿವಾಲಯವು ಅಮೆರಿಕ ವೀಟೋದ ಅಧಿಕಾರ ಬಳಸಿ ನಿರ್ಣಯವನ್ನು ವಿರೋಧಿಸಿದ್ದಕ್ಕೆ ವಿಷಾದ ವ್ಯಕ್ತಪಡಿಸಿದೆ. ನಾರ್ವೆ ಕೂಡ ತಕ್ಷಣದ ಮಾನವೀಯ ಕದನ ವಿರಾಮದ ಕುರಿತು ನಿರ್ಣಯವನ್ನು ಅಂಗೀಕರಿಸಲು ಯುಎನ್‌ ಕೌನ್ಸಿಲ್‌ಗೆ ಸಾಧ್ಯವಾಗಲಿಲ್ಲ ಎಂದು ವಿಷಾದಿಸಿದೆ ಮತ್ತು  ಗಾಜಾದಲ್ಲಿ ಭಯಾನಕತೆಯನ್ನು ಕೊನೆಗೊಳಿಸುವುದು ಅತ್ಯಗತ್ಯ ಎಂದು  ಹೇಳಿದೆ.

ಇದನ್ನು ಓದಿ: ಹೆಚ್ಚುವರಿ ಹಣ ಬೇಕಾದರೆ ಸುಪ್ರೀಂಕೋರ್ಟ್‌ನಿಂದ ಮೊಕದ್ದಮೆ ಹಿಂಪಡೆಯಿರಿ: ಕೇರಳ ಸರಕಾರಕ್ಕೆ ಬ್ಲಾಕ್‌ಮೇಲ್‌ ಮಾಡಿದ ಕೇಂದ್ರ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...