Homeಮುಖಪುಟಇಂಡಿಯಾ ಬ್ಲಾಕ್ ಸೇರಿಲ್ಲ; ರಾಷ್ಟ್ರದ ಬಗ್ಗೆ ನಿಸ್ವಾರ್ಥವಾಗಿ ಯೋಚಿಸುವರಿಗೆ ನಮ್ಮ ಬೆಂಬಲ: ಕಮಲ್ ಹಾಸನ್

ಇಂಡಿಯಾ ಬ್ಲಾಕ್ ಸೇರಿಲ್ಲ; ರಾಷ್ಟ್ರದ ಬಗ್ಗೆ ನಿಸ್ವಾರ್ಥವಾಗಿ ಯೋಚಿಸುವರಿಗೆ ನಮ್ಮ ಬೆಂಬಲ: ಕಮಲ್ ಹಾಸನ್

- Advertisement -
- Advertisement -

‘ನಮ್ಮ ಪಕ್ಷದ ರಾಜಕೀಯ ಮೈತ್ರಿ ಕುರಿತು ಚರ್ಚೆಗಳು ನಡೆಯುತ್ತಿವೆ; ರಾಷ್ಟ್ರದ ಬಗ್ಗೆ ನಿಸ್ವಾರ್ಥವಾಗಿ ಯೋಚಿಸುವ. ಜತೆಗೆ, ಊಳಿಗಮಾನ್ಯ ರಾಜಕೀಯದ ಭಾಗವಾಗುವುದನ್ನು ಬಿಟ್ಟುಬಿಡುವ ಯಾವುದೇ ಬಣವನ್ನು ಬೆಂಬಲಿಸುತ್ತೇವೆ’ ಎಂದು ನಟ, ಎಂಎನ್‌ಎಂ ಪಕ್ಷದ ಮುಖ್ಯಸ್ಥ ಕಮಲ್ ಹಾಸನ್ ಅವರು ಹೇಳಿದರು.

ತಮ್ಮ ಮಕ್ಕಳ್ ನೀದಿ ಮೈಯಂನ 7 ನೇ ವಾರ್ಷಿಕೋತ್ಸವದ ಆಚರಣೆ ನಂತರ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಕಮಲ್ ಹಾಸನ್, ತಮಿಳು ನಟ ವಿಜಯ್ ಅವರ ಇತ್ತೀಚಿನ ರಾಜಕೀಯ ಪ್ರವೇಶವನ್ನು ಸ್ವಾಗತಿಸಿದರು.

ಬಹುಪಕ್ಷೀಯ ವಿರೋಧ ಪಕ್ಷವಾದ ಇಂಡಿಯಾ ಬ್ಲಾಕ್‌ಗೆ ಎಂಎನ್‌ಎಂ ಸೇರುತ್ತದೆಯೇ ಎಂಬ ಪ್ರಶ್ನೆಗೆ, ‘ನಾನು ಈಗಾಗಲೇ ಹೇಳಿದ್ದೇನೆ, ನೀವು ಪಕ್ಷ ರಾಜಕಾರಣವನ್ನು ಮಸುಕುಗೊಳಿಸಬೇಕು ಮತ್ತು ರಾಷ್ಟ್ರದ ಬಗ್ಗೆ ಯೋಚಿಸಬೇಕಾದ ಸಮಯ ಇದು. ರಾಷ್ಟ್ರದ ಬಗ್ಗೆ ನಿಸ್ವಾರ್ಥವಾಗಿ ಯೋಚಿಸುವ ಯಾರಾದರೂ, ನನ್ನ ಎಂಎನ್‌ಎಂ ಮಾಡುತ್ತದೆ’ ಎಂದರು.

‘ಆದರೆ, ಸ್ಥಳೀಯ ಊಳಿಗಮಾನ್ಯ ರಾಜಕೀಯ ಮಾಡುವವರೊಂದಿಗೆ’ ಎಂಎನ್‌ಎಂ ಕೈಜೋಡಿಸುವುದಿಲ್ಲ ಎಂದು ಅವರು ಹೇಳಿದರು.

ತಮ್ಮ ಪಕ್ಷದ ಸಂಭವನೀಯ ರಾಜಕೀಯ ಮೈತ್ರಿ ಕುರಿತು, ‘ಚರ್ಚೆಗಳು ನಡೆಯುತ್ತಿವೆ ಮತ್ತು ಈ ನಿಟ್ಟಿನಲ್ಲಿ ಯಾವುದೇ ಒಳ್ಳೆಯ ಸುದ್ದಿ ಬಂದರೂ ಮಾಧ್ಯಮಗಳಿಗೆ ತಿಳಿಸಲಾಗುವುದು’ ಎಂದರು. ಮುಂಬರುವ ಲೋಕಸಭೆ ಚುನಾವಣೆಗೆ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ನೇತೃತ್ವದ ಡಿಎಂಕೆ ಜತೆ ಕಮಲ್ ಹಾಸನ್ ಪಕ್ಷ ಮೈತ್ರಿ ಮಾತುಕತೆಯಲ್ಲಿ ತೊಡಗಿದೆ ಎಂಬ ಊಹಾಪೋಹಗಳು ಎದ್ದಿವೆ.

ಎಂಎನ್‌ಎಂ ಈ ಹಿಂದೆ 2019 ರ ಲೋಕಸಭೆ ಚುನಾವಣೆ ಮತ್ತು 2021 ರ ತಮಿಳುನಾಡು ವಿಧಾನಸಭಾ ಚುನಾವಣೆಗಳನ್ನು ಎದುರಿಸಿತ್ತು. ಆದರೆ, ಉತ್ತಮ ಪ್ರದರ್ಶನ ನೀಡಲು ವಿಫಲವಾಗಿದೆ.

ಇದನ್ನೂ ಓದಿ; ನನ್ನ ವಿರುದ್ಧ ಪ್ರತಿಭಟಿಸಲು ಆಡಳಿತ ಪಕ್ಷವು ಪಿಎಫ್‌ಐ ಸದಸ್ಯರನ್ನು ನೇಮಿಸಿಕೊಂಡಿದೆ: ಕೇರಳ ರಾಜ್ಯಪಾಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...