Homeಮುಖಪುಟಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಎಂಎಸ್‌ಪಿ ಜಾರಿ ಮಾಡುತ್ತೇವೆ: ರೈತರಿಗೆ ಮಲ್ಲಿಕಾರ್ಜುನ ಖರ್ಗೆ ಭರವಸೆ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಎಂಎಸ್‌ಪಿ ಜಾರಿ ಮಾಡುತ್ತೇವೆ: ರೈತರಿಗೆ ಮಲ್ಲಿಕಾರ್ಜುನ ಖರ್ಗೆ ಭರವಸೆ

- Advertisement -
- Advertisement -

ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ವಿಚಾರವಾಗಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಬುಧವಾರ ಬೆಂಬಲ ಸೂಚಿಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೇಂದ್ರವು ರೈತರ ಸಮಂಜಸವಾದ ಬೇಡಿಕೆಗಳನ್ನು ಈಡೇರಿಸಬೇಕು ಮತ್ತು ಅಗತ್ಯ ಬೆಳೆಗಳಿಗೆ ಎಂಎಸ್‌ಪಿ ನೀಡಬೇಕು ಎಂದು ಹೇಳಿದ್ದಾರೆ.

ಕರ್ನಾಟಕದ ಕಲಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಂಬರುವ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಎಂಎಸ್‌ಪಿ ಕಾನೂನು ಖಾತರಿಯನ್ನು ಸೇರಿಸಲಿದೆ. ನಾವು ರೈತರಿಗೆ ಬೆಂಬಲ ನೀಡುತ್ತೇವೆ, ಅವರ ಸಮಂಜಸವಾದ ಬೇಡಿಕೆಗಳನ್ನು ಈಡೇರಿಸಬೇಕೆಂದು ನಾವು ಬಹಿರಂಗವಾಗಿ ಹೇಳುತ್ತಿದ್ದೇವೆ, ನಾವು ನಮ್ಮ ಚುನಾವಣಾ ಪ್ರಣಾಳಿಕೆಯಲ್ಲೂ ಕಾನೂನು ಭರವಸೆ ನೀಡುತ್ತೇವೆ. ಎಲ್ಲಾ ಬೆಳೆಗಳಿಗೆ ರಕ್ಷಣೆ ನೀಡಲಾಗುವುದಿಲ್ಲ ಆದರೆ ಅಗತ್ಯ ಬೆಳೆಗಳಿಗೆ ನೀಡಬೇಕು ಎಂದು ಖರ್ಗೆ ಹೇಳಿದ್ದಾರೆ.

ಇದಕ್ಕೂ ಮೊದಲು ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರು ಎಂಎಸ್ ಸ್ವಾಮಿನಾಥನ್ ವರದಿಯ ಶಿಫಾರಸುಗಳನ್ನು ಅನುಷ್ಠಾನಗೊಳಿಸದ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ದೇಶದಲ್ಲಿ 14 ಲಕ್ಷ ಕೋಟಿ ಮೌಲ್ಯದ ಬ್ಯಾಂಕ್‌ ಸಾಲ ಮನ್ನಾ,  1.8 ಲಕ್ಷ ಕೋಟಿ ಕಾರ್ಪೊರೇಟ್‌ ತೆರಿಗೆ ವಿನಾಯ್ತಿ ನೀಡಿದ್ದು, ರೈತರ ಮೇಲೆ ಅಲ್ಪಸ್ವಲ್ಪ ಖರ್ಚು ಮಾಡುವುದಕ್ಕೂ ಹಿಂದೆ-ಮುಂದೆ ನೋಡುವುದು ಯಾಕೆ? ಎಂಎಸ್‌ಪಿ ಗ್ಯಾರಂಟಿ, ಕೃಷಿಯಲ್ಲಿ ಹೂಡಿಕೆ ಹೆಚ್ಚಳಕ್ಕೆ ಕಾರಣವಾಗುತ್ತದೆ, ಗ್ರಾಮೀಣ ಭಾರತದಲ್ಲಿ ಬೇಡಿಕೆ ಹೆಚ್ಚುತ್ತದೆ ಮತ್ತು ರೈತರು ವಿವಿಧ ರೀತಿಯ ಬೆಳೆಗಳನ್ನು ಬೆಳೆಯಲು ವಿಶ್ವಾಸವನ್ನು  ಹೊಂದುತ್ತಾರೆ. MSP ಕುರಿತು ಗೊಂದಲವನ್ನು ಹರಡುತ್ತಿರುವವರು ಡಾ. ಸ್ವಾಮಿನಾಥನ್ ಮತ್ತು ಅವರ ಕನಸುಗಳನ್ನು ಅವಮಾನಿಸುತ್ತಿದ್ದಾರೆ ಎಂದು ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ ರಾಹುಲ್ ಗಾಂಧಿ ಹೇಳಿದ್ದಾರೆ.

ಈ ಮಧ್ಯೆ ಪ್ರತಿಕ್ರಿಯಿಸಿದ ಕೃಷಿ ಸಚಿವ ಅರ್ಜುನ್ ಮುಂಡಾ, ರೈತರು ಪ್ರಸ್ತಾಪಿಸಿದ ಎಲ್ಲಾ ಸಮಸ್ಯೆಗಳನ್ನು ಚರ್ಚಿಸಲು ಕೇಂದ್ರವು ಪ್ರತಿಭಟನಾನಿರತ ರೈತರೊಂದಿಗೆ 5ನೇ ಸುತ್ತಿನ ಮಾತುಕತೆ ನಡೆಸಲು ಮುಕ್ತವಾಗಿದೆ ಮತ್ತು ರೈತರು ಮಾತುಕತೆಯ ಮೂಲಕ ಪರಿಹಾರ ಕಂಡುಕೊಳ್ಳುವಂತೆ ಆಗ್ರಹಿಸಿದ್ದಾರೆ.

ಕೇಂದ್ರದ ಜೊತೆಗಿನ ಮಾತುಕತೆ ವಿಫಲವಾದ ಹಿನ್ನೆಲೆ ರೈತರು ದೆಹಲಿ ಚಲೋ ಪುನರಾರಂಭಕ್ಕೆ ನಿರ್ಧರಿಸಿದ್ದರು. ಪಂಜಾಬ್-ಹರಿಯಾಣದ ಶಂಭು ಗಡಿಯಲ್ಲಿ ಪೊಲೀಸರು ಅಶ್ರುವಾಯು ಮತ್ತು ಜಲಫಿರಂಗಿ ಬಳಸಿ ರೈತರನ್ನು ತಡೆದಿದ್ದರಿಂದ ಗೊಂದಲವು ಉಂಟಾಗಿತ್ತು. ಭದ್ರತಾ ಪಡೆಗಳು ಪ್ರತಿರೋಧಕ ಕ್ರಮಗಳಿಂದ ರಕ್ಷಿಸಲು ರೈತ ಮುಖಂಡರು ಸುರಕ್ಷತಾ ಕನ್ನಡಕ ಮತ್ತು ಹೆಡ್‌ಫೋನ್‌ಗಳು ಸೇರಿದಂತೆ ರಕ್ಷಣಾತ್ಮಕ ಕವಚಗಳನ್ನು ಧರಿಸಿರುವುದು ಕಂಡುಬಂದಿದೆ.

ಪಂಜಾಬ್ ಕಿಸಾನ್ ಮಜ್ದೂರ್ ಸಂಘರ್ಷ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಸರ್ವಾನ್ ಸಿಂಗ್ ಪಂಧೇರ್ ಅವರು ಎಂಎಸ್‌ಪಿಯ ಕಾನೂನು ಖಾತರಿಯ ಬೇಡಿಕೆಯನ್ನು ಪುನರುಚ್ಚರಿಸಿದ್ದಾರೆ ಮತ್ತು ಶಾಂತಿಯುತ ಪ್ರತಿಭಟನೆ ನಡೆಸುವುದಾಗಿ ಹೇಳಿದ್ದರು. ನಾಲ್ಕನೇ ಸುತ್ತಿನ ಮಾತುಕತೆ ಕೊನೆಗೂ ಕೊನೆಗೊಂಡ ನಂತರ ಬುಧವಾರ ಬೆಳಗ್ಗೆ ರೈತರು ತಮ್ಮ ಪಾದಯಾತ್ರೆ ಆರಂಭಿಸಿದರು. ಫೆಬ್ರವರಿ 19ರಂದು ರೈತ ಮುಖಂಡರು ಎಂಎಸ್‌ಪಿ ಖರೀದಿ ಕುರಿತು ಕೇಂದ್ರದ ಪ್ರಸ್ತಾವನೆಯನ್ನು ತಿರಸ್ಕರಿಸಿ, ಕೇಂದ್ರದ ಪ್ರಸ್ತಾವನೆಯು ರೈತರ ಪರವಾಗಿಲ್ಲ ಎಂದು ಹೇಳಿದ್ದರು.

ಇದನ್ನು ಓದಿ: ಕದನ ವಿರಾಮ ನಿರ್ಣಯ: ಉಲ್ಟಾ ಹೊಡೆದ ಯುಎಸ್‌: ಅಮೆರಿಕದ ಯುದ್ಧ ದಾಹಕ್ಕೆ ಜಗತ್ತಿನ ಹಲವು ರಾಷ್ಟ್ರಗಳು ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...